Vitamin C: ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು ಹೆಚ್ಚು ವಿಟಮಿನ್ ಸಿ ಸೇವಿಸುತ್ತೀರಾ? ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕಾರಕ

ವಿಟಮಿನ್ ತೆಗೆದುಕೊಳ್ಳುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ತಜ್ಞರು ಹೇಳುವ ಪ್ರಕಾರ ಹೆಚ್ಚು ವಿಟಮಿನ್ ತೆಗೆದುಕೊಳ್ಳುವುದು ಅಪಾಯಕ್ಕೆ ಕಾರಣವಾಗುತ್ತದೆ. ಅದರಲ್ಲೂ ವಿಟಮಿನ್ ಸಿ ಯ ಹೆಚ್ಚಿನ ಸೇವನೆಯು ನಮ್ಮನ್ನು ಹೆಚ್ಚು ಅಪಾಯಕ್ಕೀಡು ಮಾಡುತ್ತದೆ.

Vitamin C: ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು ಹೆಚ್ಚು ವಿಟಮಿನ್ ಸಿ ಸೇವಿಸುತ್ತೀರಾ? ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕಾರಕ
ಪ್ರಾತಿನಿಧಿಕ ಚಿತ್ರ
Follow us
| Updated By: preethi shettigar

Updated on: Jun 21, 2021 | 10:30 AM

ಕೊರೊನಾ ಎರಡನೇ ಅಲೆಯೂ ನಮ್ಮನ್ನು ಹೆಚ್ಚು ಚಿಂತೆಗೀಡಾಗುವಂತೆ ಮಾಡಿತ್ತು. ಇದಕ್ಕೆ ಕಾರಣ ಕೊರೊನಾ ಸೋಂಕಿನ ತೀವ್ರತೆ. ಹೀಗಾಗಿ ಜನರು ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ವ್ಯಾಕ್ಸಿನ್ ತೆಗೆದುಕೊಳ್ಳಲು ಸೂಚಿಸಲಾಗಿದೆ. ಇದರ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲವು ಆಹಾರಗಳನ್ನು ತೆಗದುಕೊಳ್ಳುವುದು ಸೂಕ್ತ. ಈ ನಿಟ್ಟಿನಲ್ಲಿ ಅನೇಕ ಜನರು ಜೀವಸತ್ವಗಳು, ಖನಿಜಗಳು ಮತ್ತು ಪೋಷಕಾಂಶಗಳನ್ನು ಒಳಗೊಂಡಿರುವ  ಆಹಾರವನ್ನು ಸೇವಿಸುತ್ತಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ, ವಿಟಮಿನ್ ಸಿ ಅಧಿಕವಾಗಿರುವ ಆಹಾರವನ್ನು ಸೇವಿಸುತ್ತಿದ್ದಾರೆ. ಆದಾಗ್ಯೂ, ವಿಟಮಿನ್ ತೆಗೆದುಕೊಳ್ಳುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ತಜ್ಞರು ಹೇಳುವ ಪ್ರಕಾರ ಹೆಚ್ಚು ವಿಟಮಿನ್ ತೆಗೆದುಕೊಳ್ಳುವುದು ಅಪಾಯಕ್ಕೆ ಕಾರಣವಾಗುತ್ತದೆ. ಅದರಲ್ಲೂ ವಿಟಮಿನ್ ಸಿ ಯ ಹೆಚ್ಚಿನ ಸೇವನೆಯು ನಮ್ಮನ್ನು ಹೆಚ್ಚು ಅಪಾಯಕ್ಕೀಡು ಮಾಡುತ್ತದೆ.

ನಿಂಬೆಯಂತಹ ಆಮ್ಲೀಯತೆ ಹೆಚ್ಚಿರುವ ಹಣ್ಣುಗಳಲ್ಲಿ ವಿಟಮಿನ್ ಸಿ ಅಧಿಕವಾಗಿರುತ್ತದೆ. ಅಲ್ಲದೆ ಕೆಲವರು ಇತ್ತೀಚೆಗೆ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ವಿಟಮಿನ್ ಸಿ ಮಾತ್ರೆಗಳನ್ನು ಸಹ ತೆಗೆದುಕೊಳ್ಳಲು ಪ್ರಾರಂಭಿಸಿದ್ದಾರೆ. ಆದರೆ ಮಿತಿಮೀರಿದ ಸೇವನೆಯೂ ಅಪಾಯಕಾರಿ. ಕೊರೊನಾ ಮೂರನೇ ಅಲೆಯ ಬಗ್ಗೆ ಮುನ್ನೇಚರಿಕೆ ನೀಡಿರುವ ತಜ್ಞರು, ಜನರು ವಿಟಮಿನ್ ಡಿ 3, ಕ್ಯಾಲ್ಸಿಯಂ, ಸತು, ಮಲ್ಟಿ ವಿಟಮಿನ್ ತೆಗೆದುಕೊಳ್ಳುತ್ತಿದ್ದಾರೆ. ಇವುಗಳನ್ನು ಡೋಸೇಜ್‌ಗಿಂತ ಹೆಚ್ಚಾಗಿ ತೆಗೆದುಕೊಳ್ಳಬಾರದು ಎಂದು ತಿಳಿಸಿದ್ದಾರೆ.

ಆರ್‌ಎಂಎಲ್ ಆಸ್ಪತ್ರೆಯ ವೈದ್ಯರಾದ ರಾಜೀವ್ ಸೂದ್ ಹೇಳುವ ಪ್ರಕಾರ , ಇತ್ತೀಚಿನ ದಿನಗಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮುಖ್ಯವಾಗಿದೆ. ಆದರೆ, ಜೀವಸತ್ವಗಳನ್ನು ಹೆಚ್ಚಾಗಿ ತೆಗೆದುಕೊಳ್ಳುವುದು ಹಾನಿಕಾರಕ ಎಂದು ತಿಳಿಸಿದ್ದಾರೆ.

ವಿಟಮಿನ್ ಸಿ ಅನ್ನು 20 ನೇ ಶತಮಾನದ ಆರಂಭದಲ್ಲಿ ಆಲ್ಬರ್ಟ್ ಸ್ಟೆಂಟ್ ಜಾರ್ಜಿ ಕಂಡುಹಿಡಿದ್ದಾರೆ. ವಿಟಮಿನ್ ಸಿ ಕೊರತೆಯಿರುವ ಜನರಿಗೆ ಸ್ಕರ್ವಿ ಬರುವ ಸಾಧ್ಯತೆ ಹೆಚ್ಚು ಮತ್ತು ಇದರಿಂದ ನ್ಯುಮೋನಿಯಾ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ನೊಬೆಲ್ ಪ್ರಶಸ್ತಿ ವಿಜೇತ ಲಿನಸ್ ಪಾಲಿಂಗ್ 1970 ರ ದಶಕದಲ್ಲಿ ಶೀತಕ್ಕೆ ಚಿಕಿತ್ಸೆ ನೀಡಲು ವಿಟಮಿನ್ ಸಿ ಪೂರಕಗಳನ್ನು ಬಳಸಲು ಪ್ರಾರಂಭಿಸಿದರು. ವಿಟಮಿನ್ ಸಿ ಕೊರತೆಯಿರುವ ಜನರಿಗೆ ಇತರ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ವಿಟಮಿನ್ ಸಿ ಕೊರತೆಗೆ ಕಾರಣ ಧೂಮಪಾನ, ಸರಿಯಾದ ಜೀವನಶೈಲಿಯ ಕೊರತೆಯಾಗಿದೆ. ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ತೆಗೆದುಕೊಳ್ಳದ ಕಾರಣ ವಿಟಮಿನ್ ಸಿ ಕೊರತೆ ಕಂಡುಬರುತ್ತದೆ.

1950-1960 ರಲ್ಲಿ ವೈದ್ಯರು ವಿಟಮಿನ್ ಸಿ ಕೊರತೆಯ ಬಗ್ಗೆ ಅಧ್ಯಯನ ನಡೆಸಿದರು. ಪರಿಣಾಮವಾಗಿ, ದಿನಕ್ಕೆ 4 ರಿಂದ 6 ಗ್ರಾಂ ವಿಟಮಿನ್ ಸಿ ತೆಗೆದುಕೊಳ್ಳಲು ಸೂಚಿಸಲಾಗುತ್ತದೆ. ಇದು ಶೀತ ಮತ್ತು ಜ್ವರ ರೋಗಲಕ್ಷಣಗಳನ್ನು ಶೇಕಡಾ 85 ರಷ್ಟು ಕಡಿಮೆ ಮಾಡುತ್ತದೆ ಎಂದು ಅಧ್ಯಯನವು ಕಂಡುಹಿಡಿದಿದೆ. 20 ಕಿತ್ತಳೆಗಳಿಂದ 1 ಗ್ರಾಂ ವಿಟಮಿನ್ ಸಿ ಉಂಟಾಗುತ್ತದೆ.

ಕೊರೊನಾ ಸೋಂಕು ಶ್ವಾಸಕೋಶದ ಮೇಲೆ ನೇರ ಪರಿಣಾಮಬೀರಿದ್ದು, ಹೆಚ್ಚುವರಿ ಪೂರ್ವ-ರಾಡಿಕಲ್ಗಳು, ಆಕ್ಸಿಡೇಟಿವ್ ಒತ್ತಡ ಉಂಟಾಗುತ್ತದೆ. ರೋಗನಿರೋಧಕ ಶಕ್ತಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಇದಕ್ಕೆ ಕಾರಣ. ವಿಟಮಿನ್ ಸಿ ಆಂಟಿಆಕ್ಸಿಡೆಂಟ್ ಮತ್ತು ಪೂರ್ವ-ರಾಡಿಕಲ್ಗಳನ್ನು ತಟಸ್ಥಗೊಳಿಸುವ ಮೂಲಕ ಎಪಿಡರ್ಮಿಸ್ ಅನ್ನು ಹಾನಿಗೊಳಿಸುತ್ತದೆ. ಉತ್ಕರ್ಷಣ ನಿರೋಧಕಗಳ ನಡುವೆ ಸಮತೋಲನ ಇದ್ದಾಗ ರೋಗಿಗಳಲ್ಲಿ ರೋಗದ ಪರಿಣಾಮವು ಉಲ್ಬಣಗೊಳ್ಳುತ್ತದೆ. ವಿಟಮಿನ್ ಸಿ  ಸೇವನೆಯು ಉತ್ಕರ್ಷಣ ನಿರೋಧಕ ಸ್ಥಿತಿಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ:

ಕಡಿಮೆ ನಿದ್ರೆ ಅಂದರೆ ಹಲವು ತೊಂದರೆ; ನಿದ್ರಾಹೀನತೆಯಿಂದ ಬಳಲುತ್ತಿರುವವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

Health Tips: ಕೊವಿಡ್ ಸಮಯದಲ್ಲಿ ನೀವು ಪಾಲಿಸಲೇಬೇಕಾದ ಐದು ಆಹಾರ ಪದ್ಧತಿಗಳು

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ