AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Orange Juice: ಒಂದು ಗ್ಲಾಸ್ ಕಿತ್ತಳೆ ಜ್ಯೂಸ್ ಉರಿಯೂತ ಸಮಸ್ಯೆ ವಿರುದ್ಧ ಹೋರಾಡಲು ಸಹಾಯಕ

Health Care: ತ್ತಳೆ ರಸವು ದೀರ್ಘಕಾಲದ ಉರಿಯೂತ ಸಮಸ್ಯೆಗೆ ಪರಿಹಾರ ಜತೆಗೆ ಹೃದಯ ಸಂಬಂಧಿತ ಖಾಯಿಲೆ ಮತ್ತು ಮಧುಮೇಹ ಸೇರಿದಂತೆ ಹಲವು ಸಮಸ್ಯೆಗೆ ಪರಿಹಾರ ನೀಡುತ್ತದೆ

Orange Juice: ಒಂದು ಗ್ಲಾಸ್ ಕಿತ್ತಳೆ ಜ್ಯೂಸ್ ಉರಿಯೂತ ಸಮಸ್ಯೆ ವಿರುದ್ಧ ಹೋರಾಡಲು ಸಹಾಯಕ
ಪ್ಯಾಕ್ ಮಾಡಲಾದ ಜ್ಯೂಸ್‌ಗಳನ್ನು ಸೇವಿಸಬೇಡಿ. ಏಕೆಂದರೆ ಹಣ್ಣುಗಳ ಬದಲಿಗೆ, ಸಕ್ಕರೆ ಮತ್ತು ಹಣ್ಣಿನ ರುಚಿಗಳನ್ನು ಹೆಚ್ಚಿಸಲು ಕೆಲವು ವಸ್ತುಗಳನ್ನು ಸೇರಿಸಲಾಗುತ್ತದೆ. ಇದು ನಿಮ್ಮ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ. ಹೀಗಾಗಿ ತಾಜಾ ಹಣ್ಣುಗಳಿಂದ ಮನೆಯಲ್ಲೇ ತಯಾರಿಸಿದ ಜ್ಯೂಸ್ ಸೇವಿಸಿ.
TV9 Web
| Updated By: ಆಯೇಷಾ ಬಾನು|

Updated on: Oct 21, 2021 | 9:31 AM

Share

ಒಂದು ಗ್ಲಾಸ್ ಆರೆಂಜ್ ಜ್ಯೂಸ್ ಆ ದಿನ ಪೂರ್ತಿ ಚಟುವಟಿಕೆಯಿಂದ ಕೂಡಿರಲು ಬೇಕಾದ ಶಕ್ತಿಯನ್ನು ನಿಮ್ಮಲ್ಲಿ ತುಂಬುತ್ತದೆ. ಈಗ ತಾನೇ ಹಿಂಡಿ ತೆಗೆದ ಕಿತ್ತಳೆ ರಸದಲ್ಲಿ ವಿಟಮಿನ್ ಸಿ ಮತ್ತು ಪೊಟ್ಯಾಶಿಯಂ ಸಮೃದ್ಧವಾಗಿರುತ್ತದೆ. ಪ್ರತಿಶತ 100ರಷ್ಟು ಅಂದರೆ ಒಂದು ಗ್ಲಾಸ್​ನಷ್ಟು ಕಿತ್ತಳೆ ರಸದಲ್ಲಿ ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ನಿಯಂತ್ರಿಸುವ ಶಕ್ತಿಯನ್ನು ಹೊಂದಿರುತ್ತದೆ ಎಂಬುದನ್ನು ಅಧ್ಯಯನ ತಿಳಿಸಿದೆ.

ಒಂದು ಗ್ಲಾಸ್ ಕಿತ್ತಳೆ ರಸವನ್ನು ಕುಡಿಯುವುದು ಆರೋಗ್ಯಕರ ಮತ್ತು ವಯಸ್ಕರಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ. ಕಿತ್ತಳೆ ರಸವು ದೀರ್ಘಕಾಲದ ಉರಿಯೂತ ಸಮಸ್ಯೆಗೆ ಪರಿಹಾರ ಜತೆಗೆ ಹೃದಯ ಸಂಬಂಧಿತ ಖಾಯಿಲೆ ಮತ್ತು ಮಧುಮೇಹ ಸೇರಿದಂತೆ ಹಲವು ಸಮಸ್ಯೆಗೆ ಪರಿಹಾರ ನೀಡುತ್ತದೆ ಈ ಕುರಿತಂತೆ ಅಡ್ವಾನ್ಸ್ ಇನ್ ನ್ಯೂಟ್ರಿಷಿಯನ್ ಜರ್ನಲ್​ನಲ್ಲಿ ಪ್ರಕಟಿಸಲಾಗಿದೆ.

ಕಿತ್ತಳೆ ರಸವು ವಿಟಮಿನ್ ಸಿ ಯಂತಹ ಪೋಷಕಾಂಶಗಳನ್ನು ಹೊಂದಿದೆ. ಜತೆಗೆ ದೇಹದಲ್ಲಿ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಫ್ಲೋರಿಡಾ ಸಿಟ್ರಸ್ ನ ಆಹಾರ ತಜ್ಞರಾದ ಗೇಲ್ ರಾಂಪರ್ಸೌಡ್ ಹೇಳಿದ್ದಾರೆ.

ಕಿತ್ತಳೆರಸದಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಇದರಿಂದ ಇನ್ನೂ ಹೆಚ್ಚಿನ ಡೇಟಾವನ್ನು ಸಂಗ್ರಹಿಸಲು ಹೆಚ್ಚಿನ ಅಧ್ಯಯನಗಳು ಬೇಕು ಎಂದು ತಜ್ಞರಾದ ಗೇಲ್ ಹೇಳಿದ್ದಾರೆ. ಈ ಕುರಿತಂತೆ ಇಂಡಿಯಾ ಡಾಟ್ ಕಾಮ್​ನಲ್ಲಿ ಉಲ್ಲೇಖಿಸಲಾಗಿದೆ.

ಅಧ್ಯಯನ ಪ್ರಕಾರ ಒಂದು ಗ್ಲಾಸ್ ಕಿತ್ತಳೆ ರಸವು ಉರಿಯೂತದ ಸಮಸ್ಯೆಯನ್ನು ಪರಿಹರಿಸುತ್ತದೆ. ಜತೆಗೆ ಇದರಿಂದ ಆರೋಗ್ಯಕ್ಕೆ ಯಾವುದೇ ಅಡ್ಡ ಪಡಿಣಾಮಗಳಿಲ್ಲ. ಅಧ್ಯಯನದಲ್ಲಿ ಮೂರು ರೀತಿಯ ವಿಶ್ಲೇಷಣಾ ವಿಭಾಗಗಳನ್ನು ಮಾಡಲಾಗಿದ್ದು, ಆರೋಗ್ಯವಂತ ವಯಸ್ಕರು ಮತ್ತು ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿದ್ದ ವಯಸ್ಕರು ಜತೆಗೆ ದೇಹದಲ್ಲಿ ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡಕ್ಕೆ ಸಿಲುಕಿರುವ ವಯಸ್ಕರೊಂದಿಗೆ ಅಧ್ಯಯನ ನಡೆಸಲಾಗಿದೆ.

ಇದನ್ನೂ ಓದಿ:

Health Tips: ತಲೆ ಕೂದಲು ನಿಮ್ಮ ಆರೋಗ್ಯದ ಬಗ್ಗೆ ಬಹಳಷ್ಟು ಹೇಳುತ್ತದೆ; ನಿರ್ಲಕ್ಷ್ಯ ವಹಿಸದಿರುವುದು ಒಳಿತು

Health Tips: ಸಾತ್ವಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?