AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೂ ನಿದ್ದೆ ಮಾಡುವಾಗ ಬೆನ್ನು ನೋವು ಬರುತ್ತಾ? ಹಾಗಿದ್ರೆ ಈ ಆಹಾರಗಳ ಸೇವನೆ ಮಾಡಬೇಡಿ

ಪ್ರಸ್ತುತ ನಮ್ಮ ಜೀವನಶೈಲಿಯಿಂದಾಗಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುತ್ತದೆ. ಆದರೆ ನಮ್ಮ ಆರೋಗ್ಯ ನಮ್ಮ ಕೈಯಲ್ಲಿಯೇ ಇರುತ್ತದೆ ಎಂಬುದನ್ನು ನಾವು ಮರೆಯಬಾರದು. ಸಾಧ್ಯವಾದಷ್ಟು ಆಹಾರದಲ್ಲಿ ಆರೋಗ್ಯಕರ ಆಹಾರಗಳನ್ನು ಸೇರಿಸಲು ಪ್ರಯತ್ನಿಸುವುದು ಬಹಳ ಒಳ್ಳೆಯದು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಬೆನ್ನುಮೂಳೆಯ ಆರೋಗ್ಯ ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅದರಲ್ಲಿಯೂ ನಿದ್ರೆಯ ಸಮಯದಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವವರು ಕೆಲವು ಆಹಾರಗಳ ಸೇವನೆ ಮಾಡದಿರುವುದು ಬಹಳ ಒಳಿತು. ಹಾಗಾದರೆ ಯಾವ ಆಹಾರ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನಿಮಗೂ ನಿದ್ದೆ ಮಾಡುವಾಗ ಬೆನ್ನು ನೋವು ಬರುತ್ತಾ? ಹಾಗಿದ್ರೆ ಈ ಆಹಾರಗಳ ಸೇವನೆ ಮಾಡಬೇಡಿ
Back Pain Relief At Night
ಪ್ರೀತಿ ಭಟ್​, ಗುಣವಂತೆ
|

Updated on: Oct 01, 2025 | 8:33 PM

Share

ಪ್ರಸ್ತುತ ನಾವು ಅನುಸರಿಸುತ್ತಿರುವ ಜೀವನಶೈಲಿಯಿಂದಾಗಿ ನಮಗರಿವಿಲ್ಲದಂತೆ ನಮ್ಮ ಬೆನ್ನುಮೂಳೆ ದುರ್ಬಲಗೊಳ್ಳುತ್ತಿದೆ. ಈ ಪರಿಸ್ಥಿತಿಯಲ್ಲಿ, ನಾವು ತಿನ್ನುವ ಆಹಾರ ಮತ್ತು ತೆಗೆದುಕೊಳ್ಳುವ ಪಾನೀಯಗಳ ಬಗ್ಗೆ ವಿಶೇಷ ಗಮನ ಹರಿಸುವುದು ಬಹಳ ಅವಶ್ಯಕ. ಸಾಧ್ಯವಾದಷ್ಟು ಆಹಾರದಲ್ಲಿ ಆರೋಗ್ಯಕರ ಆಹಾರಗಳನ್ನು ಸೇರಿಸಲು ಪ್ರಯತ್ನಿಸುವುದು ಒಳ್ಳೆಯದು. ಇದು ನಿಮ್ಮ ಬೆನ್ನುಮೂಳೆಯನ್ನು ಬಲಪಡಿಸುತ್ತದೆ. ಇಲ್ಲವಾದಲ್ಲಿ ದಿನದಿಂದ ದಿನಕ್ಕೆ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಹಾಗಾಗಿ ನಮ್ಮ ಬೆನ್ನುಮೂಳೆಯನ್ನು ಬಲವಾಗಿಟ್ಟುಕೊಳ್ಳಲು, ಕೆಲವು ಆಹಾರಗಳ ಸೇವನೆ ಮಾಡುವುದನ್ನು ತಪ್ಪಿಸಬೇಕು. ಅದರಲ್ಲಿಯೂ ನಿದ್ರೆಯ ಸಮಯದಲ್ಲಿ ಬೆನ್ನು ನೋವಿನಿಂದ (Back Pain) ಬಳಲುತ್ತಿರುವವರು ಕೆಲವು ಆಹಾರಗಳ ಸೇವನೆ ಮಾಡದಿರುವುದು ಬಹಳ ಒಳಿತು. ಹಾಗಾದರೆ ಯಾವ ಆಹಾರ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೆಚ್ಚು ಪ್ರೋಟೀನ್‌ ಇರುವ ಆಹಾರಗಳು:

ಸಾಮಾನ್ಯವಾಗಿ ಪ್ರತಿನಿತ್ಯ ಹೆಚ್ಚಿನ ಪ್ರೋಟೀನ್ ಇರುವ ಆಹಾರಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಆಮ್ಲೀಯತೆ ಹೆಚ್ಚಾಗುತ್ತದೆ. ಪರಿಣಾಮವಾಗಿ, ದೇಹದಲ್ಲಿರುವ ಒಟ್ಟು ಕ್ಯಾಲ್ಸಿಯಂ ದೇಹದಿಂದ ಹೊರಹೋಗುತ್ತದೆ. ಇದು ಬೆನ್ನು ನೋವಿಗೆ ಕಾರಣವಾಗುತ್ತದೆ. ಆದ್ದರಿಂದ, ಮಿತವಾಗಿ ಪ್ರೋಟೀನ್ ಸೇವಿಸುವುದು ಸೂಕ್ತ. ಅತಿಯಾದ ಪ್ರೋಟೀನ್ ಮೂಳೆಗಳಿಗೂ ಹಾನಿ ಮಾಡುತ್ತದೆ.

ಕಾರ್ಬೊನೇಟೆಡ್ ಪಾನೀಯಗಳು:

ಮೂಳೆಗಳು ಆರೋಗ್ಯಕರವಾಗಿ ಮತ್ತು ಗಟ್ಟಿಯಾಗಿರಬೇಕು ಎಂದರೆ ಸಾಧ್ಯವಾದಷ್ಟು ತಂಪು ಪಾನೀಯಗಳು ಮತ್ತು ಷಾಂಪೇನ್‌ನಂತಹ ಕಾರ್ಬೊನೇಟೆಡ್ ಪಾನೀಯಗಳನ್ನು ಸಂಪೂರ್ಣವಾಗಿ ತ್ಯಜಿಸುವುದು ಒಳ್ಳೆಯದು. ಈ ಪಾನೀಯಗಳಲ್ಲಿರುವ ಹೆಚ್ಚಿನ ಫಾಸ್ಫೇಟ್ ಅಂಶವು ದೇಹದಲ್ಲಿ ಕ್ಯಾಲ್ಸಿಯಂ ಅನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ, ಮೂಳೆಗಳು ದುರ್ಬಲವಾಗುತ್ತವೆ, ಇದು ಬೆನ್ನುನೋವಿಗೂ ಕಾರಣವಾಗಬಹುದು.

ಇದನ್ನೂ ಓದಿ
Image
ಮತ್ತೊಂದು ಮಹಾಮಾರಿ ವೈರಸ್​​​​ ಪತ್ತೆ, ಏನಿದು ಹೆಚ್‌3ಎನ್‌2?
Image
ಈ ಆರೋಗ್ಯ ಸಮಸ್ಯೆ ಇರುವವರು ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಬೇಡಿ
Image
ಈ ಲಕ್ಷಣ ಕಡೆಗಣಿಸದಿದ್ದರೆ ಲಿಂಫೋಮಾ ಕ್ಯಾನ್ಸರ್ ಗುಣಪಡಿಸಬಹುದು
Image
ಡೈಪರ್ ಬಳಸಿ ದದ್ದುಗಳು ಕಂಡುಬರುತ್ತಿದ್ದರೆ ಈ ಸಿಂಪಲ್ ಟ್ರಿಕ್ಸ್ ಪಾಲಿಸಿ

ಕೆಲವು ಔಷಧಿಗಳು:

ಆಮ್ಲೀಯತೆಗೆ ಹೆಚ್ಚು ಔಷಧಿಗಳನ್ನು ಬಳಸುವುದರಿಂದ ಬೆನ್ನು ನೋವು ಉಂಟಾಗುತ್ತದೆ. ಹೀಗೆ ಮಾಡುವುದರಿಂದ ದೇಹವು ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಸತುವುಗಳಂತಹ ಖನಿಜಗಳನ್ನು ಹೀರಿಕೊಳ್ಳಲು ಕಷ್ಟವಾಗುತ್ತದೆ. ಪರಿಣಾಮವಾಗಿ, ಮೂಳೆಗಳು ದುರ್ಬಲಗೊಳ್ಳುತ್ತವೆ.

ಕೆಫೀನ್ ಸೇವನೆ:

ಪ್ರತಿನಿತ್ಯ ಕೆಫೀನ್ ಸೇವನೆ ಮಾಡುವುದನ್ನು ಸೀಮಿತಗೊಳಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಹೆಚ್ಚು ಕಾಫಿ ಅಥವಾ ಚಹಾ ಕುಡಿಯುವುದರಿಂದ ಅದರಲ್ಲಿರುವ ಕೆಫೀನ್ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

ವಿಟಮಿನ್ ಡಿ ಕೊರತೆ:

ದೇಹದಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಮೂಳೆಗಳನ್ನು ಬಲವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಇದರ ಕೊರತೆ ಬೆನ್ನು ನೋವು ಸೇರಿದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಆದ್ದರಿಂದ ಈ ರೀತಿಯ ಸಮಸ್ಯೆಯಿಂದ ಪರಿಹಾರ ಪಡೆಯಲು ವಿಟಮಿನ್ ಡಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದು ಬಹಳ ಒಳ್ಳೆಯದು.

ಇದನ್ನೂ ಓದಿ: ಮುಖದಲ್ಲಿ ಈ ರೀತಿಯ ಲಕ್ಷಣ ಕಂಡುಬಂದಾಗ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ… ಜೀವಕ್ಕೆ ಅಪಾಯ ತರಬಹುದು!

ಪೌಷ್ಟಿಕಾಂಶದ ಕೊರತೆ:

ಮೂಳೆಗಳನ್ನು ಆರೋಗ್ಯಕರವಾಗಿ ಮತ್ತು ಬಲವಾಗಿಡಲು ಈಸ್ಟ್ರೊಜೆನ್, ಪ್ರೊಜೆಸ್ಟರಾನ್ ಮತ್ತು ಟೆಸ್ಟೋಸ್ಟೆರಾನ್ ನಂತಹ ಪೋಷಕಾಂಶಗಳು ಅತ್ಯಗತ್ಯ. ಅದೇ ರೀತಿ ವಯಸ್ಸಾದಂತೆ, ದೇಹಕ್ಕೆ ಅಗತ್ಯವಿರುವ ಹಾರ್ಮೋನುಗಳು ಮತ್ತು ಪೋಷಕಾಂಶಗಳ ಬಗ್ಗೆ ಗಮನ ಕೊಡಬೇಕಾಗುತ್ತದೆ. ಇಲ್ಲದಿದ್ದರೆ, ದೇಹದಲ್ಲಿ ನೋವು ಹೆಚ್ಚಾಗಬಹುದು ಎಂಬುದು ನೆನಪಿರಲಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ