AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರೇ… ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ವರ್ಷಕ್ಕೊಮ್ಮೆ ತಪ್ಪದೆ ಈ ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ

ಮಹಿಳೆಯರ ದೇಹವು ಕಾಲಕಾಲಕ್ಕೆ ವಿವಿಧ ರೀತಿಯ ಬದಲಾವಣೆಗಳಿಗೆ ಒಳಗಾಗುತ್ತದೆ. ಅಂತಹ ಸಂದರ್ಭಗಳಲ್ಲಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಯಮಿತವಾಗಿ ತಪಾಸಣೆ ಮಾಡುವುದು ಬಹಳ ಮುಖ್ಯ. ಅದರಲ್ಲಿಯೂ ವರ್ಷಕ್ಕೊಮ್ಮೆ ತಪ್ಪದೆ ಕೆಲವು ಅಗತ್ಯ ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು. ರಕ್ತ ಪರೀಕ್ಷೆಗಳು ದೇಹದ ಒಳಗಿನ ಆರೋಗ್ಯ ಸ್ಥಿತಿಯನ್ನು ತಿಳಿಯಲು ಸಹಾಯ ಮಾಡುತ್ತವೆ. ಹಾಗಾದರೆ ವರ್ಷಕ್ಕೊಮ್ಮೆ ಮಾಡಿಸಬೇಕಾದ ರಕ್ತ ಪರೀಕ್ಷೆಗಳು ಯಾವವು ಮತ್ತು ಅದನ್ನು ಯಾಕೆ ಮಾಡಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಹಿಳೆಯರೇ... ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ವರ್ಷಕ್ಕೊಮ್ಮೆ ತಪ್ಪದೆ ಈ ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ
Annual Blood TestsImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: Jun 04, 2026 | 3:29 PM

Share

ಮಹಿಳೆಯರು ಜೀವನದ ವಿವಿಧ ಹಂತಗಳಲ್ಲಿ ಹಲವು ಬದಲಾವಣೆಗಳನ್ನು ಅನುಭವಿಸುತ್ತಾರೆ. ಹಾರ್ಮೋನ್ ಬದಲಾವಣೆ, ಗರ್ಭಧಾರಣೆ, ಪಿರಿಯಡ್ಸ್‌ (Periods), ಪೌಷ್ಟಿಕಾಂಶಗಳ ಕೊರತೆ ಹಾಗೂ ವಯಸ್ಸು ಹೆಚ್ಚಾಗುವುದರಿಂದ ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಆದರೆ ಈ ರೀತಿ ಬರುವ ಹಲವಾರು ಆರೋಗ್ಯ ಸಮಸ್ಯೆಗಳು ಆರಂಭಿಕ ಹಂತದಲ್ಲಿ ಸ್ಪಷ್ಟ ಲಕ್ಷಣಗಳನ್ನು ತೋರಿಸದೇ ಇರಬಹುದು. ಆದ್ದರಿಂದ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಮುಖ್ಯ. ತಜ್ಞರ ಪ್ರಕಾರ, ನಿಯಮಿತ ರಕ್ತ ಪರೀಕ್ಷೆಗಳು ದೇಹದ ಒಳಗಿನ ಆರೋಗ್ಯ ಸ್ಥಿತಿಯನ್ನು ತಿಳಿಯಲು ಸಹಾಯ ಮಾಡುತ್ತವೆ. ಇದರಿಂದ ಅನೀಮಿಯಾ, ಡಯಾಬಿಟಿಸ್‌, ಥೈರಾಯ್ಡ್ ಸಮಸ್ಯೆಗಳು ಮತ್ತು ವಿಟಮಿನ್ ಕೊರತೆಗಳನ್ನು ಆರಂಭದಲ್ಲೇ ಪತ್ತೆಹಚ್ಚಬಹುದು.

ಮಹಿಳೆಯರು ವರ್ಷಕ್ಕೊಮ್ಮೆ ಮಾಡಿಸಬೇಕಾದ ರಕ್ತ ಪರೀಕ್ಷೆಗಳು:

ಜೈಪುರದ ಅಪೋಲೋ ಸ್ಪೆಕ್ಟ್ರಾ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಹಿರಿಯ ಸಲಹೆಗಾರರಾದ ಡಾ. ಪ್ರತಿಮಾ ಪೊದ್ದಾರ್ ಅವರು ಹೇಳುವ ಪ್ರಕಾರ, ಮಹಿಳೆಯರು ವರ್ಷಕ್ಕೊಮ್ಮೆ ಕೆಲವು ಮುಖ್ಯ ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಉತ್ತಮ.

ಸಿಬಿಸಿ (Complete Blood Count): ಈ ಪರೀಕ್ಷೆಯಿಂದ ಅನೀಮಿಯಾ ಹಾಗೂ ರಕ್ತ ಸಂಬಂಧಿತ ಸಮಸ್ಯೆಗಳನ್ನು ಪತ್ತೆಹಚ್ಚಬಹುದು. ಬ್ಲಡ್ ಶುಗರ್ ಟೆಸ್ಟ್: ಡಯಾಬಿಟಿಸ್‌ ಇರುವುದನ್ನು ಗುರುತಿಸಲು ಸಹಾಯಕವಾಗುತ್ತದೆ. ಲಿಪಿಡ್ ಪ್ರೊಫೈಲ್: ಹೃದಯ ಸಂಬಂಧಿತ ರೋಗಗಳ ಅಪಾಯವನ್ನು ತಿಳಿಯಲು ಅನುಕೂಲ ಮಾಡಿಕೊಡುತ್ತದೆ. ಥೈರಾಯ್ಡ್ ಪ್ರೊಫೈಲ್ (TSH, T3, T4): ದೇಹದ ಶಕ್ತಿ, ಕೂದಲು ಉದುರುವುದು, ತೂಕ ಹೆಚ್ಚಳ ಅಥವಾ ಕಡಿಮೆ ಆಗುವುದು ಸೇರಿದಂತೆ ಹಲವು ಸಮಸ್ಯೆಗಳ ಮೂಲ ಕಾರಣ ತಿಳಿಯಲು ಸಹಾಯ ಮಾಡುತ್ತವೆ. ವಿಟಮಿನ್ D ಪರೀಕ್ಷೆ ಮತ್ತು ವಿಟಮಿನ್ B12 ಪರೀಕ್ಷೆ: ಇದರ ಮಟ್ಟ ಕಡಿಮೆ ಇದ್ದಲ್ಲಿ ಅದನ್ನು ತಿಳಿದುಕೊಂಡು ಅದನ್ನು ಸರಿಪಡಿಸಬಹುದು.

ಇದನ್ನೂ ಓದಿ: ನಿಮ್ಮ ಓರಲ್ ಹೆಲ್ತ್ ಚೆನ್ನಾಗಿಲ್ಲ ಅಂದ್ರೆ ಬಂಜೆತನದ ಅಪಾಯ ಹೆಚ್ಚಾಗುತ್ತಾ? ಏನ್ ಹೇಳುತ್ತೆ ಸಂಶೋಧನೆ?

ಯಾವ ಲಕ್ಷಣಗಳು ಕಂಡರೆ ತಕ್ಷಣ ಪರೀಕ್ಷೆ ಮಾಡಿಸಬೇಕು?

  • ನಿರಂತರ ದಣಿವು
  • ತಲೆ ಸುತ್ತುವುದು
  • ದೇಹದಲ್ಲಿ ದುರ್ಬಲತೆ
  • ಕೂದಲು ಉದುರುವುದು
  • ತೂಕ ಏಕಾಏಕಿ ಹೆಚ್ಚಳ ಅಥವಾ ಇಳಿಕೆ
  • ಪಿರಿಯಡ್ಸ್‌ನಲ್ಲಿ ಅಸಾಮಾನ್ಯ ಬದಲಾವಣೆ
  • ಹೆಚ್ಚು ದಾಹ ಅಥವಾ ಪದೇಪದೇ ಮೂತ್ರ ವಿಸರ್ಜನೆ
  • ದೇಹದಲ್ಲಿ ಶಕ್ತಿಯ ಕೊರತೆ

ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು?

ಮಹಿಳೆಯರು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಅತ್ಯಗತ್ಯ. ಸಮತೋಲನಯುತ ಆಹಾರ ಸೇವನೆ, ಹಣ್ಣು-ತರಕಾರಿ, ಪ್ರೋಟೀನ್ ಮತ್ತು ಪೌಷ್ಟಿಕಾಂಶಯುಕ್ತ ಆಹಾರವನ್ನು ಆಹಾರಕ್ರಮದಲ್ಲಿ ಸೇರಿಸಬೇಕು. ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ, ಒತ್ತಡ ನಿಯಂತ್ರಣ, ಸಾಕಷ್ಟು ನೀರು ಕುಡಿಯುವುದು, ನಿಯಮಿತ ಆರೋಗ್ಯ ತಪಾಸಣೆ ಮಾಡುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್