AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Red Meat: ಕೆಂಪು ಮಾಂಸವನ್ನು ಹೆಚ್ಚು ಸೇವಿಸುತ್ತೀರಾ? ಈ ಸಮಸ್ಯೆಗಳು ಕಾಡಬಹುದು ಎಚ್ಚರ

ಕೆಂಪು ಮಾಂಸವನ್ನು ಅತಿಯಾಗಿ ಸೇವಿಸಿದರೆ ಹೃದಾಯಾಘಾತಕ್ಕೆ ಕಾರಣವಾಗುತ್ತದೆ ಎಂದು ಈ ಹಿಂದೆ ಅಧ್ಯಯನವೊಂದು ಸಾಬೀತುಪಡಿಸಿತ್ತು. ಹೀಗಾಗಿ ಕೆಂಪು ಮಾಂಸದ ಸೇವನೆ ಕಡಿಮೆ ಇದ್ದರೆ ದೇಹಕ್ಕೂ ಹಿತ.

Red Meat: ಕೆಂಪು ಮಾಂಸವನ್ನು ಹೆಚ್ಚು ಸೇವಿಸುತ್ತೀರಾ? ಈ ಸಮಸ್ಯೆಗಳು ಕಾಡಬಹುದು ಎಚ್ಚರ
ಕೆಂಪು ಮಾಂಸ (ಪ್ರಾತಿನಿಧಿಕ ಚಿತ್ರ)
TV9 Web
| Updated By: Pavitra Bhat Jigalemane|

Updated on: Mar 04, 2022 | 10:26 AM

Share

ಬಾಯಿಗೆ ರುಚಿ ನೀಡುವ ಕೆಲವು ಆಹಾರ (Food) ಗಳು ದೇಹಕ್ಕೆ ಹಾನಿಯುಂಟು ಮಾಡುತ್ತದೆ. ಅಂತಹವುಗಳಲ್ಲಿ ರೆಡ್​ ಮೀಟ್ (Red Meat)​ ಕೂಡ ಒಂದು. ರೆಡ್​ ಮೀಟ್​ ಅನ್ನು ಕುರಿ, ಜಿಂಕೆ, ಹಂದಿ, ಮೇಕೆ ಸೇರಿದಂತೆ ಕೆಲವೇ ಕೆಲವು ಪ್ರಾಣಿಗಳಿಂದ ಪಡೆಯುತ್ತಾರೆ. ಮಸಾಲೆಯುಕ್ತ ಈ ಮಾಂಸಗಳ ಖಾದ್ಯಗಳು ಬಾಯಿಗೆ ಹೆಚ್ಚು ರುಚಿ ನೀಡುತ್ತವೆ. ಆದರೆ ದೇಹದಲ್ಲಿ ಅತಿಯಾದ ಕೊಬ್ಬು ಸಂಗ್ರವಾಗುವಂತೆ ಮಾಡುತ್ತದೆ. ಜತೆಗೆ ರಕ್ತದ ಚಲನೆಯಲ್ಲಿ ಏರುಪೇರು ಮಾಡುತ್ತದೆ. ಅದರಲ್ಲೂ ಅತಿಯಾದ ರೆಡ್​ ಮಿಟ್​ ಸೇವನೆ ದೇಹಕ್ಕೆ ಸಾಕಷ್ಟು ಹಾನಿಯುಂಟು ಮಾಡುತ್ತದೆ. ಕೆಂಪು ಮಾಂಸವನ್ನು ಅತಿಯಾಗಿ ಸೇವಿಸಿದರೆ ಹೃದಾಯಾಘಾತಕ್ಕೆ ಕಾರಣವಾಗುತ್ತದೆ ಎಂದು ಈ ಹಿಂದೆ ಅಧ್ಯಯನವೊಂದು ಸಾಬೀತುಪಡಿಸಿತ್ತು. ಹೀಗಾಗಿ ಕೆಂಪು ಮಾಂಸದ ಸೇವನೆ ಕಡಿಮೆ ಇದ್ದರೆ ದೇಹಕ್ಕೂ ಹಿತ. ಹಾಗಾದರೆ ಕೆಂಪು ಮಾಂಸದ ಸೇವನೆಯಿಂದ ಯಾವೆಲ್ಲಾ ಅಪಾಯಗಳಿವೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ,

ಅತಿಯಾದ ತೂಕ : ಕೆಂಪು ಮಾಂಸದಲ್ಲಿರುವ ಲಿಪಿಡ್​ ಅಂಶಗಳು ದೇಹದಲ್ಲಿ ಅನಗತ್ಯ ಕೊಬ್ಬು ಶೇಖರಣೆಗೊಳ್ಳುವಂತೆ ಮಾಡುತ್ತದೆ. ಇದರಿಂದ ಬೊಜ್ಜು ಬೆಳೆಯುತ್ತದೆ. ಇದರಿಂದ ದೇಹದಲ್ಲಿ ತೂಕ ಹೆಚ್ಚಲು ಕಾರಣವಾಗುತ್ತದೆ. ಸೊಂಟದ ಭಾಗದಲ್ಲಿ ಬೊಜ್ಜು ಬೆಳೆಯುವುದು, ತೂಳುಗಳಲ್ಲಿ ಅನಗತ್ಯ ಕೊಬ್ಬು ತುಂಬಿಕೊಂಡು ಸಮಸ್ಯೆಯನ್ನು ಉಲ್ಬಣಿಸುತ್ತದೆ.

ದೇಹದಿಂದ ಕೆಟ್ಟ ವಾಸನೆ: ಕೆಂಪು ಮಾಂಸ ಸೇವನೆಯಿಂದ ದೇಹದಲ್ಲಿ ಕೆಟ್ಟ ವಾಸನೆ ಉತ್ಪತ್ತಿಯಾಗುವಂತೆ ಮಾಡುತ್ತದೆ. ನೆನಪಿಡಿ ನಾವು ಸೇವಿಸುವ ಆಹಾರದಿಂದ ನಮ್ಮ ದೇಹದಲ್ಲಿ ಕೆಲವು ರಾಸಾಯನಿಕಗಳು ಉತ್ಪತ್ತಿಯಾಗುತ್ತದೆ. ಇದರಿಂದ ದೇಹದಿಂದ ಹೊರಸೂಸುವ ವಾಸನೆ ಕೂಡ  ಬದಲಾಗುತ್ತದೆ. ಕೆಂಪು ಮಾಂಸವನ್ನು ಅತಿಯಾಗಿ ಸೇವಿಸಿದರೆ ದೇಹ ಕೆಟ್ಟ ವಾಸನೆಯನ್ನು ಹೊರಸೂಸುತ್ತದೆ ಎನ್ನುತ್ತಾರೆ ತಜ್ಞರು.

ಕೊಲೆಸ್ಟ್ರಾಲ್​ ಅಸಮತೋಲನ: ಕೆಂಪು ಮಾಂಸ ಅನಾರೋಗ್ಯಕ್ಕೆ ಕಾರಣವಾಗುವ ಕೊಲೆಸ್ಟ್ರಾಲ್​ ಅನ್ನು ಹೊಂದಿದೆ. ಹೀಗಾಗಿ ಕೆಂಪು ಮಾಂಸದ ಅತಿಯಾದ ಸೇವನೆ ದೇಹದಲ್ಲಿ ಕೊಲೆಸ್ಟ್ರಾಲ್​ ಮಟ್ಟವನ್ನು ಏರುಪೇರು ಮಾಡಿ, ಹೃದಯಕ್ಕೂ ಹಾನಿಯುಂಟು ಮಾಡುತ್ತದೆ. ಹೀಗಾಗಿ ಕೆಂಪು ಮಾಂಸದ ಬದಲು ದೇಹಕ್ಕೆ ಹಾನಿ ಮಾಡದ ಮಾಂಸಗಳನ್ನು ರುಚಿಗಾಗಿ ತಿನ್ನಬಹುದು ಎನ್ನುವುದು ತಜ್ಞರ ಮಾತು.

ಕೆಟ್ಟ ಉಸಿರು: ಕೆಂಪು ಮಾಂಸದ ಸೇವನೆಯಿಂದ ದೇಹದಲ್ಲಿ ಒಂದಷ್ಟು ರಾಸಾಯನಿಕ ಉತ್ಪತ್ತಿಯಾಗಿ ಹೊಟ್ಟೆಯಲ್ಲಿ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಇದರಿಂದ ಕೆಟ್ಟವಾಸನೆಯ ಗಾಳಿ ದೇಹದಿಂದ ಹೊರಬರುವಂತೆ ಮಾಡುತ್ತದೆ. ಹೀಗಾಗಿ ಕೆಂಪು ಮಾಂಸದ ಸೇವನೆ ಕಡಿಮೆ ಇದಷ್ಟೂ ಒಳ್ಳೆಯದು.

ಜೀರ್ಣಕ್ರಿಯೆಗೆ ಸಮಸ್ಯೆ: ದೇಹದಲ್ಲಿ ಜೀರ್ಣಕ್ರಿಯೆ ಅತಿ ಮುಖ್ಯವಾಗಿದ್ದು. ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಇದ್ದರೆ ಅದರಿಂದ ಉಂಟಾಗುವ ಸಮಸ್ಯೆ ಒಂದೆರಡಲ್ಲ. ಕೆಂಪು ಮಾಂಸ ಕೂಡ ಜೀರ್ಣಕ್ರಿಯೆಗೆ ಸಮಸ್ಯೆ ಉಂಟುಮಾಡುತ್ತದೆ. ಹೆಚ್ಚಿನ ಕೊಬ್ಬನ್ನು ಹೊಂದಿರುವುದರಿಂದ ಸುಲಭವಾಗಿ ಜೀರ್ಣವಾಗದೆ ಹೊಟ್ಟೆಯಲ್ಲೇ ಕುಳಿತು ಅಜೀರ್ಣ, ಮಲಬದ್ಧತೆಯನ್ನು ಉಂಟುಮಾಡುತ್ತದೆ.

ಇದನ್ನೂ ಓದಿ:

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದಾಗುವ ಲಾಭಗಳೇನು? ತಿಳಿದುಕೊಳ್ಳಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ