AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nervous System: ನರ ದೌರ್ಬಲ್ಯ ಇರುವವರು ಖಂಡಿತ ಡ್ರೈ ಫ್ರೂಟ್ಸ್ ತಿನ್ನಬೇಕು, ಆ ಪವಾಡ ನಡೆಯುತ್ತೆ!

ನರ ಮಂಡಲ: ನರ ದೌರ್ಬಲ್ಯ ಇರುವವರು ಖಂಡಿತ ಈ ಡ್ರೈ ಫ್ರೂಟ್ಸ್ ತಿನ್ನಬೇಕು.. ಪವಾಡ ನಡೆಯುತ್ತೆ.. ಅಂದರೆ.. ಆರೋಗ್ಯಕರ ಆಹಾರ ಸೇವನೆಯು ನಿಮ್ಮ ನರಗಳಿಗೆ ನೈಸರ್ಗಿಕ ಶಕ್ತಿಯನ್ನು ನೀಡುತ್ತದೆ.

Nervous System: ನರ ದೌರ್ಬಲ್ಯ ಇರುವವರು ಖಂಡಿತ ಡ್ರೈ ಫ್ರೂಟ್ಸ್ ತಿನ್ನಬೇಕು, ಆ ಪವಾಡ ನಡೆಯುತ್ತೆ!
ನರ ದೌರ್ಬಲ್ಯ ಇರುವವರು ಖಂಡಿತ ಡ್ರೈ ಫ್ರೂಟ್ಸ್ ತಿನ್ನಬೇಕು, ಆ ಪವಾಡ ನಡೆಯುತ್ತೆ!
TV9 Web
| Edited By: ಸಾಧು ಶ್ರೀನಾಥ್​|

Updated on: Aug 31, 2022 | 1:13 PM

Share

ದೈನಂದಿನ ಜೀವನದಲ್ಲಿ ನಾವೆಲ್ಲರೂ ನಮ್ಮ ಕಚೇರಿ, ಸ್ನೇಹಿತರ ಬಳಗ, ಬಂಧುಬಳಗ, ಮದುವೆ ಕಾರ್ಯ ಮತ್ತು ಇತರ ವಿಷಯಗಳಲ್ಲಿ ತುಂಬಾ ನಿರತರಾಗಿದ್ದೇವೆ.. ನಾವು ನಮ್ಮ ಬಗ್ಗೆ ನಮ್ಮ ದೇಹದ ದೇಖರೇಖಿ ಬಗ್ಗೆ ನೋಡಿಕೊಳ್ಳುವುದನ್ನು ಮರೆತುಬಿಡುತ್ತೇವೆ. ಎಷ್ಟೋ ದಿನ ಆ ಕಡೆ ವರ್ಕ್ ಔಟ್ ಮಾಡುವುದೂ ಇಲ್ಲ; ಈ ಕಡೆ ಫಾಸ್ಟ್​ ಫುಡ್​​ ಗಳಿಗೆ ಬಿದ್ದು, ದಿನವೂ ಜಂಕ್ ಫುಡ್ ತಿನ್ನುವುದು ಅಭ್ಯಾಸವಾಗಿಬಿಡುತ್ತದೆ. ಇವೆಲ್ಲವೂ ನಮ್ಮ ದೇಹದ ಮೇಲೆ ಖಚಿತವಾಗಿ ಪರಿಣಾಮ ಬೀರುತ್ತವೆ. ನಮ್ಮ ದೇಹದ ನರಗಳೂ ದುರ್ಬಲವಾಗುತ್ತವೆ. ರಕ್ತನಾಳಗಳು ದುರ್ಬಲವಾದಾಗ.. ದೇಹದಲ್ಲಿ ರಕ್ತ ಸಂಚಾರ ಸರಾಗವಾಗಿ ಆಗುವುದಿಲ್ಲ. ಇದರಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತವೆ.

ಆದರೆ ನಿಮ್ಮ ಆಹಾರ ಕ್ರಮವನ್ನು ಬದಲಾಯಿಸಿಕೊಳ್ಳುವ ಮೂಲಕ ನಿಮ್ಮ ನರಗಳನ್ನು ನೈಸರ್ಗಿಕವಾಗಿ ಬಲಪಡಿಸಬಹುದು. ನಿಮ್ಮ ಆಹಾರದಲ್ಲಿ ನೀವು ಯಾವ ವಸ್ತುಗಳನ್ನು ಸೇರಿಸಿಕೊಳ್ಳಬೇಕು ಎಂಬುದನ್ನು ತಿಳಿಯಿರಿ. ನರಗಳಿಗೆ ಯಾವುದೇ ಗಾಯಬವಾಗದಂತೆ, ಮಧುಮೇಹ ಭಾದಿಸದಂತೆ, ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಗದಂತೆ, ಪೋಷಕಾಂಶಗಳ ಕೊರತೆ ಕಾಡದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ನರಗಳು ದುರ್ಬಲವಾಗುತ್ತವೆ. ಅದರೊಂದಿಗೆ ಯಾವುದೇ ಸಣ್ಣ ಭಾರ ಎತ್ತಿದರೂ ಕೈ ನಡುಗುವುದು, ಸ್ವಲ್ಪ ದೂರ ನಡೆದರೆ ಸಾಕು ಕಾಲು ನಡುಗುವುದು, ಕೆಲಸ ಮಾಡಲು ಆಗದಿರುವುದು, ಸೆಳೆತ, ತೀವ್ರ ಆಯಾಸ, ಸ್ನಾಯು ನೋವು ಹೀಗೆ ಹಲವು ಸಮಸ್ಯೆಗಳು ಕಾಡುತ್ತವೆ.

ಡ್ರೈ ಫ್ರೂಟ್ಸ್​​ ಬೀಜಗಳನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಖಚಿತವಾಗಿ ಇದು ನಿಮ್ಮ ನರಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ? ಒಣ ಹಣ್ಣುಗಳು ಮೆಗ್ನೀಸಿಯಮ್ನ ಉತ್ತಮ ಮೂಲವಾಗಿದೆ, ಇದು ನಿಮ್ಮ ದೇಹದ ನರಗಳಿಗೆ ಬಹಳ ಮುಖ್ಯವಾಗಿದೆ. ನಿಮ್ಮ ದೈನಂದಿನ ಆಹಾರದಲ್ಲಿ ಬಾದಾಮಿ, ಗೋಡಂಬಿ, ವಾಲ್ ನಟ್ ಇತ್ಯಾದಿಗಳನ್ನು ಸೇರಿಸಿಕೊಳ್ಳಬೇಕು.

ಮೀನು ತಿನ್ನಬಹುದು

ಒಮೆಗಾ 3 ಕೊಬ್ಬಿನಾಂಶಗಳು ನರಗಳಿಗೆ ಬಹಳ ಮುಖ್ಯ. ಇದರಿಂದ ನರಗಳು ಬಲಗೊಳ್ಳುತ್ತವೆ. ಮೀನಿನಲ್ಲಿ ಒಮೆಗಾ 3 ಕೊಬ್ಬಿನಾಂಶಗಳು ಸಮೃದ್ಧವಾಗಿವೆ. ಅದಕ್ಕಾಗಿಯೇ ಮೀನುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದು, ನರಗಳನ್ನು ಬಲಪಡಿಸಲು ಇದು ತುಂಬಾ ಪ್ರಯೋಜನಕಾರಿಯಾಗಿದೆ.

ಹಸಿರು ತರಕಾರಿಗಳು

ಹಸಿರು ತರಕಾರಿಗಳು (ಗ್ರೀನ್ಸ್) ಅನೇಕ ಪ್ರಯೋಜನಗಳನ್ನು ಹೊಂದಿದೆ. ವಿಟಮಿನ್ ಬಿ, ಸಿ, ಇ, ಮೆಗ್ನೀಸಿಯಂ, ತಾಮ್ರ, ಫೋಲೇಟ್, ಕ್ಯಾಲ್ಸಿಯಂ ಹಸಿರು ತರಕಾರಿಗಳಲ್ಲಿ ಕಂಡುಬರುತ್ತವೆ, ಇದು ನಿಮ್ಮ ನರಗಳ ದೌರ್ಬಲ್ಯವನ್ನು ತಡೆಗಟ್ಟುತ್ತದೆ. ಅದಕ್ಕೇ ಅವುಗಳನ್ನು ನಿಮ್ಮ ಆಹಾರದ ಭಾಗವಾಗಿ ಮಾಡಿಕೊಳ್ಳಬೇಕು.

Follow Us
Web contact
Web contact

TV9 Kannada

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ