AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sleeping Disorder: ಮಲಗುವ ಮುನ್ನ ಈ ಆಹಾರಗಳ ಸೇವನೆ ಮಾಡುವ ಅಭ್ಯಾಸವಿದ್ದರೆ ತೊಂದರೆ ತಪ್ಪಿದ್ದಲ್ಲ

ನಿದ್ರಾಹೀನತೆ: ಆರೋಗ್ಯ ಕಾಪಾಡಿಕೊಳ್ಳಲು ಒಳ್ಳೆಯ ಆಹಾರ ಸೇವನೆ ಮಾಡುವುದು ಮಾತ್ರವಲ್ಲ, ನಿದ್ರೆ ಸರಿಯಾಗಿ ಮಾಡುವುದು ಕೂಡ ತುಂಬಾ ಮುಖ್ಯವಾಗುತ್ತದೆ. ಆದರೆ ಪ್ರಸ್ತುತ ದಿನಗಳಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ನಿದ್ರೆಯೂ ಒಂದು. ಒಬ್ಬ ವ್ಯಕ್ತಿಯು ನಿರ್ದಿಷ್ಟ ಸಮಯಕ್ಕಿಂತ ಕಡಿಮೆ ನಿದ್ರೆ ಮಾಡಿದರೆ, ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸಬಹುದು. ಹಾಗಾಗಿ ವೈದ್ಯರು ಮಲಗುವ ಮೊದಲು ಕೆಲವು ಆಹಾರಗಳಿಂದ ದೂರವಿರಿ ಎನ್ನುತ್ತಾರೆ. ಈ ರೀತಿ ಆರೋಗ್ಯಕರ ಅಭ್ಯಾಸ ರೂಢಿಸಿಕೊಂಡರೆ ನಿದ್ರೆಯೂ ಚೆನ್ನಾಗಿ ಬರುತ್ತದೆ ಜೊತೆಗೆ ಆರೋಗ್ಯವೂ ಚೆನ್ನಾಗಿರುತ್ತದೆ.

Sleeping Disorder: ಮಲಗುವ ಮುನ್ನ ಈ ಆಹಾರಗಳ ಸೇವನೆ ಮಾಡುವ ಅಭ್ಯಾಸವಿದ್ದರೆ ತೊಂದರೆ ತಪ್ಪಿದ್ದಲ್ಲ
ನಿದ್ರಾಹೀನತೆ
ಪ್ರೀತಿ ಭಟ್​, ಗುಣವಂತೆ
|

Updated on: Jun 10, 2025 | 6:30 PM

Share

ನಿದ್ದೆ ಸರಿಯಾಗಿ ಮಾಡು ಆರೋಗ್ಯ (Health) ಚೆನ್ನಾಗಿರುತ್ತೆ” ಈ ರೀತಿ ಹಿರಿಯರು ಹೇಳುವ ಮಾತನ್ನು ನೀವೂ ಕೇಳಿರಬಹುದು. ಹೌದು. ಆರೋಗ್ಯ ಚೆನ್ನಾಗಿ ಇರಬೇಕು ಎಂದರೆ ನಮ್ಮ ಆಹಾರ ಕ್ರಮದ (Diet) ಜೊತೆಗೆ ನಿದ್ರೆಯೂ ಸರಿಯಾಗಿ ಮಾಡಬೇಕಾಗುತ್ತದೆ. ಆದರೆ ಪ್ರಸ್ತುತ ದಿನಗಳಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ನಿದ್ರೆಯೂ ಒಂದು. ಒಬ್ಬ ವ್ಯಕ್ತಿ ನಿರ್ದಿಷ್ಟ ಸಮಯಕ್ಕಿಂತ ಕಡಿಮೆ ನಿದ್ರೆ ಮಾಡಿದರೆ, ವಿವಿಧ ಆರೋಗ್ಯ ಸಮಸ್ಯೆಗಳು ಬೇಡ ಎಂದರೂ ಬೆನ್ನಟ್ಟಿ ಬರುತ್ತದೆ. ಅದಲ್ಲದೆ ನಾವು ಸೇವನೆ ಮಾಡುವ ಆಹಾರ (Food) ಮತ್ತು ನಿದ್ರೆಗೆ ತುಂಬಾ ಸಾಮ್ಯತೆಗಳಿರುವುದರಿಂದ, ನಿದ್ರೆ ಸರಿಯಾಗಿ ಬರದಿರುವುದಕ್ಕೆ ತಿನ್ನುವ ಆಹಾರ ಕೂಡ ಕಾರಣವಾಗಿರಬಹುದು. ಅದಕ್ಕಾಗಿಯೇ ವೈದ್ಯರು ಮಲಗುವ ಮೊದಲು ಕೆಲವು ಆಹಾರಗಳಿಂದ ದೂರವಿರಿ ಎನ್ನುತ್ತಾರೆ. ಹಾಗಾದರೆ ಯಾವ ಆಹಾರಗಳು ನಮ್ಮ ನಿದ್ರೆಯನ್ನು ಹಾಳು ಮಾಡುತ್ತದೆ (Sleeping Disorder) ಎಂಬುದನ್ನು ತಿಳಿದುಕೊಳ್ಳಿ.

ಮಾಂಸಾಹಾರ:

ಸಾಮಾನ್ಯವಾಗಿ ಕೊಬ್ಬು ಮತ್ತು ಪ್ರೋಟೀನ್‌ ಅಂಶಗಳು ಮಾಂಸದಲ್ಲಿ ಅಧಿಕವಾಗಿರುತ್ತವೆ. ಇದು ಜೀರ್ಣವಾಗಲು ಸಹ ಬಹಳ ಸಮಯ ತೆಗೆದುಕೊಳ್ಳುತ್ತದೆ. ಅದಕ್ಕಾಗಿಯೇ ರಾತ್ರಿ ಸಮಯದಲ್ಲಿ ಮಾಂಸಾಹಾರದಿಂದ ದೂರವಿರುವುದು ಉತ್ತಮ ಎಂದು ಹೇಳಲಾಗುತ್ತದೆ.

ಮಸಾಲೆಯುಕ್ತ ಆಹಾರ:

ಪ್ರತಿನಿತ್ಯ ಯಾವುದೇ ಸಮಯವಾದರೂ ಸರಿ, ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು. ಅದರಲ್ಲಿಯೂ ರಾತ್ರಿಯ ಊಟಕ್ಕೆ ಮಸಾಲೆಯುಕ್ತ ಆಹಾರಗಳನ್ನು ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ ಹೆಚ್ಚು ಕಷ್ಟಕರವಾಗಬಹುದು. ಇದು ಆಮ್ಲೀಯತೆಯ ಸಮಸ್ಯೆಗಳಿಗೂ ಕಾರಣವಾಗಬಹುದು.

ಇದನ್ನೂ ಓದಿ
Image
ಮಲಬದ್ಧತೆಯಿಂದ ಮುಕ್ತಿ ಪಡೆಯಲು ಈ ಎಲೆಯ ರಸ ಸೇವನೆ ಮಾಡಿ ಸಾಕು!
Image
ಇದಕ್ಕೆ ಹೇಳೋದು ವಾರದಲ್ಲಿ ಒಮ್ಮೆಯಾದರೂ ಮಶ್ರೂಮ್ ತಿನ್ನಿ ಅಂತ
Image
ಪಾಪ್‌ಕಾರ್ನ್ vs ಬಾಳೆಹಣ್ಣಿನ ಚಿಪ್ಸ್ ಯಾವುದು ಆರೋಗ್ಯಕರ?
Image
ಮಧುಮೇಹದಿಂದ ಮಲಬದ್ಧತೆವರೆಗೆ ಎಲ್ಲಾ ಸಮಸ್ಯೆಗೂ ಈ ಬಳ್ಳಿಯೇ ಅಮೃತ

ಚಹಾ ಅಥವಾ ಕಾಫಿ:

ಕೆಲವರು ರಾತ್ರಿ ಊಟ ಮಾಡಿದ ನಂತರ ಚಹಾ ಅಥವಾ ಕಾಫಿ ಕುಡಿಯುತ್ತಾರೆ. ಇವೆರಡರಲ್ಲಿಯೂ ಕೆಫೀನ್ ಇರುತ್ತದೆ. ಮಲಗುವ ಮುನ್ನ ಚಹಾ ಅಥವಾ ಕಾಫಿ ಕುಡಿಯುವುದರಿಂದ ನಿದ್ರೆಯ ಮೇಲೆ ಪರಿಣಾಮ ಬೀರುತ್ತದೆ. ಜೊತೆಗೆ ನಿದ್ರಾಹೀನತೆಯಂತಹ ಸಮಸ್ಯೆಗೆ ಕಾರಣವಾಗುತ್ತದೆ. ಅದಕ್ಕಾಗಿ ಬೆಳಿಗ್ಗೆ ಅಥವಾ ಮಧ್ಯಾಹ್ನದ ಸಮಯ ಕಾಫಿ ಕುಡಿಯಿರಿ. ಆದರೆ ರಾತ್ರಿ ಸಮಯದಲ್ಲಿ ಇವುಗಳ ಸೇವನೆ ಒಳ್ಳೆಯದಲ್ಲ.

ಇದನ್ನೂ ಓದಿ: ಪ್ರತಿದಿನ ನೀವು ಮಾಡುವ ಈ 4 ತಪ್ಪುಗಳು ರಾತ್ರಿಯ ನಿದ್ರೆಗೆ ಭಂಗ ತರುತ್ತೆ

ಜಂಕ್ ಫುಡ್:

ಹೆಚ್ಚಿನ ಪ್ರಮಾಣದಲ್ಲಿ ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರು ಜಂಕ್ ಫುಡ್ ಗಳು ಸುಲಭವಾಗಿ ಜೀರ್ಣವಾಗುವುದಿಲ್ಲ. ಹಾಗಾಗಿ ರಾತ್ರಿ ಸಮಯದಲ್ಲಿ ಜಂಕ್ ಫುಡ್ ತಿನ್ನುವುದರಿಂದ ನಿದ್ರೆಗೆ ತೊಂದರೆಯಾಗುತ್ತದೆ. ಅದಲ್ಲದೆ ಈ ರೀತಿಯ ಅಭ್ಯಾಸ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ