AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fitness Tips: ಉದ್ಯೋಗಸ್ಥ ಮಹಿಳೆಯರು ಆರೋಗ್ಯಕ್ಕೆ ಸಂಬಂಧಿಸಿದ ಈ ಕೆಲವು ವಿಷಯಗಳನ್ನು ಮರೆಯಲೇಬಾರದು!

ಮಹಿಳೆಯರು ಆರೋಗ್ಯವಾಗಿರಲು ಮತ್ತು ದೈಹಿಕವಾಗಿ ಸದೃಢರಾಗಿರಲು ಕೆಲವು ಸಲಹೆಗಗಳು ಈ ಕೆಳಗಿನಂತಿವೆ. ಇವುಗಳನ್ನು ಪಾಲಿಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಿ.

Fitness Tips: ಉದ್ಯೋಗಸ್ಥ ಮಹಿಳೆಯರು  ಆರೋಗ್ಯಕ್ಕೆ ಸಂಬಂಧಿಸಿದ ಈ ಕೆಲವು ವಿಷಯಗಳನ್ನು ಮರೆಯಲೇಬಾರದು!
ಸಂಗ್ರಹ ಚಿತ್ರ
TV9 Web
| Updated By: preethi shettigar|

Updated on: Nov 13, 2021 | 8:34 AM

Share

ಮಹಿಳೆಯರು ಮಾನಸಿಕವಾಗಿ ಮಾತ್ರವಲ್ಲದೇ ದೈಹಿಕವಾಗಿಯೂ ತುಂಬಾ ಆರೋಗ್ಯವಂತರಾಗಿರಬೇಕು. ಅದರಲ್ಲಿಯೂ ಮುಖ್ಯವಾಗಿ ಉದ್ಯೋಗಸ್ಥ ಮಹಿಳೆಯರು ತಮ್ಮ ದೇಹವನ್ನು ಸದೃಢವಾಗಿಡಲು ಸರಿಯಾದ ಆಹಾರ ಮಾತ್ರವಲ್ಲದೇ ನಿಯಮಿತವಾದ ವ್ಯಾಯಾಮ ಅಗತ್ಯವಿರುತ್ತದೆ. ಕೆಲಸದ ಒತ್ತಡ, ಮನೆ ಕೆಲಸ ಜೊತೆಗೆ ಆಫೀಸ್ ಕೆಲಸದಲ್ಲಿಯೂ ತೊಡಗಿಕೊಳ್ಳುವುದರಿಂದ ಮಾನಸಿಕವಾಗಿ ದುರ್ಬಲರಾಗಿರುತ್ತಾರೆ. ಅಂತಹ ಸಮಯದಲ್ಲಿ ಹೆಚ್ಚು ಆಯಾಸ ಮತ್ತು ಬೇಸರಕ್ಕೆ ಕಾರಣವಾಗುತ್ತದೆ. ಅದಕ್ಕಾಗಿಯೇ ಮಹಿಳೆಯರು ಆರೋಗ್ಯವಾಗಿರಲು ಮತ್ತು ದೈಹಿಕವಾಗಿ ಸದೃಢರಾಗಿರಲು ಕೆಲವು ಸಲಹೆಗಗಳು ಈ ಕೆಳಗಿನಂತಿವೆ.

*ದೇಹಕ್ಕೆ ಶೇ. 70ರಷ್ಟು ನೀರು ಬೇಕು. ಅದಕ್ಕಾಗಿಯೇ ದಿನದಲ್ಲಿ ಹೆಚ್ಚು ನೀರು ಕುಡಿಯುವ ಅಭ್ಯಾಸ ರೂಢಿಯಲ್ಲಿಟ್ಟುಕೊಳ್ಳಿ. ಹೆಚ್ಚು ನೀರು ಕುಡಿಯದಿದ್ದರೆ ನಿರ್ಜಲೀಕರಣದ ಸಮಸ್ಯೆ ಕಾಡುತ್ತದೆ. ದೇಹದ ಭಾಗಗಳು ಸರಿಯಾಗಿ ಕಾರ್ಯ ನಿರ್ವಹಿಸುವುದಿಲ್ಲ. ಅದಕ್ಕಾಗಿಯೇ ನೀವು ದಿನಕ್ಕೆ 2 ರಿಂದ 3 ಲೀಟರ್ ನೀರು ಕುಡಿಯಿರಿ.

*ಹೆಚ್ಚು ಕಾಲ ಕುಳಿತಲ್ಲಿಯೇ ಕುಳಿತು ಕೆಲಸ ಮಾಡುವುದರಿಂದ ದೇಹ ಹೆಚ್ಚು ಒತ್ತಡಕ್ಕೆ ಸಿಲುಕುತ್ತದೆ. ಹಾಗಾಗಿ ಪ್ರತಿ 45 ನಿಮಿಷಕ್ಕೊಮ್ಮೆ ಎದ್ದೇಳುವುದು, ನಡೆಯುವುದು ಅಥವಾ ಜಿಗಿಯುವ ವ್ಯಾಯಾಮದಲ್ಲಿ 5 ನಿಮಿಷ ತೊಡಗಿಕೊಳ್ಳಿ.

*ಬೆಳಿಗ್ಗೆ ಬೇಗ ಎದ್ದು ಅರ್ಧ ಗಂಟೆ ವಾಕಿಂಗ್ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಯೋಗ ಮತ್ತು ಧ್ಯಾನಕ್ಕಾಗಿ ದಿನದ ಸ್ವಲ್ಪ ಸಮಯ ಮೀಸಲಿಡಿ. ಹೀಗೆ ಮಾಡುವುದರಿಂದ ನಿಮ್ಮ ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು.

*ಕೆಲಸ ಮಾಡುವಾಗ ಹೆಚ್ಚು ಹೊತ್ತು ಖುರ್ಚಿಯಲ್ಲಿ ಕುಳಿತುಕೊಳ್ಳಬೇಡಿ. ಆಗಾಗ ನಡೆಯಿರಿ. ಇದರಿಂದ ನೀವು ಫಿಟ್ ಆಗಿರಲು ಸಹಾಯಕವಾಗುತ್ತದೆ.

*ಇವುಗಳ ಜೊತೆಯಲ್ಲಿ ಪೋಷಕಾಂಶಗಳಿರುವ ಸಮತೋಲಿತ ಆಹಾರವನ್ನು ಸೇವಿಸುವುದು ತುಂಬಾ ಒಳ್ಳೆಯದು. ಮಹಿಳೆಯರಿಗೆ ಕ್ಯಾಲ್ಸಿಯಮ್, ಕಬ್ಬಿಣಾಂಶವಿರುವ ಆಹಾರ ಬಹಳ ಮುಖ್ಯ. ಇವುಗಳನ್ನು ಹೊರತುಪಡಿಸಿ ಹಣ್ಣುಗಳು, ತರಕಾರಿಗಳು, ದ್ವಿದಳ ಧಾನ್ಯಗಳನ್ನು ಸೇವಿಸಿ.

*ಇವುಗಳು ನಿಮ್ಮ ಪ್ರತಿನಿತ್ಯದ ರೂಢಿಯಲ್ಲಿರಲಿ. ಯಾವುದೇ ಕಾರಣಕ್ಕೂ ನಿಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ನಿಮ್ಮ ಆರೋಗ್ಯ ಮತ್ತು ದೇಹದ ಸದೃಢತೆ ಬಗ್ಗೆ ಯಾವಾಗಲೂ ಲಕ್ಷ್ಯವಿರಲಿ.

ಇದನ್ನೂ ಓದಿ:

Health Tips: ಈ ಕೆಲವು ಪೌಷ್ಟಿಕಾಂಶಯುಕ್ತ ಪಾನೀಯಗಳು ನಿಮ್ಮ ಆರೋಗ್ಯಕ್ಕೆ ಉತ್ತಮ

Health Tips: ಪಾರ್ಶ್ವವಾಯುವಿನ ಲಕ್ಷಣ, ಅಪಾಯ, ಮುನ್ನೆಚ್ಚರಿಕೆ ಕ್ರಮಗಳೇನು?

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್