AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆ ಕಾಲದಲ್ಲಿ ಬಾಳೆಹಣ್ಣು ಕಪ್ಪು ಬಣ್ಣಕ್ಕೆ ತಿರುಗದೆ, ತಾಜಾವಾಗಿಡಲು ಈ ಸಲಹೆಗಳನ್ನು ಅನುಸರಿಸಿ

ಬಾಳೆಹಣ್ಣನ್ನು ಹೆಚ್ಚು ದಿನ ಸಂಗ್ರಹಿಸಿಡಲು ಆಗುವುದಿಲ್ಲ. ಹಣ್ಣುಗಳು ಬೇಗನೆ ಹಾಳಾಗುತ್ತವೆ. ಹೆಚ್ಚಿನ ತಾಪಮಾನದಿಂದಾಗಿ ಬಾಳೆಹಣ್ಣು ತ್ವರಿತವಾಗಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಕೊಳೆಯಲು ಪ್ರಾರಂಭಿಸುತ್ತದೆ. ಕೊನೆಗೆ ಅದನ್ನು ಬಿಸಾಡುವುದನ್ನು ಬಿಟ್ಟು ಬೇರೆ ಆಯ್ಕೆ ಇರುವುದಿಲ್ಲ.

ಬೇಸಿಗೆ ಕಾಲದಲ್ಲಿ ಬಾಳೆಹಣ್ಣು ಕಪ್ಪು ಬಣ್ಣಕ್ಕೆ ತಿರುಗದೆ, ತಾಜಾವಾಗಿಡಲು ಈ ಸಲಹೆಗಳನ್ನು ಅನುಸರಿಸಿ
ಬೇಸಿಗೆ ಕಾಲದಲ್ಲಿ ಬಾಳೆಹಣ್ಣನ್ನು ತಾಜಾವಾಗಿಡಲು ಈ ಸಲಹೆಗಳನ್ನು ಅನುಸರಿಸಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 31, 2023 | 4:24 PM

Share

ಬಾಳೆಹಣ್ಣು ವರ್ಷವಿಡೀ ಲಭ್ಯವಿರುವ ಅಪರೂಪದ ಹಣ್ಣು! ಅದಕ್ಕಾಗಿಯೇ ಅನೇಕ ಜನರ ಮನೆಯಲ್ಲಿ ಯಾವುದೇ ಹಣ್ಣುಗಳಿಲ್ಲ ಅಂದರೂ ಬಾಳೆಹಣ್ಣು ಕಂಡುಬರುತ್ತದೆ. ಬಾಳೆಹಣ್ಣುಗಳು ಅಗ್ಗವಾಗಿದ್ದು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ವಾತಾವರಣ ತಂಪಾಗಿರುವಾಗ ಮತ್ತು ಶೀತ ಮತ್ತು ಜ್ವರದಿಂದ ಬಳಲುತ್ತಿರುವಾಗ ಬಾಳೆಹಣ್ಣು ತಿನ್ನಬಾರದು ಎಂದು ವೈದ್ಯರು ಹೇಳುತ್ತಾರೆ. ಆದರೆ ಕೆಲವರು ಡಜನ್ ಗಟ್ಟಲೆ ಬಾಳೆಹಣ್ಣು ಖರೀದಿಸುತ್ತಾರೆ. ಅನೇಕರಿಗೆ ಪ್ರತಿದಿನ ಬಾಳೆಹಣ್ಣು ತಿನ್ನುವ ಅಭ್ಯಾಸವಿದೆ. ಆದರೆ ಈ ಬೇಸಿಗೆಯಲ್ಲಿ ಬಾಳೆಹಣ್ಣುಗಳು ಬೇಗನೆ ಬಣ್ಣ ಬದಲಾಯಿಸುತ್ತವೆ. ಅವು ಕಪ್ಪಾಗುತ್ತವೆ ಮತ್ತು ಒಂದೆರಡು ದಿನದಲ್ಲಿಯೇ ಹಾಳಾಗುತ್ತವೆ. ಬಾಳೆಹಣ್ಣುಗಳನ್ನು ತಾಜಾವಾಗಿಡಲು ಮತ್ತು ಬಣ್ಣ ಕಪ್ಪಾಗುವುದನ್ನು ತಡೆಯಲು ಈ ಸಲಹೆಗಳನ್ನು ಅನುಸರಿಸಿ.

ಈಗ ಬೇಸಿಗೆ ಕಾಲವಾಗಿರುವುದರಿಂದ ಬಾಳೆಹಣ್ಣನ್ನು ಹೆಚ್ಚು ದಿನ ಸಂಗ್ರಹಿಸಿಡಲು ಆಗುವುದಿಲ್ಲ. ಹಣ್ಣುಗಳು ಬೇಗನೆ ಹಾಳಾಗುತ್ತವೆ. ಹೆಚ್ಚಿನ ತಾಪಮಾನದಿಂದಾಗಿ ಬಾಳೆಹಣ್ಣು ತ್ವರಿತವಾಗಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಕೊಳೆಯಲು ಪ್ರಾರಂಭಿಸುತ್ತದೆ. ಕೊನೆಗೆ ಅದನ್ನು ಬಿಸಾಡುವುದನ್ನು ಬಿಟ್ಟು ಬೇರೆ ಆಯ್ಕೆ ಇರುವುದಿಲ್ಲ. ಇಷ್ಟು ಹಣ ಖರ್ಚು ಮಾಡಿದ ಬಾಳೆಹಣ್ಣನ್ನು ಬಿಸಾಡಲು ಯಾರೂ ಇಷ್ಟಪಡುವುದಿಲ್ಲ. ಅದಕ್ಕಾಗಿ ಬಾಳೆಹಣ್ಣನ್ನು ಬಿಸಾಡದೆ ತಾಜಾವಾಗಿ ಇಡುವುದು ಹೇಗೆ ಎಂದು ತಿಳಿಯಿರಿ.

ಬಾಳೆಹಣ್ಣನ್ನು ಪ್ರತ್ಯೇಕವಾಗಿ ಇರಿಸಿ: ಅನೇಕ ಜನರು ಇತರ ಹಣ್ಣುಗಳೊಂದಿಗೆ ಬಾಳೆಹಣ್ಣನ್ನು ಒಟ್ಟಿಗೆ ಇಡುವ ಅಭ್ಯಾಸವನ್ನು ಹೊಂದಿರುತ್ತಾರೆ. ಅದನ್ನು ಮೊದಲು ಬದಲಾಯಿಸಬೇಕು. ಬಾಳೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡಲು ಇತರ ಹಣ್ಣುಗಳೊಂದಿಗೆ ಸಂಗ್ರಹಿಸಿಡಬಾರದು. ಬಾಳೆಹಣ್ಣುಗಳನ್ನು ನೇತು ಹಾಕಬೇಕು. ಅಂಗಡಿಗಳಲ್ಲಿ ಬಾಳೆಹಣ್ಣು ನೇತಾಡುವುದನ್ನು ನೀವು ನೋಡಿರಬಹುದು. ಬಾಳೆಹಣ್ಣುಗಳನ್ನು ಅವುಗಳ ಕಾಂಡಗಳೊಂದಿಗೆ ಪ್ರತ್ಯೇಕ ಸ್ಟ್ಯಾಂಡ್‌ಗಳಲ್ಲಿ ಇಡಬೇಕು. ಹೀಗೆ ಮಾಡುವುದರಿಂದ ಬಾಳೆಹಣ್ಣುಗಳು 4-5 ದಿನಗಳವರೆಗೆ ಕೆಡದೆ ತಾಜಾವಾಗಿರುತ್ತವೆ.

ವಿನೇಗರ್​​ ಹಾಕಿ ತೊಳೆಯಿರಿ: ಬಾಳೆಹಣ್ಣುಗಳು ಬೇಗನೆ ಹಾಳಾಗುವುದನ್ನು ತಡೆಯಲು ಅಡುಗೆ ವಿನೆಗರ್‌ನೊಂದಿಗೆ ತೊಳೆಯಬೆಕು ಎಂದು ಪೌಷ್ಟಿಕ ತಜ್ಞರು ಸಲಹೆ ನೀಡುತ್ತಾರೆ. ನೀವೂ ಈ ಟ್ರಿಕ್ ಅನ್ನು ಪ್ರಯತ್ನಿಸಲು ಬಯಸಿದರೆ ಬಾಳೆಹಣ್ಣನ್ನು ವಿನೆಗರ್ ಮತ್ತು ನೀರಿನಿಂದ ತೊಳೆಯಿರಿ.

ಪ್ಲಾಸ್ಟಿಕ್‌ನಲ್ಲಿ ಸುತ್ತಿ: ಬಾಳೆಹಣ್ಣು ಕೊಳೆಯುವುದನ್ನು ತಡೆಯಲು ಅವುಗಳನ್ನು ಪ್ರತ್ಯೇಕವಾಗಿ ಪ್ಲಾಸ್ಟಿಕ್ ಹೊದಿಕೆಯಲ್ಲಿ ಸುತ್ತುವುದು ಉತ್ತಮ ಮಾರ್ಗವಾಗಿದೆ. ಇದನ್ನು ಮಾಡುವಾಗ, ಬಾಳೆಹಣ್ಣಿನ ಕಾಂಡದ ತುದಿಯಲ್ಲಿ ಮಾತ್ರ ಪ್ಲಾಸ್ಟಿಕ್ ಅನ್ನು ಕಟ್ಟಲು ಮರೆಯದಿರಿ. ಹೀಗೆ ಮಾಡುವುದರಿಂದ ಬಾಳೆಹಣ್ಣನ್ನು 4-5 ದಿನಗಳವರೆಗೆ ತಾಜಾವಾಗಿಡಲು ಸಾಧ್ಯವಾಗುತ್ತದೆ.

ಬಾಳೆಹಣ್ಣು ಖರೀದಿಸುವಾಗ ಇದನ್ನು ನೆನಪಿಟ್ಟುಕೊಳ್ಳಿ: ಬೇಸಿಗೆಯಲ್ಲಿ ಬಾಳೆಹಣ್ಣುಗಳನ್ನು ಖರೀದಿಸುವಾಗ ಅವು ಹೆಚ್ಚು ಹಣ್ಣಾಗಿಲ್ಲ ಎಂಬುದನ್ನು ಪರಿಶೀಲಿಸಿ. ಏಕೆಂದರೆ ಸಂಪೂರ್ಣವಾಗಿ ಮಾಗಿದ ಬಾಳೆಹಣ್ಣು ಒಂದೆ ದಿನದೊಳಗೆ, ಬೇಗನೆ ಹಾಳಾಗುತ್ತದೆ. ಅದೇ ರೀತಿ ಸ್ವಲ್ಪ ಮಾಗಿದ ಬಾಳೆಹಣ್ಣನ್ನು ಕೊಂಡರೆ ನಾಲ್ಕೈದು ದಿನ ಫ್ರೆಶ್ ಆಗಿಡಬಹುದು. ಯಾವಾಗಲೂ ಸ್ವಲ್ಪ ಗಟ್ಟಿಯಾಗಿರುವ ಬಾಳೆಹಣ್ಣುಗಳನ್ನು ಖರೀದಿಸಿ. ಇದು ಸಂಗ್ರಹಿಸಲು ಸುಲಭವಾಗಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!