Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕ ಕೊಬ್ಬಿನಿಂದ ಯಕೃತ್ತಿನಲ್ಲಿ ಸಮಸ್ಯೆ ಕಂಡುಬರುವ ಸಾಧ್ಯತೆ ಇದೆ; ಪರಿಹಾರಕ್ಕಾಗಿ ಈ ಮಾರ್ಗ ಅನುಸರಿಸಿ

ಯಕೃತ್ತಿನ ಕಾಯಿಲೆಯ ಸಮಯದಲ್ಲಿ ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆಯನ್ನು ಅನುಸರಿಸುವುದು ಬಹಳ ಮುಖ್ಯವಾದರೂ, ಅನೇಕ ಮನೆಮದ್ದುಗಳನ್ನು ಸಹ ಅನುಸರಿಸುವ ಮೂಲಕ ಕೊಬ್ಬಿನ ಪಿತ್ತಜನಕಾಂಗ ಸಮಸ್ಯೆಯನ್ನು ನಿವಾರಿಸಬಹುದು.

ಅಧಿಕ ಕೊಬ್ಬಿನಿಂದ ಯಕೃತ್ತಿನಲ್ಲಿ ಸಮಸ್ಯೆ ಕಂಡುಬರುವ ಸಾಧ್ಯತೆ ಇದೆ; ಪರಿಹಾರಕ್ಕಾಗಿ ಈ ಮಾರ್ಗ ಅನುಸರಿಸಿ
ಪಿತ್ತಜನಕಾಂಗ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: preethi shettigar

Updated on: Jan 02, 2022 | 8:35 AM

ಇತ್ತೀಚಿನ ದಿನಗಳಲ್ಲಿ ಕಳಪೆ ಜೀವನಶೈಲಿಯಿಂದ (Lifestyle) ಯಕೃತ್ತಿನ ಕಾಯಿಲೆ ಸಾಮಾನ್ಯ ಸಮಸ್ಯೆಯಾಗಿದೆ. ಹಿಂದಿನ ಕಾಲದಲ್ಲಿ, ಹೆಪಟೈಟಿಸ್ ಬಿ ಮತ್ತು ಸಿ ಯ ಕಾರಣದಿಂದಾಗಿ ಪಿತ್ತಜನಕಾಂಗದ (Liver) ಸಮಸ್ಯೆಗಳು ಹೆಚ್ಚಾಗಿ ಜನರನ್ನು ತೊಂದರೆಗೊಳಿಸುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಸ್ಥೂಲಕಾಯತೆಯು ಕಳಪೆ ಆಹಾರದಿಂದ ಹೆಚ್ಚುತ್ತಿದೆ ಮತ್ತು ಇದರಿಂದಾಗಿ ಹೆಚ್ಚಿನ ಜನರು ಕೊಬ್ಬಿನ ಪಿತ್ತಜನಕಾಂಗದ ಅಥವಾ ಯಕೃತ್ತಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಯಕೃತ್ತಿನ ಕಾಯಿಲೆಗೆ ಮದ್ಯ ಸೇವನೆಯೂ ಒಂದು ಕಾರಣ. ಹೀಗಾಗಿ ಈ ರೋಗಲಕ್ಷಣಗಳಿಂದ ಮುಕ್ತರಾಗಲು ಮುನ್ನೇಚ್ಚರಿಕೆ ವಹಿಸುವುದು ಬಹಳ ಮುಖ್ಯ.

ಯಕೃತ್ತಿನ ಸಮಸ್ಯೆಗಳಿಗೆ ಕಾರಣವೇನು, ಅದರ ಲಕ್ಷಣಗಳು ಯಾವುವು ಮತ್ತು ಅದನ್ನು ಹೇಗೆ ತಪ್ಪಿಸಬಹುದು ಎಂಬುದನ್ನುನಾವು ಮೊದಲು ಅರ್ಥ ಮಾಡಿಕೊಳ್ಳಬೇಕು. ಯಕೃತ್ತಿನ ಕಾಯಿಲೆಯ ಸಮಯದಲ್ಲಿ ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆಯನ್ನು ಅನುಸರಿಸುವುದು ಬಹಳ ಮುಖ್ಯವಾದರೂ, ಅನೇಕ ಮನೆಮದ್ದುಗಳನ್ನು ಸಹ ಅನುಸರಿಸುವ ಮೂಲಕ ಕೊಬ್ಬಿನ ಪಿತ್ತಜನಕಾಂಗ ಸಮಸ್ಯೆಯನ್ನು ನಿವಾರಿಸಬಹುದು.

ಅರಿಶಿಣ ಅರಿಶಿಣವು ದೇಹದ ಅನೇಕ ರೋಗಗಳನ್ನು ಗುಣಪಡಿಸುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಗಾಯಗಳನ್ನು ತಡೆಗಟ್ಟುವಲ್ಲಿ ಅರಿಶಿಣವು ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿದಿನ ರಾತ್ರಿ ಮಲಗುವಾಗ ಅರಿಶಿಣವನ್ನು ಹಾಲಿಗೆ ಬೆರೆಸಿ ಕುಡಿಯಿರಿ, ಏಕೆಂದರೆ ಇದು ಯಕೃತ್ತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.

ಅಲೋವೆರಾ ಅಲೋವೆರಾ ಹೈಡ್ರೇಟಿಂಗ್ ಗುಣಗಳಿಂದ ಕೂಡಿದೆ. ಇದು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ ಮತ್ತು ಯಕೃತ್ತನ್ನು ದೊಡ್ಡ ಹಾನಿಗಳಿಂದ ರಕ್ಷಿಸುತ್ತದೆ. ನೀವು ಬಯಸಿದರೆ ಅಲೋವೆರಾ ಜ್ಯೂಸ್ ಅನ್ನು ನಿಮ್ಮ ದಿನಚರಿಯ ಭಾಗವಾಗಿ ಮಾಡಬಹುದು.

ನೆಲ್ಲಿಕಾಯಿ ನೆಲ್ಲಿಕಾಯಿ ದೇಹಕ್ಕೆ ಅನೇಕ ವಿಧಗಳಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ಯಕೃತ್ತನ್ನು ಸಕ್ರಿಯಗೊಳಿಸುತ್ತದೆ ಮತ್ತು ಅದರ ಕಾರ್ಯವನ್ನು ಸುಧಾರಿಸುತ್ತದೆ. ಇದನ್ನು ಪುಡಿ ಅಥವಾ ಕಷಾಯ ರೂಪದಲ್ಲಿ ತೆಗೆದುಕೊಳ್ಳಬಹುದು.

ಬೆಳ್ಳುಳ್ಳಿ ಬೆಳ್ಳುಳ್ಳಿಯ ಸಹಾಯದಿಂದ ಯಕೃತ್ತಿನ ಕಿಣ್ವಗಳನ್ನು ಸಕ್ರಿಯಗೊಳಿಸಬಹುದು ಎಂದು ಹೇಳಲಾಗುತ್ತದೆ. ಜೊತೆಗೆ ಇದು ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ. ಇದನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದರಿಂದ ಪಿತ್ತಜನಕಾಂಗ ಆರೋಗ್ಯವಾಗಿರುತ್ತದೆ.

ಹೆಚ್ಚು ನೀರು ಕುಡಿಯಿರಿ ಪ್ರತಿಯೊಂದು ಸಮಸ್ಯೆಗೂ ನೀರನ್ನು ರಾಮಬಾಣವೆಂದು ಪರಿಗಣಿಸಲಾಗುತ್ತದೆ. ಯಕೃತ್ತಿನ ಕಾಯಿಲೆಗಳನ್ನು ಎದುರಿಸುತ್ತಿರುವ ರೋಗಿಗಳು ಹೆಚ್ಚು ನೀರು ಕುಡಿಯಲು ಸಲಹೆ ನೀಡಲಾಗುತ್ತದೆ. ನೀವು ಕೊಬ್ಬಿನ ಪಿತ್ತಜನಕಾಂಗದ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಖಂಡಿತವಾಗಿಯೂ ದಿನಕ್ಕೆ ಕನಿಷ್ಠ 2.5 ರಿಂದ 3 ಲೀಟರ್ ನೀರನ್ನು ಕುಡಿಯಿರಿ.

ಇದನ್ನೂ ಓದಿ: Health Care Tips: ಸೀತಾಫಲ ತಿಂದರೆ ಆರೋಗ್ಯದಲ್ಲಿ ಅನೇಕ ಬದಲಾವಣೆಗಳಾಗುತ್ತದೆ; ಅಪಾಯದ ಬಗ್ಗೆ ಇರಲಿ ಎಚ್ಚರ

Women Health: ಯುವತಿಯರಲ್ಲಿ ಆರೋಗ್ಯ ಸಮಸ್ಯೆ; ಜೀವನಶೈಲಿ ಸುಧಾರಣೆಗೆ ತಜ್ಞರ ಸಲಹೆಗಳು ಇಲ್ಲಿವೆ

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ