AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಣಂತಿಯರೇ, ಎದೆ ಹಾಲು ಕಡಿಮೆಯಾದಾಗ ತಪ್ಪದೆ ಈ ಆಹಾರಗಳ ಸೇವನೆ ಮಾಡಿ

ಎದೆ ಹಾಲು ಮಗುವಿನ ಆರೋಗ್ಯಕ್ಕೆ ಬಹಳ ಮುಖ್ಯವಾದದ್ದು. ಆದರೆ ಕೆಲವು ಬಾಣಂತಿಯರಿಗೆ ಎದೆಹಾಲಿನ ಪ್ರಮಾಣ ತೀರಾ ಕಡಿಮೆ ಇರುತ್ತದೆ ಅಂತಹ ಸಂದರ್ಭಗಳಲ್ಲಿ ಎದೆ ಹಾಲನ್ನು ಹೆಚ್ಚಿಸಲು ಸಹಾಯ ಮಾಡುವ, ಕೆಲವು ನೈಸರ್ಗಿಕ ಆಹಾರ ಪದಾರ್ಥಗಳನ್ನು ತಾಯಂದಿರು ಸೇವನೆ ಮಾಡಿದರೆ ಉತ್ತಮ ಫಲಿತಾಂಶ ಪಡೆಯಬಹುದು. ಅವು ತಾಯಿಗೆ ಶಕ್ತಿ ನೀಡುವುದಲ್ಲದೆ ಮಗುವಿಗೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಈ ಆಹಾರಗಳು ಯಾವವು ಇಲ್ಲಿದೆ ಮಾಹಿತಿ.

ಬಾಣಂತಿಯರೇ, ಎದೆ ಹಾಲು ಕಡಿಮೆಯಾದಾಗ ತಪ್ಪದೆ ಈ ಆಹಾರಗಳ ಸೇವನೆ ಮಾಡಿ
ಸಾಂದರ್ಭಿಕ ಚಿತ್ರ Image Credit source: Getty Images
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 18, 2025 | 5:34 PM

ಮಗುವಿನ ಆರೋಗ್ಯಕ್ಕೆ ಎದೆ ಹಾಲು (Breast Milk) ಅತ್ಯಗತ್ಯ. ಈ ಹಾಲು (Milk) ಮಗುವಿನ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳನ್ನು ನೀಡುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ತಾಯಿಯ ಹಾಲಿನಲ್ಲಿ ದೇಹಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಶಕ್ತಿ ಸಿಗುವುದರಿಂದ ಮಗುವಿಗೆ ಆರೋಗ್ಯ ಒದಗಿಸುತ್ತವೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ನೀಡುತ್ತದೆ. ಇದರಿಂದ ಸೋಂಕು, ಅಲರ್ಜಿ ಸೇರಿದಂತೆ ನಾನಾ ರೀತಿಯ ಕಾಯಿಲೆಗಳ ವಿರುದ್ಧ ರಕ್ಷಣೆ ನೀಡುತ್ತದೆ. ಆದರೆ ಕೆಲವು ತಾಯಂದಿರಲ್ಲಿ ಬರು ಬರುತ್ತಾ ಎದೆ ಹಾಲಿನ ಪ್ರಮಾಣ ಕಡಿಮೆಯಾಗುತ್ತದೆ. ಇದನ್ನು ನೈಸರ್ಗಿಕವಾಗಿ ಹೆಚ್ಚಿಸಿಕೊಳ್ಳಲು ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಿಕೊಳ್ಳಬಹುದು. ಇವುಗಳಿಂದ ಎದೆಹಾಲು ಹೆಚ್ಚಾಗುತ್ತದೆ. ಹಾಗಾದರೆ ತಾಯಂದಿರು ಎದೆಹಾಲನ್ನು ಹೆಚ್ಚಿಸಿಕೊಳ್ಳಲು ಎಂತಹ ಆಹಾರಗಳ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಖರ್ಜೂರ

ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲಿಯೂ ಖರ್ಜೂರವನ್ನು ಒಂದಿಲ್ಲೊಂದು ಪದಾರ್ಥಗಳಲ್ಲಿ ಬಳಕೆ ಮಾಡುತ್ತಾರೆ. ಇದರಲ್ಲಿ ಕಬ್ಬಿಣ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದ್ದು ಇವುಗಳಲ್ಲಿರುವ ನೈಸರ್ಗಿಕ ಸಕ್ಕರೆ ಅಂಶ ದೇಹಕ್ಕೆ ಬಹಳ ಒಳ್ಳೆಯದು. ಅದಲ್ಲದೆ ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ತಾಯಿಯ ಎದೆಹಾಲಿನ ಉತ್ಪಾದನೆ ಕ್ರಮೇಣ ಹೆಚ್ಚಾಗುತ್ತದೆ.

ಮೆಂತ್ಯ

ನೀವು ಮೆಂತ್ಯ ಬೀಜಗಳನ್ನು ದಿನನಿತ್ಯದ ಅಡುಗೆಯಲ್ಲಿ ಬಳಕೆ ಮಾಡಬಹುದು. ಇವು ತಾಯಿಯ ಹಾಲನ್ನು ನೈಸರ್ಗಿಕವಾಗಿ ಹೆಚ್ಚಿಸಲು ಸಹಕಾರಿ ಯಾಗಿದೆ. ಅದಲ್ಲದೆ ಇವುಗಳಲ್ಲಿ ಫೈಟೊ ಈಸ್ಟ್ರೊಜೆನ್ ಸಮೃದ್ಧವಾಗಿದೆ.

ಇದನ್ನೂ ಓದಿ
Image
ಬೇಸಿಗೆಯಲ್ಲೂ ಬೆಳ್ಳುಳ್ಳಿ ತಿಂತೀರಾ ಜೋಕೆ! ಕಾರಣ ತಿಳಿದರೆ ಬೆಚ್ಚಿ ಬೀಳ್ತಿರಾ
Image
ರೋಗ ನಿರೋಧಕ ಶಕ್ತಿ ಕಡಿಮೆ ಆಗಿರುವುದು ಹೇಗೆ ತಿಳಿಯುತ್ತದೆ?
Image
ಕೀಲು ನೋವಿದ್ದರೆ ಈ ರೀತಿಯ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡಿ
Image
ಮಗುವನ್ನು ಬಟ್ಟೆಯಲ್ಲಿ ಸುತ್ತಿ ಮಲಗಿಸಿದರೆ ಈ ಸಮಸ್ಯೆ ಬರುವುದಿಲ್ಲ

ಇದನ್ನೂ ಓದಿ: FACT CHECK: ಪ್ರತಿನಿತ್ಯ ಬಿಸಿ ನೀರಿನ ಸ್ನಾನ ಮಾಡಿದರೆ ನಿಮ್ಮ ಪುರುಷತ್ವಕ್ಕೆ ಬೀಳುತ್ತಾ ಪೆಟ್ಟು? ಇಲ್ಲಿದೆ ಸತ್ಯಾಸತ್ಯತೆ

ಓಟ್ಸ್

ಕೆಲವರಿಗೆ ಓಟ್ಸ್ ತಿನ್ನುವ ಅಭ್ಯಾಸ ಇರಬಹುದು. ಆ ಆಹಾರ ದೇಹಕ್ಕೆ ಅಗತ್ಯವಾದ ಕಬ್ಬಿಣವನ್ನು ಒದಗಿಸುತ್ತದೆ. ಇದರಲ್ಲಿ ಫೈಬರ್ ಕೂಡ ಅಧಿಕವಾಗಿರುತ್ತದೆ. ಇವುಗಳ ಸೇವನೆ ಆಯಾಸ ಮತ್ತು ಒತ್ತಡದಂತಹ ಸಮಸ್ಯೆಗಳನ್ನು ನಿಭಾಯಿಸಲು ಸಹಾಯ ಮಾಡುತ್ತವೆ. ಜೊತೆಗೆ ಎದೆಹಾಲನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಬೆಳ್ಳುಳ್ಳಿ

ಇದು ಎದೆಹಾಲನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಜೊತೆಗೆ ಇದರ ಸೇವನೆಯಿಂದ ಹಾಲಿನ ರುಚಿ ಕೂಡ ಹೆಚ್ಚಾಗುತ್ತದೆ. ಹಾಗಾಗಿ ಬಾಣಂತಿಯರು ಪ್ರತಿದಿನ ಸ್ವಲ್ಪ ಪ್ರಮಾಣದಲ್ಲಿ ಬೆಳ್ಳುಳ್ಳಿ ಸೇವನೆ ಮಾಡುವುದು ಬಹಳ ಒಳ್ಳೆಯದು.

ಕರಿಬೇವಿನ ಎಲೆ

ಈ ಎಲೆಗಳ ಸೇವನೆ ಮಾಡುವುದರಿಂದ ಹಾಲಿನ ಹರಿವು ಹೆಚ್ಚಾಗುತ್ತದೆ. ಇದು ಜೀರ್ಣಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ. ಜೊತೆಗೆ ಹಾರ್ಮೋನುಗಳನ್ನು ಸಮತೋಲನದಲ್ಲಿಡುತ್ತದೆ. ಹಾಗಾಗಿ ಬಾಣಂತಿಯರು ತಮ್ಮ ಆಹಾರಗಳಲ್ಲಿ ಕರಿಬೇವಿನ ಎಲೆಗಳ ಸೇವನೆ ಮಾಡಬೇಕು.

ಹಾಲು ಹೆಚ್ಚಾಗುವುದಕ್ಕೆ ತಾಯಿ ಸೇವನೆ ಮಾಡುವ ಆಹಾರ ಬಹಳ ಮುಖ್ಯವಾಗುತ್ತದೆ. ಹಾಗಾಗಿ ಆಹಾರ ಸೇವನೆ ಮಾಡುವಾಗ ಬಹಳ ಎಚ್ಚರಿಕೆಯಿಂದ ಸೇವನೆ ಮಾಡಿ. ಇಲ್ಲಿ ತಿಳಿಸಿರುವ ಆಹಾರಗಳನ್ನು ಪ್ರತಿನಿತ್ಯ ಸೇವನೆ ಮಾಡಲು ಪ್ರಯತ್ನಿಸಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ