AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಲೂ ನ್ಯೂಸ್ ಪೇಪರ್ ನಲ್ಲಿ ಕಟ್ಟಿಕೊಟ್ಟ ಬಜ್ಜಿ, ಬೋಂಡಾ ತಿಂತೀರಾ ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ

ಚಹಾ ಅಂಗಡಿಗಳಲ್ಲಿ, ರಸ್ತೆಬದಿಯ ಸಣ್ಣ ಹೋಟೆಲ್‌ಗಳಲ್ಲಿ ಸಂಜೆಯಾಗುತ್ತಿದ್ದಂತೆ ಬಿಸಿ ಬಿಸಿಯಾಗಿ ಬಜ್ಜಿ, ಬೋಂಡಾ ಇತ್ಯಾದಿ ಕರಿದ ಆಹಾರಗಳನ್ನು ಮಾರಾಟ ಮಾಡುತ್ತಾರೆ. ಇದು ಎಲ್ಲಾ ಕಡೆಗಳಲ್ಲಿಯೂ ಸಾಮಾನ್ಯ. ಆದರೆ ಕೆಲವು ಅಂಗಡಿಗಳಲ್ಲಿ ಈ ರೀತಿ ಬಿಸಿ ತಿಂಡಿಗಳನ್ನು ಹಳೆಯ ದಿನ ಪತ್ರಿಕೆಗಳಲ್ಲಿ ಸುತ್ತಿ ಕೊಡುತ್ತಾರೆ. ಹೌದು, ಇದರಿಂದ ಬರುವ ಅಪಾಯ ತುಂಬಾ ಗಂಭೀರವಾಗಿರಬಹುದು. ಹಾಗಾದರೆ ಈ ರೀತಿ ದಿನ ಪತ್ರಿಕೆಗಳಲ್ಲಿ ಸುತ್ತಿ ಕೊಡುವಂತಹ ಆಹಾರ ಸೇವನೆ ಮಾಡುವುದರಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಬರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈಗಲೂ ನ್ಯೂಸ್ ಪೇಪರ್ ನಲ್ಲಿ ಕಟ್ಟಿಕೊಟ್ಟ ಬಜ್ಜಿ, ಬೋಂಡಾ ತಿಂತೀರಾ ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ
Food Parcel In Newspapers
ಪ್ರೀತಿ ಭಟ್​, ಗುಣವಂತೆ
|

Updated on: Dec 16, 2025 | 5:51 PM

Share

ಭಾರತದಲ್ಲಿ, ಅದರಲ್ಲಿಯೂ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳಲ್ಲಿ ಸಂಜೆ ಸಮಯದಲ್ಲಿ ರಸ್ತೆ ಬದಿ ಬಿಸಿ ಬಿಸಿ ಚಹಾ, ಕರಿದ ತಿನಿಸುಗಳನ್ನು (Fried Foods) ಮಾರಾಟ ಮಾಡುವುದು ಸಹಜ. ಬಜ್ಜಿ, ವಡೆ, ಬೋಂಡಾ ಹೀಗೆ ವಿವಿಧ ರೀತಿಯ ತಿಂಡಿಗಳನ್ನು ಮಾಡಿ ಮಾರಾಟ ಮಾಡುತ್ತಾರೆ. ಆದರೆ ಕೆಲವು ಅಂಗಡಿಗಳಲ್ಲಿ ಈ ರೀತಿ ಬಿಸಿ ತಿಂಡಿಗಳನ್ನು ಹಳೆಯ ದಿನ ಪತ್ರಿಕೆಗಳಲ್ಲಿ ಸುತ್ತಿ ಕೊಡುತ್ತಾರೆ. ಇದು ಅಗ್ಗ ಮತ್ತು ಗ್ರಾಹಕರಿಗೆ ಕೊಡುವುದಕ್ಕೆ ಅನುಕೂಲಕರ ಎಂದು ಅನಿಸುತ್ತದೆಯಾದರೂ ಈ ರೀತಿಯ ಅಭ್ಯಾಸ ಗುಪ್ತ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹೌದು, ಇದರಿಂದ ಬರುವ ಅಪಾಯ ತುಂಬಾ ಗಂಭೀರವಾಗಿರಬಹುದು. ಹಾಗಾದರೆ ಈ ರೀತಿ ದಿನ ಪತ್ರಿಕೆಗಳಲ್ಲಿ ಸುತ್ತಿ ಕೊಡುವಂತಹ ಆಹಾರ ಸೇವನೆ ಮಾಡುವುದರಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಬರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನ್ಯೂಸ್ ಪೇಪರ್ ನಲ್ಲಿ ಕಟ್ಟಿಕೊಟ್ಟ ಆಹಾರ ಸೇವನೆ ಮಾಡುವುದರಿಂದ ಬರುವ ಸಮಸ್ಯೆಗಳು:

ಸಾಮಾನ್ಯವಾಗಿ ಪತ್ರಿಕೆಗಳಲ್ಲಿ ಮುದ್ರಣ ಶಾಯಿ, ರಾಸಾಯನಿಕಗಳು, ವರ್ಣದ್ರವ್ಯಗಳು ಸೇರ್ಪಡೆಯಾಗಿರುತ್ತವೆ. ಇವು ಆಹಾರದೊಂದಿಗೆ, ಅದರಲ್ಲಿಯೂ ಕರಿದ ತಿಂಡಿ ಮತ್ತು ವಡೆಯಂತಹ ಬಿಸಿ ಪದಾರ್ಥಗಳೊಂದಿಗೆ ಬೆರೆತಾಗ, ಶಾಯಿ ಅವುಗಳೊಂದಿಗೆ ಬೆರೆಯುತ್ತದೆ. ಈ ರಾಸಾಯನಿಕಗಳು ದೇಹವನ್ನು ಪ್ರವೇಶಿಸಿ ಸಂಗ್ರಹವಾಗುತ್ತವೆ ಮತ್ತು ಜೀರ್ಣಕಾರಿ ಸಮಸ್ಯೆಗಳು, ಯಕೃತ್ತು ಮತ್ತು ಮೂತ್ರಪಿಂಡಗಳಿಗೆ ಹಾನಿ, ನರಮಂಡಲದ ಅಸ್ವಸ್ಥತೆಗಳು ಉಂಟಾಗಬಹುದು. ಅಷ್ಟು ಮಾತ್ರವಲ್ಲ, ಇದು ರೋಗನಿರೋಧಕ ಶಕ್ತಿಯನ್ನು ಕೂಡ ಕುಂಠಿತಗೊಳಿಸಬಹುದು. ಅದಲ್ಲದೆ ಪತ್ರಿಕೆಗಳಲ್ಲಿ ಬಳಸುವ ಕೆಲವು ವಸ್ತುಗಳು ಕ್ಯಾನ್ಸರ್ ಕಾರಕಗಳಾಗಿವೆ. ಮಕ್ಕಳು, ಯುವಕರು, ವೃದ್ಧರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಇರುವವರು ಸೇವನೆ ಮಾಡುವುದರಿಂದ ಮತ್ತಷ್ಟು ಸಮಸ್ಯೆ ಕಂಡುಬರಬಹುದು.

ಇದನ್ನೂ ಓದಿ: ಬೋಂಡಾ, ಬಜ್ಜಿ, ಕರಿದ ತಿಂಡಿಗಳ ಸವಿಯುವ ಮುನ್ನ ಎಚ್ಚರ: ಬೆಂಗಳೂರಿನ ಬಹುತೇಕ ಕಡೆ ಕಳಪೆ ಅಡುಗೆ ಎಣ್ಣೆ ಬಳಕೆ

ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) 2018 ರ ಆರಂಭದಲ್ಲಿಯೇ ಆಹಾರ ಪ್ಯಾಕೇಜಿಂಗ್‌ಗಾಗಿ ಪತ್ರಿಕೆಗಳ ಬಳಕೆಯನ್ನು ನಿಷೇಧಿಸಿತು. ಆದರೂ ಈ ಪದ್ಧತಿ ಅನೇಕ ಸ್ಥಳಗಳಲ್ಲಿ ಮುಂದುವರೆದಿದೆ. ಹಾಗಾಗಿ ಪತ್ರಿಕೆಗಳಲ್ಲಿ ಪ್ಯಾಕ್ ಮಾಡಿದ ಆಹಾರವನ್ನು ತೆಗೆದುಕೊಳ್ಳಬೇಡಿ. ಪಾರ್ಸೆಲ್‌ ತೆಗೆದುಕೊಳ್ಳುವಾಗ ಮನೆಯಿಂದ ಡಬ್ಬಿಗಳನ್ನು ತೆಗೆದುಕೊಂಡು ಹೋಗಿ. ತಟ್ಟೆಗಳಲ್ಲಿ ಆಹಾರವನ್ನು ಬಡಿಸಿ ಅಥವಾ ಬಾಳೆ ಎಲೆ ಉಪಯೋಗಿಸಿ ಇವು ಆರೋಗ್ಯಕ್ಕೂ ಮತ್ತು ಪರಿಸರಕ್ಕೂ ಪ್ರಯೋಜನಕಾರಿ. ಈ ಸಣ್ಣ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದರಿಂದ, ನಾವು ಮಾತ್ರವಲ್ಲದೆ ನಮ್ಮ ಕುಟುಂಬ ಮತ್ತು ಸಮಾಜವೂ ಆರೋಗ್ಯವಾಗಿರುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ