
ಇತ್ತೀಚಿನ ದಿನಗಳಲ್ಲಿ ಕಾಲಿನ ನರಗಳ ಸಮಸ್ಯೆ (Leg nerve problem) ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಹಲವು ರೀತಿಯ ಕಾರಣಗಳಿದ್ದು ನರ ಹಾನಿ, ರಕ್ತ ಪರಿಚಲನೆ ಸಮಸ್ಯೆ, ಅಥವಾ ಬೆನ್ನುಮೂಳೆಯ ಸಮಸ್ಯೆಗಳಿಂದ ಉಂಟಾಗಬಹುದು. ಈ ಸಮಸ್ಯೆಗಳು ನೋವು, ಮರಗಟ್ಟುವಿಕೆ, ಜುಮ್ಮೆನಿಸುವಿಕೆ ಮತ್ತು ದೌರ್ಬಲ್ಯವನ್ನು ಉಂಟುಮಾಡಬಹುದು. ಹಾಗಾಗಿ ಇದಕ್ಕೆ ಪರಿಹಾರ ಕಂಡುಕೊಳ್ಳಲು ಆಯುರ್ವೇದದ ಮೊರೆ ಹೋಗಬಹುದು. ಆದರೆ ಅದಕ್ಕೂ ಮೊದಲು ಕಾಲಿನ ನರಗಳ ಸಮಸ್ಯೆ ಏಕೆ ಉಂಟಾಗುತ್ತದೆ? ಆಯುರ್ವೇದಲ್ಲಿನ ಪರಿಹಾರಗಳೇನು (Ayurvedic remedies) ಎಂಬುದರ ಬಗ್ಗೆ ತಿಳಿದುಕೊಳ್ಳುವುದು ಬಹಳ ಉತ್ತಮ. ಈ ವಿಷಯಕ್ಕೆ ಸಂಬಂಧ ಪಟ್ಟಂತೆ ಬೆಂಗಳೂರು ಎಸ್ಡಿಎಂಐಎಹೆಚ್, ಪಂಚಕರ್ಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ ಪ್ರತಿಭಾ ಜಿ ಭಟ್ (Dr. Pratibha G. Bhat) ಅವರು ಟಿವಿ9 ಕನ್ನಡ ಜೊತೆ ಕೆಲವು ಮಾಹಿತಿ ಹಂಚಿಕೊಂಡಿದ್ದು, ಮತ್ತಷ್ಟು ಮಾಹಿತಿ ಪಡೆಯಲು ಈ ಸ್ಟೋರಿ ಓದಿ.
ಕಾಲಿನಲ್ಲಿನ ನರಗಳ ಸಮಸ್ಯೆಗೆ ಹಲವು ಕಾರಣಗಳಿವೆ ಅವುಗಳಲ್ಲಿ ಪ್ರಮುಖವಾಗಿ:
ಯಾವುದೇ ರೀತಿಯ ಚಿಕಿತ್ಸೆಯನ್ನು ಪ್ರಾರಂಭಿಸುವ ಮುನ್ನ ರೋಗನಿರ್ಣಯ ಮಾಡುವುದು (ಡಯಾಗೊನಿಸಿಸ್) ಅತೀ ಅವಶ್ಯಕ. ಹೀಗಾಗಿ ವೈದ್ಯರ ಸಲಹೆ ಪಡೆಯುವುದು ಉತ್ತಮ. ಆಯುರ್ವೇದ ವೈದ್ಯರನ್ನು ಸಂಪರ್ಕಿಸಿ ರೋಗನಿರ್ಣಯ ಮಾಡಿಸಿಕೊಂಡ ನಂತರ ಅದಕ್ಕನುಗುಣವಾಗಿ ಚಿಕಿತ್ಸೆಯನ್ನು ಪ್ರಾರಂಭಿಸಬಹುದು. ಈ ಚಿಕಿತ್ಸೆಗಳಲ್ಲಿ ಓರಲ್ ಮೆಡಿಕೇಶನ್ (ಬಾಯಿ ಮೂಲಕ ಸೇವಿಸುವ ಔಷಧಗಳು), ಪಂಚಕರ್ಮ ಚಿಕಿತ್ಸೆ, ಪಿಸಿಯೋತೆರಪಿ ಹಾಗೂ ಆಕ್ಯಪಂಕ್ಚರ್ ಸೇರಿವೆ.
ಆದರೆ ಈ ಔಷಧಿಗಳನ್ನು ವೈದ್ಯರ ಸಲಹೆಯ ಮೇರೆಗೆ ಮಾತ್ರ ಸೇವಿಸಬೇಕು.
ಇದನ್ನೂ ಓದಿ: ಮನುಷ್ಯ ಸತ್ತ ಮೇಲೆ ಮಾತ್ರವಲ್ಲ ಬದುಕಿರುವಾಗಲೂ ಅಂಗಾಂಗ ದಾನ ಮಾಡಬಹುದು; ಈ ಬಗ್ಗೆ ಡಾ. ಪ್ರದೀಪ್ ರಂಗಪ್ಪ ಏನ್ ಹೇಳ್ತಾರೆ ನೋಡಿ
ಯಾವುದೇ ಪಂಚಕರ್ಮ ಚಿಕಿತ್ಸೆಗಳನ್ನು ನೋಂದಾಯಿತ ಆಯುರ್ವೇದ ವೈದ್ಯರನ್ನು ಸಂಪರ್ಕಿಸಿದ ನಂತರ ಮಾತ್ರ ತೆಗೆದುಕೊಳ್ಳಬೇಕು.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ