AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alcohol: ಮದ್ಯ ಸೇವಿಸುವವರ ಕಣ್ಣು ಕೆಂಪಾಗುವುದು ಯಾಕೆ? ಇದರ ಹಿಂದಿನ ಕಾರಣ ಏನು? ಇಲ್ಲಿದೆ ಮಾಹಿತಿ

ಹೆಚ್ಚು ಮದ್ಯಪಾನ ಮಾಡುವವರ ಕಣ್ಣು ಕೆಂಪಗಾಗಿರುವುದನ್ನು ಗಮನಿಸಿರುತ್ತೀರಿ. ಹೀಗ್ಯಾಕೆ ಆಗುತ್ತದೆ? ಇದರ ಹಿಂದಿನ ಕಾರಣ ಏನು? ಇಲ್ಲಿದೆ ಮಾಹಿತಿ.

Alcohol: ಮದ್ಯ ಸೇವಿಸುವವರ ಕಣ್ಣು ಕೆಂಪಾಗುವುದು ಯಾಕೆ? ಇದರ ಹಿಂದಿನ ಕಾರಣ ಏನು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Rakesh Nayak Manchi
|

Updated on: Jun 05, 2023 | 6:30 AM

Share

ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ ಕೆಲವರು ಚಟ ಬಿಡುವುದಿಲ್ಲ. ಅವರು ಕೆಲವು ಕಾರಣಗಳಿಗಾಗಿ ಮದ್ಯಪಾನ ಮಾಡುತ್ತಾರೆ. ಆದರೆ ಅದನ್ನು ಸೇವನೆ ಮಾಡಿದ ನಂತರ ದೇಹದಲ್ಲಿ ಹಲವು ರೀತಿಯ ಬದಲಾವಣೆಗಳು ಆಗುತ್ತವೆ. ಆಲ್ಕೋಹಾಲ್ (Alcohol) ಕುಡಿಯುವುದು ಅಮಲು ಎಂಬುದು ಎಷ್ಟು ನಿಜವೋ, ಅದು ದೇಹದ ಎಲ್ಲಾ ಭಾಗಗಳ ಮೇಲೆ ಸಮಾನವಾಗಿ ಪರಿಣಾಮ ಬೀರುತ್ತದೆ ಎಂಬುದು ಕೂಡ ಅಷ್ಟೇ ಸತ್ಯ. ಅದರಲ್ಲೂ ಆಲ್ಕೋಹಾಲ್ ಸೇವಿಸಿದವರನ್ನು ಅವರ ಕಣ್ಣುಗಳನ್ನು ನೋಡಿಯೇ ಗುರುತಿಸಬಹುದು.

ಮದ್ಯ ಸೇವನೆ ಮಾಡದ ವ್ಯಕ್ತಿಯ ಕಣ್ಣು ಕೆಂಪಗಾಗಿದ್ದರೆ ಅದಕ್ಕೆ ಧೂಳಿನ ಕಣಗಳು ಕಣ್ಣು ಸೇರುವುದು, ಗಾಳಿ ಇತ್ಯಾದಿ ಕಾರಣಗಳು ಇರಬಹುದು. ಆದರೆ ಒಬ್ಬ ವ್ಯಕ್ತಿ ಹೆಚ್ಚು ಮದ್ಯ ಸೇವಿಸುತ್ತಿದ್ದರೆ ಅಂತಹ ವ್ಯಕ್ತಿಯ ಕಣ್ಣುಗಳು ಕೆಂಪಾಗುತ್ತವೆ. ಇದನ್ನು ನೀವು ಗಮನಿಸಿರುತ್ತೀರಿ. ಹಾಗಾದರೆ ಆಲ್ಕೋಹಾಲ್​ ಸೇವನೆಯಿಂದ ಕಣ್ಣುಗಳು ಕೆಂಪಾಗಲು ನಿಜವಾದ ಕಾರಣ ಏನು ಎಂದು ತಿಳಿಯೋಣ.

ಇದನ್ನೂ ಓದಿ: Non-alcoholic Fatty Liver Disease: ಸಾರಾಯಿ ಕುಡಿಯದಿದ್ದರೂ ಯಕೃತ್ತು ಕೆಡಬಹುದು..ಕಾರಣ ಇಲ್ಲಿದೆ ನೋಡಿ

ಸಾಮಾನ್ಯವಾಗಿ, ಆಲ್ಕೋಹಾಲ್ ಸೇವಿಸುವ ವ್ಯಕ್ತಿಯ ರಕ್ತನಾಳಗಳು ಹೆಚ್ಚು ಹಿಗ್ಗುತ್ತವೆ. ಇದರಿಂದಾಗಿ ದೇಹದಲ್ಲಿ ರಕ್ತ ಪೂರೈಕೆಯು ಹೆಚ್ಚಾಗುತ್ತದೆ. ಇದು ಕಣ್ಣಿನ ಮೇಲ್ಮೈಯಲ್ಲಿರುವ ಸಣ್ಣ ರಕ್ತನಾಳಗಳನ್ನು ಹಿಗ್ಗಿಸಲು ಕಾರಣವಾಗುತ್ತದೆ. ಈ ಕಾರಣದಿಂದಾಗಿ, ಕಣ್ಣಿನ ರಕ್ತನಾಳಗಳು ರಕ್ತ ಕೆಂಪಾಗುತ್ತವೆ. ಆದರೆ ಈ ವೈಶಿಷ್ಟ್ಯವು ಎಲ್ಲದರಲ್ಲೂ ಕಾಣಿಸಿಕೊಳ್ಳುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರ ಖಂಡಿತ ಹೌದು ಎನ್ನಲು ಸಾಧ್ಯವಿಲ್ಲ. ಆಲ್ಕೋಹಾಲ್ ಸಂವೇದನಾಶೀಲತೆ ಹೊಂದಿರುವ ಜನರು ಅಥವಾ ಹೆಚ್ಚು ಆಲ್ಕೋಹಾಲ್ ಸೇವನೆ ಮಾಡುವವರು ಹೆಚ್ಚಾಗಿ ಕೆಂಪು ಕಣ್ಣುಗಳನ್ನು ಹೊಂದಿರುತ್ತಾರೆ.

ಆಲ್ಕೋಹಾಲ್ ದೇಹವನ್ನು ಪ್ರವೇಶಿಸಿದ ತಕ್ಷಣ ರಕ್ತನಾಳಗಳನ್ನು ಹಿಗ್ಗಿಸುತ್ತದೆ. ಆಲ್ಕೋಹಾಲ್ ದೇಹದ ಪ್ರತಿಯೊಂದು ಅಣುಗಳಿಗೆ ಹೋಗುತ್ತದೆ. ಆಲ್ಕೋಹಾಲ್ ಇತರ ಪದಾರ್ಥಗಳಿಗಿಂತ ಹೆಚ್ಚು ವೇಗವಾಗಿ ದೇಹಕ್ಕೆ ಹೋಗುತ್ತದೆ. ಆದರೆ ಯಕೃತ್ತು ಆಲ್ಕೋಹಾಲ್ ಕಣಗಳನ್ನು ಒಡೆಯಲು ಪ್ರಯತ್ನಿಸುತ್ತದೆ. ಯಕೃತ್ತು ಅದಕ್ಕಾಗಿ ಕಿಣ್ವಗಳನ್ನು ಉತ್ಪಾದಿಸುತ್ತದೆ. ಆಲ್ಕೋಹಾಲ್ ಕುಡಿಯುವ ಜನರು ಹೆಚ್ಚಿನ ಕ್ಯಾಲೊರಿಗಳನ್ನು ಪಡೆಯುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ