AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ನಿಯಮಿತ ಯೋಗಾಭ್ಯಾಸದಿಂದ ಬಂಜೆತನವನ್ನು ನಿಯಂತ್ರಿಸಬಹುದು: ಡಾ.ಚಂಚಲ್ ಶರ್ಮಾ

ಸ್ತ್ರೀರೋಗ ತಜ್ಞೆ ಡಾ.ಚಂಚಲ್ ಶರ್ಮಾ ಹೇಳುವಂತೆ ನಿಯಮಿತ ಯೋಗಾಭ್ಯಾಸದಿಂದ ಬಂಜೆತನ ಸಮಸ್ಯೆಯನ್ನು ನಿಯಂತ್ರಿಸಬಹುದು. ಒತ್ತಡವು ಬಂಜೆತನಕ್ಕೆ ಪ್ರಮುಖ ಕಾರಣವಾಗಿದೆ, ಆದರೆ ಯೋಗ ಮಾಡುವುದರಿಂದ ನಿಮ್ಮ ಒತ್ತಡ ಕಡಿಮೆಯಾಗುತ್ತದೆ.

Women Health: ನಿಯಮಿತ ಯೋಗಾಭ್ಯಾಸದಿಂದ ಬಂಜೆತನವನ್ನು ನಿಯಂತ್ರಿಸಬಹುದು: ಡಾ.ಚಂಚಲ್ ಶರ್ಮಾ
Fertility Yoga
ಅಕ್ಷತಾ ವರ್ಕಾಡಿ
|

Updated on: Jul 06, 2024 | 5:53 PM

Share

ತಾಯಿಯಾಗುವ ಅನುಭವ ಪ್ರತಿಯೊಬ್ಬ ಹೆಣ್ಣಿನ ಜೀವನದಲ್ಲಿ ಮುಖ್ಯವಾದುದಾಗಿದೆ, ಆದರೆ ಇಂದಿನ ಬದಲಾಗುತ್ತಿರುವ ಜೀವನಶೈಲಿಯಿಂದ ಅನೇಕ ಮಹಿಳೆಯರು ಈ ಆನಂದದಿಂದ ವಂಚಿತರಾಗುತ್ತಿದ್ದಾರೆ. ತಾಯಿಯಾಗಲು, ಅವರು ಅನೇಕ ರೀತಿಯ ಚಿಕಿತ್ಸೆಗಳು ಮತ್ತು IVF ನ ಸಹಾಯವನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೆ ಯೋಗಾಸನದ ಸಹಾಯದಿಂದ ನೀವು ಈ ಸಮಸ್ಯೆಯನ್ನು ನಿವಾರಿಸಬಹುದು. ಈ ಬಗ್ಗೆ ಇಲ್ಲಿದೆ ಮಾಹಿತಿ.

ಆಶಾ ಆಯುರ್ವೇದ ಮತ್ತು ಸ್ತ್ರೀರೋಗ ತಜ್ಞೆ ಡಾ.ಚಂಚಲ್ ಶರ್ಮಾ, ನಿಯಮಿತ ಯೋಗಾಭ್ಯಾಸದಿಂದ ಬಂಜೆತನ ಸಮಸ್ಯೆಯನ್ನು ನಿಯಂತ್ರಿಸಬಹುದು. ಆಯುರ್ವೇದ ಚಿಕಿತ್ಸೆ ಮತ್ತು ಯೋಗದಿಂದ ನೈಸರ್ಗಿಕವಾಗಿ ಗರ್ಭಧರಿಸುವಲ್ಲಿ ಯಶಸ್ವಿಯಾಗಬಹುದು. ಯೋಗಾಸನವು ನಿಮ್ಮ ಫಲವತ್ತತೆಯ ಮೇಲೆ ನೇರವಾಗಿ ಪರಿಣಾಮ ಬೀರುವುದಿಲ್ಲ, ಬದಲಿಗೆ ಇದು ಎಲ್ಲಾ ಚಿಕಿತ್ಸಾ ಪ್ರಕ್ರಿಯೆಗಳೊಂದಿಗೆ ಕಾರ್ಯನಿರ್ವಹಿಸುತ್ತದೆ ಎಂದು ವಿವರಿಸಿದ್ದಾರೆ.

ನಿಯಮಿತವಾಗಿ ಯೋಗ ಮಾಡುವುದರಿಂದ ನಿಮ್ಮ ಹಾರ್ಮೋನುಗಳು ಸಮತೋಲನದಲ್ಲಿರುತ್ತವೆ. ಯೋಗಾಭ್ಯಾಸವು ನಿಮ್ಮ ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ದೇಹ ಮತ್ತು ಮನಸ್ಸಿನ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುತ್ತದೆ. ಒತ್ತಡವು ಬಂಜೆತನಕ್ಕೆ ಪ್ರಮುಖ ಕಾರಣವಾಗಿದೆ, ಆದರೆ ಯೋಗ ಮಾಡುವುದರಿಂದ ನಿಮ್ಮ ಒತ್ತಡ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಮಂಗಳೂರಿನ ಚಿಕನ್ ಬ್ಯಾರಿ ಬಿರಿಯಾನಿ ಆರೋಗ್ಯ ಹೆಚ್ಚಿಸುತ್ತೆ! ಇದನ್ನು ಮಾಡುವುದು ಹೇಗೆ ?

ಯಾವ ಯೋಗವನ್ನು ಮಾಡಬೇಕು?

ಬದ್ಧಕೋನಾಸನ:

ಇದನ್ನು ಚಿಟ್ಟೆ ಭಂಗಿ ಎಂದೂ ಕರೆಯುತ್ತಾರೆ. ಈ ಯೋಗಾಸನದ ನಿಯಮಿತ ಅಭ್ಯಾಸವು ನಿಮ್ಮ ತೊಡೆಗಳು ಮತ್ತು ಶ್ರೋಣಿಯ ಸ್ನಾಯುಗಳನ್ನು ವಿಸ್ತರಿಸುತ್ತದೆ, ಇದು ಸಂತಾನೋತ್ಪತ್ತಿ ಅಂಗಗಳ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಈ ಯೋಗಾಭ್ಯಾಸವು ಮಹಿಳೆಯರಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.

ಪಶ್ಚಿಮೋತ್ತನಾಸನ:

ಈ ಯೋಗವು ನಿಮ್ಮ ಹೊಟ್ಟೆಯ ಕೊಬ್ಬನ್ನು ಸಹ ಕಡಿಮೆ ಮಾಡುತ್ತದೆ, ಆದ್ದರಿಂದ ಇದರ ನಿಯಮಿತ ಅಭ್ಯಾಸದಿಂದ ನಿಮ್ಮ ತೂಕವನ್ನು ನಿಯಂತ್ರಿಸಬಹುದು.

ಬಾಲಾಸನ (ಮಗುವಿನ ಭಂಗಿ):

ನೀವು ಈ ಯೋಗಾಸನವನ್ನು ಗರ್ಭಧರಿಸುವ ಮೊದಲು ಮತ್ತು ಗರ್ಭಾವಸ್ಥೆಯಲ್ಲಿಯೂ ಮಾಡಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ