AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Figs Side Effects: ಅಂಜೂರವನ್ನು ಇಷ್ಟ ಪಡುವವರು ಅದರ ಅಡ್ಡಪರಿಣಾಮಗಳನ್ನು ತಿಳಿಯಬೇಕು

ಅಂಜೂರವು ದೇಹಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶಗಳನ್ನು ನೀಡುತ್ತದೆ. ಅದಲ್ಲದೆ ಇದರಲ್ಲಿ ಅನೇಕ ರೀತಿಯ ಔಷಧೀಯ ಗುಣಗಳಿದ್ದು ಪ್ರತಿದಿನ ಅಂಜೂರವನ್ನು ತಿನ್ನುವುದರಿಂದ ದೇಹಕ್ಕೆ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ರಂಜಕ, ತಾಮ್ರ ಮತ್ತು ಮೆಗ್ನೀಸಿಯಮ್ನಂತಹ ಅನೇಕ ರೀತಿಯ ಖನಿಜಗಳನ್ನು ಒದಗಿಸುತ್ತದೆ. ಇದು ವಿಶೇಷವಾಗಿ ಪುರುಷರಲ್ಲಿ ಫಲವತ್ತತೆ ಸಮಸ್ಯೆಗಳನ್ನು ನಿವಾರಿಸುತ್ತದೆ. ಆದರೆ ಅಂಜೂರವನ್ನು ಅತಿಯಾಗಿ ತಿನ್ನುವುದರಿಂದ ಗಂಭೀರ ರೀತಿಯ ಅಡ್ಡಪರಿಣಾಮಗಳು ಉಂಟಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

Figs Side Effects: ಅಂಜೂರವನ್ನು ಇಷ್ಟ ಪಡುವವರು ಅದರ ಅಡ್ಡಪರಿಣಾಮಗಳನ್ನು ತಿಳಿಯಬೇಕು
ಅಂಜೂರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 07, 2024 | 2:33 PM

Share

ಅಂಜೂರದ ಹಣ್ಣುಗಳಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿರಬಹುದು. ಅದರಲ್ಲಿಯೂ ಇದನ್ನು ಸೇವನೆ ಮಾಡುವುದರಿಂದ ಮತ್ತೆ ಮತ್ತೆ ತಿನ್ನಬೇಕು ಎಂಬ ಆಸೆ ಹೆಚ್ಚಾಗುತ್ತದೆ. ಸಾಮಾನ್ಯವಾಗಿ ಇದನ್ನು ದೇಹದ ಆರೋಗ್ಯ ಕಾಪಾಡಿಕೊಳ್ಳಲು ಫಿಟ್ನೆಸ್ ಪ್ರೀಯರು ಹೆಚ್ಚಾಗಿ ಸೇವನೆ ಮಾಡುತ್ತಾರೆ. ಏಕೆಂದರೆ ಅಂಜೂರವು ದೇಹಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶಗಳನ್ನು ನೀಡುತ್ತದೆ. ಅದಲ್ಲದೆ ಇದರಲ್ಲಿ ಅನೇಕ ರೀತಿಯ ಔಷಧೀಯ ಗುಣಗಳಿದ್ದು ಪ್ರತಿದಿನ ಅಂಜೂರವನ್ನು ತಿನ್ನುವುದರಿಂದ ದೇಹಕ್ಕೆ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ರಂಜಕ, ತಾಮ್ರ ಮತ್ತು ಮೆಗ್ನೀಸಿಯಮ್ನಂತಹ ಅನೇಕ ಖನಿಜಗಳನ್ನು ಒದಗಿಸುತ್ತದೆ. ಇದು ವಿಶೇಷವಾಗಿ ಪುರುಷರಲ್ಲಿ ಫಲವತ್ತತೆ ಸಮಸ್ಯೆಗಳನ್ನು ನಿವಾರಿಸುತ್ತದೆ. ಆದರೆ ಅಂಜೂರವನ್ನು ಅತಿಯಾಗಿ ತಿನ್ನುವುದರಿಂದ ಗಂಭೀರ ಅಡ್ಡಪರಿಣಾಮಗಳು ಉಂಟಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದರಿಂದ ಅನೇಕ ರೀತಿಯ ಅನಾನುಕೂಲಗಳಾಗುತ್ತವೆ ಎಂದು ಹೇಳಲಾಗುತ್ತದೆ ಹಾಗಾಗಿ ಅಂಜೂರ ಪ್ರೀಯರು ಇದರ ಆರೋಗ್ಯ ಪ್ರಯೋಜನ ಮಾತ್ರವಲ್ಲ ಇದರಿಂದ ಉಂಟಾಗುವ ಅಡ್ಡಪರಿಣಾಮಗಳ ಬಗ್ಗೆಯೂ ಹೆಚ್ಚಿನ ಗಮನಹರಿಸಬೇಕು. ಹಾಗಾದರೆ ಇದನ್ನು ಹೆಚ್ಚು ಹೆಚ್ಚು ಸೇವನೆ ಮಾಡಬಾರದು ಎಂದು ಹೇಳಲು ಕಾರಣವೇನು? ಇದರಿಂದ ದೇಹಕ್ಕೆ ಯಾವ ರೀತಿಯ ತೊಂದರೆ ಉಂಟಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

  • ಅತಿಯಾಗಿ ಅಂಜೂರ ಸೇವನೆ ಮಾಡುವುದರಿಂದ ಕ್ಯಾಲ್ಸಿಯಂ ಕೊರತೆಗೆ ಕಾರಣವಾಗಬಹುದು. ಅಲ್ಲದೆ ಇದನ್ನು ತಿನ್ನುವುದರಿಂದ ದೇಹದಲ್ಲಿ ಸಲ್ಫೈಟ್ ಹೆಚ್ಚಾಗುತ್ತದೆ. ಇದು ಮೈಗ್ರೇನ್ ಗೆ ಕಾರಣವಾಗಬಹುದು. (ಅಂಜೂರದ ಈ ಅಡ್ಡಪರಿಣಾಮಗಳು ಅವುಗಳನ್ನು ಅತಿಯಾಗಿ ಸೇವಿಸಿದಾಗ ಮಾತ್ರ ಉಂಟಾಗುತ್ತದೆ.
  • ಯಾವುದೇ ರೀತಿಯ ಅಲರ್ಜಿ ಸಮಸ್ಯೆಯಿಂದ ಬಳಲುತ್ತಿರುವವರು ಅಂಜೂರವನ್ನು ತಿನ್ನಬಾರದು. ಇದರಿಂದ ಅವರಿಗೆ ತುರಿಕೆ, ದದ್ದುಗಳು ಕಂಡು ಬರಬಹುದು.
  • ಅಂಜೂರದ ಹಣ್ಣುಗಳನ್ನು ಅತಿಯಾಗಿ ತಿನ್ನುವುದರಿಂದ ದಂತಕ್ಷಯಕ್ಕೆ ಕಾರಣವಾಗಬಹುದು. ಅದಕ್ಕಾಗಿಯೇ ತಜ್ಞರು ಇದನ್ನು ಮಿತವಾಗಿ ಸೇವನೆ ಮಾಡಿ ಎಂದು ಎಚ್ಚರಿಕೆ ನೀಡುತ್ತಾರೆ.
  • ಅಂಜೂರದಲ್ಲಿ ಸಕ್ಕರೆ ಅಂಶವಿದೆ. ಅದಕ್ಕಾಗಿಯೇ ಅತಿಯಾಗಿ ತಿನ್ನುವುದು ಮಧುಮೇಹಿಗಳಿಗೆ ಒಳ್ಳೆಯದಲ್ಲ. ಕಬ್ಬಿಣಾಂಶ ಭರಿತ ಅಂಜೂರವನ್ನು ತಿನ್ನುವುದರಿಂದ ಆರೋಗ್ಯ ಪ್ರಯೋಜನಗಳಿದ್ದರೂ ಅತಿಯಾಗಿ ತಿಂದರೆ ಅನೇಕ ರೀತಿಯ ಅನಾನುಕೂಲಗಳು ಇವೆ.
  • ಅಂಜೂರದ ಹಣ್ಣುಗಳನ್ನು ಅತಿಯಾಗಿ ಸೇವನೆ ಮಾಡುವುದರಿಂದ ಅವುಗಳಲ್ಲಿರುವ ಫೈಬರ್ ಅಂಶ ಗ್ಯಾಸ್ ಮತ್ತು ಹೊಟ್ಟೆ ಉಬ್ಬರಕ್ಕೆ ಕಾರಣವಾಗಬಹುದು. ಶಸ್ತ್ರಚಿಕಿತ್ಸೆಯ ನಂತರ ಅಂಜೂರದ ಹಣ್ಣುಗಳನ್ನು ತಿನ್ನುವುದರಿಂದ ಹೊಟ್ಟೆಯಲ್ಲಿ ರಕ್ತಸ್ರಾವದ ಅಪಾಯ ಹೆಚ್ಚಾಗುತ್ತದೆ. ಹಾಗಾಗಿ ವೈದ್ಯರ ಅನುಮತಿ ಇಲ್ಲದೆ ಇದನ್ನು ಸೇವನೆ ಮಾಡಬೇಡಿ.
  • ಮೂತ್ರಪಿಂಡದ ಸಮಸ್ಯೆ ಇರುವವರು ಕೂಡ ಅಂಜೂರ ಸೇವನೆ ಮಾಡುವ ಮೊದಲು ವೈದ್ಯರನ್ನು ಸಂಪರ್ಕಿಸಬೇಕು. ಏಕೆಂದರೆ ಇದು ಅನುಕೂಲಕ್ಕಿಂತ ಅನಾನುಕೂಲಕ್ಕೆ ಕಾರಣವಾಗಬಹುದು.

ಸೂಚನೆ: ಅಂಜೂರದ ಈ ಅಡ್ಡಪರಿಣಾಮಗಳು ಅವುಗಳನ್ನು ಅತಿಯಾಗಿ ಸೇವಿಸಿದಾಗ ಮಾತ್ರ. ಹಾಗಾಗಿ ಇದನ್ನು ಮಿತ ಪ್ರಮಾಣದಲ್ಲಿ ಸೇವನೆ ಮಾಡಿ. ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿದ್ದರೂ ಇದನ್ನು ಸೇವನೆ ಮಾಡುವ ಮೊದಲು ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ