AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Garlic Peels: ಬೆಳ್ಳುಳ್ಳಿಯಿಂದ ಮಾತ್ರವಲ್ಲ ಅದರ ಸಿಪ್ಪೆಯಿಂದಲೂ ಈ ರೋಗಗಳನ್ನು ನಿವಾರಿಸುವ ಶಕ್ತಿ ಇದೆ ಗೊತ್ತೇ?

ಬೆಳ್ಳುಳ್ಳಿ, ಈರುಳ್ಳಿ ಇಲ್ಲದಿದ್ದರೆ ಅದು ಮನೆಯೇ ಅಲ್ಲ, ಪ್ರತಿಯೊಂದು ಅಡುಗೆಯಲ್ಲೂ ಅದರ ಸ್ವಾದವನ್ನು ಮತ್ತಷ್ಟು ಹೆಚ್ಚಿಸಲು, ಇವುಗಳನ್ನು ಬಳಸುತ್ತೇವೆ.

Garlic Peels: ಬೆಳ್ಳುಳ್ಳಿಯಿಂದ ಮಾತ್ರವಲ್ಲ ಅದರ ಸಿಪ್ಪೆಯಿಂದಲೂ ಈ ರೋಗಗಳನ್ನು ನಿವಾರಿಸುವ ಶಕ್ತಿ ಇದೆ ಗೊತ್ತೇ?
Garlic Peels
TV9 Web
| Edited By: |

Updated on: Nov 07, 2022 | 9:59 AM

Share

ಬೆಳ್ಳುಳ್ಳಿ, ಈರುಳ್ಳಿ ಇಲ್ಲದಿದ್ದರೆ ಅದು ಮನೆಯೇ ಅಲ್ಲ, ಪ್ರತಿಯೊಂದು ಅಡುಗೆಯಲ್ಲೂ ಅದರ ಸ್ವಾದವನ್ನು ಮತ್ತಷ್ಟು ಹೆಚ್ಚಿಸಲು, ಇವುಗಳನ್ನು ಬಳಸುತ್ತೇವೆ. ಹಾಗೆಯೇ ಕೇವಲ ಬೆಳ್ಳುಳ್ಳಿಯಲ್ಲಿ ಮಾತ್ರವಲ್ಲ ಅದರ ಸಿಪ್ಪೆಯಲ್ಲೂ ಕೂಡ ರೋಗ ನಿರೋಧಕ ಶಕ್ತಿ ಇದೆ ಎಂಬುದು ನಿಮಗೆ ತಿಳಿದಿರಲಿಕ್ಕಿಲ್ಲ.

ನೀವು ಯಾವಾಗಲೂ ಬೆಳ್ಳುಳ್ಳಿ ಸಿಪ್ಪೆಗಳನ್ನು ಕಸದ ಜತೆ ಸೇರಿಸಿರಬಹುದು ಏಕೆಂದರೆ ಅದರ ಬಳಕೆ ಬಗ್ಗೆ ನಿಮಗೆ ಇನ್ನೂ ತಿಳಿದಂತಿಲ್ಲ. ಇದರ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದ್ದರೆ, ನೀವು ಬೆಳ್ಳುಳ್ಳಿಯ ಸಿಪ್ಪೆಗಳನ್ನು ಎಂದೂ ಬಿಸಾಡುವುದಿಲ್ಲ. ಏಕೆಂದರೆ ಇದು ನಿಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ.

ಬೆಳ್ಳುಳ್ಳಿ ಸಿಪ್ಪೆಯಿಂದಾಗುವ ಪ್ರಯೋಜನಗಳೇನು ಎನ್ನುವುದರ ಕುರಿತು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇದು ಆಂಟಿವೈರಲ್, ಆ್ಯಂಟಿ ಫಂಗಲ್ ಮತ್ತು ಆ್ಯಂಟಿ ಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿದ್ದು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ತರಕಾರಿಗಳು ಮತ್ತು ಸೂಪ್‌ಗಳಲ್ಲಿ ಬೆರೆಸಿ ಬಳಸಬಹುದು. ಅವುಗಳನ್ನು ಬೇಯಿಸಲಾಗುತ್ತದೆ ಎಂಬುದನ್ನು ನೆನಪಿನಲ್ಲಿಡಿ, ಇದರಿಂದಾಗಿ ಆಹಾರದ ಪೌಷ್ಟಿಕಾಂಶದ ಮೌಲ್ಯವು ಇನ್ನಷ್ಟು ಹೆಚ್ಚಾಗುತ್ತದೆ.

ಅಸ್ತಮಾ ಸಮಸ್ಯೆಯನ್ನು ನಿವಾರಿಸುತ್ತದೆ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವವರು ಬೆಳ್ಳುಳ್ಳಿ ಸಿಪ್ಪೆಯನ್ನು ಬಳಸಬಹುದು. ಇದಕ್ಕಾಗಿ, ನೀವು ಮೊದಲು ಸಿಪ್ಪೆಯನ್ನು ಚೆನ್ನಾಗಿ ಪುಡಿಮಾಡಿ ನಂತರ ಜೇನುತುಪ್ಪವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಬೆಳಿಗ್ಗೆ ಮತ್ತು ಸಂಜೆ ಸೇವಿಸಬೇಕು. ಇದು ಅಸ್ತಮಾ ರೋಗಿಗಳಿಗೆ ಪರಿಹಾರವನ್ನು ನೀಡುತ್ತದೆ.

ಚರ್ಮಕ್ಕೂ ಪ್ರಯೋಜನಕಾರಿ ಅವುಗಳು ಆಂಟಿ ಫಂಗಲ್ ಗುಣಲಕ್ಷಣಗಳನ್ನು ಹೊಂದಿದ್ದು ಅದು ನಿಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ತುರಿಕೆ ಸಮಸ್ಯೆಯನ್ನೂ ದೂರ ಮಾಡುತ್ತದೆ. ನಿಮಗೆ ಸಮಸ್ಯೆ ಇರುವಲ್ಲಿ ಬೆಳ್ಳುಳ್ಳಿ ಮತ್ತು ಅದರ ಸಿಪ್ಪೆಯ ನೀರನ್ನು ಲೇಪಿಸಬೇಕು. ಇದಲ್ಲದೇ ಮೊಡವೆ ಸಮಸ್ಯೆಯೂ ಇದರೊಂದಿಗೆ ಕೊನೆಗೊಳ್ಳುತ್ತದೆ.

ಊತ ಕಡಿಮೆಯಾಗುತ್ತದೆ ಉರಿಯೂತದ ಸಮಸ್ಯೆಯು ಬೆಳ್ಳುಳ್ಳಿ ಸಿಪ್ಪೆಯೊಂದಿಗೆ ಕೊನೆಗೊಳ್ಳುತ್ತದೆ. ಇದು ಊದಿಕೊಂಡ ಪಾದಗಳಿಗೆ ಉತ್ತಮ ಪರಿಹಾರವನ್ನು ನೀಡುತ್ತದೆ. ಇದಕ್ಕಾಗಿ, ಸಿಪ್ಪೆಯನ್ನು ನೀರಿನಲ್ಲಿ ಕುದಿಸಿ ಮತ್ತು ಅದರಲ್ಲಿ ಪಾದಗಳನ್ನು ಮುಳುಗಿಸಿ. ಇದು ನಿಮಗೆ ಪರಿಹಾರವನ್ನು ನೀಡುತ್ತದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ