AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eye Health: ನಿಮ್ಮ ದೃಷ್ಟಿ ಕ್ಷೀಣಿಸುತ್ತಿದೆಯೇ? ಕಣ್ಣುಗಳ ಆರೋಗ್ಯ ಸುರಕ್ಷತೆಗೆ ಇಲ್ಲಿವೆ ಸಲಹೆಗಳು

ಬೆಳಿಗ್ಗೆ ಹಾಸಿಗೆಯಿಂದ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ನಮ್ಮ ಕಣ್ಣುಗಳು ಸಕ್ರಿವಾಗಿ ಕೆಲಸದಲ್ಲಿರುತ್ತದೆ. ಕಣ್ಣಿಗೆ ಹೆಚ್ಚು ಒತ್ತಡ ಬಿದ್ದಂತೆಯೇ ಕಣ್ಣುಗಳ ಆರೋಗ್ಯ ಹದಗೆಡುತ್ತದೆ. ಹೀಗಿರುವಾಗ ನೀವು ಕಣ್ಣಿನ ಆರೋಗ್ಯ ಸುಧಾರಿಸಿಕೊಳ್ಳಲು ಕೆಲವು ಸಲಹೆಗಳನ್ನು ಪಾಲಿಸಬೇಕಾದುದು ಅನಿವಾರ್ಯ.

Eye Health: ನಿಮ್ಮ ದೃಷ್ಟಿ ಕ್ಷೀಣಿಸುತ್ತಿದೆಯೇ? ಕಣ್ಣುಗಳ ಆರೋಗ್ಯ ಸುರಕ್ಷತೆಗೆ ಇಲ್ಲಿವೆ ಸಲಹೆಗಳು
ಸಂಗ್ರಹ ಚಿತ್ರ
Follow us
TV9 Web
| Updated By: shruti hegde

Updated on: Nov 22, 2021 | 8:08 AM

ಈಗೆಲ್ಲಾ ಜನರು ಲ್ಯಾಪ್ಟಾಪ್, ಮೊಬೈಲ್​ಗಳಿಗೆ ಅತಿಹೆಚ್ಚು ಅಂಟಿಕೊಂಡಿದ್ದಾರೆ. ಹೀಗಿರುವಾಗ ಅತಿಯಾಗಿ ದೂರದರ್ಶನ, ಮೊಬೈಲ್​ಗಳನ್ನು ಬಳಸುವುದರಿಂದ ಕಣ್ಣಿನ ಆರೋಗ್ಯ ಹದಗೆಡುತ್ತಿದೆ. ಹೆಚ್ಚಿನ ಜನರಿಗೆ ದೃಷ್ಟಿ ಸಮಸ್ಯೆ ಚಿಕ್ಕ ವಯಸ್ಸಿನಲ್ಲಿರುವಾಗಲೇ ಕಾಣಿಸಿಕೊಳ್ಳುತ್ತಿದೆ ಎಂಬುದು ಮುಖ್ಯವಾಗಿ ಗಮನಿಸಬೇಕಾದ ಸಂಗತಿ. ಬೆಳಿಗ್ಗೆ ಹಾಸಿಗೆಯಿಂದ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ನಮ್ಮ ಕಣ್ಣುಗಳು ಸಕ್ರಿವಾಗಿ ಕೆಲಸದಲ್ಲಿರುತ್ತದೆ. ಕಣ್ಣಿಗೆ ಹೆಚ್ಚು ಒತ್ತಡ ಬಿದ್ದಂತೆಯೇ ಕಣ್ಣುಗಳ ಆರೋಗ್ಯ ಹದಗೆಡುತ್ತದೆ. ಹೀಗಿರುವಾಗ ನೀವು ಕಣ್ಣಿನ ಆರೋಗ್ಯ ಸುಧಾರಿಸಿಕೊಳ್ಳಲು ಕೆಲವು ಸಲಹೆಗಳನ್ನು ಪಾಲಿಸಬೇಕಾದುದು ಅನಿವಾರ್ಯ.

ನಮ್ಮ ಕಣ್ಣುಗಳು ಆರೋಗ್ಯವಾಗಿರಲು ನೈಸರ್ಗಿಕ ಬೆಳಕು ಬಹಳ ಮುಖ್ಯ. ಸೂರ್ಯನ ನೈಸರ್ಗಿಕ ಬೆಳಕಿನಲ್ಲಿ ಕಡಿಮೆ ಸಮಯ ಕಳೆಯುವುದರಿಂದ ದೃಷ್ಟಿ ಸಮಸ್ಯೆ ಕಾಡುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಹೀಗಿರುವಾಗ ಕಣ್ಣಿನ ಆರೋಗ್ಯ ಸುರಕ್ಷತೆಗೆ ನೀವು ಪಾಲಿಸಬೇಕಾದ ಕೆಲವು ಸಮಹೆಗಳು ಈ ಕೆಳಗಿನಂತಿವೆ;

ಸರಿಯಾಗಿ ಆಹಾರ ಸೇವಿಸಿ ನೀವು ವಿಟಮಿನ್ ಎ ಸಮೃದ್ಧವಾಗಿರುವ ಆರೋಗ್ಯಕರ ಆಹಾರ ಮತ್ತು ಸಮತೋಲಿತ ಆಹಾರವನ್ನು ಸೇವಿಸಿ. ನೀವು ಸೇವಿಸುವ ಆಹಾರ ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯಕವಾಗಿದೆ. ತಾಜಾ ಹಣ್ಣುಗಳು, ತರಕಾರಿಗಳು ಹೀಗೆ ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ನಿಮ್ಮ ಒಟ್ಟಾರೆ ಆರೋಗ್ಯಕ್ಕೂ ಒಳ್ಳೆಯದು.

ಹಾನಿಕಾರಕ ಬೆಳಕಿನಿಂದ ದೂರವಿರಿ ಹಾನಿಕಾರಕ ವಿಕಿರಣಗಳು ಅಥವಾ ಬೆಳಕು, ಹಾನಿಕಾರಕ ಕೃತಕ ದೀಪಗಳಿಂದ ದೂರವಿರಿ. ಅಂತಹ ದೀಪಗಳನ್ನು ನೇರವಾಗಿ ನೋಡುವುದನ್ನು ತಪ್ಪಿಸಿ.

ಸೂರ್ಯನ ಬೆಳಕು ಸೂರ್ಯನ ಬೆಳಕು ನೈಸರ್ಗಿಕ ಮೂಲವಾಗಿದೆ. ಆರೋಗ್ಯಕರ ಪ್ರಮಾಣದ ಸೂರ್ಯನ ಕಿರಣಗಳು ಕಣ್ಣುಗಳಿಗೆ ಒಳ್ಳೆಯದು, ಸೂರ್ಯನನ್ನು ನೇರವಾಗಿ ನೋಡುವುದನ್ನು ಆದಷ್ಟು ತಪ್ಪಿಸಿ.

ಕೃತಕ ಬೆಳಕು ನಾವೆಲ್ಲರೂ ಹೆಚ್ಚಾಗಿ ಕೃತಕ ಬೆಳಕಿಗೆ ಹೊಂದಿಕೊಂಡಿರುತ್ತೇವೆ. ದಿನದಲ್ಲಿ ಅತಿಹೆಚ್ಚು ಸಮಯ ಕೃತಕ ಬೆಳಕಿಗೆ ಒಗ್ಗಿಕೊಳ್ಳುತ್ತೇವೆ. ಟಿವಿ, ಮೊಬೈಲ್, ಲ್ಯಾಪ್ಟಾಪ್ ಜೊತೆಗೆ ಬಲ್ಬ್, ಟ್ಯೂಬ್ಲೈಟ್​ಗಳನ್ನು ಬಳಸುತ್ತೇವೆ. ದೀರ್ಘಕಾಲದವರೆಗೆ ಕೃತಕ ಬೆಳಕಿಗೆ ಒಗ್ಗಿಕೊಳ್ಳುವುದರಿಂದ ಕಣ್ಣುಗಳ ಆರೋಗ್ಯಕ್ಕೆ ನಕಾರಾತ್ಮಕ ಪರಿಣಾಮ ಬೀರಬಹುದಾದ ಸಾಧ್ಯತೆಗಳು ಹೆಚ್ಚಾಗಿರತ್ತದೆ.

ಧೂಮಪಾನವನ್ನು ತ್ಯಜಿಸಿ ಧೂಮಪಾನವು ನಿಮ್ಮ ದೃಷ್ಟಿ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಮಧುಮೇಹ ಸಂಬಂಧಿದ ದೃಷ್ಟಿ ಸಮಸ್ಯೆ ಹೆಚ್ಚಾಗಲು ಧೂಮಪಾನ ಕಾರಣವಾಗುತ್ತದೆ. ಹಾಗಾಗಿ ಧೂಮಪಾನ ಅಭ್ಯಾಸವಿದ್ದರೆ ಇಂದಿನಿಂದಲೇ ಬಿಟ್ಟುಬಿಡಿ.

ಇದನ್ನೂ ಓದಿ:

Eye Care: ಸುಡುವ ಬಿಸಿಲಿನಲ್ಲಿ ನಿಮ್ಮ ಕಣ್ಣುಗಳ ಆರೋಗ್ಯ ರಕ್ಷಣೆ ಹೇಗೆ? ಇಲ್ಲಿದೆ ತಜ್ಞರ ಸಲಹೆಗಳು

Kidney Donor Required : ‘ಒಂದು ಕಿಡ್ನಿ ಸಾಕು ನನ್ನ ಹುಟ್ಟನ್ನು ಸಾರ್ಥಕಗೊಳಿಸಿ ತೋರಿಸುತ್ತೇನೆ’

ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ