AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eye Care: ಕಣ್ಣಿನ ಕೆಳಭಾಗದಲ್ಲಿ ತೆಂಗಿನ ಎಣ್ಣೆಯಿಂದ ಮಸಾಜ್ ಮಾಡಿದರೆ ಏನಾಗುತ್ತೆ ನೋಡಿ

ತೆಂಗಿನ ಎಣ್ಣೆ ಕೂದಲಿನ ಆರೈಕೆಗೆ ಮಾತ್ರವಲ್ಲದೆ ಚರ್ಮದ ಆರೈಕೆ ಮಾಡಿ ಸೌಂದರ್ಯ ಹೆಚ್ಚಿಸಲು ಪರಿಣಾಮಕಾರಿಯಾದ ಮನೆಮದ್ದಾಗಿದೆ. ಮೇಕಪ್ ತೆಗೆಯಲು ಇದು ತುಂಬಾ ಉಪಯುಕ್ತವಾಗಿದೆ. ಇದಲ್ಲದೆ, ತೆಂಗಿನ ಎಣ್ಣೆಯನ್ನು ನಿಯಮಿತವಾಗಿ ಕಣ್ಣುಗಳ ಕೆಳಗೆ ಮಸಾಜ್ ಮಾಡುವುದರಿಂದ ಅನೇಕ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಕೆಲವರಿಗೆ ಕಣ್ಣಿನ ಕೆಳಭಾಗವು ವಿವಿಧ ಕಾರಣಗಳಿಂದ ಉಬ್ಬುತ್ತದೆ. ಕೆಲವರಿಗೆ ದದ್ದುಗಳು, ತುರಿಕೆ ಉಂಟಾಗುತ್ತದೆ. ಇದಕ್ಕೆ ಹಲವು ಕಾರಣಗಳು ಇರಬಹುದು. ದಿನವಿಡೀ ಫೋನ್ ನೋಡುವುದು, ಸಾಕಷ್ಟು ನಿದ್ರೆ ಮಾಡಲು ಸಾಧ್ಯವಾಗದಿದ್ದಾಗ, ಜೊತೆಗೆ ವಯಸ್ಸಾಗುವುದರಿಂದ ಈ ಸಮಸ್ಯೆಗಳು ಕಂಡು ಬರುತ್ತದೆ. ತೆಂಗಿನ ಎಣ್ಣೆಯನ್ನು ಕಣ್ಣುಗಳ ಕೆಳಗೆ ಹಚ್ಚಿ ಮತ್ತು ಕೈಗಳಿಂದ ಮಸಾಜ್ ಮಾಡುವುದರಿಂದ ಸಮಸ್ಯೆಯನ್ನು ನಿವಾರಣೆ ಮಾಡಬಹುದು.

Eye Care: ಕಣ್ಣಿನ ಕೆಳಭಾಗದಲ್ಲಿ ತೆಂಗಿನ ಎಣ್ಣೆಯಿಂದ ಮಸಾಜ್ ಮಾಡಿದರೆ ಏನಾಗುತ್ತೆ ನೋಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 31, 2024 | 11:31 AM

Share

ಕೂದಲು ಮತ್ತು ಚರ್ಮದ ಆರೈಕೆಗೆ ತೆಂಗಿನ ಎಣ್ಣೆಗೆ ತುಂಬಾ ಮುಖ್ಯವಾಗಿದೆ. ಉದ್ದವಾದ, ದಪ್ಪ ಕೂದಲನ್ನು ಪಡೆಯಲು ತೆಂಗಿನ ಎಣ್ಣೆ ತುಂಬಾ ಪರಿಣಾಮಕಾರಿಯಾಗಿದೆ. ಆದರೆ ಇದು ಕೂದಲಿನ ಆರೈಕೆಗೆ ಮಾತ್ರವಲ್ಲದೆ ಚರ್ಮದ ಆರೈಕೆ ಮಾಡಿ ಸೌಂದರ್ಯ ಹೆಚ್ಚಿಸಲು ಪರಿಣಾಮಕಾರಿಯಾದ ಮನೆಮದ್ದಾಗಿದೆ. ಮೇಕಪ್ ತೆಗೆಯಲು ಇದು ತುಂಬಾ ಉಪಯುಕ್ತವಾಗಿದೆ. ಇದಲ್ಲದೆ, ತೆಂಗಿನ ಎಣ್ಣೆಯನ್ನು ನಿಯಮಿತವಾಗಿ ಕಣ್ಣುಗಳ ಕೆಳಗೆ ಮಸಾಜ್ ಮಾಡುವುದರಿಂದ ಅನೇಕ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಕೆಲವರಿಗೆ ಕಣ್ಣಿನ ಕೆಳಭಾಗವು ವಿವಿಧ ಕಾರಣಗಳಿಂದ ಉಬ್ಬುತ್ತದೆ. ಕೆಲವರಿಗೆ ದದ್ದುಗಳು, ತುರಿಕೆ ಉಂಟಾಗುತ್ತದೆ. ಇದಕ್ಕೆ ಹಲವು ಕಾರಣಗಳು ಇರಬಹುದು. ದಿನವಿಡೀ ಫೋನ್ ನೋಡುವುದು, ಸಾಕಷ್ಟು ನಿದ್ರೆ ಮಾಡಲು ಸಾಧ್ಯವಾಗದಿದ್ದಾಗ, ಜೊತೆಗೆ ವಯಸ್ಸಾಗುವುದರಿಂದ ಈ ಸಮಸ್ಯೆಗಳು ಕಂಡು ಬರುತ್ತದೆ. ತೆಂಗಿನ ಎಣ್ಣೆಯನ್ನು ಕಣ್ಣುಗಳ ಕೆಳಗೆ ಹಚ್ಚಿ ಮತ್ತು ಕೈಗಳಿಂದ ಮಸಾಜ್ ಮಾಡುವುದರಿಂದ ಸಮಸ್ಯೆಯನ್ನು ನಿವಾರಣೆ ಮಾಡಬಹುದು.

ಒರಟುತನವನ್ನು ಕಡಿಮೆ ಮಾಡುತ್ತವೆ

ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಚರ್ಮದ ಮೇಲೆ ಸುಕ್ಕುಗಳು ಕಂಡುಬರುತ್ತದೆ. ವಿವಿಧ ಕಂಪನಿಗಳ ಸೌಂದರ್ಯವರ್ಧಕಗಳನ್ನು ಬಳಸುವುದರಿಂದ ಚರ್ಮ ಹಾಳಾಗುತ್ತದೆ. ತೆಂಗಿನ ಎಣ್ಣೆಯು ಈ ಸಮಸ್ಯೆಗಳಿಂದ ಪರಿಹಾರ ಪಡೆಯಲು ಸಹಾಯ ಮಾಡುತ್ತದೆ. ಈ ಎಣ್ಣೆಯಲ್ಲಿರುವ ಕೊಬ್ಬಿನಾಮ್ಲಗಳು ಚರ್ಮವನ್ನು ಬಿಗಿಗೊಳಿಸುತ್ತವೆ ಮತ್ತು ಒರಟುತನವನ್ನು ಕಡಿಮೆ ಮಾಡುತ್ತವೆ.

ಇದನ್ನೂ ಓದಿ: ದೀಪಾವಳಿ ಪಟಾಕಿಗಳಿಂದ ಬರುವ ಹೊಗೆಯಿಂದ ಪಾರಾಗಲು ಈ ರೀತಿ ಮಾಡಿ

ಚರ್ಮವನ್ನು ಆರೋಗ್ಯವಾಗಿರಿಸುತ್ತದೆ

ದದ್ದುಗಳು, ತುರಿಕೆ, ಕೆಂಪಾಗುವಿಕೆ ಮುಂತಾದ ಚರ್ಮದ ಸಮಸ್ಯೆಗಳನ್ನು ನಿವಾರಣೆ ಮಾಡಲು ತೆಂಗಿನ ಎಣ್ಣೆ ಸಹಕಾರಿಯಾಗಿದೆ. ಇದು ಚರ್ಮದ ಅಂದವನ್ನು ಹೆಚ್ಚಿಸುವುದಲ್ಲದೆ ಅದನ್ನು ಮೃದುಗೊಳಿಸುವ ಮೂಲಕ ಒಳಗಿನಿಂದ ನಿಮ್ಮ ಚರ್ಮವನ್ನು ಆರೋಗ್ಯವಾಗಿರಿಸುತ್ತದೆ. ಇದರಲ್ಲಿರುವ ಕಾಲಜನ್ ಚರ್ಮಕ್ಕೆ ಪೋಷಣೆಯನ್ನು ನೀಡುತ್ತದೆ. ತೆಂಗಿನ ಎಣ್ಣೆ ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಅಲ್ಲದೆ ಇದು ಚರ್ಮವನ್ನು ಬಿಗಿಯಾಗಿರಿಸುತ್ತದೆ. ಹಾಗಾಗಿ ಕಣ್ಣಿನ ಕೆಳಗೆ ಊದಿಕೊಂಡಂತೆ ಆಗುತ್ತಿದ್ದರೆ ಅಥವಾ ತುರಿಕೆ ಕಂಡುಬರುತ್ತಿದ್ದರೆ ತೆಂಗಿನ ಎಣ್ಣೆಯನ್ನು ಬಳಸಿ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ