AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?

ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ತಿಳಿಯಿರಿ.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 09, 2021 | 1:16 PM

Share

ಕೊವಿಡ್​ ಸಾಂಕ್ರಾಮಿಕ ಕಾಯಿಲೆಯಿಂದ ಹೊರಬಂದ ಮೇಲೂ ಕೊವಿಡ್​ ಲಕ್ಷಣಗಳು ನಿಮ್ಮನ್ನು ಕಾಡುತ್ತಿರಬಹುದು. ದೀರ್ಘಕಾಲಿಕ ಕೊವಿಡ್​ ಲಕ್ಷಣಗಳು ನಿಮ್ಮನ್ನು ಹೆಚ್ಚು ಚಿಂತೆಗೀಡು ಮಾಡುತ್ತಿರಬಹುದು. ಇದರಿಂದ ಮಾನವರಲ್ಲಿ ರಕ್ತದೊತ್ತಡದಂತಹ ಸಮಸ್ಯೆಗಳು ಕಾಡತೊಡಗಬಹುದು. ಹೀಗಿರುವಾಗ ಮನಸ್ಸಿನ ಸ್ಥಿತಿಯ ಬದಲಾವಣೆ ಅವಶ್ಯಕವಾಗಿರುತ್ತದೆ. ಈ ಕುರಿತಂತೆ ವೈದ್ಯರು ಕೆಲವೊಂದಿಷ್ಟು ಟಿಪ್ಸ್​ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪೌಷ್ಠಿಕ ಹಾಗೂ ಫಿಟ್ನೆಸ್​ ತಜ್ಞ ಮುನ್​ಮುನ್​ ಗನೆರಿವಾಲ್​ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಯಾರ್ಯಾರು ಕಡಿಮೆ ನಿದ್ರೆ, ಮನಸ್ಥಿತಿಯಲ್ಲಿ ಒತ್ತಡ, ಡಿಪ್ರೆಶನ್​ಗೆ ಒಳಗಾಗುತ್ತಿದ್ದೀರಿ. ನೀವು ಚಿಂತೆಗೀಡಾಗುವ ಅವಶ್ಯಕತೆ ಇಲ್ಲ. ಇದು ಸಾಮಾನ್ಯವಾದುದು. ಮುಖ್ಯವಾಗಿ ನೀವು ನೆನಪಿಟ್ಟುಕೊಳ್ಳುವ ಅಂಶವೆಂದರೆ, ಯಾವುದೇ ರೋಗ ಲಕ್ಷಣದಿಂದ ಹೊರಬರಲು ಅಥವಾ ಸುಧಾರಿಸಿಕೊಳ್ಳಲು ಸಮಯ ಹಿಡಿಯುತ್ತದೆ ಎಂದು ಧೈರ್ಯ ಹೇಳಿದ್ದಾರೆ.

 ದೀರ್ಘಕಾಲಿಕ ಕೊವಿಡ್​ನಿಂದ ಚೇತರಿಸಿಕೊಳ್ಳಲು ಒಂದುಷ್ಟು ಸಲಹೆಗಳು * ಸಮಯಕ್ಕೆ ಸರಿಯಾಗಿ ಆಹಾರ * ನಿಮ್ಮ ಆಹಾರ ಕ್ರಮ ಸಮತೋಲನದಲ್ಲಿರಬೇಕು. ಜತೆಗೆ ಪೌಷ್ಟಿಕ ಆಹಾರವನ್ನು ಸೇವಿಸಬೇಕು * ಪ್ರತಿನಿತ್ಯವೂ ವ್ಯಾಯಾಮ ಮಾಡಿ * ಶುದ್ಧ ಗಾಳಿಯನ್ನು ಪಡೆಯಿರಿ. ಹೆಚ್ಚು ವಾತಾವಣದಲ್ಲಿ ಪ್ರಕೃತಿಯ ನಡುವೆ ಸಮಯ ಕಳೆಯುವ ಮೂಲಕ ಶುದ್ಧ ಗಾಳಿಯನ್ನು ಸೇವಿಸಬಹುದು * ದೇಹಕ್ಕೆ ವಿಶ್ರಾಂತಿ ಮತ್ತು ನಿದ್ರೆಗೆ ಸಮಯ ಕೊಡಿ * ಪ್ರತಿನಿತ್ಯವೂ ಧ್ಯಾನ ಅಭ್ಯಾಸ ರೂಢಿಯಲ್ಲಿರಲಿ * ಮನಸ್ಸಿಗೆ ಕಿರಿ-ಕಿರಿ ಉಂಟುಮಾಡುವ ಗೊಂದಲದ ಸುದ್ದಿಗಳಿಂದ ದೂರವಿರಿ * ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ

ಇದನ್ನೂ ಓದಿ:

Health Tips: ಎಳನೀರು ಕುಡಿದು ಹಾಗೇ ಬರುವ ಅಭ್ಯಾಸ ಬಿಟ್ಟು ಬಿಡಿ; ಒಳಗಿನ ಗಂಜಿ ಸೇವಿಸಿ, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

Health Tips: ಕಿಡ್ನಿ ಸ್ಟೋನ್​ ಸಮಸ್ಯೆಯ ಲಕ್ಷಣಗಳೇನು? ಪರಿಹಾರಗಳಿವೆಯಾ?

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ