Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಕಾಡುವ ಮಂಡಿನೋವಿನಿಂದ ಮುಕ್ತಿ ಪಡೆಯಲು ಈ ಕ್ರಮಗಳನ್ನು ಅನುಸರಿಸಿ

ಸಂಧಿವಾತದ ಸಮಸ್ಯೆ ಇರುವವರು ಚಳಿಗಾಲದಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಅಗತ್ಯವಾಗಿದೆ. ಸಹಿಸಲಾರದ ಮಂಡಿನೋವಿಗೆ ನೈಸರ್ಗಿಕ ಕ್ರಮಗಳನ್ನು ಅನುಸರಿಸಿದರೆ ಚಳಿಗಾಲದಲ್ಲಿಯೂ ನೋವಿನಿಂದ ಮುಕ್ತಿ ಪಡೆಯಬಹುದು.

ಚಳಿಗಾಲದಲ್ಲಿ ಕಾಡುವ ಮಂಡಿನೋವಿನಿಂದ ಮುಕ್ತಿ ಪಡೆಯಲು ಈ ಕ್ರಮಗಳನ್ನು ಅನುಸರಿಸಿ
ಸಾಂಕೇತಿಕ ಚಿತ್ರ
Follow us
TV9 Web
| Updated By: Pavitra Bhat Jigalemane

Updated on: Dec 22, 2021 | 3:11 PM

ಚಳಿಗಾಲದಲ್ಲಿ ದೇಹದಲ್ಲಿನ ಅನಾರೋಗ್ಯ ಸಮಸ್ಯೆಗಳು ತಲೆಯೆತ್ತುತ್ತವೆ. ಮಂಡಿನೋವು, ಸಂಧಿವಾತ ಸೇರಿದಂತೆ ಹಲವು ರೀತಿಯ ಸಮಸ್ಯೆಗಳು ಉಲ್ಬಣಗೊಳುತ್ತವೆ. ಮಂಡಿನೋವು ಚಳಿಗಾಲದಲ್ಲಿ ಕಾಡುವ ದೊಡ್ಡ ಸಮಸ್ಯೆಯಾಗಿದೆ. ಮೈ ನಡುಗುವ ಚಳಿಗೆ ಕಾಲಿನ ಗಂಟು ಇನ್ನಷ್ಟು ನೋವನ್ನು ನೀಡುತ್ತದೆ. ಹೀಗಾಗಿ ಸಂಧಿವಾತದ ಸಮಸ್ಯೆ ಇರುವವರು ಚಳಿಗಾಲದಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಅಗತ್ಯವಾಗಿದೆ. ಸಹಿಸಲಾರದ ಮಂಡಿನೋವಿಗೆ ನೈಸರ್ಗಿಕ ಕ್ರಮಗಳನ್ನು ಅನುಸರಿಸಿದರೆ ಚಳಿಗಾಲದಲ್ಲಿಯೂ ನೋವಿನಿಂದ ಮುಕ್ತಿ ಪಡೆಯಬಹುದು. ಈ ಕ್ರಮಗಳನ್ನು ಅನುಸರಿಸಿದರೆ ಚಳಿಗಾಲದಲ್ಲಿ ಕಾಡುವ ಮಂಡಿನೋವಿಗೆ ಪರಿಹಾರ ಕಂಡುಕೊಳ್ಳಬಹುದು.

ಆರೋಗ್ಯಕರ ಮೈತೂಕ ಕಾಪಾಡಿಕೊಳ್ಳುವುದು ನಿಮ್ಮ ದೇಹದ ಅತಿಯಾದ ತೂಕ ನಿಮ್ಮ ಮಂಡಿನೋವಿನ ಸಮಸ್ಯೆಯನ್ನು ಹೆಚ್ಚು ಮಾಡುತ್ತದೆ. ಹೀಗಾಗಿ ಸದಾಕಾಲ ದೇಹದ ತೂಕವನ್ನು ಸರಿಯಾದ ಪ್ರಮಾಣದಲ್ಲಿ ಕಾಪಾಡಿಕೊಳ್ಳುವತ್ತ ಗಮನಹರಿಸಿ. ಚಳಿಯೆಂದು ಮೈಮರೆತು ಫಾಸ್ಟ್​ಫುಡ್​, ಸಿಹಿ ಪದಾರ್ಥವನ್ನು ಅತಿಯಾಗಿ ಸೇವಿಸಬೇಡಿ. ಇದು ನಿಮ್ಮ ದೇಹದ ತೂಕ ಹೆಚ್ಚಿಸಿ ಮಂಡಿಯ ಮೇಲೆ ಭಾರವನ್ನು ಅಧಿಕಗೊಳಿಸುತ್ತದೆ. ಇದರಿಂದ ಚಳಿಗೆ ನೋವು ಅತಿಯೆನಿಸಿ ಹಿಂಸೆ ನೀಡಬಹುದು.

ವಿಟಮಿನ್​ ಡಿ ಪೂರೈಸಿ ದೇಹದ ಸ್ನಾಯುಗಳ ಬಲವರ್ಧನೆಗೆ ವಿಟಮಿನ್​ ಡಿ ಅವಶ್ಯಕವಾಗಿದೆ. ವಿಟಮಿನ್​ ಡಿ ಸೂರ್ಯನ ಕಿರಣಗಳಿಂದ ಹೆಚ್ಚು ಸಿಗುವ ಕಾರಣ ಬೆಳಗ್ಗಿನ ಎಳೆ ಕಿರಣಗಳಿಗೆ ನಿಮ್ಮ ದೇಹವನ್ನು ಒಡ್ಡಿಕೊಳ್ಳಿ. ಇದರಿಂದ ನಿಮ್ಮ ದೇಹದ ಭಾಗಗಳು ಬಲವಾಗುತ್ತದೆ. ಮೂಳೆಗಳ ಬೆಳವಣಿಗೆಗೂ ಉತ್ತಮವಾಗುವುದರಿಂದ ಆದಷ್ಟು ಬೆಳಗ್ಗೆ 9 ಗಂಟೆಯೊಳಗಿನ ಬಿಸಿಲಿನಲ್ಲಿ ಓಡಾಡಿ.

ನಿಯಮಿತ ವ್ಯಾಯಾಮ ನಿಯಮಿತ ವ್ಯಾಯಾಮ ನಿಮ್ಮ ದೇಹವನ್ನು ಆರೋಗ್ಯಯುತವಾಗಿಡುವಂತೆ ಮಾಡುತ್ತದೆ. ಹೀಗಾಗಿ ಸರಳ ಆಸನಗಳನ್ನಾದರೂ ಮಾಡಿ. ಆದರೆ ನಿಮ್ಮ ಮಂಡಿಗೆ ಆರಾಮ ಎನಿಸುವ ಯೋಗಾಸನಗಳನ್ನು ರೂಡಿಸಿಕೊಳ್ಳಿ. ಇದರಿಂದ ನಿಮ್ಮ ದೇಹದಲ್ಲಿರುವ ಅತಿಯಾದ ಬೊಜ್ಜು ಹಾಗೂ ಕೊಬ್ಬಿನ ಅಂಶ ಕರಗಿ ಮಂಡಿನೋವು ಬರದಂತೆ ತಡೆಯುತ್ತದೆ.

ಥೆರಪಿ ಪಡೆದುಕೊಳ್ಳಿ ಮಂಡಿನೋವು ಚಳಿಗಾಲದಲ್ಲಿ ಅತಿಯಾಗಿ ಕಾಡುವುದು ಸಾಮಾನ್ಯ ಹೀಗಾಗಿ ನೀವು ಥೆರಪಿಯನ್ನು ಪಡೆದುಕೊಳ್ಳಬಹುದು. ಬಿಸಿ ಎಣ್ಣೆಯ ಮಸಾಜ್​, ಬಿಸಿ ನೀರಿನ ಶಾಖ, ಆಯರ್ವೇದ ಚಿಕಿತ್ಸೆ, ಆಕ್ಯೂಪಂಕ್ಚರ್ ಗಳಂತಹ ಥೆರಪಿಯನ್ನು ಪಡೆದುಕೊಳ್ಳಬಹುದು.

ಗ್ರೀನ್​ ಟೀ ಸೇವಿಸಿ ಗ್ರೀನ್​ ಟೀ ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಚಳಿಗಾಲದಲ್ಲಿ ನಿಮ್ಮ ದೇಹವನ್ನು ಬೆಚ್ಚಗಿರಿಸಲು ಸಹಾಯ ಮಾಡುತ್ತದೆ. ಇದರಿಂದ ಮಂಡಿನೋವಿನಂತಹ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ. ಗ್ರೀನ್​ ಟೀ ಕಾರ್ಟಿಲೇಜ್​ ಮತ್ತಷ್ಟು ಹದಗೆಡುವುದನ್ನು ತಡೆಗಟ್ಟಿ ಮಂಡಿಯ ಸ್ವಾಸ್ಥ್ಯವನ್ನು ಕಾಪಾಡುತ್ತದೆ.

ಆಹಾರದ ಆಯ್ಕೆ ಬಗ್ಗೆ ಗಮನವಿರಲಿ ಬಾಯಿಗೆ ರುಚಿ ಎಂದು ತಿನ್ನುವ ಕೆಲವು ಆಹಾರಗಳು ನಿಮ್ಮ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತವೆ. ನಿಮ್ಮ ಮಂಡಿಗಳಲ್ಲಿ ಊತ ಕಾಣಿಸಿಕೊಂಡು ನೋವು ಅತಿಯಾಗಲು ಎಡೆಮಾಡಿಕೊಡಬಹುದು. ಹೀಗಾಗಿ ಚಳಿಗಾಲದಲ್ಲಿ ಆಹಾರದ ಆಯ್ಕೆ ಬಗ್ಗೆ ಎಚ್ಚರವಿರಲಿ. ಅತಿಯಾದ ಸಕ್ಕರೆ ಅಂಶವಿರುವ ಸಿಹಿ ಪದಾರ್ಥ, ಮಟನ್​ ಅಥವಾ ಚಿಕನ್​ಗಳ ಬಳಕೆ ಕಡಿಮೆಯಿರಲಿ.

ಇದನ್ನೂ ಓದಿ:

Brinjal Benefits: ಬದನೆಕಾಯಿ ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ಒಮ್ಮೆ ಗಮನಿಸಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್