AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ebola Virus Threat: ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಂಟ್ರಿ!: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಜಗತ್ತು ಮತ್ತೊಂದು ಮಾರಣಾಂತಿಕ 'ಎಬೋಲಾ ವೈರಸ್' ಆತಂಕದಲ್ಲಿದೆ. ಆಫ್ರಿಕಾದಲ್ಲಿ ಹರಡುತ್ತಿರುವ ಈ ಬುಂಡಿಬುಗ್ಯೊ ತಳಿಗೆ ಲಸಿಕೆ ಲಭ್ಯವಿಲ್ಲ, ಸಾವಿನ ಪ್ರಮಾಣವೂ ಅಧಿಕ. ವಿಶ್ವ ಆರೋಗ್ಯ ಸಂಸ್ಥೆ ತುರ್ತುಸ್ಥಿತಿ ಘೋಷಿಸಿದ್ದು, ಭಾರತದಲ್ಲೂ ಆತಂಕ ಎದುರಾಗಿದೆ. ಕೋವಿಡ್‌ನಂತೆ ಗಾಳಿಯಲ್ಲಿ ಹರಡದಿದ್ದರೂ, ಅಂತಾರಾಷ್ಟ್ರೀಯ ಪ್ರಯಾಣಿಕರ ತಪಾಸಣೆ ಮತ್ತು ಕ್ವಾರಂಟೈನ್ ಅತ್ಯಗತ್ಯ ಎಂದು ತಜ್ಞರು ಎಚ್ಚರಿಸಿದ್ದಾರೆ. ಸಾರ್ವಜನಿಕರು ಆಫ್ರಿಕಾ ಪ್ರವಾಸದಿಂದ ದೂರವಿರುವುದು ಉತ್ತಮ.

Ebola Virus Threat: ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಂಟ್ರಿ!: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ
ಸಾಂದರ್ಭಿಕ ಚಿತ್ರ
ವಿನಾಯಕ ಬಡಿಗೇರ್​
| Edited By: |

Updated on: May 21, 2026 | 11:48 AM

Share

ದೆಹಲಿ, ಮೇ.21: ಜಗತ್ತು ಕೊರೊನಾ ಮಹಾಮಾರಿಯ ಕರಾಳ ದಿನಗಳಿಂದ ಈಗ ತಾನೇ ಹೊರ ಬಂದಿದೆ. ಇದೀಗ ಇದರ ಬೆನ್ನಲ್ಲೇ ಮತ್ತೊಂದು ಭೀಕರ ಸೂಕ್ಷ್ಮಾಣು ಜೀವಿ ಜಾಗತಿಕ ಮಟ್ಟದಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆಫ್ರಿಕಾ ಖಂಡದಲ್ಲಿ ಅತಿ ವೇಗವಾಗಿ ಹರಡುತ್ತಿರುವ ಮಾರಣಾಂತಿಕ ‘ಎಬೋಲಾ ವೈರಸ್’ (Ebola Virus) ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಶ್ವ ಆರೋಗ್ಯ ಸಂಸ್ಥೆಯು (WHO) ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು (PHEIC) ಘೋಷಿಸಿದೆ. ಇದರ ಬೆನ್ನಲ್ಲೇ ಭಾರತದಲ್ಲೂ ಸಹ ಮುನ್ನೆಚ್ಚರಿಕೆ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ.

ಲಸಿಕೆ ಇಲ್ಲದ ಅಪರೂಪದ ತಳಿ; ಕೋವಿಡ್‌ನಂತೆ ಹರಡುವುದಿಲ್ಲ:

ಡಾ. ದಿವ್ಯಾ ಅವರ ಪ್ರಕಾರ, ಪ್ರಸ್ತುತ ಔಟ್‌ಬ್ರೇಕ್ (Outbreak) ಆಗಿರುವ ಎಬೋಲಾ ಬುಂಡಿಬುಗ್ಯೊ ತಳಿಗೆ ಯಾವುದೇ ಅಧಿಕೃತ ಲಸಿಕೆ (Vaccine) ಅಥವಾ ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ. ಈ ವೈರಸ್ ಸೋಂಕು ತಗುಲಿದರೆ ಸಾವಿನ ಪ್ರಮಾಣ (Mortality Rate) ಅತ್ಯಂತ ಹೆಚ್ಚಾಗಿದೆ. ಆದರೆ, ಇದು ಕೋವಿಡ್ ಮಹಾಮಾರಿಯಂತೆ ಗಾಳಿಯಲ್ಲಿ ಅತಿ ವೇಗವಾಗಿ ಪೆಂಡಾಮಿಕ್ (Pandemic) ಆಗುವ ಸಾಧ್ಯತೆ ತೀರಾ ಕಡಿಮೆ. ಈ ವೈರಸ್ ಮೂಲತಃ ಫ್ರೂಟ್ ಬಾವಲಿಗಳಿಂದ (Fruit Bats) ಮನುಷ್ಯರಿಗೆ ಹರಡುತ್ತದೆ. ಮನುಷ್ಯರಿಂದ ಮನುಷ್ಯರಿಗೆ ಹರಡಲು ಸೋಂಕಿತರ ರಕ್ತ ಅಥವಾ ಶರೀರದ ದ್ರವಗಳ (Blood or Body Fluids) ನೇರ ಸಂಪರ್ಕ ಅಗತ್ಯವಾಗುತ್ತದೆ.

ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಕಠಿಣ ನಿಗಾ ಅಗತ್ಯ:

ಸದ್ಯಕ್ಕೆ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ವರದಿಯಾಗಿಲ್ಲ. ಆದರೆ, ರಿಸ್ಕ್ (Risk) ಹೆಚ್ಚಿರುವ ಕಾಂಗೋ, ಉಗಾಂಡ ಮತ್ತು ಇತರೆ ಆಫ್ರಿಕಾ ದೇಶಗಳಿಂದ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಬಗ್ಗೆ ತೀವ್ರ ಎಚ್ಚರಿಕೆ ವಹಿಸಬೇಕು. ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯ ಸ್ಕ್ರೀನಿಂಗ್ (Screening at Airports) ನಡೆಸುವ ಜೊತೆಗೆ, ಅಗತ್ಯವಿದ್ದರೆ ಆಫ್ರಿಕಾ ಪ್ರವಾಸಿಗರಿಗೆ ಕ್ವಾರಂಟೈನ್ (Quarantine) ವ್ಯವಸ್ಥೆ ಮಾಡುವುದು ದೇಶದ ಸುರಕ್ಷತೆಯ ದೃಷ್ಟಿಯಿಂದ ಅತ್ಯಂತ ಅವಶ್ಯಕವಾಗಿದೆ ಎಂದು ಡಾ. ದಿವ್ಯಾ ತಿಳಿಸಿದ್ದಾರೆ. ಸಾರ್ವಜನಿಕರು ಆಫ್ರಿಕಾ ದೇಶಗಳ ಪ್ರವಾಸದ ಬಗ್ಗೆ ಸದ್ಯಕ್ಕೆ ಎಚ್ಚರಿಕೆ ವಹಿಸುವುದು ಉತ್ತಮ.

ಇದನ್ನೂ ಓದಿ: ಇಂದಿನಿಂದ ರಾಜ್ಯಾದ್ಯಂತ 4 ದಿನ ಭಾರಿ ಮಳೆ: ವಚನಾನಂದ ಸ್ವಾಮೀಜಿಗೆ ಜೈಲಾ? ಬೇಲಾ? ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು

ಎಬೋಲಾ ವೈರಸ್‌ನ ಪ್ರಮುಖ ಲಕ್ಷಣಗಳು:

ಸೋಂಕು ತಗುಲಿದ ನಂತರ ಆರಂಭದಲ್ಲಿ ತೀವ್ರ ಜ್ವರ, ತಲೆನೋವು, ಮೈಕೈನೋವು, ವಾಂತಿ ಮತ್ತು ಭೇದಿ ಕಂಡುಬರುತ್ತದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಲಿವರ್ ಮತ್ತು ಶ್ವಾಸಕೋಶದ ವೈಫಲ್ಯ (Liver and Lungs Failure) ಸಂಭವಿಸಿ ಸಾವು ಸಂಭವಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinayak Badiger
Vinayak Badiger
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ