AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eye Care Tips: ದೃಷ್ಟಿ ಚುರುಕಾಗಲು ಈ 8 ಡ್ರೈಫ್ರೂಟ್ಸ್​ ಸೇವಿಸಿ

ವಯಸ್ಸಾಗುತ್ತಾ ಹೋದಂತೆ ದೃಷ್ಟಿ ಮಂದವಾಗುವುದು ಸಾಮಾನ್ಯ. ಆದರೆ, ಈಗೀಗ ಎಳೆ ವಯಸ್ಸಿನವರಲ್ಲೂ ಕಣ್ಣಿನ ದೃಷ್ಟಿಯ ಸಮಸ್ಯೆ ಶುರುವಾಗುತ್ತಿದೆ. ಹಾಗಾದರೆ, ನಮ್ಮ ದೃಷ್ಟಿಯನ್ನು ಉತ್ತಮಗೊಳಿಸಿಕೊಳ್ಳಲು ಏನು ಮಾಡಬೇಕು? ಯಾವ ರೀತಿಯ ಆಹಾರ ಸೇವಿಸಬೇಕು? ಎಂಬುದರ ಬಗ್ಗೆ ಕೆಲವು ಸಲಹೆಗಳು ಇಲ್ಲಿವೆ.

Eye Care Tips: ದೃಷ್ಟಿ ಚುರುಕಾಗಲು ಈ 8 ಡ್ರೈಫ್ರೂಟ್ಸ್​ ಸೇವಿಸಿ
ಡ್ರೈಫ್ರೂಟ್​ಗಳು Image Credit source: iStock
ಸುಷ್ಮಾ ಚಕ್ರೆ
|

Updated on: Feb 06, 2024 | 4:33 PM

Share

ಕಣ್ಣುಗಳು ನಮ್ಮ ದೇಹದ ಅತ್ಯಂತ ಪ್ರಮುಖವಾದ ಅಂಗ. ನಮ್ಮ ದೃಷ್ಟಿಯನ್ನು ಆರೋಗ್ಯಕರವಾಗಿರಿಸಿಕೊಳ್ಳುವುದು ಬಹಳ ಮುಖ್ಯ. ಮೊಬೈಲ್, ಕಂಪ್ಯೂಟರ್​ಗಳನ್ನು ದಿನವಿಡೀ ನೋಡುವುದರಿಂದ ನಮ್ಮ ದೃಷ್ಟಿಯ ಸಾಮರ್ಥ್ಯ ಕಡಿಮೆಯಾಗುತ್ತದೆ. ಕೆಲವು ಆಹಾರಗಳು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತವೆ. ಅವುಗಳಲ್ಲಿ ಕ್ಯಾರೆಟ್ ಬಹಳ ಮುಖ್ಯವಾದುದು. ಆದರೆ, ಅದರ ಹೊರತಾಗಿಯೂ ಕೆಲವು ಡ್ರೈಫ್ರೂಟ್​ಗಳನ್ನು ಸೇವಿಸುವುದರಿಂದ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.

ವಿವಿಧ ರೀತಿಯ ಡ್ರೈಫ್ರೂಟ್​ಗಳು ದೃಷ್ಟಿಯನ್ನು ಸುಧಾರಿಸಲು ಸಹಾಯ ಮಾಡುವ ಪೋಷಕಾಂಶಗಳನ್ನು ಹೇರಳವಾಗಿ ಒದಗಿಸುತ್ತವೆ. ಇವು ರುಚಿಕರವಾಗಿರುವುದರ ಜೊತೆಗೆ ನಮ್ಮ ದೃಷ್ಟಿಯನ್ನು ಪೋಷಿಸಲು ಮತ್ತು ರಕ್ಷಿಸಲು ಸಹಾಯ ಮಾಡುತ್ತವೆ. ಅಂತ 8 ಡ್ರೈಫ್ರೂಟ್​ಗಳ ಬಗ್ಗೆ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: ದಿನವೂ ಮಧ್ಯರಾತ್ರಿ ಕುಳಿತು ಕುರುಕುಲು ತಿಂಡಿ ತಿನ್ನುತ್ತೀರಾ?

ಬಾದಾಮಿ:

ಬಾದಾಮಿಯಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ವಿಟಮಿನ್ ಇ ಹೇರಳವಾಗಿದೆ. ಈ ಪೋಷಕಾಂಶಗಳು ಕಣ್ಣುಗಳ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತವೆ. ದೃಷ್ಟಿ ತೀಕ್ಷ್ಣತೆಯನ್ನು ಸುಧಾರಿಸುತ್ತದೆ.

ವಾಲ್‌ನಟ್ಸ್:

ಹೆಚ್ಚಿನ ಒಮೆಗಾ -3 ಕೊಬ್ಬಿನಾಮ್ಲ ಅಂಶದಿಂದಾಗಿ ವಾಲ್​ನಟ್ಸ್ ರೆಟಿನಾದ ಆರೋಗ್ಯವನ್ನು ಕಾಪಾಡಿಕೊಳ್ಳಲು ಅವಶ್ಯಕವಾಗಿದೆ. ಆಗಾಗ ವಾಲ್​ನಟ್ಸ್​ ಸೇವನೆ ಮಾಡುವುದರಿಂದ ದೃಷ್ಟಿ ತೀಕ್ಷ್ಣವಾಗಿರಲು ಮತ್ತು ವಯಸ್ಸಿಗೆ ಸಂಬಂಧಿಸಿದ ದೃಷ್ಟಿ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

ಗೋಡಂಬಿ:

ರೆಟಿನಾದ ಆರೋಗ್ಯವನ್ನು ಕಾಪಾಡಲು ಮುಖ್ಯವಾದ ಸತುವು ಗೋಡಂಬಿಯಲ್ಲಿ ಹೇರಳವಾಗಿದೆ. ನಿಮ್ಮ ಆಹಾರದಲ್ಲಿ ಗೋಡಂಬಿ ಸೇರಿಸಿಕೊಳ್ಳುವುದರಿಂದ ತೀಕ್ಷ್ಣವಾದ ದೃಷ್ಟಿಯನ್ನು ಸುಧಾರಿಸುವ ಮೂಲಕ ಇದು ಮ್ಯಾಕ್ಯುಲರ್ ಡಿಜೆನರೇಶನ್‌ನಂತಹ ಸಮಸ್ಯೆಗಳ ವಿರುದ್ಧ ರಕ್ಷಣೆ ನೀಡುತ್ತದೆ.

ಒಣದ್ರಾಕ್ಷಿ:

ಒಣದ್ರಾಕ್ಷಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಪಾಲಿಫಿನಾಲ್‌ ಅಂಶ ಕಣ್ಣುಗಳ ಮೇಲಿನ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದು ಸುಧಾರಿತ ದೃಷ್ಟಿಯನ್ನು ಕಾಪಾಡಿಕೊಳ್ಳಲು ಮತ್ತು ಸೆಲ್ಯುಲಾರ್ ಹಾನಿಯನ್ನು ತಪ್ಪಿಸಲು ಸಹಾಯ ಮಾಡುತ್ತದೆ.

ಎಪ್ರಿಕಾಟ್:

ಬೀಟಾ-ಕ್ಯಾರೋಟಿನ್‌ ಅಂಶ ಸಮೃದ್ಧವಾಗಿರುವ ಎಪ್ರಿಕಾಟ್‌ಗಳು ದೇಹವು ಈ ಖನಿಜವನ್ನು ವಿಟಮಿನ್ ಎ ಆಗಿ ಪರಿವರ್ತಿಸಲು ಸಹಾಯ ಮಾಡುತ್ತದೆ. ಇದು ದೃಷ್ಟಿ ಸುಧಾರಿಸಲು ಮತ್ತು ರಾತ್ರಿ ಕುರುಡುತನವನ್ನು ತಡೆಯಲು ಅವಶ್ಯಕವಾಗಿದೆ.

ಇದನ್ನೂ ಓದಿ: ಬೆಳಿಗ್ಗೆ ಯಾವ ಡ್ರೈಫ್ರೂಟ್ಸ್ ತಿನ್ನಬೇಕು? ಯಾವುದನ್ನು ಸೇವಿಸಬಾರದು?

ಒಣಗಿದ ಬೆರಿ ಹಣ್ಣುಗಳು:

ಆಂಥೋಸಯಾನಿನ್‌ಗಳು ಎಂಬ ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವ ಬೆರಿ ಹಣ್ಣುಗಳು ದೃಷ್ಟಿಯ ಮೇಲೆ ಅನುಕೂಲಕರ ಪರಿಣಾಮವನ್ನು ಬೀರುತ್ತವೆ. ಒಣಗಿದ ಬೆರಿಹಣ್ಣುಗಳು ರೆಟಿನಾದ ಹಾನಿಯನ್ನು ತಡೆಗಟ್ಟಲು ಮತ್ತು ದೃಷ್ಟಿ ತೀಕ್ಷ್ಣತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಖರ್ಜೂರ:

ಉತ್ತಮ ದೃಷ್ಟಿಯನ್ನು ಕಾಪಾಡಿಕೊಳ್ಳಲು ಅಗತ್ಯವಾದ ವಿಟಮಿನ್ ಎ ಅಂಶ ಖರ್ಜೂರದಲ್ಲಿ ಕಂಡುಬರುತ್ತದೆ. ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಕಣ್ಣುಗಳು ಒಣಗುವುದನ್ನು ತಡೆಯಲು ವಿಟಮಿನ್ ಎ ಅತ್ಯಗತ್ಯ.

ಬ್ರೆಜಿಲ್ ನಟ್ಸ್:

ಬ್ರೆಜಿಲ್ ನಟ್ಸ್​ನಲ್ಲಿ ಸೆಲೆನಿಯಂ ಅಂಶ ಅಧಿಕವಾಗಿದ್ದು, ಆಕ್ಸಿಡೇಟಿವ್ ಹಾನಿಯಿಂದ ಕಣ್ಣುಗಳನ್ನು ರಕ್ಷಿಸುವ ಪ್ರಬಲವಾದ ಉತ್ಕರ್ಷಣ ನಿರೋಧಕಗಳಾಗಿ ಕಾರ್ಯನಿರ್ವಹಿಸುತ್ತವೆ. ಇವುಗಳನ್ನು ಹೆಚ್ಚು ತಿನ್ನುವುದರಿಂದ ನೀವು ಉತ್ತಮ ದೃಷ್ಟಿ ಹೊಂದಲು ಸಹಾಯ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ