AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health tips: ಚಳಿಗಾಲದಲ್ಲಿ ಶೀತದ ಸಮಸ್ಯೆಯಿಂದ ದೂರ ಇರಲು ಈ 5 ವಿಧಾನಗಳನ್ನು ಅನುಸರಿಸಿ

ತೀವ್ರವಾದ ಚಳಿಯ ಕಾರಣದಿಂದಾಗಿ ಅನೇಕ ಸಮಸ್ಯೆಗಳು ಕಂಡುಬರುತ್ತವೆ. ಹೀಗಾಗಿ ಚಳಿಗಾಲದಲ್ಲಿ ಆರೋಗ್ಯವಾಗಿರಲು ಏನು ಮಾಡಬೇಕು ಎಂಬುವುದನ್ನು ತಿಳಿದುಕೊಳ್ಳುವುದು ಸೂಕ್ತ.

Health tips: ಚಳಿಗಾಲದಲ್ಲಿ ಶೀತದ ಸಮಸ್ಯೆಯಿಂದ ದೂರ ಇರಲು ಈ 5 ವಿಧಾನಗಳನ್ನು ಅನುಸರಿಸಿ
Cold
TV9 Web
| Edited By: |

Updated on: Nov 15, 2021 | 8:20 AM

Share

ಚಳಿಗಾಲದಲ್ಲಿ ಶೀತದ( cold) ಸಮಸ್ಯೆ ಅನೇಕರನ್ನು ಕಾಡುತ್ತದೆ. ಮೂಗು ಕಟ್ಟುವುದು, ತಲೆನೋವು, ದೇಹ ನೋವು ಮತ್ತು ಗಂಟಲು ನೋವಿನಂತಹ ಸಮಸ್ಯೆಗಳು ಜನರನ್ನು ಭಾದಿಸುತ್ತದೆ. ಕೆಲಸದ ನಡುವೆ ಕಿರಿಕಿರಿಯನ್ನು ಸಹ ಉಂಟುಮಾಡುತ್ತದೆ. ತೀವ್ರವಾದ ಚಳಿಯ ಕಾರಣದಿಂದಾಗಿ ಇನ್ನಿತರ ಸಮಸ್ಯೆಗಳು ಕಂಡುಬರುತ್ತವೆ. ಹೀಗಾಗಿ ಚಳಿಗಾಲದಲ್ಲಿ ಆರೋಗ್ಯವಾಗಿರಲು ಏನು ಮಾಡಬೇಕು ಎಂಬುವುದನ್ನು ತಿಳಿದುಕೊಳ್ಳುವುದು ಸೂಕ್ತ.

1. ನಿಯಮಿತವಾಗಿ ನಿಮ್ಮ ಕೈಗಳನ್ನು ತೊಳೆಯಿರಿ ಕೊರೊನಾ ಕಾಲಾವಧಿಯಾಗಿರುವುದರಿಂದ ಕೈಗಳನ್ನು ನಿಯಮಿತವಾಗಿ ತೊಳೆದು ಸ್ವಚ್ಛವಾಗಿಟ್ಟುಕೊಳ್ಳಬೇಕು. ಆ ಮೂಲಕ ಶೀತ ನೆಗಡಿಯಂತಹ ಸಮಸ್ಯೆಗಳಿಂದಲೂ ಮುಕ್ತಿ ಪಡೆಯಬಹುದು.

2. ಹೈಡ್ರೀಕರಿಸಬೇಕು ಚಳಿಗಾಲದಲ್ಲಿ ಸಾಮಾನ್ಯವಾಗಿ ಬಾಯಾರಿಕೆಯಾಗುವುದಿಲ್ಲ. ಆದರೆ, ದಿನನಿತ್ಯ ಸಾಕಷ್ಟು ನೀರು ಕುಡಿಯಬೇಕು ಎಂದು ತಜ್ಞರು ತಿಳಿಸಿದ್ದಾರೆ. ಇಲ್ಲದಿದ್ದರೆ ದೇಹವು ನಿರ್ಜಲೀಕರಣಗೊಳ್ಳುತ್ತದೆ ಮತ್ತು ಆರೋಗ್ಯ ಸಮಸ್ಯೆಗಳ ಅಪಾಯವಿದೆ. ಸಾಕಷ್ಟು ನೀರು ಕುಡಿಯುವುದರಿಂದ ದೇಹದಲ್ಲಿರುವ ವಿಷಕಾರಿ ಅಂಶ ಹೊರಹೋಗುತ್ತದೆ. ಆದ್ದರಿಂದ ಆರೋಗ್ಯವಾಗಿರಲು ನೀರು ಕುಡಿಯಬೇಕು.

3. ಆರೋಗ್ಯಕರ ಆಹಾರವನ್ನು ಮಾತ್ರ ಸೇವಿಸಿ ಈ ಋತುವಿನಲ್ಲಿ ಆರೋಗ್ಯಕರ, ಸಮತೋಲಿತ ಆಹಾರವನ್ನು ಸೇವಿಸಿ. ಆ ಮೂಲಕ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸಬಹುದು. ಫಿಟ್ ಆಗಿರಲು ಇದು ಸಹಾಯ ಮಾಡುತ್ತದೆ. ಸತು ಮತ್ತು ವಿಟಮಿನ್ ಡಿ ಸಮೃದ್ಧವಾಗಿರುವ ಆಹಾರಗಳ ಹೆಚ್ಚಿನ ಸೇವನೆಯತ್ತ ಗಮನಹರಿಸುವುದು ಸೂಕ್ತ.

4. ಸಾಕಷ್ಟು ನಿದ್ರೆ ಪಡೆಯಿರಿ. ಶೀತಗಳನ್ನು ತ್ವರಿತವಾಗಿ ತೊಡೆದುಹಾಕಲು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಲು ಸಾಕಷ್ಟು ನಿದ್ರೆಮಾಡುವುದು ಉತ್ತಮ. ನಿದ್ರೆಯ ಕೊರತೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ನೀವು ಸಾಕಷ್ಟು ನಿದ್ದೆ ಮಾಡಿದರೆ, ದೇಹದ ರೋಗನಿರೋಧಕ ಶಕ್ತಿ ಬಲವಾಗಿರುತ್ತದೆ. ಪ್ರತಿ ರಾತ್ರಿ 7 ರಿಂದ 8 ಗಂಟೆಗಳ ಕಾಲ ನಿದ್ದೆ ಪಡೆಯಿರಿ.

5. ವ್ಯಾಯಾಮ ಪ್ರತಿದಿನ ವ್ಯಾಯಾಮ ಮಾಡಿ. ತೂಕ ಇಳಿಕೆಯ ಜೊತೆಗೆ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ಜೊತೆಗೆ ಯೋಗ ಕೂಡ ಅತ್ಯುತ್ತಮ ಫಲಿತಾಂಶವನ್ನು ನೀಡುತ್ತದೆ.

ಇದನ್ನೂ ಓದಿ: ನವಿಲುಕೋಸು ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯದಲ್ಲಿನ ಬದಲಾವಣೆಯ ಬಗ್ಗೆ ತಿಳಿಯಿರಿ

ಆಲೂಗಡ್ಡೆ ಜ್ಯೂಸ್ ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯದಲ್ಲಿನ ಬದಲಾವಣೆ ಬಗ್ಗೆ ತಿಳಿಯಿರಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್