AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Long Covid: ದೀರ್ಘಕಾಲಿಕ ಕೊವಿಡ್​ ರೋಗ ಲಕ್ಷಣಗಳ ಚೇತರಿಕೆಯ ಬಳಿಕ ಮೂತ್ರಪಿಂಡ ಸಮಸ್ಯೆ ಕಾಡಬಹುದು!

ಮೇ ತಿಂಗಳಿನಲ್ಲಿ ನಡೆಸಿದ ಅಧ್ಯಯನದ ಪ್ರಕಾರ ಕೊರೊನಾದಿಂದ ಚೇತರಿಸಿಕೊಂಡ ನಂತರ, ಮೂತ್ರಪಿಂಡದ ವೈಫಲ್ಯವು ಬೇಗನೆ ತಿಳಿದು ಬಂದಿಲ್ಲ.

Long Covid: ದೀರ್ಘಕಾಲಿಕ ಕೊವಿಡ್​ ರೋಗ ಲಕ್ಷಣಗಳ ಚೇತರಿಕೆಯ ಬಳಿಕ ಮೂತ್ರಪಿಂಡ ಸಮಸ್ಯೆ ಕಾಡಬಹುದು!
ಸಾಂದರ್ಭಿಕ ಚಿತ್ರ
TV9 Web
| Updated By: shruti hegde|

Updated on: Jun 21, 2021 | 9:23 AM

Share

ಕೊರೊನಾ ವೈರಸ್​ ಎರಡನೇ ಅಲೆಯಿಂದ ಭಾರತ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಕೊರೊನಾ ವೈರಸ್​ ನೆಗೆಟಿವ್​ ರಿಪೋರ್ಟ್​ ಬಳಿಕವೂ ಸಹ ಜನರಿಗೆ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ಇದಕ್ಕೆ ಲಾಂಗ್​ ಕೊವಿಡ್​ ಅಥವಾ ದೀರ್ಘಕಾಲಿಕ ಕೊವಿಡ್​ ಎಂದು ಕರೆಯುತ್ತಾರೆ. ಇದರ ಪ್ರಕಾರ ರೋಗಿಗಳು ಸೋಂಕಿನಿಂದ ಹೊರ ಬಂದರೂ ಸಹ ಕೆಲವು ವಾರಗಳವರೆಗೆ ವೈರಸ್​ನ ಲಕ್ಷಣಗಳನ್ನು ಅನುಭವಿಸುತ್ತಾರೆ.

ಕೊರೊನಾ ವೈರಸ್​ ಉಸಿರಾಟ ಸಮಸ್ಯೆ ಒಂದೇ ಅಲ್ಲದೇ ದೇಹದ ಇತರ ಅಂಗಗಳ ಮೇಲೂ ಪರಿಣಾಮ ಬೀರುತ್ತಿದೆ ಎಂಬುದು ಸಾಬೀತಾಗಿದೆ. ಈ ಮಧ್ಯೆ, ಕೊರೊನಾದಿಂದ ಚೇತರಿಸಿಕೊಂಡ ನಂತರವೂ ಸಹ ಮೂತ್ರಪಿಂಡ ಸಮಸ್ಯೆ ಬಾಧಿಸುತ್ತದೆ. ಜನರಲ್ಲಿ ಬಿಪಿ ಹೆಚ್ಚಳದಂತಹ ಸಮಸ್ಯೆ ಕಾಡಬಹುದು ಎಂಬುದು ತಿಳಿದು ಬಂದಿದೆ. ಕೊರೊನಾ ಸೋಂಕಿತರ ಮೇಲೆ ನಡೆಸಿದ ಅಧ್ಯಯನದಿಂದ ಇದು ತಿಳಿದು ಬಂದಿದೆ ಎಂದು ತಜ್ಞರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಆರಂಭಿಕ ಲಕ್ಷಣಗಳು ಕಂಡು ಬರುವುದಿಲ್ಲ ಮೇ ತಿಂಗಳಿನಲ್ಲಿ ನಡೆಸಿದ ಅಧ್ಯಯನದ ಪ್ರಕಾರ ಕೊರೊನಾದಿಂದ ಚೇತರಿಸಿಕೊಂಡ ನಂತರ, ಮೂತ್ರಪಿಂಡದ ವೈಫಲ್ಯವು ಬೇಗನೆ ತಿಳಿದು ಬಂದಿಲ್ಲ. ಸೋಂಕಿನಿಂದ ಚೇತರಿಸಿಕೊಂಡ ಬಳಿಕದ ಆರಂಭದ ದಿನಗಳಲ್ಲಿ ಗೊತ್ತಾಗಲಿಲ್ಲ. ಸಮಯ ಕಳೆದಂತೆಯೇ ಮೂತ್ರಪಿಂಡದ ಸಮಸ್ಯೆ ತಿಳಿದು ಬಂದಿದೆ ಎಂದು ತಜ್ಞರು ಹೇಳಿದ್ದಾರೆ.

ಕೊರೊನಾ ಸೋಂಕಿಗೆ ಒಳಗಾದ ಶೇ.13 ಜನರು ಈ ಸಮಸ್ಯೆಗೆ ಒಳಗಾಗಿದ್ದಾರೆ. ಆದರೆ ಅವರಿಗೆ ಯಾವುದೇ ರೋಗ ಲಕ್ಷಣಗಳು ತೋರಿಸಿಲ್ಲ ಎಂದು ಅಧ್ಯಯನ ತಿಳಿಸಿದೆ. ಡಿಶ್ಚಾರ್ಜ್​ ಮಾಡಿದ ರೋಗಿಗಳನ್ನು ನಿರಂತರವಾಗಿ ಪರೀಕ್ಷಿಸಬೇಕು. ಏಕೆಂದರೆ ಒಂದೇ ಬಾರಿಗೆ ಮೂತ್ರಪಿಂಡ ಸಮಸ್ಯೆ ಇರುವುದು ಗೊತ್ತಾಗುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ:

Long Covid Symptoms: ದೀರ್ಘಕಾಲಿಕ ಕೊವಿಡ್​ ರೋಗ ಲಕ್ಷಣಗಳು ಹಾಗೂ ನಿರ್ವಹಿಸುವ ಕೆಲವು ಸಲಹೆಗಳು

Long Covid: ಕೊರೊನಾ ನೆಗೆಟಿವ್​ ವರದಿಯಾದರೂ ನಿರ್ಲಕ್ಷಿಸದಿರಿ; ದೀರ್ಘಕಾಲದವರೆಗೆ ಲಕ್ಷಣಗಳಿರಬಹುದು

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ