Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನೀವು ಅತಿಯಾದ ಚಳಿಯಿಂದ ಬಳಲುತ್ತಿದ್ದೀರಾ? ಈ ಪೋಷಕಾಂಶದ ಕೊರತೆಯೇ ಕಾರಣ

ಅತಿಯಾದ ಚಳಿಯನ್ನು ಅನುಭವಿಸುವುದು ಕಬ್ಬಿಣ, ವಿಟಮಿನ್ ಬಿ12, ಫೋಲೇಟ್ ಮತ್ತು ವಿಟಮಿನ್ ಸಿ ಕೊರತೆಯ ಸೂಚನೆಯಾಗಿರಬಹುದು. ಈ ಪೋಷಕಾಂಶಗಳು ದೇಹದ ಉಷ್ಣತೆಯನ್ನು ನಿಯಂತ್ರಿಸಲು ಮತ್ತು ಆಮ್ಲಜನಕದ ಸಾಗಣೆಯನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಕೆಂಪು ರಕ್ತಕಣಗಳ ಉತ್ಪಾದನೆಗೆ ಇವು ಅತ್ಯಗತ್ಯ. ನೀವು ಹೆಚ್ಚು ಚಳಿಯನ್ನು ಅನುಭವಿಸುತ್ತಿದ್ದರೆ, ವೈದ್ಯರನ್ನು ಸಂಪರ್ಕಿಸಿ.

Health Tips: ನೀವು ಅತಿಯಾದ ಚಳಿಯಿಂದ ಬಳಲುತ್ತಿದ್ದೀರಾ? ಈ ಪೋಷಕಾಂಶದ ಕೊರತೆಯೇ ಕಾರಣ
Extreme Cold
Follow us
ಅಕ್ಷತಾ ವರ್ಕಾಡಿ
|

Updated on:Nov 27, 2024 | 6:32 PM

ಚಳಿಗಾಲ ಪ್ರಾರಂಭವಾಗಿದೆ, ಈ ಸಮಯದಲ್ಲಿ ಚಳಿಯಿಂದ ಬಳಲುವುದು ಸಾಮಾನ್ಯ. ಆದರೆ ನಿಮ್ಮ ಸುತ್ತಲಿನ ಜನರಿಗಿಂತ ನೀವು ಹೆಚ್ಚು ನಡುಗುತ್ತಿದ್ದರೆ, ಅದು ತಾಪಮಾನದಿಂದಲ್ಲ,ನಿಮ್ಮ ದೇಹದಲ್ಲಿ ಈ ಪೋಷಕಾಂಶದ ಕೊರತೆಯಾಗಿರಬಹುದು ಎಂದು ವೈದ್ಯರು ಎಚ್ಚರಿಸುತ್ತಾರೆ. ನಿಮ್ಮ ದೇಹದ ಉಷ್ಣತೆಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಜೀವಸತ್ವಗಳು ಮತ್ತು ಕೆಲವು ಪೋಷಕಾಂಶಗಳ ಕೊರತೆಯಿಂದಾಗಿ ನೀವು ಅತಿಯಾದ ಚಳಿಯನ್ನು ಅನುಭವಿಸುತ್ತೀರಿ.

ನಮ್ಮ ದೇಹಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶಗಳಲ್ಲಿ ಕಬ್ಬಿಣ ಮತ್ತು ಕೆಲವು ವಿಟಮಿನ್‌ಗಳಾದ ಬಿ12, ಫೋಲೇಟ್ ಮತ್ತು ವಿಟಮಿನ್ ಸಿ ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು ಅವಶ್ಯಕ. ಕೆಂಪು ರಕ್ತ ಕಣಗಳ ಉತ್ಪಾದನೆ ಮತ್ತು ಆಮ್ಲಜನಕದ ಸಾಗಣೆಯನ್ನು ಖಚಿತಪಡಿಸಿಕೊಳ್ಳಲು ಈ ಪೋಷಕಾಂಶಗಳು ಒಟ್ಟಾಗಿ ಕೆಲಸ ಮಾಡುತ್ತವೆ.

ಇದನ್ನೂ ಓದಿ: ಈ ರೀತಿ ಮಾಡುವುದರಿಂದ ನೀವು ಮರೆಗುಳಿತನವನ್ನು ಮರೆಯಬಹುದು

ದಿ ಲ್ಯಾನ್ಸೆಟ್ ಹೆಮಟಾಲಜಿಯಲ್ಲಿ ಪ್ರಕಟವಾದ ಅಧ್ಯಯನವು ಕಬ್ಬಿಣದ ಕೊರತೆಯ ರಕ್ತಹೀನತೆಯಿಂದ ಬಳಲುತ್ತಿರುವ ಜನರು ಕಳಪೆ ಆಮ್ಲಜನಕದ ಸಾಗಣೆಯಿಂದಾಗಿ ಹೆಚ್ಚು ಚಳಿಯನ್ನು ಅನುಭವಿಸುತ್ತಾರೆ ಎಂದು ಕಂಡುಹಿಡಿದಿದೆ. ಆದ್ದರಿಂದ ನೀವು ಇತರರಿಗಿಂತ ಹೆಚ್ಚು ಶೀತವನ್ನು ಅನುಭವಿಸಿದರೆ, ಅದು ವಿಟಮಿನ್ ಬಿ 12, ಫೋಲೇಟ್, ಕಬ್ಬಿಣಾಂಶಗಳ ಕೊರತೆಯ ಸಂಕೇತವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:32 pm, Wed, 27 November 24

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ