Sign In

By signing in or creating an account, you agree with Associated Broadcasting Company's Terms & Conditions and Privacy Policy.

Black Cumin: ಕ್ಯಾನ್ಸರ್, ಮಧುಮೇಹದಂತಹ ಆರೋಗ್ಯ ಸಮಸ್ಯೆಗೆ ಕಪ್ಪು ಜೀರಿಗೆ ರಾಮಬಾಣ

ಆರೋಗ್ಯದ ದೃಷ್ಟಿಯಿಂದ ಕಪ್ಪು ಜೀರಿಗೆ ಬಹಳ ಒಳ್ಳೆಯದು. ಇದರಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಸತು, ಮೆಗ್ನೀಷಿಯಂ ಮತ್ತು ಪೊಟ್ಯಾಶಿಮ್​ನಂತಹ ಪೋಷಕಾಂಶಗಳು ಸೇರಿವೆ. ಕಪ್ಪು ಜೀರಿಗೆ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾದ ಪದಾರ್ಥವಾಗಿದೆ. ಕಪ್ಪು ಜೀರಿಗೆ ಬಲವಾದ ಕಹಿ ರುಚಿ ಮತ್ತು ವಾಸನೆಯನ್ನು ಹೊಂದಿರುತ್ತದೆ. ಇದರಿಂದ ಆರೋಗ್ಯಕ್ಕೆ ಯಾವೆಲ್ಲ ರೀತಿಯ ಪ್ರಯೋಜನಗಳಿವೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Black Cumin: ಕ್ಯಾನ್ಸರ್, ಮಧುಮೇಹದಂತಹ ಆರೋಗ್ಯ ಸಮಸ್ಯೆಗೆ ಕಪ್ಪು ಜೀರಿಗೆ ರಾಮಬಾಣ
ಕಪ್ಪು ಜೀರಿಗೆImage Credit source: iStock
Follow us
ಸುಷ್ಮಾ ಚಕ್ರೆ
|

Updated on: Feb 15, 2024 | 4:59 PM

ಕಪ್ಪು ಜೀರಿಗೆಯನ್ನು (Black Cumin) ಮಧ್ಯಪ್ರಾಚ್ಯ ಔಷಧದಲ್ಲಿ ಬಾವುಗಳು, ಹರ್ಪಿಸ್ ಜೋಸ್ಟರ್ ಸೇರಿದಂತೆ ಹಲವಾರು ರೋಗಗಳಿಗೆ ನೈಸರ್ಗಿಕ ಪರಿಹಾರವಾಗಿ ಬಳಸಲಾಗುತ್ತದೆ. ಕಪ್ಪು ಜೀರಿಗೆ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ ಮತ್ತು ರಂಜಕವನ್ನು ಹೊಂದಿರುತ್ತದೆ. ಮೆದುಳಿನ ಆರೋಗ್ಯ, ಹೃದಯದ ಕಾಳಜಿ (Heart Care), ಕಣ್ಣಿನ ಆರೋಗ್ಯ (Eye Health), ಮಹಿಳೆಯರ ಆರೋಗ್ಯ ಸೇರಿದಂತೆ ಹಲವು ರೀತಿಯಲ್ಲಿ ಕಪ್ಪು ಜೀರಿಗೆ ಬಹಳ ಪ್ರಯೋಜನಕಾರಿಯಾಗಿದೆ. ಆ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ.

ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ:

ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಕಪ್ಪು ಜೀರಿಗೆ ತುಂಬಾ ಪರಿಣಾಮಕಾರಿಯಾಗಿದೆ. ಇದು ಕೆಟ್ಟ LDL ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ:

ಕಪ್ಪು ಜೀರಿಗೆ ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ. ಇದು ಕ್ಯಾನ್ಸರ್​ನಂತಹ ರೋಗಗಳ ಬೆಳವಣಿಗೆಗೆ ಕಾರಣವಾಗುವ ಹಾನಿಕಾರಕ ಸ್ವತಂತ್ರ ರಾಡಿಕಲ್​ಗಳನ್ನು ತಟಸ್ಥಗೊಳಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಥೈಮೋಕ್ವಿನೋನ್‌ ಸಮೃದ್ಧವಾಗಿದೆ. ಇದು ರಕ್ತ ಕ್ಯಾನ್ಸರ್ ಕೋಶಗಳಲ್ಲಿ ಜೀವಕೋಶದ ಮರಣವನ್ನು ಪ್ರೇರೇಪಿಸುವ ಸಂಯುಕ್ತವಾಗಿದೆ.

ಇದನ್ನೂ ಓದಿ: ಹೃದಯದ ಆರೋಗ್ಯ ಹೆಚ್ಚಿಸುವ 9 ಸೂಪರ್‌ಫುಡ್‌ಗಳು ಇಲ್ಲಿವೆ

ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ:

ಕಪ್ಪು ಜೀರಿಗೆ ನ್ಯುಮೋನಿಯಾ, ಕಿವಿ ಸಮಸ್ಯೆಗಳಂತಹ ಅಪಾಯಕಾರಿ ಸೋಂಕುಗಳನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ಕೊಲ್ಲುವಲ್ಲಿ ಬಹಳ ಪರಿಣಾಮಕಾರಿಯಾಗಿದೆ. ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳಿಂದ ತುಂಬಿರುವ ಕಪ್ಪು ಜೀರಿಗೆ ಬ್ಯಾಕ್ಟೀರಿಯಾದ ಕೆಲವು ತಳಿಗಳ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ. ಇದನ್ನು ಅನೇಕ ಔಷಧಿಗಳಲ್ಲಿ ಬಳಸಲಾಗುತ್ತದೆ.

ಉರಿಯೂತವನ್ನು ಕಡಿಮೆ ಮಾಡುತ್ತದೆ:

ಕ್ಯಾನ್ಸರ್, ಮಧುಮೇಹ ಮತ್ತು ಹೃದ್ರೋಗದಂತಹ ವಿವಿಧ ಕಾಯಿಲೆಗಳಿಗೆ ಕೊಡುಗೆ ನೀಡುವ ದೀರ್ಘಕಾಲದ ಉರಿಯೂತವನ್ನು ಕಡಿಮೆ ಮಾಡಲು ಕಪ್ಪು ಜೀರಿಗೆ ತುಂಬಾ ಪರಿಣಾಮಕಾರಿಯಾಗಿದೆ. ಕಪ್ಪು ಜೀರಿಗೆಯ ಎಣ್ಣೆಯು ಸಂಧಿವಾತದಿಂದ ಬಳಲುತ್ತಿರುವ ಜನರಲ್ಲಿ ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ.

ಯಕೃತ್ತನ್ನು ರಕ್ಷಿಸುತ್ತದೆ:

ಔಷಧಗಳನ್ನು ಚಯಾಪಚಯಗೊಳಿಸುವುದು, ಪೋಷಕಾಂಶಗಳನ್ನು ಸಂಸ್ಕರಿಸುವುದು ಮತ್ತು ಆರೋಗ್ಯಕ್ಕೆ ನಿರ್ಣಾಯಕವಾದ ಪ್ರೋಟೀನ್ ಮತ್ತು ರಾಸಾಯನಿಕಗಳನ್ನು ಉತ್ಪಾದಿಸುವ ಮೂಲಕ ಗಾಯ ಮತ್ತು ಹಾನಿಯಿಂದ ಯಕೃತ್ತನ್ನು ರಕ್ಷಿಸಲು ಕಪ್ಪು ಜೀರಿಗೆ ಸಹಾಯ ಮಾಡುತ್ತದೆ.

ಹೊಟ್ಟೆಯ ಹುಣ್ಣುಗಳನ್ನು ತಡೆಯುತ್ತದೆ:

ಕಪ್ಪು ಜೀರಿಗೆ ಹೊಟ್ಟೆಯ ಒಳಪದರವನ್ನು ಸಂರಕ್ಷಿಸುತ್ತದೆ. ನಿಮ್ಮ ಹೊಟ್ಟೆಯ ಆಮ್ಲಗಳು ರಕ್ಷಣಾತ್ಮಕ ಲೋಳೆಯ ಪದರವನ್ನು ತಿನ್ನುವಾಗ ಉಂಟಾಗುವ ನೋವಿನ ಹುಣ್ಣುಗಳ ರಚನೆಯನ್ನು ತಡೆಯುತ್ತದೆ.

ಇದನ್ನೂ ಓದಿ: ರಕ್ತ ಪರೀಕ್ಷೆಯಿಂದ ಹೃದಯದ ಸಮಸ್ಯೆ ಪತ್ತೆಹಚ್ಚಬಹುದೇ?

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ಕಪ್ಪು ಜೀರಿಗೆ ಬೀಜಗಳು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಇದು ಹಾನಿಕಾರಕ ಸ್ವತಂತ್ರ ರಾಡಿಕಲ್​ಗಳನ್ನು ತಟಸ್ಥಗೊಳಿಸಲು ಮತ್ತು ಜೀವಕೋಶಗಳಿಗೆ ಆಕ್ಸಿಡೇಟಿವ್ ಹಾನಿಯನ್ನು ತಡೆಯಲು ಸಹಾಯ ಮಾಡುತ್ತದೆ. ಕಪ್ಪು ಜೀರಿಗೆ ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುತ್ತವೆ.

ನೆನಪಿನ ಶಕ್ತಿ ಹೆಚ್ಚಿಸುತ್ತದೆ:

ವಯಸ್ಸಾದಂತೆ ನೆನಪಿನ ಶಕ್ತಿ ಕಡಿಮೆಯಾಗುವುದು ಸಾಮಾನ್ಯ. ಹೀಗಾಗಿ, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕಪ್ಪು ಜೀರಿಗೆಯ ಜೊತೆ 1 ಚಮಚ ಜೇನುತುಪ್ಪ ಮಿಕ್ಸ್​ ಮಾಡಿಕೊಂಡು ಸೇವಿಸಿ. ಇದಾದ 30 ನಿಮಿಷಗಳ ನಂತರ ಉಪಾಹಾರ ಸೇವಿಸಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ