AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Piles: ಮೂಲವ್ಯಾಧಿ ಸಮಸ್ಯೆ ಕಾಡುತ್ತಿದೆಯೇ? ಈ ಮನೆಮದ್ದುಗಳನ್ನು ಟ್ರೈ ಮಾಡಿ

ಗುದನಾಳದ ಸುತ್ತಲಿನ ರಕ್ತನಾಳಗಳಲ್ಲಿ ಕಾಣಿಸಿಕೊಳ್ಳುವುದರಿಂದ ಮೂಲವ್ಯಾಧಿ( Piles) ಸಮಸ್ಯೆಯುಂಟಾಗುತ್ತದೆ. ಅನಿಯಮಿತ ಆಹಾರ ಪದ್ಧತಿ ಇದಕ್ಕೆ ಪ್ರಮುಖ ಕಾರಣವೆಂದು ಹೇಳಬಹುದು. ಮೂಲವ್ಯಾಧಿಯಲ್ಲಿ (ಪೈಲ್ಸ್) ಎರಡು ವಿಧ. ರಕ್ತನಾಳಗಳ ಊತವು ಆಂತರಿಕ ಮೂಲವ್ಯಾಧಿಯಲ್ಲಿ ಗೋಚರಿಸುವುದಿಲ್ಲ, ಆದರೆ ಬಾಹ್ಯ ಮೂಲವ್ಯಾಧಿಯಲ್ಲಿ ಇದು ಗುದದ್ವಾರದ ಹೊರಗೆ ಗೋಚರಿಸುತ್ತದೆ. ಅತಿಯಾದ ನೋವು ಮತ್ತು ರಕ್ತಸ್ರಾವದ ಸಮಸ್ಯೆ ಇರುತ್ತದೆ. ಮೂಲವ್ಯಾಧಿ ರೋಗಕ್ಕೆ ಕೆಲವು ಮನೆ ಮದ್ದುಗಳು ಬಹಳ ಸಹಾಯಕವಾಗಿವೆ. ಈ ರೋಗ ಸಂಭವಿಸಲು ಮುಖ್ಯ ಕಾರಣ ಅನಿಯಮಿತ ದಿನಚರಿ ಮತ್ತು ಆಹಾರ ಪದ್ಧತಿ. ಬೊಜ್ಜು, ಮಲಬದ್ಧತೆ, […]

Piles: ಮೂಲವ್ಯಾಧಿ ಸಮಸ್ಯೆ ಕಾಡುತ್ತಿದೆಯೇ? ಈ ಮನೆಮದ್ದುಗಳನ್ನು ಟ್ರೈ ಮಾಡಿ
Piles
TV9 Web
| Edited By: |

Updated on: Jul 26, 2022 | 8:30 PM

Share

ಗುದನಾಳದ ಸುತ್ತಲಿನ ರಕ್ತನಾಳಗಳಲ್ಲಿ ಕಾಣಿಸಿಕೊಳ್ಳುವುದರಿಂದ ಮೂಲವ್ಯಾಧಿ( Piles) ಸಮಸ್ಯೆಯುಂಟಾಗುತ್ತದೆ. ಅನಿಯಮಿತ ಆಹಾರ ಪದ್ಧತಿ ಇದಕ್ಕೆ ಪ್ರಮುಖ ಕಾರಣವೆಂದು ಹೇಳಬಹುದು. ಮೂಲವ್ಯಾಧಿಯಲ್ಲಿ (ಪೈಲ್ಸ್) ಎರಡು ವಿಧ. ರಕ್ತನಾಳಗಳ ಊತವು ಆಂತರಿಕ ಮೂಲವ್ಯಾಧಿಯಲ್ಲಿ ಗೋಚರಿಸುವುದಿಲ್ಲ, ಆದರೆ ಬಾಹ್ಯ ಮೂಲವ್ಯಾಧಿಯಲ್ಲಿ ಇದು ಗುದದ್ವಾರದ ಹೊರಗೆ ಗೋಚರಿಸುತ್ತದೆ.

ಅತಿಯಾದ ನೋವು ಮತ್ತು ರಕ್ತಸ್ರಾವದ ಸಮಸ್ಯೆ ಇರುತ್ತದೆ. ಮೂಲವ್ಯಾಧಿ ರೋಗಕ್ಕೆ ಕೆಲವು ಮನೆ ಮದ್ದುಗಳು ಬಹಳ ಸಹಾಯಕವಾಗಿವೆ. ಈ ರೋಗ ಸಂಭವಿಸಲು ಮುಖ್ಯ ಕಾರಣ ಅನಿಯಮಿತ ದಿನಚರಿ ಮತ್ತು ಆಹಾರ ಪದ್ಧತಿ. ಬೊಜ್ಜು, ಮಲಬದ್ಧತೆ, ಅತಿಯಾದ ಲೈಂಗಿಕ ಸಂಭೋಗ, ನಿಗ್ರಹಿಸಿದ ಮಲವಿಸರ್ಜನೆ, ಕೆಟ್ಟ ಜೀವನಶೈಲಿ ಇದಕ್ಕೆ ಕಾರಣವಾಗಿವೆ.

ಅಷ್ಟೆ ಅಲ್ಲ, ಅತಿಯಾದ ದೈಹಿಕ ಒತ್ತಡ, ಮಾಂಸಾಹಾರಿ ಆಹಾರ ಸೇವನೆ, ಆಲ್ಕೋಹಾಲ್, ಮಸಾಲೆಯುಕ್ತ ಆಹಾರಗಳು ಇತರ ಕೆಲವು ಅನಿಶ್ಚಿತ ಕಾರಣಗಳಾಗಿವೆ.

ಲಕ್ಷಣಗಳೇನು? -ಗುದನಾಳದ ಬಳಿ ತುರಿಕೆ, ನೋವು -ಮಲ ವಿಸರ್ಜಿಸುವಾಗ ನೋವು ಹಾಗೂ ರಕ್ತಸ್ರಾವ ಮೂಲವ್ಯಾಧಿಯನ್ನು ಹೋಗಲಾಡಿಸಲು ಮನೆಮದ್ದು ಇಲ್ಲಿದೆ

ಬಿಸಿ ನೀರಿನ ಸ್ನಾನ: ಬೆಚ್ಚನೆಯ ನೀರಿನಿಂದ ಸ್ನಾನ ಮಾಡಿ, ಹಾಗೆಯೇ ಪ್ಲಾಸ್ಟಿಕ್ ಟಬ್​ ಒಂದರಲ್ಲಿ ಬೆಚ್ಚಗಿನ ನೀರು ಹಾಕು ಅದರಲ್ಲಿ ಸ್ವಲ್ಪ ಹೊತ್ತು ಕುಳಿತುಕೊಳ್ಳಿ, ಇದರಿಂದ ಆ ಜಾಗವು ಮೃದುವಾಗಿ ನೋವು ಕಡಿಮೆಯಾಗಲಿದೆ.

ಕೋಲ್ಡ್​ ಕಂಪ್ರೆಸ್​: ಐಸ್​ ಪ್ಯಾಕ್​ ಅನ್ನು ಆ ಜಾಗಕ್ಕೆ 15 ನಿಮಿಷಗಳ ಕಾಲ ಅಪ್ಲೈ ಮಾಡಿ. ಅಂಜೂರದಿಂದ ಮೂಲವ್ಯಾಧಿಗೆ ಪರಿಹಾರ 2-3 ಅಂಜೂರದ ಹಣ್ಣುಗಳನ್ನು ಬಿಸಿ ನೀರಿನಿಂದ ತೊಳೆದು ರಾತ್ರಿಯಿಡೀ ಗಾಜಿನ ಪಾತ್ರೆಯಲ್ಲಿ ನೆನೆಸಿ. ಬೆಳಿಗ್ಗೆ ಅವುಗಳನ್ನು ಬೆರೆಸಿ ತಿನ್ನಿರಿ ಮತ್ತು ಅದರ ನೀರನ್ನು ಕುಡಿಯಿರಿ. ಎರಡು-ಮೂರು ವಾರಗಳವರೆಗೆ ಅಂಜೂರದ ಹಣ್ಣುಗಳನ್ನು ಬಳಸುವುದು ಮೂಲವ್ಯಾಧಿ ಅಥವಾ ಪೈಲ್ಸ್ ರೋಗಕ್ಕೆ ಪ್ರಯೋಜನಕಾರಿಯಾಗಿದೆ

ಮಜ್ಜಿಗೆ ಮತ್ತು ಜೀರಿಗೆ ಪೈಲ್ಸ್​ಗೆ ಪರಿಹಾರ ನೀಡುತ್ತದೆ ಮೂರರಿಂದ ನಾಲ್ಕು ದಿನಗಳಲ್ಲಿ ಇದರ ಪ್ರಯೋಜನಗಳು ಗೋಚರಿಸುತ್ತವೆ. ನೀವು ಮಜ್ಜಿಗೆ ಬದಲಾಗಿ ನೀರನ್ನು ಕೂಡಾ ಬಳಸಬಹುದು. ಇದಕ್ಕಾಗಿ, ಒಂದು ಗ್ಲಾಸ್ ನೀರಿಗೆ ಅರ್ಧ ಟೀ ಚಮಚ ಜೀರಿಗೆ ಪುಡಿಯನ್ನು ಹಾಕಿಕೊಂಡು ಕುಡಿಯಿರಿ. ಪೈಲ್ಸ್ ಅನ್ನು ಆದಷ್ಟು ಬೇಗ ಗುಣಪಡಿಸಲು ಇದು ಅತ್ಯುತ್ತಮ ಪರಿಹಾರವಾಗಿದೆ. ಎರಡು ಲೀಟರ್ ಮಜ್ಜಿಗೆಯಲ್ಲಿ ಐವತ್ತು ಗ್ರಾಂ ಜೀರಿಗೆ ಮಿಶ್ರಣ ಮಾಡಿ, ಮತ್ತು ನಿಮಗೆ ಬಾಯಾರಿಕೆ ಬಂದಾಗಲೆಲ್ಲಾ ಈ ಮಿಶ್ರಣವನ್ನು ನೀರಿನ ಬದಲು ಕುಡಿಯಿರಿ.

ತೆಂಗಿನೆಣ್ಣೆ ತೆಂಗಿನೆಣ್ಣೆಯನ್ನು ಹಚ್ಚುವುದರಿಂದ ಕ್ರಮೇಣವಾಗಿ ನೋವು ಕಡಿಮೆಯಾಗುತ್ತದೆ. ಗಾಯವೂ ಕೂಡ ಮಾಗುತ್ತದೆ.

ಉತ್ತಮ ನಿದ್ರೆ ಮುಖ್ಯ ನಿಮ್ಮ ಊಟ ಹಾಗೂ ನಿದ್ರೆ ಎರಡೂ ಉತ್ತಮವಾಗಿರಲಿ, ಉತ್ತಮ ಆಹಾರ ಹಾಗೂ ನಿದ್ರೆಯಿಂದ ಪೈಲ್ಸ್ ಗುಣಪಡಿಸಬಹುದು.

ನೀರು ಕುಡಿಯುವುದು ಹೆಚ್ಚು ಪ್ರಮಾಣದಲ್ಲಿ ನೀರು ಕುಡಿಯಬೇಕು, ಹಾಗೆಯೇ ಜ್ಯೂಸ್ ಸೇರಿದಂತೆ ದ್ರವ ಪದಾರ್ಥಗಳನ್ನು ಆಗಾಗ ಸೇವಿಸುತ್ತಿರಬೇಕು.

ಈ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಆಧರಿಸಿರುತ್ತದೆ. ಮೂಲವ್ಯಾಧಿ ಹೆಚ್ಚಾದರೆ ವೈದ್ಯರ ಸಲಹೆ ಪಡೆಯುವುದು ಒಳಿತು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ