AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಡದಿಂದ ಮುಕ್ತರಾಗುವುದು ಹೇಗೆ? ಈ ಬಗ್ಗೆ ಡಾ. ಸುಧೀರ್ ಕುಮಾರ್ ಏನ್‌ ಹೇಳ್ತಾರೆ?

ಬಹುತೇಕರನ್ನು ಕಾಡುವ ಸಮಸ್ಯೆಗಳಲ್ಲಿ ಒತ್ತಡ ಕೂಡ ಒಂದು. ಈ ಸಮಸ್ಯೆಯೂ ವ್ಯಕ್ತಿಗಿಂತ ವ್ಯಕ್ತಿಗೆ ಭಿನ್ನವಾಗಿದ್ರು ಕೂಡ ಇದು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನೀವು ಸದಾ ಸಂತೋಷವಾಗಿರಲು ಹಾಗೂ ಈ ಒತ್ತಡದಿಂದ ಮುಕ್ತರಾಗುವುದು ಹೇಗೆ? ಎಂಬ ಬಗ್ಗೆ ತಜ್ಞರು ಏನ್ ಹೇಳ್ತಾರೆ, ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಒತ್ತಡದಿಂದ ಮುಕ್ತರಾಗುವುದು ಹೇಗೆ? ಈ ಬಗ್ಗೆ ಡಾ. ಸುಧೀರ್ ಕುಮಾರ್ ಏನ್‌ ಹೇಳ್ತಾರೆ?
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Aug 17, 2025 | 6:44 PM

Share

ಒತ್ತಡ (stress) ಯಾರಿಗೆ ಇಲ್ಲ ಹೇಳಿ, ಪ್ರತಿಯೊಬ್ಬರಿಗೂ ತಮ್ಮದೇ ಆದ ಮಾನಸಿಕ ಒತ್ತಡಗಳಿರುತ್ತವೆ. ಮಿತಿ ಮೀರಿದರೆ ಈ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಕಾರಣ, ಧ್ಯಾನ, ಯೋಗ ಮತ್ತು ಇತರ ಹಲವು ಒತ್ತಡ ನಿರ್ವಹಣೆ ತಂತ್ರಗಳನ್ನು ಅಳವಡಿಸಿಕೊಂಡು ದಿನನಿತ್ಯದ ಕೆಲಸವನ್ನು ಸುಗಮವಾಗಿಸಿಕೊಳ್ಳುವುದು ಅಗತ್ಯ. ಆದರೆ ಈ ಒತ್ತಡ ನಿರ್ವಹಣೆಯ ಬಗ್ಗೆ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ಡಾ. ಸುಧೀರ್ ಕುಮಾರ್ ಎಂಡಿ, ಡಿಎಂ (Dr. Sudheer Kumar MD DM) ಅವರು ಪೋಸ್ಟ್ ಹಂಚಿಕೊಂಡಿದ್ದು, ಈ ಸಮಸ್ಯೆಯಿಂದ ಹೊರಬರುವುದು ಹೇಗೆ ಎಂದು ವಿವರಿಸಿದ್ದಾರೆ. ಹಾಗಾದರೆ ಒತ್ತಡ ನಿರ್ವಹಣೆಯ ಬಗ್ಗೆ ವೈದ್ಯರು ಏನ್ ಹೇಳ್ತಾರೆ, ಈ ಕುರಿತಾದ ಮಾಹಿತಿ ಇಲ್ಲಿದೆ.

@Hyderbad doctor ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾದ ವಿಡಿಯೋದಲ್ಲಿ ಒತ್ತಡದಿಂದ ಮುಕ್ತರಾಗುವುದು ಹೇಗೆ ಎಂದು ವಿವರಿಸಿದ್ದು ಹತ್ತು ಸಲಹೆಗಳನ್ನು ಡಾ. ಸುಧೀರ್ ಕುಮಾರ್ ನೀಡಿದ್ದಾರೆ. ಈ ಸಲಹೆಗಳು ಈ ಕೆಳಗಿವೆ.

ಇದನ್ನೂ ಓದಿ
Image
ಕೀಲುನೋವಿಗೆ ಆಯುರ್ವೇದ ತೈಲ; ಬಳಕೆ ವಿಧಾನ ಹೀಗೆ
Image
ಸಂಧಿವಾತದಿಂದ ಮುಕ್ತಿ ಸಿಗಬೇಕು ಅಂದ್ರೆ ಈ ಅಭ್ಯಾಸವನ್ನು ತಪ್ಪದೆ ಪಾಲಿಸಿ
Image
ನಿಮಗೆ ಥೈರಾಯ್ಡ್ ಇದೆಯೇ? ಹಾಗಿದ್ರೆ ಈ ಆಹಾರಗಳ ಸೇವನೆ ವಿಷಕ್ಕೆ ಸಮಾನ
Image
ಹಾಲು ಕುಡಿದ ನಂತರ ಈ ಆಹಾರಗಳನ್ನು ಅಪ್ಪಿತಪ್ಪಿಯೂ ಸೇವಿಸಬೇಡಿ
  • ವ್ಯಾಯಾಮ, ನಡಿಗೆ ಅಥವಾ ಯೋಗದಂತಹ ಚಟುವಟಿಕೆಯಲ್ಲಿ ತೊಡಗಿಕೊಳ್ಳಿ: ಪ್ರತಿದಿನ 20 ರಿಂದ 30 ನಿಮಿಷಗಳ ಕಾಲ ಈ ಚಟುವಟಿಕೆಗಳು ಎಂಡಾರ್ಫಿನ್ ಗಳನ್ನು ಹೆಚ್ಚಿಸಿ, ಕಾರ್ಟಿಸೋಲ್ ಅನ್ನು ಕಡಿಮೆ ಮಾಡಿ ಮಾನಸಿಕ ಸ್ಥಿತಿಯನ್ನು ಸುಧಾರಿಸುತ್ತದೆ.

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

  • ಕೃತಜ್ಞತೆ ಸಲ್ಲಿಸುವ ಅಭ್ಯಾಸವಿರಲಿ: ನೀವು ಯಾರಿಗಾದರೂ ಕೃತಜ್ಞತೆ ಸಲ್ಲಿಸುವ ಅಭ್ಯಾಸ ಬೆಳೆಸಿಕೊಳ್ಳಿ. ದಿನದ ಎರಡು ಮೂರು ವಿಷಯಗಳನ್ನು ಬರೆದಿಡುವ ಅಭ್ಯಾಸವು ನಿಮ್ಮ ಮೆದುಳನ್ನು ಸಕಾರಾತ್ಮಕ ಭಾವನೆಯನ್ನು ಹೆಚ್ಚಿಸುತ್ತದೆ.
  • ಜನರೊಂದಿಗೆ ಬೆರೆಯಿರಿ: ಕುಟುಂಬ, ಸ್ನೇಹಿತರೊಂದಿಗೆ ಸಮಯ ಕಳೆಯುವುದು. ಸಣ್ಣ ಪುಟ್ಟ ಮಾತುಕಥೆಗಳು ಒತ್ತಡದ ಹಾರ್ಮೋನುಗಳನ್ನು ಕಡಿಮೆ ಮಾಡುತ್ತದೆ.
  • ದೀರ್ಘ ಉಸಿರಾಟ ತೆಗೆದುಕೊಳ್ಳಿ: ದಿನದ 5–10 ನಿಮಿಷಗಳ ಧ್ಯಾನ, ಪ್ರಾರ್ಥನೆ ಅಥವಾ ನಿಮ್ಮ ಉಸಿರಾಟದ ಮೇಲೆ ಕೇಂದ್ರೀಕರಿಸುವುದು ಬಹಳ ಮುಖ್ಯ. ಇದು ಮನಸ್ಸನ್ನು ಶಾಂತಗೊಳಿಸಿ, ಆತಂಕವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.
  • ಚೆನ್ನಾಗಿ ನಿದ್ರಿಸಿ : ದಿನಕ್ಕೆ 7–9 ಗಂಟೆಗಳ ಗುಣಮಟ್ಟದ ನಿದ್ರೆಯೂ ಒತ್ತಡ, ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ.
  • ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಿ : ಸಾಕಷ್ಟು ಹಣ್ಣುಗಳು, ತರಕಾರಿಗಳು, ಪ್ರೋಟೀನ್ ಮತ್ತು ಒಮೆಗಾ-೩ ಸೇರಿದಂತೆ ಸಮತೋಲಿತ ಆಹಾರ ಸೇವಿಸಿ, ಇದರಿಂದ ಮನಸ್ಥಿತಿಯೂ ಸುಧಾರಿಸುತ್ತದೆ.
  •  ಅರ್ಥಪೂರ್ಣವಾದ ಕೆಲಸದಲ್ಲಿ ತೊಡಗಿಸಿಕೊಳ್ಳಿ: ವಿವಿಧ ಕೆಲಸ, ಹವ್ಯಾಸಗಳು, ಸೃಜನಶೀಲ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸಂತೋಷವು ಹೆಚ್ಚಾಗಿ ಒತ್ತಡವೂ ಕಡಿಮೆಯಾಗಲು ಸಾಧ್ಯ.
  •  ಹೊರಾಂಗಣ ಅಥವಾ ಪ್ರಕೃತಿಯೊಂದಿಗೆ ಸಮಯ ಕಳೆಯಿರಿ: ಬೆಳಗಿನ ಸೂರ್ಯನ ಬೆಳಕು, ಹಚ್ಚ ಹಸಿರಿನ ವಾತಾವರಣವು ಆತಂಕವನ್ನು ಕಡಿಮೆ ಮಾಡುತ್ತದೆ, ಮಾನಸಿಕ ಸ್ಥಿತಿಯನ್ನು ಸುಧಾರಿಸುತ್ತದೆ.
  •  ಪರದೆಯ ಸಮಯವನ್ನು ಕಡಿಮೆಗೊಳಿಸಿ: ಮೊಬೈಲ್‌, ಸೋಶಿಯಲ್‌ ಮೀಡಿಯಾದ ಬಳಕೆಯನ್ನು ಕಡಿಮೆಗೊಳಿಸಿ. ಹೆಚ್ಚು ಮೊಬೈಲ್ ಬಳಕೆಯೂ ಆತಂಕ ಹಾಗೂ ಒತ್ತಡವನ್ನು ಹೆಚ್ಚಿಸುತ್ತದೆ. ಹೀಗಾಗಿ ಮಲಗುವ 1 ಗಂಟೆ ಮೊದಲು ಗಂಟೆಗೂ ಮುನ್ನ ಮೊಬೈಲ್ ಬಳಸುವುದನ್ನು ತಪ್ಪಿಸಿ.
  • ಹೆಚ್ಚು ನಗುತ್ತಾ ಇರಿ: ಹಾಸ್ಯ, ಸಂಗೀತ ಅಥವಾ ತಮಾಷೆಯ ಚಟುವಟಿಕೆಗಳು ಮನಸ್ಸನ್ನು ಹಗುರಗೊಳಿಸುತ್ತದೆ. ಹಾಗೂ ಹೃದಯದ ಆರೋಗ್ಯವನ್ನು ಸುಧಾರಿಸುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ಆತಂಕ, ಒತ್ತಡಕ್ಕೆ ಈ ಎಲೆ ಪರಿಹಾರ

ನೀವು ತಪ್ಪಿಸಬೇಕಾದ ವಿಚಾರಗಳು ಇವು

  •  ಹೆಚ್ಚು ಕಾಫಿ ಕುಡಿಯುವುದು.
  •  “ಇಲ್ಲ” ಎಂದು ಹೇಳದೆ ಬೇರೆಯವರಿಗೆ ಅತಿಯಾಗಿ ಬದ್ಧರಾಗುವುದು ಬೇಡ. “ಇಲ್ಲ” ಎಂದು ಹೇಳಲು ಕಲಿಯಿರಿ.
  •  ನಿಮ್ಮನ್ನು ನಿರಂತರವಾಗಿ ಇತರರೊಂದಿಗೆ ಹೋಲಿಸಿಕೊಳ್ಳುವುದು. ಬೇರೆಯರಿಂದ ಸ್ಫೂರ್ತಿ ಪಡೆಯಿರಿ, ಆದರೆ ಹೋಲಿಕೆ ಕೀಳರಿಮೆಯನ್ನು ತಪ್ಪಿಸಬೇಕು.
  • ದ್ವೇಷ ಸಾಧಿಸುವುದು ಅಥವಾ ನಕಾರಾತ್ಮಕ ವಿಷಯಗಳ ಬಗ್ಗೆ ಯೋಚಿಸುವುದು. “ಕ್ಷಮಿಸಲು ಮತ್ತು ಮರೆಯಲು” ಕಲಿಯಿರಿ ಎಂದು ಹೇಳುತ್ತಾರೆ ವೈದ್ಯರು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ