Ganesha Chaturthi 2024: ಗಣೇಶನಿಗೆ ಪ್ರಿಯವಾದ ಗರಿಕೆ ಹುಲ್ಲಿನಲ್ಲಿದೆ ಆರೋಗ್ಯ ಪ್ರಯೋಜನ

ಗರಿಕೆ ಹುಲ್ಲು ಅಥವಾ ದೂರ್ವೆ ಬಗ್ಗೆ ನಿಮಗೆ ತಿಳಿದಿರಬಹುದು. ಇದನ್ನು ಪೂಜೆ ಮಾಡುವಾಗ ಅಥವಾ ಹೋಮ- ಹವನಾದಿಗಳನ್ನು ಮಾಡುವಾಗ ಉಪಯೋಗಿಸಲಾಗುತ್ತದೆ. ಗಣಪನ ದೇವಸ್ಥಾನಗಳಲ್ಲಿ ಗರಿಕೆಯನ್ನು ಯಥೇಚ್ಛವಾಗಿ ಬಳಸಲಾಗುತ್ತದೆ. ಆದರೆ ಇದರ ಆರೋಗ್ಯ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯಾ? ಇದರ ಸೇವನೆಯಿಂದ ಆರೋಗ್ಯಕ್ಕೆ ಹಲವು ರೀತಿಯ ಪ್ರಯೋಜನಗಳಿವೆ. ಕಳೆಯಂತೆ ಬೆಳೆಯುವ ಈ ಸಸಿಯು ನಿಮ್ಮ ಆರೋಗ್ಯ ಸಮಸ್ಯೆಗಳನ್ನು ಹೇಗೆ ನಿವಾರಣೆ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ.

Ganesha Chaturthi 2024: ಗಣೇಶನಿಗೆ ಪ್ರಿಯವಾದ ಗರಿಕೆ ಹುಲ್ಲಿನಲ್ಲಿದೆ ಆರೋಗ್ಯ ಪ್ರಯೋಜನ
ಸಾಂದರ್ಭಿಕ ಚಿತ್ರ
Follow us
| Updated By: Digi Tech Desk

Updated on:Aug 30, 2024 | 10:07 AM

ಗಣೇಶನಿಗೆ ಪ್ರಿಯವಾದ ಗರಿಕೆ ಹುಲ್ಲು ಅಥವಾ ದೂರ್ವೆ ಬಗ್ಗೆ ನಿಮಗೆ ತಿಳಿದಿರಬಹುದು. ಇದನ್ನು ಪೂಜೆ ಮಾಡುವಾಗ ಅಥವಾ ಹೋಮ- ಹವನಾದಿಗಳನ್ನು ಮಾಡುವಾಗ ಉಪಯೋಗಿಸಲಾಗುತ್ತದೆ. ಗಣಪನ ದೇವಸ್ಥಾನಗಳಲ್ಲಿ ಗರಿಕೆಯನ್ನು ಯಥೇಚ್ಛವಾಗಿ ಬಳಸಲಾಗುತ್ತದೆ. ಆದರೆ ಇದರ ಆರೋಗ್ಯ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯಾ? ಇದರ ಸೇವನೆಯಿಂದ ಆರೋಗ್ಯಕ್ಕೆ ಹಲವು ರೀತಿಯ ಪ್ರಯೋಜನಗಳಿವೆ. ಕಳೆಯಂತೆ ಬೆಳೆಯುವ ಈ ಸಸಿಯು ನಿಮ್ಮ ಆರೋಗ್ಯ ಸಮಸ್ಯೆಗಳನ್ನು ಹೇಗೆ ನಿವಾರಣೆ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ.

  • ಮೂತ್ರನಾಳದ ಸೋಂಕು, ತುರಿಕೆ ಅಥವಾ ಅಲರ್ಜಿ ಇದ್ದಲ್ಲಿ ಗರಿಕೆ ಹುಲ್ಲಿನ ಕಷಾಯ ಕುಡಿಯುವುದರಿಂದ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ.
  • ದೂರ್ವೆಯನ್ನು ಜಜ್ಜಿ ರಸ ತೆಗೆದು ಅದಕ್ಕೆ ಸ್ವಲ್ಪ ಲಿಂಬೆರಸ ಹಾಗೂ ಸ್ವಲ್ಪ ಜೇನುತುಪ್ಪ ಸೇರಿಸಿ ನಿಯಮಿತವಾಗಿ ಸೇವಿಸುವುದರಿಂದ ಮೂತ್ರನಾಳಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.
  • ತಲೆನೋವು ಅಥವಾ ಮೈಗ್ರೇನ್ ಸಮಸ್ಯೆ ಇರುವವರು ಇದನ್ನು ಚೆನ್ನಾಗಿ ಜಜ್ಜಿ ಮೃದುವಾಗಿ ಪೇಸ್ಟ್ ಮಾಡಿಕೊಂಡು ಸ್ವಲ್ಪ ನಿಂಬೆ ಹಣ್ಣಿನ ರಸ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಇದನ್ನು ಹಣೆಗೆ ಹಚ್ಚಿಕೊಂಡು ಸ್ವಲ್ಪ ಹೊತ್ತು ಆರಾಮವಾಗಿ ಮಲಗಿ, ಈ ರೀತಿ ಮಾಡುವುದರಿಂದ ನಿಮ್ಮ ತಲೆನೋವು ಮಾಯವಾಗುತ್ತದೆ.​ ತಲೆನೋವು ಬಿಟ್ಟು ಬಿಟ್ಟು ಬರುತ್ತಿದ್ದರೂ ಕೂಡ ಈ ವಿಧಾನವನ್ನು ಅನುಸರಿಸಿ.
  • ಗರಿಕೆ ಹುಲ್ಲಿನ ರಸಕ್ಕೆ ಸ್ವಲ್ಪ ಬೆಲ್ಲ ಸೇರಿಸಿ ನಿಯಮಿತವಾಗಿ ಸೇವಿಸುವುದರಿಂದ ಪಿಸಿಓಡಿ, ಮುಟ್ಟಿನ ಸಮಸ್ಯೆ, ಅಧಿಕ ರಕ್ತಸ್ರಾವದಂತಹ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.
  • ಅಜೀರ್ಣ, ಹೊಟ್ಟೆಯುಬ್ಬರ, ಹುಳಿತೇಗು, ಮಲಬದ್ಧತೆ ಸಮಸ್ಯೆ ಸೇರಿದಂತೆ ಜೀರ್ಣಕ್ರಿಯೆಗೆ ಸಂಬಂಧಿತ ಸಮಸ್ಯೆಗಳ ನಿವಾರಣೆಗೆ ಗರಿಕೆ ಹುಲ್ಲು ರಾಮಬಾಣವಾಗಿದೆ. ಇದು ದೇಹದಿಂದ ವಿಷಕಾರಿ ಅಂಶಗಳನ್ನು ಹೊರ ಹಾಕುತ್ತದೆ.
  • ರಕ್ತವನ್ನು ಶುದ್ಧವಾಗಿ ಇಟ್ಟು ಕೊಳ್ಳಲು ಗರಿಕೆ ಹುಲ್ಲಿನ ಸೇವನೆ ಮಾಡಿ. ಗರಿಕೆ ಹುಲ್ಲಿನ ರಸವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನಲ್ಲಿ ಹಾಕಿ ಬೆರೆಸಿ ಸೇವನೆ ಮಾಡುವುದು ಒಳ್ಳೆಯದು. ಇದು ರಕ್ತ ಶುದ್ಧ ಮಾಡುವುದಲ್ಲದೆ ಇನ್ನಿತರ ಆರೋಗ್ಯ ಸಮಸ್ಯೆಗಳನ್ನು ಕೂಡ ನಿವಾರಣೆ ಮಾಡುತ್ತದೆ.

ಗಣೇಶ ಚತುರ್ಥಿ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:53 am, Fri, 30 August 24