AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ ಸ್ಟೋವ್ ಮನೆಯೊಳಗಿನ ಗಾಳಿಯನ್ನು ಮಾಲಿನ್ಯಗೊಳಿಸಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾ?

ಸಾಮಾನ್ಯವಾಗಿ ದಿನನಿತ್ಯದ ಅಡುಗೆ ಮಾಡಲು ಗ್ಯಾಸ್ ಸ್ಟೌವ್ ಬಳಸುವುದು ಸಹಜ. ಆದರೆ ಅಡುಗೆ ಮಾಡುವಾಗ ಒಳಾಂಗಣ ಗಾಳಿಯ ಗುಣಮಟ್ಟ ಕಡಿಮೆಯಾಗಬಹುದು. ಇದು ಆರೋಗ್ಯಕ್ಕೆ ಬಹಳ ಮುಖ್ಯವಾಗಿರುವುದರಿಂದ ಈ ರೀತಿಯ ಪರಿಸ್ಥಿತಿಯಲ್ಲಿ, ಗ್ಯಾಸ್ ಸ್ಟೌವ್‌ಗಳು ಮನೆಯಲ್ಲಿ ಗಾಳಿಯನ್ನು ಕಲುಷಿತಗೊಳಿಸಬಹುದೇ ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ. ಹಾಗಾದರೆ ಇದು ಯಾವ ರೀತಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಮನೆಯೊಳಗಿನ ಗಾಳಿ ಹರಿವನ್ನು ಸ್ವಚ್ಛವಾಗಿಡಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ

ಗ್ಯಾಸ್ ಸ್ಟೋವ್ ಮನೆಯೊಳಗಿನ ಗಾಳಿಯನ್ನು ಮಾಲಿನ್ಯಗೊಳಿಸಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾ?
Gas Stove PollutionImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 04, 2026 | 8:24 PM

Share

ಇಂದಿನ ಬಹುತೇಕ ಮನೆಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಸ್ಟೋವ್ (Gas Stove) ಬಳಸಲಾಗುತ್ತದೆ. ಆದರೆ ಮನೆಯ ಒಳಗಿನ ಗಾಳಿಯ ಗುಣಮಟ್ಟವೂ ಆರೋಗ್ಯಕ್ಕೆ ಬಹಳ ಮುಖ್ಯ ಎನ್ನಲಾಗುತ್ತದೆ. ವಿಶೇಷವಾಗಿ ಅಡುಗೆ ಮನೆಯಲ್ಲಿ ಉಂಟಾಗುವ ಹೊಗೆ ಮತ್ತು ಅನಿಲಗಳು ಮನೆಯ ಗಾಳಿಯನ್ನು ದುಷಿತಗೊಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಹೇಳುತ್ತಾರೆ. ಅಮೆರಿಕದ ಪರಿಸರ ಸಂರಕ್ಷಣಾ ಸಂಸ್ಥೆ (EPA) ಹೇಳಿರುವ ಪ್ರಕಾರ, ಗ್ಯಾಸ್ ಸ್ಟೋವ್ ಬಳಸುವ ವೇಳೆ ಕೆಲವು ಹಾನಿಕಾರಕ ಅನಿಲಗಳು ಮತ್ತು ಸೂಕ್ಷ್ಮ ಕಣಗಳು ಹೊರಬರುತ್ತವೆ. ಇದರಲ್ಲಿ ನೈಟ್ರೋಜನ್ ಡೈಆಕ್ಸೈಡ್ (NO₂), ಕಾರ್ಬನ್ ಮೋನಾಕ್ಸೈಡ್ (CO) ಮತ್ತು PM2.5 ಮಾದರಿಯ ಸೂಕ್ಷ್ಮ ಮಾಲಿನ್ಯ ಕಣಗಳು ಸೇರಿವೆ. ಇವು ಮನೆಯ ಒಳಗಿನ ಗಾಳಿಯ ಗುಣಮಟ್ಟವನ್ನು ಹಾಳು ಮಾಡಬಹುದು. ಹಾಗಾದರೆ ಮನೆಯೊಳಗಿನ ಗಾಳಿ ಹರಿವನ್ನು ಸ್ವಚ್ಛವಾಗಿಡಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ?

ಅಡುಗೆ ಮನೆಯಲ್ಲಿ ಸರಿಯಾದ ಗಾಳಿಯ ಹರಿವು ಇಲ್ಲದಿದ್ದರೆ ಈ ಮಾಲಿನ್ಯಕಾರಿ ಕಣಗಳು ಮನೆಯೊಳಗೆ ಸೇರುವ ಸಾಧ್ಯತೆ ಹೆಚ್ಚಿರುತ್ತದೆ. ವಿಶೇಷವಾಗಿ ಮಕ್ಕಳು, ವಯೋವೃದ್ಧರು ಮತ್ತು ಈಗಾಗಲೇ ಉಸಿರಾಟದ ಸಮಸ್ಯೆ ಹೊಂದಿರುವವರಿಗೆ ಇದು ಹೆಚ್ಚು ತೊಂದರೆ ಉಂಟುಮಾಡಬಹುದು. ಗ್ಯಾಸ್ ಸ್ಟೋವ್‌ನಿಂದ ಹೊರಬರುವ ಮಾಲಿನ್ಯಕಾರಕಗಳು ಉಸಿರಾಟದ ತೊಂದರೆ, ಗಂಟಲಿನ ಕೆರಡು, ಕಣ್ಣಿನ ಉರಿಯೂತ ಮತ್ತು ಅಲರ್ಜಿಗೆ ಕಾರಣವಾಗಬಹುದು. ಕೆಲವರಲ್ಲಿ ಅಸ್ತಮಾ ಸಮಸ್ಯೆಯನ್ನು ಹೆಚ್ಚಿಸುವ ಸಾಧ್ಯತೆಯೂ ಇದೆ. ದೀರ್ಘಕಾಲ ಇಂತಹ ವಾತಾವರಣದಲ್ಲಿ ಇರುವುದರಿಂದ ಶ್ವಾಸಕೋಶದ ಆರೋಗ್ಯದ ಮೇಲೂ ಪರಿಣಾಮ ಬೀಳಬಹುದು.

ಇದನ್ನೂ ಓದಿ: GBA 1KmChallenge: ಬೆಂಗಳೂರಲ್ಲಿ ಮಾಲಿನ್ಯ ತಡೆಯಲು ಜಿಬಿಎ ಮಾಸ್ಟರ್ ಪ್ಲಾನ್; ಮೊದಲು ಫುಟ್‌ಪಾತ್ ಸರಿ ಮಾಡಿ ಎಂದ ಜನ!

ಮನೆಯೊಳಗಿನ ಗಾಳಿ ಹರಿವನ್ನು ಸ್ವಚ್ಛವಾಗಿಡಲು ಏನು ಮಾಡಬೇಕು?

ಅಡುಗೆ ಮಾಡುವಾಗ ಮನೆಯ ಕಿಟಕಿಗಳನ್ನು ತೆರೆದಿಡುವುದು ಬಹಳ ಉತ್ತಮ. ಚಿಮ್ನಿ ಅಥವಾ ಎಗ್ಜಾಸ್ಟ್ ಫ್ಯಾನ್ ಬಳಸುವುದರಿಂದ ಹೊಗೆ ಮತ್ತು ಅನಿಲಗಳು ಹೊರಗೆ ಹೋಗಲು ಸಹಾಯವಾಗುತ್ತದೆ. ಗ್ಯಾಸ್ ಸ್ಟೋವ್ ಅನ್ನು ನಿಯಮಿತವಾಗಿ ಪರಿಶೀಲಿಸಿ ಸ್ವಚ್ಛವಾಗಿಡುವುದು ಕೂಡ ಮುಖ್ಯ. ಇದಲ್ಲದೆ, ಮನೆಯ ಒಳಗೆ ಮತ್ತು ಹೊರಗೆ ಗಾಳಿಯ ಹರಿವು ಇರಲು ಆದಷ್ಟು ಗಿಡಗಳನ್ನು ಬೆಳೆಸಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ