AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀತ ಜ್ವರ ಪ್ರಕರಣಗಳಲ್ಲಿ ಭಾರೀ ಹೆಚ್ಚಳ; ಎಚ್ಚರಿಕೆ ವಹಿಸಲು ಐಸಿಎಂಆರ್ ಸಲಹೆ

ಎಚ್​3ಎನ್​2 ವೈರಸ್​ನಿಂದ ಉಂಟಾಗುವ ಸೋಂಕು ಪ್ರಕರಣಗಳಲ್ಲಿ ಇತರ ಉಪ ತಳಿಗಳ ಸೋಂಕುಗಳಿಗಿಂತಲೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಿದೆ. ಕಳೆದ 2-3 ತಿಂಗಳುಗಳಲ್ಲಿ ಈ ಸೋಂಕು ಹರಡುವಿಕೆ ಹೆಚ್ಚಾಗಿದೆ ಎಂದು ಐಸಿಎಂಆರ್ ತಜ್ಞರು ಹೇಳಿದ್ದಾರೆ.

ಶೀತ ಜ್ವರ ಪ್ರಕರಣಗಳಲ್ಲಿ ಭಾರೀ ಹೆಚ್ಚಳ; ಎಚ್ಚರಿಕೆ ವಹಿಸಲು ಐಸಿಎಂಆರ್ ಸಲಹೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Mar 04, 2023 | 10:07 PM

Share

ನವದೆಹಲಿ: ದೇಶದಾದ್ಯಂತ ಕಳೆದ ಎರಡು ತಿಂಗಳುಗಳಿಂದ ಶೀತ ಜ್ವರ (Influenza) ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ. ದೀರ್ಘ ಕಾಲದ ಅನಾರೋಗ್ಯ, ಕೆಮ್ಮುವಿಗೆ ಕಾಣವಾಗುವುದರ ಜತೆಗೆ ರೋಗಲಕ್ಷಣಗಳೂ ಹೆಚ್ಚು ಕಾಣಿಸುತ್ತಿವೆ. ಕೋವಿಡ್ ಸಾಂಕ್ರಾಮಿಕದ ನಂತರ ಇದೀಗ ಶೀತ ಜ್ವರ ಪ್ರಕರಣಗಳು ಹೆಚ್ಚಾಗಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಸಲಹಾ ಟಿಪ್ಪಣಿಯೊಂದನ್ನೂ ಐಸಿಎಂಆರ್ ಬಿಡುಗಡೆ ಮಾಡಿದೆ. ಇನ್‌ಫ್ಲುಯೆಂಜಾ ಎ ಸಬ್‌ಟೈಪ್ ಎಚ್​3ಎನ್​2 ವೈರಸ್​​ನಿಂದಾಗಿ (H3N2 virus) ಈ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ ಎಂದು ಅದು ತಿಳಿಸಿದೆ. ಎಚ್​3ಎನ್​2 ವೈರಸ್​ನಿಂದ ಉಂಟಾಗುವ ಸೋಂಕು ಪ್ರಕರಣಗಳಲ್ಲಿ ಇತರ ಉಪ ತಳಿಗಳ ಸೋಂಕುಗಳಿಗಿಂತಲೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಿದೆ. ಕಳೆದ 2-3 ತಿಂಗಳುಗಳಲ್ಲಿ ಈ ಸೋಂಕು ಹರಡುವಿಕೆ ಹೆಚ್ಚಾಗಿದೆ ಎಂದು ಐಸಿಎಂಆರ್ ತಜ್ಞರು ಹೇಳಿದ್ದಾರೆ.

ಸೋಂಕಿನ ಲಕ್ಷಣಗಳು ಏನೆಲ್ಲ?

ನಿರಂತರ ಕೆಮ್ಮು, ಜ್ವರ ಈ ಸೋಂಕಿನ ಪ್ರಮುಖ ಲಕ್ಷಣಗಳಾಗಿವೆ. ಇತ್ತೀಚೆಗೆ ವರದಿಯಾದ ಪ್ರಕರಣಗಳಲ್ಲಿ ಸೋಂಕಿತರು ದೀರ್ಘ ಕಾಲದ ವರೆಗೆ ರೋಗ ಲಕ್ಷಣ ಹೊಂದಿರುವುದು ಕಂಡುಬಂದಿದೆ ಎಂದು ಐಸಿಎಂಆರ್ ಹೇಳಿದೆ. ಸೋಂಕು ಕಡಿಮೆಯಾಗಲು ಸಮಯ ತೆಗೆದುಕೊಳ್ಳುತ್ತಿದೆ. ರೋಗಲಕ್ಷಣಗಳು ಬಲವಾಗಿರುತ್ತವೆ. ರೋಗಿಯ ಚೇತರಿಕೆಯ ನಂತರವೂ ರೋಗಲಕ್ಷಣಗಳು ದೀರ್ಘಕಾಲದವರೆಗೆ ಇರುತ್ತವೆ ಎಂದು ತಜ್ಞ ವೈದ್ಯ ಡಾ. ಅನುರಾಗ್ ಮೆಹ್ರೋತ್ರಾ ತಿಳಿಸಿದ್ದಾರೆ.

ಆ್ಯಂಟಿಬಯಾಟಿಕ್ಸ್ ಅತಿಯಾದ ಬಳಕೆ ಬೇಡ

ಜ್ವರ, ಶೀತ, ಕಫ ಮತ್ತಿತರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಕೂಡಲೇ, ಅನಿವಾರ್ಯವಲ್ಲದ ಹೊರತು ಆ್ಯಂಟಿಬಯಾಟಿಕ್​ಗಳನ್ನು ಸೇವಿಸಬಾರದು. ವೈದ್ಯರು ಕೂಡ ರೋಗಿಗಳಿಗೆ ಆ್ಯಂಟಿಬಯಾಟಿಕ್ಸ್​ ತೆಗೆದುಕೊಳ್ಳುವಂತೆ ಸಲಹೆ ನೀಡಬಾರದು ಎಂದು ಭಾರತೀಯ ವೈದ್ಯಕೀಯ ಸಂಘ ಈಗಾಗಲೇ ಎಚ್ಚರಿಕೆ ನೀಡಿದೆ. ಇದನ್ನು ಐಸಿಎಂಆರ್ ಕೂಡ ಪುನರುಚ್ಚರಿಸಿದೆ.

ಇದನ್ನೂ ಓದಿ: ಜ್ವರ, ಶೀತ, ಕಫ ಎಂದು ಮನಬಂದಂತೆ ಆ್ಯಂಟಿಬಯಾಟಿಕ್ ಸೇವಿಸಬೇಡಿ; ಐಎಂಎ ಎಚ್ಚರಿಕೆ

ಎಚ್​3ಎನ್​2 ಇನ್​ಫ್ಲುಯೆಂಜಾ ವೈರಸ್​ನಿಂದಾಗಿ ಸೋಂಕು ಉಂಟಾದವರಲ್ಲಿ ಕಫ, ವಾಕರಿಕೆ, ವಾಂತಿ, ಗಂಟಲು ಕಿರಿಕಿರಿ, ಜ್ವರ, ಮೈಕೈ ನೋವು, ಭೇದಿ ಪ್ರಕರಣಗಳು ಕಾಣಿಸಿಕೊಳ್ಳುತ್ತವೆ. ಈ ಪ್ರಕರಣಗಳಲ್ಲಿ ಇತ್ತೀಚೆಗೆ ಹಠಾತ್ ಹೆಚ್ಚಳ ಕಂಡುಬಂದಿದೆ. ಸೋಂಕು ಸಾಮಾನ್ಯವಾಗಿ ಐದರಿಂದ ಏಳು ದಿನಗಳವರೆಗೆ ಇರುತ್ತದೆ. ಜ್ವರವು ಮೂರು ದಿನಗಳಲ್ಲಿ ಕಡಿಮೆಯಾಗುತ್ತದೆ. ಆದರೆ, ಕೆಮ್ಮು ಮಾತ್ರ ಮೂರು ವಾರಗಳವರೆಗೆ ಇರುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿತ್ತು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು