AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸಲಹೆಗಳನ್ನು ಪಾಲಿಸಿದರೆ ನಿಮ್ಮ ಕೂದಲು ಉದುರುವಿಕೆಯನ್ನು ತಡೆಗಟ್ಟಬಹುದು

ಕೂದಲು ಉದುರುವಿಕೆ ತಡೆಗಟ್ಟಲು ಪರಿಹಾರ ಮಾರ್ಗಗಳು ಇಲ್ಲಿವೆ

ಈ ಸಲಹೆಗಳನ್ನು ಪಾಲಿಸಿದರೆ ನಿಮ್ಮ ಕೂದಲು ಉದುರುವಿಕೆಯನ್ನು ತಡೆಗಟ್ಟಬಹುದು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Sep 13, 2022 | 7:00 AM

Share

ಕೂದಲು ಉದುರುವಿಕೆ ಪುರುಷ ಮತ್ತು ಮಹಿಳೆಯರಲ್ಲಿ ಸಾಮಾನ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಯೌವನಾವಸ್ಥೆಯಲ್ಲೇ ಕೂದಲು ಉದುರಿಕೆ ಪ್ರಾರಂಭವಾಗುತ್ತಿದೆ. ಇದಕ್ಕೆ ನಾನಾ ಕಾರಣಗಳನ್ನು ಹೇಳುತ್ತಾರೆ ತಜ್ಞರು. ಅಧಿಕ ಒತ್ತಡ, ಆಹಾರ ಕ್ರಮದಲ್ಲಿ ಏರು-ಪೇರು, ಸರಿಯಾಗಿ ಊಟ ಮಾಡದೆ ಇರುವುದು. ಸುಂದರವಾದ ಕಪ್ಪು ಕೂದಲುಗಳು ಉದರಲು ಪ್ರಾರಂಭಿಸಿದರೆ ಅದರ ಮಾನಸಿಕ ಸಂಕಟ ವರ್ಣನಾತೀತ.

ಎಷ್ಟೇ ಪ್ರಯತ್ನ ಪಟ್ಟರೂ ಸಮಸ್ಯೆಗೆ ಪರಿಹಾರ ಕಾಣದವರು ಹಲವರಿದ್ದಾರೆ ಅದಕ್ಕಾಗಿಯೇ ಹಲವರು ಕೂದಲು ಉದರುವಿಕೆಯನ್ನು ತಡೆಯಲು ನಾನಾ ಮಾರ್ಗಳನ್ನು ಹುಡುಕುತ್ತಾರೆ. ಮಾರುಕಟ್ಟೆಯಲ್ಲಿ ದೊರೆಯುವ ವಿವಿಧ ಶ್ಯಾಂಪೂಗಳು, ಎಣ್ಣೆಗಳು ಮತ್ತು ಕ್ರೀಮ್​ಗಳನ್ನು ಬಳಸುವುದರಿಂದ ಸಮಸ್ಯೆಯು ಪರಿಹಾರವಾಗುತ್ತದೆ ಎಂದು ಹೇಳಲು ಅಸಾಧ್ಯ.

ರಾಸಾಯನಿಕಗಳ ಮೊರೆ ಹೋಗದೆ ಮನೆ ಮದ್ದಿನ ಮೂಲಕ ಒಂದಿಷ್ಟು ಸಲಹೆಗಳನ್ನು ಪಾಲಿಸಿದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುತ್ತಾರೆ ತಜ್ಞರು. ಅಪೌಷ್ಟಿಕತೆ, ಹಾರ್ಮೋನ್ ಅಸಮತೋಲನ, ಥೈರಾಯ್ಡ್, ಒತ್ತಡ ಮತ್ತು ರಾಸಾಯನಿಕ ಕೂದಲಿನ ಉತ್ಪನ್ನಗಳ ಬಳಕೆಯು ಅತಿಯಾದ ಕೂದಲು ಉದುರುವಿಕೆಗೆ ಕಾರಣವಾಗಬಹುದು.

ಕೂದಲು ಉದುರುವಿಕೆ ತಡೆಗಟ್ಟಲು ಪರಿಹಾರ ಮಾರ್ಗಗಳು

1. ಒಂದು ಪಾತ್ರೆಯಲ್ಲಿ ತುಳಸಿ ಎಲೆ ಮತ್ತು ದಾಸವಾಳದ ಎಲೆಗಳನ್ನು ಹಾಕಿ ನೀರು ಬಣ್ಣ ಬದಲಾಗುವವರೆಗೆ ಕುದಿಸಿ. ಈ ನೀರನ್ನು ಫಿಲ್ಟರ್ ಮಾಡಿ ಮತ್ತು ವಾರಕ್ಕೊಮ್ಮೆ ನಿಮ್ಮ ತಲೆಗೆ ಮಸಾಜ್ ಮಾಡಿಕೊಳ್ಳಿ.

2. ಟೀ ಪುಡಿಯನ್ನು ನೀರಿಗೆ ಸೇರಿಸಿ ಅದಕ್ಕೆ ತುಳಸಿ ಎಲೆಗಳನ್ನು ಹಾಕಿ ಕುದಿಸಿ. ಸಾಮಾನ್ಯ ಶಾಂಪೂ ಬಳಸಿ ತೊಳೆಯಿರಿ. ವಾರಕ್ಕೆ ಎರಡು ಬಾರಿ ಹೀಗೆ ಮಾಡುವುದರಿಂದ ಕೂದಲು ಉದುರುವುದನ್ನು ಕಡಿಮೆ ಮಾಡಬಹುದು.

3. ಕೂದಲು ಉದುರುವುದನ್ನು ತಡೆಯುವಲ್ಲಿ ಅಲೋವೆರಾ ಅದ್ಭುತವಾಗಿ ಕೆಲಸ ಮಾಡುತ್ತದೆ. ತೆಂಗಿನ ಎಣ್ಣೆಯನ್ನು ಉಗುರುಬೆಚ್ಚಗಾಗುವ ತನಕ ಬಿಸಿ ಮಾಡಿ. ನಂತರ ಅದನ್ನು ತಣ್ಣಗಾಗಿಸಿ ಅದರಲ್ಲಿ ಅಲೋವೆರಾ ಪೇಸ್ಟ್​ನ್ನು ಮಿಶ್ರಣ ಮಾಡಿ. ವಾರದಲ್ಲಿ ಎರಡು ಅಥವಾ ಮೂರು ಬಾರಿ ಇದನ್ನು ತೆಲೆಗೆ ಹಚ್ಚಿಕೊಳ್ಳಿ.

4. ನಿಂಬೆಹಣ್ಣಿನಿಂದ ರಸವನ್ನು ಎರಡು ಲೋಟ ನೀರಿಗೆ ಬೆರೆಸಿ ಬಾಟಲಿಗೆ ಹಾಕಿ. ಇದನ್ನು ನಿಯಮಿತವಾಗಿ ಕೂದಲಿಗೆ ಹಚ್ಚಿದರೆ ಕೂದಲು ಉದುರುವಿಕೆಯನ್ನು ತಡೆಗಟ್ಟಬಹುದು.

5. ಈರುಳ್ಳಿಯನ್ನು ನಿಯಮಿತವಾಗಿ ಕೂದಲಿಗೆ ಹಚ್ಚುವುದರಿಂದ ಈರುಳ್ಳಿಯಲ್ಲಿರುವ ಸಲ್ಫರ್, ಕೂದಲಿನ ಕಿರುಚೀಲಗಳನ್ನು ಬಲಪಡಿಸುತ್ತದೆ. ಇದರ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಬ್ಯಾಕ್ಟೀರಿಯಾ ಮತ್ತು ಸೋಂಕುಗಳ ವಿರುದ್ಧ ಹೋರಾಡುತ್ತವೆ.

6. ಎಲ್ಲಾ ಸಮಸ್ಯೆಗಳಿಗೂ ಬೇವು ಉತ್ತಮ ಪರಿಹಾರ ಎಂದು ತಿಳಿದಿದೆ. ಬೇವಿನ ಸೊಪ್ಪನ್ನು ಒಂದು ಪಾತ್ರೆಯಲ್ಲಿ ಹಾಕಿ ನೀರು ಹಾಕಿ ಚೆನ್ನಾಗಿ ಕುದಿಸಿ. ನಂತರ ಅದನ್ನು ತಣ್ಣಗಾಗಿಸಿ ಫಿಲ್ಟರ್ ಮಾಡಿ, ಸ್ನಾನ ಮಾಡವಾಗ ಬೇವಿನ ನೀರನ್ನು, ನೀರಿನೊಂದಿಗೆ ಮಿಶ್ರಣ ಮಾಡಿಕೊಂಡು ತೆಲೆ ಸ್ನಾನ ಮಾಡಿ. ಶಾಂಪೂ ಅನ್ವಯಿಸಬೇಡಿ. ಹಾಗೆ ಚೆನ್ನಾಗಿ ಉಜ್ಜಿಕೊಳ್ಳಿ. ಉಗುರುಬೆಚ್ಚನೆಯ ನೀರಿನಿಂದ ಸ್ನಾನ ಮಾಡಿ ಮತ್ತು ಬಿಸಿ ನೀರಿನಿಂದ ಅಲ್ಲ.

7. ಹಣ್ಣುಗಳು, ಕ್ಯಾರೆಟ್, ಬೀಟ್ ರೂಟ್, ಮಶ್ರೂಮ್, ಬಾಳೆಹಣ್ಣು, ಮೊಟ್ಟೆಗಳಂತಹ ಬೀಟಾ ಕ್ಯಾರೋಟಿನ್ ಸಮೃದ್ಧವಾಗಿರುವ ಆಹಾರ ಸೇವಿಸುವುದರಿಂದ ಕೂದಲು ಉದರುವಿಕೆಯನ್ನು ತಡೆಗಟ್ಟಬಹುದು.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ