AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vitamin C: ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು ಹೆಚ್ಚು ವಿಟಮಿನ್ ಸಿ ಸೇವಿಸುತ್ತೀರಾ? ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕಾರಕ

ವಿಟಮಿನ್ ತೆಗೆದುಕೊಳ್ಳುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ತಜ್ಞರು ಹೇಳುವ ಪ್ರಕಾರ ಹೆಚ್ಚು ವಿಟಮಿನ್ ತೆಗೆದುಕೊಳ್ಳುವುದು ಅಪಾಯಕ್ಕೆ ಕಾರಣವಾಗುತ್ತದೆ. ಅದರಲ್ಲೂ ವಿಟಮಿನ್ ಸಿ ಯ ಹೆಚ್ಚಿನ ಸೇವನೆಯು ನಮ್ಮನ್ನು ಹೆಚ್ಚು ಅಪಾಯಕ್ಕೀಡು ಮಾಡುತ್ತದೆ.

Vitamin C: ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು ಹೆಚ್ಚು ವಿಟಮಿನ್ ಸಿ ಸೇವಿಸುತ್ತೀರಾ? ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕಾರಕ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 21, 2021 | 10:30 AM

Share

ಕೊರೊನಾ ಎರಡನೇ ಅಲೆಯೂ ನಮ್ಮನ್ನು ಹೆಚ್ಚು ಚಿಂತೆಗೀಡಾಗುವಂತೆ ಮಾಡಿತ್ತು. ಇದಕ್ಕೆ ಕಾರಣ ಕೊರೊನಾ ಸೋಂಕಿನ ತೀವ್ರತೆ. ಹೀಗಾಗಿ ಜನರು ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ವ್ಯಾಕ್ಸಿನ್ ತೆಗೆದುಕೊಳ್ಳಲು ಸೂಚಿಸಲಾಗಿದೆ. ಇದರ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲವು ಆಹಾರಗಳನ್ನು ತೆಗದುಕೊಳ್ಳುವುದು ಸೂಕ್ತ. ಈ ನಿಟ್ಟಿನಲ್ಲಿ ಅನೇಕ ಜನರು ಜೀವಸತ್ವಗಳು, ಖನಿಜಗಳು ಮತ್ತು ಪೋಷಕಾಂಶಗಳನ್ನು ಒಳಗೊಂಡಿರುವ  ಆಹಾರವನ್ನು ಸೇವಿಸುತ್ತಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ, ವಿಟಮಿನ್ ಸಿ ಅಧಿಕವಾಗಿರುವ ಆಹಾರವನ್ನು ಸೇವಿಸುತ್ತಿದ್ದಾರೆ. ಆದಾಗ್ಯೂ, ವಿಟಮಿನ್ ತೆಗೆದುಕೊಳ್ಳುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ತಜ್ಞರು ಹೇಳುವ ಪ್ರಕಾರ ಹೆಚ್ಚು ವಿಟಮಿನ್ ತೆಗೆದುಕೊಳ್ಳುವುದು ಅಪಾಯಕ್ಕೆ ಕಾರಣವಾಗುತ್ತದೆ. ಅದರಲ್ಲೂ ವಿಟಮಿನ್ ಸಿ ಯ ಹೆಚ್ಚಿನ ಸೇವನೆಯು ನಮ್ಮನ್ನು ಹೆಚ್ಚು ಅಪಾಯಕ್ಕೀಡು ಮಾಡುತ್ತದೆ.

ನಿಂಬೆಯಂತಹ ಆಮ್ಲೀಯತೆ ಹೆಚ್ಚಿರುವ ಹಣ್ಣುಗಳಲ್ಲಿ ವಿಟಮಿನ್ ಸಿ ಅಧಿಕವಾಗಿರುತ್ತದೆ. ಅಲ್ಲದೆ ಕೆಲವರು ಇತ್ತೀಚೆಗೆ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ವಿಟಮಿನ್ ಸಿ ಮಾತ್ರೆಗಳನ್ನು ಸಹ ತೆಗೆದುಕೊಳ್ಳಲು ಪ್ರಾರಂಭಿಸಿದ್ದಾರೆ. ಆದರೆ ಮಿತಿಮೀರಿದ ಸೇವನೆಯೂ ಅಪಾಯಕಾರಿ. ಕೊರೊನಾ ಮೂರನೇ ಅಲೆಯ ಬಗ್ಗೆ ಮುನ್ನೇಚರಿಕೆ ನೀಡಿರುವ ತಜ್ಞರು, ಜನರು ವಿಟಮಿನ್ ಡಿ 3, ಕ್ಯಾಲ್ಸಿಯಂ, ಸತು, ಮಲ್ಟಿ ವಿಟಮಿನ್ ತೆಗೆದುಕೊಳ್ಳುತ್ತಿದ್ದಾರೆ. ಇವುಗಳನ್ನು ಡೋಸೇಜ್‌ಗಿಂತ ಹೆಚ್ಚಾಗಿ ತೆಗೆದುಕೊಳ್ಳಬಾರದು ಎಂದು ತಿಳಿಸಿದ್ದಾರೆ.

ಆರ್‌ಎಂಎಲ್ ಆಸ್ಪತ್ರೆಯ ವೈದ್ಯರಾದ ರಾಜೀವ್ ಸೂದ್ ಹೇಳುವ ಪ್ರಕಾರ , ಇತ್ತೀಚಿನ ದಿನಗಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮುಖ್ಯವಾಗಿದೆ. ಆದರೆ, ಜೀವಸತ್ವಗಳನ್ನು ಹೆಚ್ಚಾಗಿ ತೆಗೆದುಕೊಳ್ಳುವುದು ಹಾನಿಕಾರಕ ಎಂದು ತಿಳಿಸಿದ್ದಾರೆ.

ವಿಟಮಿನ್ ಸಿ ಅನ್ನು 20 ನೇ ಶತಮಾನದ ಆರಂಭದಲ್ಲಿ ಆಲ್ಬರ್ಟ್ ಸ್ಟೆಂಟ್ ಜಾರ್ಜಿ ಕಂಡುಹಿಡಿದ್ದಾರೆ. ವಿಟಮಿನ್ ಸಿ ಕೊರತೆಯಿರುವ ಜನರಿಗೆ ಸ್ಕರ್ವಿ ಬರುವ ಸಾಧ್ಯತೆ ಹೆಚ್ಚು ಮತ್ತು ಇದರಿಂದ ನ್ಯುಮೋನಿಯಾ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ನೊಬೆಲ್ ಪ್ರಶಸ್ತಿ ವಿಜೇತ ಲಿನಸ್ ಪಾಲಿಂಗ್ 1970 ರ ದಶಕದಲ್ಲಿ ಶೀತಕ್ಕೆ ಚಿಕಿತ್ಸೆ ನೀಡಲು ವಿಟಮಿನ್ ಸಿ ಪೂರಕಗಳನ್ನು ಬಳಸಲು ಪ್ರಾರಂಭಿಸಿದರು. ವಿಟಮಿನ್ ಸಿ ಕೊರತೆಯಿರುವ ಜನರಿಗೆ ಇತರ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ವಿಟಮಿನ್ ಸಿ ಕೊರತೆಗೆ ಕಾರಣ ಧೂಮಪಾನ, ಸರಿಯಾದ ಜೀವನಶೈಲಿಯ ಕೊರತೆಯಾಗಿದೆ. ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ತೆಗೆದುಕೊಳ್ಳದ ಕಾರಣ ವಿಟಮಿನ್ ಸಿ ಕೊರತೆ ಕಂಡುಬರುತ್ತದೆ.

1950-1960 ರಲ್ಲಿ ವೈದ್ಯರು ವಿಟಮಿನ್ ಸಿ ಕೊರತೆಯ ಬಗ್ಗೆ ಅಧ್ಯಯನ ನಡೆಸಿದರು. ಪರಿಣಾಮವಾಗಿ, ದಿನಕ್ಕೆ 4 ರಿಂದ 6 ಗ್ರಾಂ ವಿಟಮಿನ್ ಸಿ ತೆಗೆದುಕೊಳ್ಳಲು ಸೂಚಿಸಲಾಗುತ್ತದೆ. ಇದು ಶೀತ ಮತ್ತು ಜ್ವರ ರೋಗಲಕ್ಷಣಗಳನ್ನು ಶೇಕಡಾ 85 ರಷ್ಟು ಕಡಿಮೆ ಮಾಡುತ್ತದೆ ಎಂದು ಅಧ್ಯಯನವು ಕಂಡುಹಿಡಿದಿದೆ. 20 ಕಿತ್ತಳೆಗಳಿಂದ 1 ಗ್ರಾಂ ವಿಟಮಿನ್ ಸಿ ಉಂಟಾಗುತ್ತದೆ.

ಕೊರೊನಾ ಸೋಂಕು ಶ್ವಾಸಕೋಶದ ಮೇಲೆ ನೇರ ಪರಿಣಾಮಬೀರಿದ್ದು, ಹೆಚ್ಚುವರಿ ಪೂರ್ವ-ರಾಡಿಕಲ್ಗಳು, ಆಕ್ಸಿಡೇಟಿವ್ ಒತ್ತಡ ಉಂಟಾಗುತ್ತದೆ. ರೋಗನಿರೋಧಕ ಶಕ್ತಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಇದಕ್ಕೆ ಕಾರಣ. ವಿಟಮಿನ್ ಸಿ ಆಂಟಿಆಕ್ಸಿಡೆಂಟ್ ಮತ್ತು ಪೂರ್ವ-ರಾಡಿಕಲ್ಗಳನ್ನು ತಟಸ್ಥಗೊಳಿಸುವ ಮೂಲಕ ಎಪಿಡರ್ಮಿಸ್ ಅನ್ನು ಹಾನಿಗೊಳಿಸುತ್ತದೆ. ಉತ್ಕರ್ಷಣ ನಿರೋಧಕಗಳ ನಡುವೆ ಸಮತೋಲನ ಇದ್ದಾಗ ರೋಗಿಗಳಲ್ಲಿ ರೋಗದ ಪರಿಣಾಮವು ಉಲ್ಬಣಗೊಳ್ಳುತ್ತದೆ. ವಿಟಮಿನ್ ಸಿ  ಸೇವನೆಯು ಉತ್ಕರ್ಷಣ ನಿರೋಧಕ ಸ್ಥಿತಿಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ:

ಕಡಿಮೆ ನಿದ್ರೆ ಅಂದರೆ ಹಲವು ತೊಂದರೆ; ನಿದ್ರಾಹೀನತೆಯಿಂದ ಬಳಲುತ್ತಿರುವವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

Health Tips: ಕೊವಿಡ್ ಸಮಯದಲ್ಲಿ ನೀವು ಪಾಲಿಸಲೇಬೇಕಾದ ಐದು ಆಹಾರ ಪದ್ಧತಿಗಳು

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ