AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಡದಿಂದ ಬಳಲುತ್ತಿದ್ದೀರಾ? ಈ ಸರಳ ಅಭ್ಯಾಸಗಳು ಮನಸ್ಸಿಗೆ ನೆಮ್ಮದಿ ನೀಡುತ್ತವೆ

ಇತ್ತೀಚಿನ ದಿನಗಳಲ್ಲಿ ಅನೇಕರು ಒತ್ತಡದಿಂದ ಬಳಲುತ್ತಿದ್ದಾರೆ. ನಿರಂತರ ಒತ್ತಡವು ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ದೀರ್ಘಕಾಲ ಒತ್ತಡ ಮುಂದುವರಿದರೆ ಅದು ಮಾನಸಿಕ ಆರೋಗ್ಯದ ಜೊತೆಗೆ ದೈಹಿಕ ಆರೋಗ್ಯಕ್ಕೂ ಹಾನಿ ಉಂಟುಮಾಡಬಹುದು. ಆದ್ದರಿಂದ ಒತ್ತಡವನ್ನು ಸಮಯಕ್ಕೆ ಗುರುತಿಸಿ ನಿಯಂತ್ರಿಸುವುದು ಅಗತ್ಯ. ಹಾಗಾದರೆ ಒತ್ತಡ ಕಡಿಮೆ ಮಾಡಲು ಯಾವ ರೀತಿಯ ಅಭ್ಯಾಸ ರೂಢಿಸಿಕೊಳ್ಳಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ

ಒತ್ತಡದಿಂದ ಬಳಲುತ್ತಿದ್ದೀರಾ? ಈ ಸರಳ ಅಭ್ಯಾಸಗಳು ಮನಸ್ಸಿಗೆ ನೆಮ್ಮದಿ ನೀಡುತ್ತವೆ
How To Manage Stress NaturallyImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: Jun 28, 2026 | 7:40 PM

Share

ಮುಖ್ಯಾಂಶಗಳು

  • ಒತ್ತಡವನ್ನು ನಿಯಂತ್ರಿಸಲು ಸುಲಭ ಮತ್ತು ಪರಿಣಾಮಕಾರಿ ಸಲಹೆಗಳು
  • ಒತ್ತಡದಿಂದ ಮುಕ್ತಿ ಪಡೆಯಲು ಜೀವನಶೈಲಿಯಲ್ಲಿ ಮಾಡಬೇಕಾದ ಬದಲಾವಣೆಗಳು
  • ಮಾನಸಿಕ ನೆಮ್ಮದಿಗೆ ಈ ಉತ್ತಮ ಅಭ್ಯಾಸಗಳನ್ನು ಪಾಲಿಸಿ

ಇಂದಿನ ವೇಗದ ಜೀವನಶೈಲಿಯಲ್ಲಿ ಮಾನಸಿಕ ಒತ್ತಡ (Stressed) ಸಾಮಾನ್ಯ ಸಮಸ್ಯೆಯಾಗಿದೆ. ಕೆಲಸದ ಒತ್ತಡ, ಕುಟುಂಬದ ಜವಾಬ್ದಾರಿಗಳು, ಆರ್ಥಿಕ ಚಿಂತೆ ಹಾಗೂ ಬದಲಾಗುತ್ತಿರುವ ಜೀವನಶೈಲಿ ಒತ್ತಡವನ್ನು ಹೆಚ್ಚಿಸಬಹುದು. ದೀರ್ಘಕಾಲ ಒತ್ತಡ ಮುಂದುವರಿದರೆ ಅದು ಮಾನಸಿಕ ಆರೋಗ್ಯದ ಜೊತೆಗೆ ದೈಹಿಕ ಆರೋಗ್ಯಕ್ಕೂ ಹಾನಿ ಉಂಟುಮಾಡಬಹುದು. ಆದ್ದರಿಂದ ಒತ್ತಡವನ್ನು ಸಮಯಕ್ಕೆ ಗುರುತಿಸಿ ನಿಯಂತ್ರಿಸುವುದು ಅಗತ್ಯ. ಹಾಗಾದರೆ ಒತ್ತಡ ಕಡಿಮೆ ಮಾಡಲು ಯಾವ ರೀತಿಯ ಅಭ್ಯಾಸ ರೂಢಿಸಿಕೊಳ್ಳಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ

ಒತ್ತಡ ಕಡಿಮೆ ಮಾಡಲು ಉತ್ತಮ ಅಭ್ಯಾಸಗಳು

ಪ್ರತಿದಿನ ನಿಗದಿತ ಸಮಯಕ್ಕೆ ಮಲಗಿ, ಸರಿಯಾಗಿ ನಿದ್ರೆ ಮಾಡುವುದು ಮತ್ತು ದಿನಚರಿಯನ್ನು ಸಮತೋಲನದಿಂದ ನಿರ್ವಹಿಸುವುದು ಮನಸ್ಸಿಗೆ ಶಾಂತಿ ನೀಡುತ್ತದೆ. ಕುಟುಂಬದವರೊಂದಿಗೆ ಸಮಯ ಕಳೆಯುವುದು, ಇಷ್ಟದ ಹವ್ಯಾಸಗಳಲ್ಲಿ ತೊಡಗುವುದು, ಪುಸ್ತಕ ಓದುವುದು, ಸಂಗೀತ ಕೇಳುವುದು ಅಥವಾ ಸ್ವಲ್ಪ ಸಮಯ ನಿಮಗೆ ಖುಷಿ ನೀಡುವ ಕೆಲಸದಲ್ಲಿ ಸಮಯ ಕಳೆಯುವುದು ಒತ್ತಡವನ್ನು ಕಡಿಮೆ ಮಾಡಲು ಸಹಾಯಕ.

ಇದನ್ನೂ ಓದಿ: ಫುಡ್ ಪಾಯ್ಸನಿಂಗ್‌ ಆಗದಂತೆ ತಡೆಯಲು ಉಳಿದ ಆಹಾರವನ್ನು ಈ ರೀತಿ ಸಂಗ್ರಹಿಸಿಡಿ!

ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ನಿರಂತರ ದುಃಖ, ಕಿರಿಕಿರಿ, ಅತಿಯಾದ ಆತಂಕ, ನಿದ್ರಾಹೀನತೆ, ದಣಿವು, ಯಾವುದೇ ಕೆಲಸದಲ್ಲಿ ಆಸಕ್ತಿ ಇಲ್ಲದಿರುವುದು, ಹಸಿವಿನ ಬದಲಾವಣೆ, ಏಕಾಗ್ರತೆ ಕೊರತೆ ಅಥವಾ ಪದೇಪದೇ ತಲೆನೋವು ಕಂಡುಬಂದರೆ ಅದನ್ನು ನಿರ್ಲಕ್ಷಿಸಬೇಡಿ. ಈ ಲಕ್ಷಣಗಳು ದೀರ್ಘಕಾಲ ಮುಂದುವರಿದರೆ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸುವುದು ಉತ್ತಮ.

ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಪ್ರತಿದಿನ ಸಮತೋಲಿತ ಆಹಾರ ಸೇವಿಸಿ, ನಿಯಮಿತವಾಗಿ ವ್ಯಾಯಾಮ ಮಾಡಿ. ಯೋಗ, ಧ್ಯಾನ ಹಾಗೂ ಆಳವಾದ ಉಸಿರಾಟದ ವ್ಯಾಯಾಮ ಮನಸ್ಸನ್ನು ಶಾಂತಗೊಳಿಸಲು ಸಹಕಾರಿ. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಮಿತಿಗೊಳಿಸಿ. ನಿಮ್ಮ ಭಾವನೆಗಳನ್ನು ನಂಬಿಕಸ್ತ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳಿ. ಒತ್ತಡ ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತಿದ್ದರೆ ತಡಮಾಡದೆ ತಜ್ಞರ ಸಲಹೆ ಪಡೆಯಿರಿ. ಉತ್ತಮ ಜೀವನಶೈಲಿ ಮತ್ತು ಆರೋಗ್ಯಕರ ಅಭ್ಯಾಸಗಳು ಮಾನಸಿಕ ಆರೋಗ್ಯವನ್ನು ಕಾಪಾಡಲು ಪ್ರಮುಖ ಪಾತ್ರ ವಹಿಸುತ್ತವೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?