Iron Deficiency: ರಕ್ತಹೀನತೆ ಬಗ್ಗೆ ಬೇಡ ನಿರ್ಲಕ್ಷ್ಯ.. ನೂರೆಂಟು ಅಪಾಯ ತರುವ ಅನೀಮಿಯಾ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ

ದೇಹದಲ್ಲಿ ಸಣ್ಣಪ್ರಮಾಣದಲ್ಲಿ ರಕ್ತಹೀನತೆ ಸಾಮಾನ್ಯ ಎಂಬಂತಾಗಿಬಿಟ್ಟಿದೆ. ಅದು ಅಷ್ಟುಬೇಗ ಗೊತ್ತಾಗುವುದೂ ಇಲ್ಲ. ಆದರೆ ಕೆಂಪುರಕ್ತದ ಕಣಗಳ ಪ್ರಮಾಣ ಕಡಿಮೆಯಾಗುತ್ತ ಹೋದಂತೆ ಕೆಲವು ಲಕ್ಷಣಗಳು ಕಾಣಿಸಿಕೊಳ್ಳತೊಡಗುತ್ತವೆ.

Iron Deficiency: ರಕ್ತಹೀನತೆ ಬಗ್ಗೆ ಬೇಡ ನಿರ್ಲಕ್ಷ್ಯ.. ನೂರೆಂಟು ಅಪಾಯ ತರುವ ಅನೀಮಿಯಾ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ
ಪ್ರಾತಿನಿಧಿಕ ಚಿತ್ರ
Follow us
|

Updated on: Mar 16, 2021 | 7:08 PM

ನಮ್ಮ ದೇಹ ಸದೃಢವಾಗಿ, ಆರೋಗ್ಯವಾಗಿ ಇರಬೇಕೆಂದರೆ ಎಲ್ಲ ರೀತಿಯ ವಿಟಮಿನ್​ಗಳು, ಖನಿಜಾಂಶಗಳು, ಪೋಷಕಾಂಶಗಳು ಹದ ಪ್ರಮಾಣದಲ್ಲಿ ಬೇಕಾಗುತ್ತದೆ. ಎಲ್ಲ ರೀತಿಯ ಪೋಷಕಾಂಶಗಳನ್ನೂ ನಾವು ಆಹಾರದ ಮೂಲಕವೇ ಪಡೆಯಬಹುದು. ಆದರೂ ಭಾರತದಲ್ಲಿ ಬಹುಪಾಲು ಜನರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ರಕ್ತಹೀನತೆ ಎಂಬುದು ಎಡಬಿಡದೆ ಕಾಡುತ್ತಿದೆ. ಅದೂ ಹೆಚ್ಚಾಗಿ ಮಹಿಳೆಯರಲ್ಲೇ ಕಾಣಿಸಿಕೊಳ್ಳುವ ಇದು ಹಲವು ಕಾಯಿಲೆಗಳನ್ನು ಹೊತ್ತು ತರಬಲ್ಲದು.

ನಮ್ಮ ದೇಹದಲ್ಲಿ ನಿರ್ದಿಷ್ಟ ಕೆಂಪು ರಕ್ತಕಣಗಳು ನಿರ್ದಿಷ್ಟ ಪ್ರಮಾಣದಲ್ಲಿ ಇರಬೇಕು. ಅದಕ್ಕಿಂತಲೂ ಕಡಿಮೆ ಆದಾಗ ಅದು ಅನೀಮಿಯಾ ಅಥವಾ ರಕ್ತಹೀನತೆ ಎನ್ನಿಸಿಕೊಳ್ಳುತ್ತದೆ. ಇದಕ್ಕೆ ಮುಖ್ಯ ಕಾರಣ ದೇಹದಲ್ಲಿ ಕಬ್ಬಿಣಾಂಶ ಕಡಿಮೆ ಆಗುವುದು. ತುರ್ತು ಪರಿಸ್ಥಿತಿಗಳಲ್ಲಿ ವೈದ್ಯಕೀಯ ಚಿಕಿತ್ಸೆ ಅಗತ್ಯವಿರುತ್ತದೆ. ಆದರೆ ರಕ್ತಹೀನತೆಯಿಂದ ಪಾರಾಗಲು ನಾವು ನಿತ್ಯ ಬಳಸುವ ಆಹಾರದಲ್ಲೇ ಕೆಲವು ಬದಲಾವಣೆ ಮಾಡಿಕೊಳ್ಳಬಹುದು. ಕಬ್ಬಿಣದ ಅಂಶ ಹೆಚ್ಚು ಇರುವ ಆಹಾರಗಳನ್ನು ಸೇವಿಸಬೇಕು. ದೇಹದಲ್ಲಿ ಕೆಂಪು ರಕ್ತಕಣಗಳ ಸಂಖ್ಯೆ ಕಡಿಮೆ ಆದರೆ ಆಗುವ ಸಮಸ್ಯೆಗಳು ಅನೇಕ. ತೀವ್ರ ಕಡಿಮೆಯಾದಾಗ ಸರಿಯಾದ ಸಮಯದಲ್ಲಿ ಚಿಕಿತ್ಸೆ ಬೀಳದಿದ್ದರೆ ಪ್ರಾಣಕ್ಕೂ ಅಪಾಯ ಕಟ್ಟಿಟ್ಟಬುತ್ತಿ. ಹೀಗಾದಾಗ ದೇಹದ ಬಗ್ಗೆ ಗಮನ ಇರಬೇಕು. ಈ ಕೆಳಗಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದರೆ, ವೈದ್ಯರ ಬಳಿ ತೆರಳಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಆರ್​ಬಿಸಿ ಕೌಂಟ್​ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಬೇಕು.

ರಕ್ತಹೀನತೆಯ ಲಕ್ಷಣಗಳೇನು? ದೇಹದಲ್ಲಿ ಸಣ್ಣಪ್ರಮಾಣದಲ್ಲಿ ರಕ್ತಹೀನತೆ ಸಾಮಾನ್ಯ ಎಂಬಂತಾಗಿಬಿಟ್ಟಿದೆ. ಅದು ಅಷ್ಟುಬೇಗ ಗೊತ್ತಾಗುವುದೂ ಇಲ್ಲ. ಆದರೆ ಕೆಂಪುರಕ್ತದ ಕಣಗಳ ಪ್ರಮಾಣ ಕಡಿಮೆಯಾಗುತ್ತ ಹೋದಂತೆ ಕೆಲವು ಲಕ್ಷಣಗಳು ಕಾಣಿಸಿಕೊಳ್ಳತೊಡಗುತ್ತವೆ. ಅದರಲ್ಲಿ ಪ್ರಮುಖವಾಗಿ

  • ಬಳಲಿಕೆ
  • ಚರ್ಮದ ಬಣ್ಣ ಪೇಲವ ಅಥವಾ ಹಳದಿ ಬಣ್ಣಕ್ಕೆ ತಿರುಗುವುದು
  • ಹೃದಯಬಡಿತದಲ್ಲಿ ಏರುಪೇರು
  • ಉಸಿರಾಟದಲ್ಲಿ ತೊಂದರೆ
  • ತಲೆ ತಿರುಗುವುದು, ತಲೆ ನೋವು
  • ಎದೆನೋವು, ಸ್ನಾಯುನೋವು
  • ಅಂಗಾಲು, ಅಂಗೈಗಳು ತಣ್ಣಗೆ ಆಗುವುದು
  • ಉಗುರುಗಳಲ್ಲಿ ಬಿರುಕು, ಒಡೆಯುವುದು, ಕೂದಲು ಉದುರುವುದು
  • ಬಾಯಿಯ ಬದಿಯಲ್ಲಿ ಒಡೆಯುವುದು
  • ನಾಲಿಗೆ ಊದಿಕೊಳ್ಳುವುದು, ನೋಯುವುದು
  • ಕಾಲುಗಳಲ್ಲಿ ವಿಪರೀತ ಸೆಳೆತ
  • ಕಣ್ಣುಗಳು ಒಳಹೋದಂತಾಗಿ, ಪೇಲವಗೊಳ್ಳುವುದು.

ಹೀಗೆ ಒಬ್ಬೊಬ್ಬರಲ್ಲಿ ಒಂದೊಂದು ವಿಧದಲ್ಲಿ ರಕ್ತಹೀನತೆಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸಾಧ್ಯವಾದಷ್ಟು ಅದನ್ನು ಗುರುತಿಸಿಕೊಂಡು ಚಿಕಿತ್ಸೆ ಪಡೆಯಬೇಕು. ಒಂದೊಮ್ಮೆ ನಿರ್ಲಕ್ಷಿಸುತ್ತ ಹೋದರೆ ಅಪಾಯವನ್ನು ಮೈಮೇಲೆ ಎಳೆದುಕೊಳ್ಳಬೇಕಾಗುತ್ತದೆ. ಈ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳು ನಿಮ್ಮಲ್ಲಿ ಕಾಣಿಸಿಕೊಳ್ಳಬಹುದು..

  • ಖಿನ್ನತೆಗೆ ಜಾರಬಹುದು
  • ರೋಗನಿರೋಧಕ ಶಕ್ತಿ ಕುಂದುತ್ತದೆ
  • ಯಾವುದೇ ಸೋಂಕಿನ ವಿರುದ್ಧ ಹೋರಾಡುವ ಶಕ್ತಿಯನ್ನು ದೇಹ ಕಳೆದುಕೊಳ್ಳುತ್ತದೆ
  • ಗರ್ಭಿಣಿಯರಲ್ಲಿ ಕಾಣಿಸಿಕೊಳ್ಳುವ ರಕ್ತಹೀನತೆಯಿಂದ ಅವಧಿ ಪೂರ್ವವೇ ಮಗು ಹುಟ್ಟುವ ಸಾಧ್ಯತೆ ಇರುತ್ತದೆ
  • ರಕ್ತಹೀನತೆಯಿಂದ ಬಳಲುತ್ತಿರುವ ಮಹಿಳೆಯರು ಜನ್ಮ ನೀಡುವ ಮಗುವಿನ ತೂಕ ಕಡಿಮೆ ಇರುತ್ತದೆ
  • ಕಡಿಮೆ ರಕ್ತಕಣಗಳಿಂದ ಹೃದಯಕ್ಕೆ ಸರಿಯಾಗಿ ಪಂಪ್​ ಮಾಡಲು ಸಾಧ್ಯವಾಗುವುದಿಲ್ಲ ಹೀಗಾದಾಗ ಒತ್ತಡ ಬೀಳುತ್ತದೆ. ಇದು
  • ಕೆಲವು ಹೃದಯ ಸಮಸ್ಯೆಗೂ ಕಾರಣವಾಗಬಹುದು.

ರಕ್ತಹೀನತೆಗೆ ಖಂಡಿತ ಒಳ್ಳೆಯ ಚಿಕಿತ್ಸೆ ಇದೆ. ಕೆಲವು ಮಾತ್ರೆಗಳು, ಟಾನಿಕ್​​ಗಳನ್ನೂ ಕೊಡುತ್ತಾರೆ. ಅದಕ್ಕಿಂತ ಹೆಚ್ಚಾಗಿ ಸಿ ಜೀವಸತ್ವ ಹೆಚ್ಚಿರುವ ಆಹಾರಗಳನ್ನು ಸೇವಿಸಲು ಹೇಳುತ್ತಾರೆ. ಸರಿಯಾದ ಆಹಾರ, ಪೂರಕ ಔಷಧಗಳಿಂದ ಕೆಂಪುರಕ್ತಕಣಗಳ ಪ್ರಮಾಣ ವೇಗವಾಗಿ ಹೆಚ್ಚುತ್ತದೆ. ಇದರಿಂದ ನಿಮ್ಮ ದೇಹದಲ್ಲಿ ಆಗುವ ಬದಲಾವಣೆ ನಿಮಗೇ ಗೊತ್ತಾಗುತ್ತದೆ. ಅದಕ್ಕೂ ಮಿಗಿಲಾಗಿ ರಕ್ತ ಹೀನತೆಯಿಂದ ಪಾರಾಗಲು ನಾವು ಕೆಲವು ಹಣ್ಣು, ತರಕಾರಿಗಳನ್ನು ಸೇವಿಸಬೇಕು.

ಹಸಿರು ತರಕಾರಿ, ಸೊಪ್ಪುಗಳು, ಒಣಹಣ್ಣುಗಳು, ಸಿ ವಿಟಮಿನ್​ ಇರುವ ಕಿತ್ತಳೆ ಹಣ್ಣು, ಸ್ಟ್ರಾಬೆರಿ, ಬಟಾಣಿ, ಬೀನ್ಸ್​ಗಳನ್ನು ಸೇವಿಸಬೇಕು. ಇನ್ನು ಚಿಕನ್​, ಕೆಂಪು ಮಾಂಸಗಳೂ ರಕ್ತಹೀನತೆ ನಿವಾರಿಸುವ ಆಹಾರಗಳು ಎಂದು ಪರಿಗಣಿಸಲ್ಪಡುತ್ತವೆ.

ಇದನ್ನೂ ಓದಿ:  Health: ಲಿಂಬು ನೀರು ಕುಡಿಯುವುದರಿಂದ ಎಷ್ಟೆಲ್ಲ ಉಪಯೋಗಗಳಿವೆ ನೋಡಿ..

ಬಾಯಿ ದುರ್ವಾಸನೆ ಬರೋಕೆ ಈ ಐದು ಆಹಾರಗಳು ಕಾರಣವಾಗಬಹುದು..

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?