ತಿನ್ನುವ ಆಹಾರ ಪ್ಯಾಕ್ ಮಾಡಲು ನ್ಯೂಸ್​​ ಪೇಪರ್ ಕಾಗದ ಬಳಸಬೇಡಿ ಎಂದು ಎಚ್ಚರಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು! ಕಾರಣ ಏನು?

Newspapers: ತಿನ್ನುವ ಆಹಾರ ಪ್ಯಾಕ್ ಮಾಡಲು ನ್ಯೂಸ್​​ ಪೇಪರ್ ಕಾಗದ ಬಳಸಬೇಡಿ - ಯಾವುದೇ ಆಹಾರ ಮಾರಾಟಗಾರರು ಹೀಗೆ ಮಾಡುವುದು ಕ್ರಿಮಿನಲ್ ಅಪರಾಧ. ಗ್ರಾಹಕರ ಆರೋಗ್ಯ ಪ್ರಯೋಜನಗಳನ್ನು ಗಮನದಲ್ಲಿಟ್ಟುಕೊಂಡು ಕಾನೂನಿನಡಿ ಅನುಮತಿಸಲಾದ ಪ್ಯಾಕೇಜಿಂಗ್ ವಸ್ತುಗಳನ್ನು ಮಾತ್ರ ಆಹಾರ ಪದಾರ್ಥಗಳನ್ನು ಬಳಸಬೇಕು ಎಂದು FSSAI ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಮಲವರ್ಧನ ರಾವ್ ಎಚ್ಚರಿಸಿದ್ದಾರೆ.

ತಿನ್ನುವ ಆಹಾರ ಪ್ಯಾಕ್ ಮಾಡಲು ನ್ಯೂಸ್​​ ಪೇಪರ್ ಕಾಗದ ಬಳಸಬೇಡಿ ಎಂದು ಎಚ್ಚರಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು! ಕಾರಣ ಏನು?
ತಿನ್ನುವ ಆಹಾರ ಪ್ಯಾಕ್ ಮಾಡಲು ನ್ಯೂಸ್​​ ಪೇಪರ್ ಕಾಗದ ಬಳಸಬೇಡಿ
Follow us
|

Updated on: Sep 29, 2023 | 12:36 PM

ಹೊಸದಿಲ್ಲಿ, ಸೆಪ್ಟೆಂಬರ್ 29: ಆಹಾರ ಪದಾರ್ಥಗಳಲ್ಲಿ ದಿನ ಪತ್ರಿಕೆ ಬಳಕೆಗೆ (ನ್ಯೂಸ್​​ ಪೇಪರ್ -Newspapers) ಸಂಬಂಧಿಸಿದಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಮಹತ್ವದ ಎಚ್ಚರಿಕೆ ನೀಡಿದೆ. ಆಹಾರ ಪದಾರ್ಥಗಳನ್ನು ಸುತ್ತಿಕೊಡಲು ಪತ್ರಿಕೆಗಳನ್ನು ಬಳಸದಂತೆ ವರ್ತಕರನ್ನು ಕೋರಿದೆ. ಗ್ರಾಹಕರು ದಿನಪತ್ರಿಕೆಯಲ್ಲಿ ಪ್ಯಾಕ್ ಮಾಡಿದ ಮತ್ತು ಸಂಗ್ರಹಿಸಿದ ಪದಾರ್ಥಗಳನ್ನು (Food Packaging and Food Storage) ಸೇವಿಸದಂತೆ (Food Vendors And Consumers) ಸೂಚಿಸಲಾಗಿದೆ. ಇದರಿಂದ ಆರೋಗ್ಯಕ್ಕೆ ಗಂಭೀರ ಹಾನಿಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಿಯಮಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಾಜ್ಯ ಆಹಾರ ಅಧಿಕಾರಿಗಳೊಂದಿಗೆ ಕೆಲಸ ಮಾಡುವುದಾಗಿ ಅದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

FSSAI ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಜಿ ಕಮಲಾ ವರ್ಧನ ರಾವ್ ಹೇಳುವಂತೆ ದೇಶಾದ್ಯಂತ ಗ್ರಾಹಕರು ಮತ್ತು ಆಹಾರ ಮಾರಾಟಗಾರರು ಆಹಾರ ಪದಾರ್ಥಗಳನ್ನು ಪ್ಯಾಕಿಂಗ್ ಮಾಡಲು, ಬಡಿಸಲು ಮತ್ತು ಸಂಗ್ರಹಿಸಲು ಪತ್ರಿಕೆಗಳನ್ನು ಬಳಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಕೇಳಿಕೊಳ್ಳಲಾಗಿದೆ. ನ್ಯೂಸ್​​ ಪೇಪರ್ ಕಾಗದದಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದಿದ್ದಾರೆ. ಸುದ್ದಿ ಪತ್ರಿಕೆಗಳಲ್ಲಿ ಬಳಸುವ ಶಾಯಿಯು ಅನೇಕ ಜೈವಿಕ ಸಕ್ರಿಯ ವಸ್ತುಗಳನ್ನು ಒಳಗೊಂಡಿರುತ್ತದೆ ಎಂದು ಹೇಳಲಾಗುತ್ತದೆ, ಇದು ಆಹಾರವನ್ನು ಕಲುಷಿತಗೊಳಿಸುತ್ತದೆ. ಇಂತಹ ಕಲುಷಿತ ಆಹಾರವನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಬಹುದು ಎಂದು FSSAI ಮೊನ್ನೆ ಬುಧವಾರ ಎಚ್ಚರಿಸಿದೆ.

ಇದಲ್ಲದೆ, ಮುದ್ರಣಕ್ಕಾಗಿ ಬಳಸುವ ಶಾಯಿ ವ್ಯವಸ್ಥೆಯು ಸೀಸ ಮತ್ತು ಭಾರ ಲೋಹಗಳು ಸೇರಿದಂತೆ ಹಾನಿಕಾರಕ ರಾಸಾಯನಿಕಗಳನ್ನು ಹೊಂದಿರುತ್ತದೆ. ಇವುಗಳನ್ನು ಆಹಾರದಲ್ಲಿ ಬೆರೆಸಿದರೆ ಕಾಲಕ್ರಮೇಣ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗಲಿವೆ ಎಂದು ಎಚ್ಚರಿಕೆ ನೀಡಲಾಗಿದೆ. ಸುದ್ದಿ ಪತ್ರಗಳ ವಿತರಣೆಯು ವಿವಿಧ ಪರಿಸರ ಪರಿಸ್ಥಿತಿಗಳಿಗೆ ಒಳಪಟ್ಟಿರುತ್ತದೆ. ಪರಿಣಾಮವಾಗಿ ವೈರಸ್‌ಗಳು, ಬ್ಯಾಕ್ಟೀರಿಯಾಗಳು ಮತ್ತು ಇತರ ರೋಗಕಾರಕಗಳು ಕಾಗದಕ್ಕೆ ಅಂಟಿಕೊಳ್ಳುತ್ತವೆ. ಇಂತಹ ಪೇಪರ್ ಗಳಲ್ಲಿ ಆಹಾರ ಸೇವಿಸುವುದರಿಂದ ಅನಾರೋಗ್ಯಕ್ಕೆ ತುತ್ತಾಗಬಹುದು ಎಂದು ಎಫ್ ಎಸ್ ಎಸ್ ಎಐ ಹೇಳಿದೆ.

ಆಹಾರ ಪದಾರ್ಥಗಳ ಪ್ಯಾಕಿಂಗ್ ಮತ್ತು ಶೇಖರಣೆಗಾಗಿ ಸುದ್ದಿ ಪತ್ರಿಕೆಗಳನ್ನು ಬಳಸುವುದನ್ನು ನಿಷೇಧಿಸುವ ನಿಯಮಗಳನ್ನು 2018 ರಲ್ಲಿ FSSAI ತಿಳಿಸಿತ್ತು ಎಂಬುದು ಗಮನಾರ್ಹ. ಈ ನಿಯಮಗಳ ಪ್ರಕಾರ, ಆಹಾರ ಪದಾರ್ಥಗಳನ್ನು ದಿನಪತ್ರಿಕೆಗಳಲ್ಲಿ ಪ್ಯಾಕ್ ಮಾಡಲಾಗುತ್ತದೆ, ಬಡಿಸಲಾಗುತ್ತದೆ, ಅದರಲ್ಲಿ ಕರಿದ ಆಹಾರವನ್ನು ತಿನ್ನಲಾಗುತ್ತದೆ ಮತ್ತು ಹೆಚ್ಚುವರಿ ಎಣ್ಣೆ ಇದ್ದಾಗ ಪತ್ರಿಕೆಗಳ ಸಹಾಯದಿಂದ ಎಣ್ಣೆಯನ್ನು ತೆಗೆಯಲಾಗುತ್ತದೆ. ಹಾಗೆಲ್ಲ ಮಾಡಬೇಡಿ ಎಂದು ಅವರು ಹೇಳಿದರು. ಯಾವುದೇ ಆಹಾರ ಮಾರಾಟಗಾರರು ಇದನ್ನು ಮಾಡುವುದು ಕ್ರಿಮಿನಲ್ ಅಪರಾಧ. ಗ್ರಾಹಕರ ಆರೋಗ್ಯ ಪ್ರಯೋಜನಗಳನ್ನು ಗಮನದಲ್ಲಿಟ್ಟುಕೊಂಡು ಕಾನೂನಿನಡಿಯಲ್ಲಿ ಅನುಮತಿಸಲಾದ ಪ್ಯಾಕೇಜಿಂಗ್ ವಸ್ತುಗಳನ್ನು ಮಾತ್ರ ಆಹಾರ ಪದಾರ್ಥಗಳನ್ನು ಬಳಸಬೇಕು ಎಂದು FSSAI ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಮಲವರ್ಧನ ರಾವ್ ಕೇಳಿಕೊಂಡರು. ಈ ಮಟ್ಟಿಗೆ, ಎಫ್‌ಎಸ್‌ಎಸ್‌ಎಐ ದೇಶಾದ್ಯಂತ ಗ್ರಾಹಕರು ಮತ್ತು ಆಹಾರ ಮಾರಾಟಗಾರರಿಗೆ ಪತ್ರಿಕೆಗಳನ್ನು ಆಹಾರ ಪ್ಯಾಕೇಜಿಂಗ್ ವಸ್ತುವಾಗಿ ಬಳಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಕೇಳಿಕೊಂಡಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು