Mpox case in India: ದೇಶದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿ, ಕೋತಿಗಳಿಗೂ ಮಂಕಿಪಾಕ್ಸ್​​​ಗೂ ಸಂಬಂಧವಿದೆಯೇ?

Mpox case in India: ಆಫ್ರಿಕನ್ ಮತ್ತು ಅನೇಕ ಯುರೋಪಿಯನ್ ದೇಶಗಳ ಬಳಿಕ ನಮ್ಮ ದೇಶದಲ್ಲಿ ಮಂಕಿಪಾಕ್ಸ್ ಮೊದಲ ಶಂಕಿತ ಪ್ರಕರಣ ಬೆಳಕಿಗೆ ಬಂದಿದೆ. ಸೋಂಕು ಪೀಡಿತ ದೇಶದಿಂದ ಯುವಕನೊಬ್ಬ ಭಾರತಕ್ಕೆ ಮರಳಿದ್ದು ಆತನಲ್ಲಿ ಈ ರೋಗಲಕ್ಷಣಗಳು ಕಂಡು ಬಂದಿದ್ದು ಬಳಿಕ ಆತನನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಈ ರೋಗ ಕೋತಿಗಳೊಂದಿಗೆ ಸಂಬಂಧವಿದೆ ಎಂಬುದು ಸತ್ಯ. ಆದರೆ ಆಶ್ಚರ್ಯಕರ ಸಂಗತಿ ಎಂದರೆ ಈ ವೈರಸ್ ಕೋತಿಗಳ ಮೂಲಕವೇ ಹರಡುವುದು 100% ಖಚಿತವಲ್ಲ. ಹಾಗಾದರೆ ಈ ರೋಗಕ್ಕೆ ಕೋತಿಗಳ ಹೆಸರನ್ನು ಏಕೆ ಮತ್ತು ಹೇಗೆ ಇಡಲಾಯಿತು ಎಂಬ ಪ್ರಶ್ನೆ ನಮ್ಮಲ್ಲಿ ಉದ್ಭವಿಸುತ್ತದೆ. ಇದಕ್ಕೆ ಸರಿಯಾದ ಮಾಹಿತಿ ಇಲ್ಲಿದೆ.

Mpox case in India: ದೇಶದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿ, ಕೋತಿಗಳಿಗೂ ಮಂಕಿಪಾಕ್ಸ್​​​ಗೂ ಸಂಬಂಧವಿದೆಯೇ?
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 09, 2024 | 5:50 PM

ಆಫ್ರಿಕನ್ ಮತ್ತು ಅನೇಕ ಯುರೋಪಿಯನ್ ದೇಶಗಳ ಬಳಿಕ ನಮ್ಮ ದೇಶದಲ್ಲಿ ಮಂಕಿಪಾಕ್ಸ್ ಮೊದಲ ಶಂಕಿತ ಪ್ರಕರಣ ಬೆಳಕಿಗೆ ಬಂದಿದೆ. ಸೋಂಕು ಪೀಡಿತ ದೇಶದಿಂದ ಯುವಕನೊಬ್ಬ ಭಾರತಕ್ಕೆ ಮರಳಿದ್ದು ಆತನಲ್ಲಿ ಈ ರೋಗಲಕ್ಷಣಗಳು ಕಂಡು ಬಂದಿದ್ದು ಬಳಿಕ ಆತನನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಕೆಲವು ಮಾಧ್ಯಮ ವರದಿಗಳ ಪ್ರಕಾರ, ಆಫ್ರಿಕಾದ ಅನೇಕ ದೇಶಗಳು ಮಂಕಿಪಾಕ್ಸ್ ನಿಂದ ಬಾಧಿತವಾಗಿವೆ. ಈ ರೋಗ ಕೋತಿಗಳೊಂದಿಗೆ ಸಂಬಂಧವಿದೆ ಎಂಬುದು ಸತ್ಯ. ಆದರೆ ಆಶ್ಚರ್ಯಕರ ಸಂಗತಿ ಎಂದರೆ ಈ ವೈರಸ್ ಕೋತಿಗಳ ಮೂಲಕವೇ ಹರಡುವುದು 100% ಖಚಿತವಲ್ಲ. ಹಾಗಾದರೆ ಈ ರೋಗಕ್ಕೆ ಕೋತಿಗಳ ಹೆಸರನ್ನು ಏಕೆ ಮತ್ತು ಹೇಗೆ ಇಡಲಾಯಿತು ಎಂಬ ಪ್ರಶ್ನೆ ನಮ್ಮಲ್ಲಿ ಉದ್ಭವಿಸುತ್ತದೆ. ಇದಕ್ಕೆ ಸರಿಯಾದ ಮಾಹಿತಿ ಇಲ್ಲಿದೆ.

ಮಂಗನ ಹೆಸರಿಗೂ ಈ ರೋಗಕ್ಕೂ ಯಾವ ರೀತಿಯ ಸಂಬಂಧವಿದೆ?

ಅಮೇರಿಕನ್ ಹೆಲ್ತ್ ಏಜೆನ್ಸಿ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ವರದಿಯ ಪ್ರಕಾರ, ಈ ರೋಗವನ್ನು ಮೊದಲು ಮಂಕಿಪಾಕ್ಸ್ ಎಂದು ಕರೆಯಲಾಗುತ್ತಿತ್ತು, ಬಳಿಕ ಇದನ್ನು ಎಂಪಾಕ್ಸ್ ಎಂದು ಹೆಸರಿಸಲಾಯಿತು. ಆದರೆ ಸಾಮಾನ್ಯ ಪರಿಭಾಷೆಯಲ್ಲಿಯೂ, ಇದನ್ನು ಎಂಪಾಕ್ಸ್ ಬದಲಿಗೆ ಮಂಕಿಪಾಕ್ಸ್ ಎಂದು ಕರೆಯಲಾಗುತ್ತದೆ. ಎಂಪೋಕ್ಸ್ ಒಂದು ಝೂನೋಟಿಕ್ ಕಾಯಿಲೆಯಾಗಿದೆ, ಅಂದರೆ ಇದು ಪ್ರಾಣಿಗಳು ಮತ್ತು ಮನುಷ್ಯರ ನಡುವೆ ಹರಡಬಹುದು. ಇದರ ಮೊದಲ ಪ್ರಕರಣ 1958 ರಲ್ಲಿ ಬೆಳಕಿಗೆ ಬಂದಿತ್ತು. ಈ ವೈರಸ್ ಮೊದಲು ಕೋತಿಗಳಲ್ಲಿ ಕಂಡು ಬಂದಿದೆ. ಹಾಗಾಗಿ ಈ ರೋಗವನ್ನು ಮಂಕಿಪಾಕ್ಸ್ ಎಂದು ಹೆಸರಿಸಲು ಇದು ಕೂಡ ಒಂದು ಕಾರಣವಾಗಿದೆ, ಆದರೂ ಈ ವೈರಸ್ ಎಲ್ಲಿಂದ ಬಂದಿತು ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ಆಫ್ರಿಕನ್ ಇಲಿ, ಅಳಿಲು ಮತ್ತು ಕೋತಿಗಗಳು ಈ ವೈರಸ್ಗೆ ನೆಲೆಯಾಗಿದೆ ಎಂದು ವಿಜ್ಞಾನಿಗಳು ಶಂಕಿಸಿದ್ದಾರೆ. ಹಾಗಾಗಿ ಇವುಗಳ ಮೂಲಕ ಸೋಂಕು ಹರಡಬಹುದು. ಇನ್ನು ಮಾನವರಲ್ಲಿ ಮಂಕಿಪಾಕ್ಸ್ನ ಮೊದಲ ಪ್ರಕರಣವು 1970 ರಲ್ಲಿ ಕಂಡು ಬಂದಿತ್ತು. ಆ ರೋಗಿಯು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ನಿವಾಸಿಯಾಗಿದ್ದರು. 2022 ರಲ್ಲಿ, ಎಂಪಾಕ್ಸ್ ಪ್ರಪಂಚದಾದ್ಯಂತ ಹರಡಿತು ಎಂದು ವರದಿಗಳು ಹೇಳುತ್ತವೆ.

ವೈರಸ್ ಹೇಗೆ ಹರಡುತ್ತದೆ?

ಸಿಡಿಸಿ ವರದಿಯ ಪ್ರಕಾರ, ಸೋಂಕಿತ ರೋಗಿಯ ಲಾಲಾರಸ, ಬೆವರು ಮತ್ತು ಸೋಂಕಿತ ವಸ್ತುಗಳ ಮೂಲಕ ವೈರಸ್ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ. ಜೊತೆಗೆ ಈ ವೈರಸ್ ಸೋಂಕಿತ ಗರ್ಭಿಣಿಯಿಂದ ಅವಳ ಮಗುವಿಗೂ ಹರಡಬಹುದು. ಆರೋಗ್ಯವಂತ ವ್ಯಕ್ತಿ ಸೋಂಕಿತ ವ್ಯಕ್ತಿಯ ಬಟ್ಟೆ ಅಥವಾ ವಸ್ತುಗಳ ಮೇಲ್ಮೈಯನ್ನು ಸ್ಪರ್ಶಿಸಿದರೂ ಕೂಡ ಮಂಕಿಪಾಕ್ಸ್ ಲಕ್ಷಣಗಳು ಕಂಡುಬರಬಹುದು. ಸೋಂಕಿತ ರೋಗಿಯಲ್ಲಿ ರೋಗಲಕ್ಷಣಗಳು ಕಾಣಿಸಿಕೊಳ್ಳಲು 1 ರಿಂದ 4 ದಿನಗಳು ತೆಗೆದುಕೊಳ್ಳಬಹುದು. ಜ್ವರ, ಸ್ನಾಯು ನೋವು, ಶೀತ, ದದ್ದು, ಊದಿಕೊಂಡ ದುಗ್ಧರಸ ಗ್ರಂಥಿಗಳಂತಹ ರೋಗಲಕ್ಷಣಗಳು ಕಂಡುಬರುತ್ತವೆ. ಕೆಲವು ಸಂದರ್ಭಗಳಲ್ಲಿ ಉಸಿರಾಟದ ತೊಂದರೆ, ಆಹಾರವನ್ನು ನುಂಗಲು ಕಷ್ಟವಾಗುವಂತದ್ದು ಮತ್ತು ಕಣ್ಣುಗಳಲ್ಲಿ ಊತ ಉಂಟಾಗಬಹುದು. ಆದರೆ ಇಲ್ಲಿಯ ವರೆಗೆ ಅಂತಹ ಪ್ರಕರಣಗಳು ಬೆಳಕಿಗೆ ಬಂದಿಲ್ಲ, ಇದು ಪ್ರಾಣಿಗಳಿಂದಲೂ ಮನುಷ್ಯರಿಗೆ ಹರಡಬಹುದು. ಆಫ್ರಿಕಾದ ದೇಶಗಳಲ್ಲಿ ಈ ರೀತಿಯ ಅನೇಕ ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ: ಈ ಔಷಧಿಗಳನ್ನು ತೆಗೆದುಕೊಳ್ಳುವುದರಿಂದ ಹೃದ್ರೋಗದ ಅಪಾಯ ಹೆಚ್ಚಾಗಬಹುದು ಎಚ್ಚರ

ಯಾರು ಹೇಳುತ್ತಾರೆ?

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಆಫ್ರಿಕಾದ ದೇಶಗಳಲ್ಲಿ ಇಂತಹ ಅನೇಕ ಪ್ರಕರಣಗಳು ವರದಿಯಾಗಿವೆ ಎಂದು ಹೇಳುತ್ತದೆ, ಆದರೆ ಅವುಗಳು ಹರಡುತ್ತಿರುವುದಕ್ಕೆ ಇಲ್ಲಿಯ ವರೆಗೆ ಯಾವುದೇ ರೀತಿಯ ಕಾರಣವನ್ನು ಕಂಡುಹಿಡಿಯಲಾಗಿಲ್ಲ. ಈ ರೋಗದ ಬಗ್ಗೆ ಜನರಲ್ಲಿ ಅರಿವಿನ ಕೊರತೆಯಿಂದಾಗಿ, ಅದರ ಪ್ರಕರಣಗಳು ಹರಡಿ ಬೆಳಕಿಗೆ ಬಂದ ಅನೇಕ ದೇಶಗಳಿವೆ. ಆಫ್ರಿಕನ್ ದೇಶಗಳಲ್ಲಿ, ಒಬ್ಬ ವ್ಯಕ್ತಿಯಿಂದ ಇನ್ನೊಬ್ಬರಿಗೆ ಹರಡುವ ಮಂಕಿಪಾಕ್ಸ್ ವೈರಸ್ ಅನ್ನು ನಿಯಂತ್ರಿಸಲು ಪ್ರಯತ್ನಗಳು ನಡೆಯುತ್ತಿವೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ