AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕ ಕೊಬ್ಬಿನಿಂದ ಯಕೃತ್ತಿನಲ್ಲಿ ಸಮಸ್ಯೆ ಕಂಡುಬರುವ ಸಾಧ್ಯತೆ ಇದೆ; ಪರಿಹಾರಕ್ಕಾಗಿ ಈ ಮಾರ್ಗ ಅನುಸರಿಸಿ

ಯಕೃತ್ತಿನ ಕಾಯಿಲೆಯ ಸಮಯದಲ್ಲಿ ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆಯನ್ನು ಅನುಸರಿಸುವುದು ಬಹಳ ಮುಖ್ಯವಾದರೂ, ಅನೇಕ ಮನೆಮದ್ದುಗಳನ್ನು ಸಹ ಅನುಸರಿಸುವ ಮೂಲಕ ಕೊಬ್ಬಿನ ಪಿತ್ತಜನಕಾಂಗ ಸಮಸ್ಯೆಯನ್ನು ನಿವಾರಿಸಬಹುದು.

ಅಧಿಕ ಕೊಬ್ಬಿನಿಂದ ಯಕೃತ್ತಿನಲ್ಲಿ ಸಮಸ್ಯೆ ಕಂಡುಬರುವ ಸಾಧ್ಯತೆ ಇದೆ; ಪರಿಹಾರಕ್ಕಾಗಿ ಈ ಮಾರ್ಗ ಅನುಸರಿಸಿ
ಪಿತ್ತಜನಕಾಂಗ (ಪ್ರಾತಿನಿಧಿಕ ಚಿತ್ರ)
TV9 Web
| Updated By: preethi shettigar|

Updated on: Jan 02, 2022 | 8:35 AM

Share

ಇತ್ತೀಚಿನ ದಿನಗಳಲ್ಲಿ ಕಳಪೆ ಜೀವನಶೈಲಿಯಿಂದ (Lifestyle) ಯಕೃತ್ತಿನ ಕಾಯಿಲೆ ಸಾಮಾನ್ಯ ಸಮಸ್ಯೆಯಾಗಿದೆ. ಹಿಂದಿನ ಕಾಲದಲ್ಲಿ, ಹೆಪಟೈಟಿಸ್ ಬಿ ಮತ್ತು ಸಿ ಯ ಕಾರಣದಿಂದಾಗಿ ಪಿತ್ತಜನಕಾಂಗದ (Liver) ಸಮಸ್ಯೆಗಳು ಹೆಚ್ಚಾಗಿ ಜನರನ್ನು ತೊಂದರೆಗೊಳಿಸುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಸ್ಥೂಲಕಾಯತೆಯು ಕಳಪೆ ಆಹಾರದಿಂದ ಹೆಚ್ಚುತ್ತಿದೆ ಮತ್ತು ಇದರಿಂದಾಗಿ ಹೆಚ್ಚಿನ ಜನರು ಕೊಬ್ಬಿನ ಪಿತ್ತಜನಕಾಂಗದ ಅಥವಾ ಯಕೃತ್ತಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಯಕೃತ್ತಿನ ಕಾಯಿಲೆಗೆ ಮದ್ಯ ಸೇವನೆಯೂ ಒಂದು ಕಾರಣ. ಹೀಗಾಗಿ ಈ ರೋಗಲಕ್ಷಣಗಳಿಂದ ಮುಕ್ತರಾಗಲು ಮುನ್ನೇಚ್ಚರಿಕೆ ವಹಿಸುವುದು ಬಹಳ ಮುಖ್ಯ.

ಯಕೃತ್ತಿನ ಸಮಸ್ಯೆಗಳಿಗೆ ಕಾರಣವೇನು, ಅದರ ಲಕ್ಷಣಗಳು ಯಾವುವು ಮತ್ತು ಅದನ್ನು ಹೇಗೆ ತಪ್ಪಿಸಬಹುದು ಎಂಬುದನ್ನುನಾವು ಮೊದಲು ಅರ್ಥ ಮಾಡಿಕೊಳ್ಳಬೇಕು. ಯಕೃತ್ತಿನ ಕಾಯಿಲೆಯ ಸಮಯದಲ್ಲಿ ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆಯನ್ನು ಅನುಸರಿಸುವುದು ಬಹಳ ಮುಖ್ಯವಾದರೂ, ಅನೇಕ ಮನೆಮದ್ದುಗಳನ್ನು ಸಹ ಅನುಸರಿಸುವ ಮೂಲಕ ಕೊಬ್ಬಿನ ಪಿತ್ತಜನಕಾಂಗ ಸಮಸ್ಯೆಯನ್ನು ನಿವಾರಿಸಬಹುದು.

ಅರಿಶಿಣ ಅರಿಶಿಣವು ದೇಹದ ಅನೇಕ ರೋಗಗಳನ್ನು ಗುಣಪಡಿಸುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಗಾಯಗಳನ್ನು ತಡೆಗಟ್ಟುವಲ್ಲಿ ಅರಿಶಿಣವು ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿದಿನ ರಾತ್ರಿ ಮಲಗುವಾಗ ಅರಿಶಿಣವನ್ನು ಹಾಲಿಗೆ ಬೆರೆಸಿ ಕುಡಿಯಿರಿ, ಏಕೆಂದರೆ ಇದು ಯಕೃತ್ತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.

ಅಲೋವೆರಾ ಅಲೋವೆರಾ ಹೈಡ್ರೇಟಿಂಗ್ ಗುಣಗಳಿಂದ ಕೂಡಿದೆ. ಇದು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ ಮತ್ತು ಯಕೃತ್ತನ್ನು ದೊಡ್ಡ ಹಾನಿಗಳಿಂದ ರಕ್ಷಿಸುತ್ತದೆ. ನೀವು ಬಯಸಿದರೆ ಅಲೋವೆರಾ ಜ್ಯೂಸ್ ಅನ್ನು ನಿಮ್ಮ ದಿನಚರಿಯ ಭಾಗವಾಗಿ ಮಾಡಬಹುದು.

ನೆಲ್ಲಿಕಾಯಿ ನೆಲ್ಲಿಕಾಯಿ ದೇಹಕ್ಕೆ ಅನೇಕ ವಿಧಗಳಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ಯಕೃತ್ತನ್ನು ಸಕ್ರಿಯಗೊಳಿಸುತ್ತದೆ ಮತ್ತು ಅದರ ಕಾರ್ಯವನ್ನು ಸುಧಾರಿಸುತ್ತದೆ. ಇದನ್ನು ಪುಡಿ ಅಥವಾ ಕಷಾಯ ರೂಪದಲ್ಲಿ ತೆಗೆದುಕೊಳ್ಳಬಹುದು.

ಬೆಳ್ಳುಳ್ಳಿ ಬೆಳ್ಳುಳ್ಳಿಯ ಸಹಾಯದಿಂದ ಯಕೃತ್ತಿನ ಕಿಣ್ವಗಳನ್ನು ಸಕ್ರಿಯಗೊಳಿಸಬಹುದು ಎಂದು ಹೇಳಲಾಗುತ್ತದೆ. ಜೊತೆಗೆ ಇದು ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ. ಇದನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದರಿಂದ ಪಿತ್ತಜನಕಾಂಗ ಆರೋಗ್ಯವಾಗಿರುತ್ತದೆ.

ಹೆಚ್ಚು ನೀರು ಕುಡಿಯಿರಿ ಪ್ರತಿಯೊಂದು ಸಮಸ್ಯೆಗೂ ನೀರನ್ನು ರಾಮಬಾಣವೆಂದು ಪರಿಗಣಿಸಲಾಗುತ್ತದೆ. ಯಕೃತ್ತಿನ ಕಾಯಿಲೆಗಳನ್ನು ಎದುರಿಸುತ್ತಿರುವ ರೋಗಿಗಳು ಹೆಚ್ಚು ನೀರು ಕುಡಿಯಲು ಸಲಹೆ ನೀಡಲಾಗುತ್ತದೆ. ನೀವು ಕೊಬ್ಬಿನ ಪಿತ್ತಜನಕಾಂಗದ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಖಂಡಿತವಾಗಿಯೂ ದಿನಕ್ಕೆ ಕನಿಷ್ಠ 2.5 ರಿಂದ 3 ಲೀಟರ್ ನೀರನ್ನು ಕುಡಿಯಿರಿ.

ಇದನ್ನೂ ಓದಿ: Health Care Tips: ಸೀತಾಫಲ ತಿಂದರೆ ಆರೋಗ್ಯದಲ್ಲಿ ಅನೇಕ ಬದಲಾವಣೆಗಳಾಗುತ್ತದೆ; ಅಪಾಯದ ಬಗ್ಗೆ ಇರಲಿ ಎಚ್ಚರ

Women Health: ಯುವತಿಯರಲ್ಲಿ ಆರೋಗ್ಯ ಸಮಸ್ಯೆ; ಜೀವನಶೈಲಿ ಸುಧಾರಣೆಗೆ ತಜ್ಞರ ಸಲಹೆಗಳು ಇಲ್ಲಿವೆ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ