Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಬಿಸಿಯಾಗಿರಲು ಬಳಸುವ ಅಲ್ಯುಮಿನಿಯಂ ಫಾಯಿಲ್ ಎಷ್ಟು ಸೇಫ್?

ಆಹಾರ ಬಿಸಿಯಾಗಿರಲಿ ಎಂಬ ಕಾರಣಕ್ಕೆ ಇದನ್ನು ಬಳಸಲಾಗುತ್ತದೆ. ಈ ಅಲ್ಯೂಮಿನಿಯಂ ಫಾಯಿಲ್ ಅನ್ನು ಟಿನ್ ಫಾಯಿಲ್ ಎಂದೂ ಕರೆಯುತ್ತಾರೆ. ಇದನ್ನು ಬಳಸುವುದರಿಂದ ಆರೋಗ್ಯದ ಮೇಲೆ ಅಡ್ಡಪರಿಣಾಮಗಳು ಆಗುವುದಿಲ್ಲವೇ? ಎಂಬ ಪ್ರಶ್ನೆಗೆ ಇಲ್ಲಿದೆ ಮಾಹಿತಿ.

ಆಹಾರ ಬಿಸಿಯಾಗಿರಲು ಬಳಸುವ ಅಲ್ಯುಮಿನಿಯಂ ಫಾಯಿಲ್ ಎಷ್ಟು ಸೇಫ್?
ಅಲ್ಯೂಮಿನಿಯಂ ಫಾಯಿಲ್ Image Credit source: iStock
Follow us
ಸುಷ್ಮಾ ಚಕ್ರೆ
|

Updated on:Oct 02, 2023 | 4:34 PM

ಜೊಮ್ಯಾಟೋ, ಸ್ವಿಗ್ಗಿಯಲ್ಲಿ ಫುಡ್ ಆರ್ಡರ್ ತರಿಸುವಾಗ ಅಥವಾ ಹೋಟೆಲ್​ನಿಂದ ಬಿಸಿಯಾದ ಫುಡ್ ಪಾರ್ಸಲ್ ತರುವಾಗ ಅದನ್ನು ಸಿಲ್ವರ್ ಬಣ್ಣದ ಪೇಪರ್​​ನಿಂದ ಸುತ್ತಲಾಗಿರುತ್ತದೆ. ಇದಕ್ಕೆ ಅಲ್ಯೂಮಿನಿಯಂ ಫಾಯಿಲ್ ಎನ್ನುತ್ತಾರೆ. ಆಹಾರ ಬಿಸಿಯಾಗಿರಲಿ ಎಂಬ ಕಾರಣಕ್ಕೆ ಇದನ್ನು ಬಳಸಲಾಗುತ್ತದೆ. ಈ ಅಲ್ಯೂಮಿನಿಯಂ ಫಾಯಿಲ್ ಅನ್ನು ಟಿನ್ ಫಾಯಿಲ್ ಎಂದೂ ಕರೆಯುತ್ತಾರೆ. ಇದನ್ನು ಬಳಸುವುದರಿಂದ ಆರೋಗ್ಯದ ಮೇಲೆ ಅಡ್ಡಪರಿಣಾಮಗಳು ಆಗುವುದಿಲ್ಲವೇ? ಎಂಬ ಪ್ರಶ್ನೆಗೆ ಇಲ್ಲಿದೆ ಮಾಹಿತಿ.

ಅಲ್ಯುಮಿನಿಯಂ ಫಾಯಿಲ್ ಕಿರಾಣಿ ಅಂಗಡಿಗಳಲ್ಲಿ ಸುಲಭವಾಗಿ ಸಿಗುತ್ತದೆ. ಕೆಲವು ಮನೆಗಳಲ್ಲೂ ಅಡುಗೆಯನ್ನು ಬಿಸಿಯಾಗಿಡಲು ಈ ಪೇಪರ್ ಬಳಸುತ್ತಾರೆ. ಹೋಟೆಲ್​ಗಳಲ್ಲಂತೂ ಇದರ ಬಳಕೆ ಸರ್ವೇಸಾಮಾನ್ಯ. ಅಲ್ಯೂಮಿನಿಯಂ ಫಾಯಿಲ್ ಅನ್ನು ಅಪಾಯಕಾರಿ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಇದು ನಿಮ್ಮ ಆಹಾರದ ಅಲ್ಯೂಮಿನಿಯಂ ಅಂಶವನ್ನು ಕೊಂಚ ಪ್ರಮಾಣದಲ್ಲಿ ಹೆಚ್ಚಿಸಬಹುದು. ನಿಮ್ಮ ಆಹಾರದಲ್ಲಿ ಅಲ್ಯೂಮಿನಿಯಂ ಪ್ರಮಾಣ ಕಡಿಮೆ ಮಾಡಬೇಕೆಂದು ನೀವು ಬಯಸಿದ್ದರೆ ನೀವು ಅಲ್ಯೂಮಿನಿಯಂ ಫಾಯಿಲ್ ಬಳಕೆಯನ್ನು ಕಡಿಮೆ ಮಾಡಬೇಕು.

ಇದನ್ನೂ ಓದಿ: Water Apple: ಹಿತ್ತಲಲ್ಲಿರುವ ನೀರು ಸೇಬು ಹಣ್ಣನ್ನು ನಿರ್ಲಕ್ಷ್ಯಿಸಬೇಡಿ!

ಆದರೆ, ಪೌಷ್ಟಿಕತಜ್ಞರಾದ ಪ್ರಿಯಾ ಕತ್ಪಾಲ್ ಪ್ರಕಾರ, ನೀವು ಎಂದಿಗೂ ಬಿಸಿಯಾದ ಆಹಾರವನ್ನು ಅಲ್ಯೂಮಿನಿಯಂ ಫಾಯಿಲ್‌ನಲ್ಲಿ ಸುತ್ತಬಾರದು. ಇದರಿಂದ ನೀವು ಸುತ್ತುವ ಆಹಾರದಲ್ಲಿ ಫಾಯಿಲ್ ಸೋರಿಕೆಯಾಗುತ್ತದೆ. ಇದು ಬುದ್ಧಿಮಾಂದ್ಯತೆ ಮತ್ತು ಆಲ್ಝೈಮರ್‌ಗಳಂತಹ ಅನೇಕ ಕಾಯಿಲೆಗಳಿಗೆ ಕಾರಣವಾಗಬಹುದು. ಹೀಗಾಗಿ, ನೀವು ಚಪಾತಿ ಮತ್ತು ಸ್ಯಾಂಡ್‌ವಿಚ್‌ಗಳಂತಹ ಆಹಾರಗಳನ್ನು ಕಟ್ಟಲು ಉತ್ತಮ ಗುಣಮಟ್ಟದ ಕಾಗದವನ್ನು ಬಳಸಬಹುದು ಎಂದು  ಸಲಹೆ ನೀಡಿದ್ದಾರೆ.

ಆಮ್ಲೀಯ ಆಹಾರವನ್ನು ಅಲ್ಯುಮಿನಿಯಂ ಫಾಯಿಲ್​ನಲ್ಲಿ ಸುತ್ತಬೇಡಿ. ಅಂದರೆ, ವಿನೆಗರ್, ಟೊಮೆಟೊ ಮತ್ತು ಟೊಮೆಟೊ ಸಾಸ್‌ನಿಂದ ಮಾಡಿದ ಆಹಾರಗಳನ್ನು ಅಲ್ಯೂಮಿನಿಯಂ ಫಾಯಿಲ್‌ನಲ್ಲಿ ಪ್ಯಾಕ್ ಮಾಡಬಾರದು. ಆಹಾರದಲ್ಲಿರುವ ಆಮ್ಲವು ಅಲ್ಯೂಮಿನಿಯಂನೊಂದಿಗೆ ಸೇರಿ ತೇವಾಂಶ ಮತ್ತು ಬ್ಯಾಕ್ಟೀರಿಯಾವನ್ನು ಆಹಾರಕ್ಕೆ ಪ್ರವೇಶಿಸಲು ಅನುವು ಮಾಡಿಕೊಡುತ್ತದೆ. ಹೀಗಾಗಿ, ಅಲ್ಯುಮಿನಿಯಂ ಫಾಯಿಲ್ ಬಳಸುವಾಗ ಎಚ್ಚರಿಕೆ ವಹಿಸುವುದು ಅಗತ್ಯ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Mon, 2 October 23

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?