Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮಳೆಗಾಲದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಈ 6 ಕಷಾಯಗಳನ್ನು ಮಾಡಿ ಕುಡಿಯಿರಿ

ಕಷಾಯಗಳಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿರುತ್ತದೆ. ಹಾಗಿದ್ದರೆ ಯಾವೆಲ್ಲಾ ಪದಾರ್ಥಗಳಿಂದ ಕಷಾಯ ತಯಾರಿಸಬೇಕು ಎಂಬ ಗೊಂದಲವಿದ್ದರೆ ಇಲ್ಲಿದೆ ಅದಕ್ಕೆ ಉತ್ತರ.

Health Tips: ಮಳೆಗಾಲದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಈ 6 ಕಷಾಯಗಳನ್ನು ಮಾಡಿ ಕುಡಿಯಿರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jun 23, 2021 | 7:35 AM

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದ್ದರೂ, ಕಾಲೋಚಿತವಾಗಿ ಬರುವ ಕಾಯಿಲೆಗಳ ಬಗ್ಗೆ ನಾವು ಗಮನಹರಿಸಿವುದು ಸೂಕ್ತ. ಅದರಲ್ಲೂ ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗಿದೆ. ಮಳೆಗೆ ಹೆಚ್ಚಿನ ಜನರು ಶೀತ ಮತ್ತು ಕೆಮ್ಮು ಹಾಗೂ ಇನ್ನಿತರ ಸೋಂಕುಗಳಿಗೆ ಗುರಿಯಾಗುತ್ತಾರೆ. ಆಸ್ಪತ್ರೆಗೆ ಈಗ ಹೋಗುವುದು ಅಷ್ಟು ಸುಲಭವಲ್ಲ. ಹೀಗಾಗಿ ಪ್ರಾಚೀನ ಕಾಲದಿಂದ ಮುಂದುವರಿದುಕೊಂಡು ಬಂದ ಕಷಾಯವನ್ನು ಮಾಡಿ ಕುಡಿಯಿರಿ. ಈ ಕಷಾಯವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಇವುಗಳು ಮುಖ್ಯ ಪಾತ್ರ ವಹಿಸುತ್ತದೆ. ಕಷಾಯಗಳಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿರುತ್ತದೆ. ಹಾಗಿದ್ದರೆ ಯಾವೆಲ್ಲಾ ಪದಾರ್ಥಗಳಿಂದ ಕಷಾಯ ತಯಾರಿಸಬೇಕು ಎಂಬ ಗೊಂದಲವಿದ್ದರೆ ಇಲ್ಲಿದೆ ಅದಕ್ಕೆ ಉತ್ತರ.

ಅಶ್ವಗಂಧ ಅಶ್ವಗಂಧ ವಿವಿಧ ಕಾಯಿಲೆಗಳಿಗೆ ಪರಿಹಾರ ನೀಡುತ್ತದೆ. ಅಲ್ಲದೆ ಇದನ್ನು ಆಯುರ್ವೇದದಲ್ಲಿ ಅನೇಕ ಚಿಕಿತ್ಸೆಗಳಿಗೆ ಬಳಸಲಾಗುತ್ತದೆ. ಇದು ಪೆಪ್ಟೈಡ್ಸ್, ಅಮೈನೋ ಆಮ್ಲಗಳು, ಲಿಪಿಡ್​ಳಂತಹ ಗುಣಗಳನ್ನು ಹೊಂದಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ ಒತ್ತಡ, ಆತಂಕ, ಖಿನ್ನತೆ ಮತ್ತು ನಿದ್ರಾಹೀನತೆಯನ್ನು ಕಡಿಮೆ ಮಾಡುತ್ತದೆ.

ಬ್ರಾಹ್ಮಿ ಬ್ರಾಹ್ಮಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆತಂಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಇದನ್ನು ಆಯುರ್ವೇದದಲ್ಲಿ ಬಳಸಲಾಗುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ಒತ್ತಡ ಮತ್ತು ಖಿನ್ನತೆಯನ್ನು ನಿವಾರಿಸುತ್ತದೆ. ಬ್ರಾಹ್ಮಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಮಧುಮೇಹ ಮತ್ತು ಕ್ಯಾನ್ಸರ್ ನಂತಹ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ತುಳಸಿ ಬೀಜಗಳು ತುಳಸಿ ಬೀಜಗಳಿಂದ ತಯಾರಿಸುವ ಕಷಾಯ ಕೆಮ್ಮು ಮತ್ತು ಶೀತದಿಂದ ಮುಕ್ತಿ ನೀಡುತ್ತದೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ತುಳಸಿ ಬೀಜಗಳಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳು, ವಿಟಮಿನ್ ಎ, ಬಿ, ಇ, ಕೆ, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಕಬ್ಬಿಣವಿದೆ. ಈ ಬೀಜಗಳಲ್ಲಿ ಫ್ಲೇವನಾಯ್ಡ್​ಗಳಿವೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ.

ಸೋಂಪು ಬೀಜಗಳು ಸೋಂಪು ಟ್ರಾನ್ಸ್ ಅನಾಥೋಲ್ ಅನ್ನು ಹೊಂದಿರುತ್ತದೆ. ಇದು ಅನೇಕ ರೀತಿಯ ಸೋಂಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೋಂಪಿನಿಂದ ತಯಾರಿಸಿದ ಕಷಾಯ ಕುಡಿಯುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಉರಿಯೂತ ಕಡಿಮೆಯಾಗುತ್ತದೆ. ಶ್ವಾಸನಾಳವನ್ನು ಸ್ವಚ್ಛಗೊಳಿಸುವಲ್ಲಿಯೂ ಸೋಂಪು ಪ್ರಮುಖ ಪಾತ್ರ ವಹಿಸುತ್ತದೆ. ಇದರಲ್ಲಿ ವಿಟಮಿನ್ ಎ, ಸಿ ಮತ್ತು ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದೆ.

ಗಸಗಸೆ ಗಸಗಸೆ ದೇಹವನ್ನು ಹೈಡ್ರೀಕರಿಸುವುದಕ್ಕೆ ಸಹಾಯ ಮಾಡುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿಯೂ ಉಪಯುಕ್ತವಾಗಿದೆ. ಇದರಲ್ಲಿ ಆಂಟಿಆಕ್ಸಿಡೆಂಟ್‌ಗಳು ಅಧಿಕವಾಗಿದ್ದು, ಸತು ಸಮೃದ್ಧವಾಗಿದೆ. ಗಸಗಸೆ ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:

Omega-3: ರೋಗನಿರೋಧಕ ಶಕ್ತಿ ಹೆಚ್ಚಿಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುವ ಒಮೆಗಾ-3 ಆಹಾರಗಳ ಬಗ್ಗೆ ತಿಳಿಯಿರಿ

ರಾತ್ರಿ ಊಟ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸ ಇದೆಯೇ? ಹಾಗಿದ್ದರೆ ಅದರಿಂದ ಉಂಟಾಗುವ ಸಮಸ್ಯೆ ಬಗ್ಗೆ ಗಮನಿಸಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್