AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ಮಕ್ಕಳಲ್ಲಿ ದಿಢೀರ್ ಆಗಿ ಹೆಚ್ಚುತ್ತಿದೆ ಗ್ಯಾಸ್ಟ್ರೋಎಂಟರೈಟಿಸ್

Gastroenteritis: ಕಳೆದ 1 ತಿಂಗಳಲ್ಲಿ ಮಕ್ಕಳಲ್ಲಿ ಗ್ಯಾಸ್ಟ್ರೋಎಂಟರೈಟಿಸ್ ಲಕ್ಷಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಅಲ್ಲದೆ ಕೆಲವು ಮಕ್ಕಳಲ್ಲಿ ಕೈ, ಕಾಲು ಮತ್ತು ಬಾಯಿಯಲ್ಲಿ ದದ್ದುಗಳಾಗುವ ಸಮಸ್ಯೆಗಳು ಕಂಡುಬರುತ್ತಿವೆ. ಈ ರೀತಿಯ ಪ್ರಕರಣಗಳು ದಿನಕ್ಕೆ 3 ರಿಂದ 4 ವರದಿಯಾಗುತ್ತಿದ್ದು, ಕೆಲವೊಮ್ಮೆ ದಿನಕ್ಕೆ 6 ಪ್ರಕರಣಗಳು ವರದಿಯಾಗುತ್ತಿರುವುದು ಗಮನಿಸಬೇಕಾದ ಸಂಗತಿ. ಅದರಲ್ಲೂ ತಿಳಿಯಬೇಕಾದ ವಿಷಯವೆಂದರೆ ಬಹುತೇಕ 5 ವರ್ಷದೊಳಗಿನ ಮಕ್ಕಳಲ್ಲಿ ಈ ಸಮಸ್ಯೆ ಅಧಿಕವಾಗಿ ಕಂಡುಬರುತ್ತಿದೆ.

ಚಿಕ್ಕ ಮಕ್ಕಳಲ್ಲಿ ದಿಢೀರ್ ಆಗಿ ಹೆಚ್ಚುತ್ತಿದೆ ಗ್ಯಾಸ್ಟ್ರೋಎಂಟರೈಟಿಸ್
Gastroenteritis In Children
TV9 Web
| Edited By: |

Updated on: Dec 18, 2024 | 10:01 PM

Share

ವಾತಾವರಣ ಬದಲಾದಂತೆ ಆಯಾ ಸಮಯಕ್ಕನುಗುಣವಾಗಿ ಕೆಲವೊಂದು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಹಜ. ಅದರಂತೆ ಬೇಸಿಗೆ ಬಂತೆಂದರೆ ಆ ರಣಬಿಸಿಲಿಗೆ ಗ್ಯಾಸ್ಟ್ರೋಎಂಟರೈಟಿಸ್ ಸಮಸ್ಯೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಈ ಕೊರೆಯುವ ಚಳಿಯ ನಡುವೆಯೂ ಮಕ್ಕಳಲ್ಲಿ ಗ್ಯಾಸ್ಟ್ರೋಎಂಟರೈಟಿಸ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ಎಂಬ ಅಚ್ಚರಿಯ ಬೆಳವಣಿಗೆಯೊಂದನ್ನು ಮಕ್ಕಳ ತಜ್ಞರು ಹಂಚಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ದಿಢೀರ್ ಎಂದು ಕಾಣಿಸಿಕೊಂಡಿರುವ ಈ ಗ್ಯಾಸ್ಟ್ರೋಎಂಟರೈಟಿಸ್​ಗೆ ಕಾರಣಗಳೇನು? ಪೋಷಕರು ಈ ವೇಳೆ ಮಕ್ಕಳ ಬಗೆಗೆ ಯಾವ ರೀತಿಯ ಕಾಳಜಿ ವಹಿಸುವ ಅಗತ್ಯವಿದೆ ಎಂಬ ಮಾಹಿತಿ ಇಲ್ಲಿದೆ.

ಏನಿದು ಗ್ಯಾಸ್ಟ್ರೋಎಂಟರೈಟಿಸ್?:

ಇದೊಂದು ಜಠರ ಕರುಳಿನ ಕಾಯಿಲೆಯಾಗಿದ್ದು, ವಿವಿಧ ಕಾರಣಗಳಿಂದ ಮಕ್ಕಳಲ್ಲಿ ಈ ಸಮಸ್ಯೆಯು ಕಾಣಿಸಿಕೊಳ್ಳುತ್ತದೆ. ನಗರದಲ್ಲಿ ನವೆಂಬರ್​ನಲ್ಲಿ ಇಂತಹ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವುದು ಆಶ್ಚರ್ಯಕರ. ಈ ವೇಳೆ ಮಕ್ಕಳು ಮಲ, ವಾಂತಿ, ಹೊಟ್ಟೆ ನೋವು ಸೋಂಕಿಗೆ ತುತ್ತಾಗುತ್ತಿರುವುದು ನಮಗೂ ಒಂದು ರೀತಿಯ ಪ್ರಶ್ನೆಯಾಗಿದೆ ಎನ್ನುತ್ತಾರೆ ಬೆಂಗಳೂರಿನ ವಾಸವಿ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ. ಅಶೋಕ್ ಎಂ.ವಿ.

ಇದನ್ನೂ ಓದಿ: ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾವು; ಮದುವೆಯಾಗಿ 18ವರ್ಷಗಳ ಬಳಿಕ ಜನಿಸಿದ ಮಗುವಿನ ದುರಂತ ಅಂತ್ಯ

ಕಳೆದ 1 ತಿಂಗಳಲ್ಲಿ ಮಕ್ಕಳಲ್ಲಿ ಗ್ಯಾಸ್ಟ್ರೋಎಂಟರೈಟಿಸ್ ಲಕ್ಷಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಅಲ್ಲದೆ ಕೆಲವು ಮಕ್ಕಳಲ್ಲಿ ಕೈ, ಕಾಲು ಮತ್ತು ಬಾಯಿಯಲ್ಲಿ ದದ್ದುಗಳಾಗುವ ಸಮಸ್ಯೆಗಳು ಕಂಡುಬರುತ್ತಿವೆ. ಈ ರೀತಿಯ ಪ್ರಕರಣಗಳು ದಿನಕ್ಕೆ 3 ರಿಂದ 4 ವರದಿಯಾಗುತ್ತಿದ್ದು, ಕೆಲವೊಮ್ಮೆ ದಿನಕ್ಕೆ 6 ಪ್ರಕರಣಗಳು ವರದಿಯಾಗುತ್ತಿರುವುದು ಗಮನಿಸಬೇಕಾದ ಸಂಗತಿ. ಅದರಲ್ಲೂ ತಿಳಿಯಬೇಕಾದ ವಿಷಯವೆಂದರೆ ಬಹುತೇಕ 5 ವರ್ಷದೊಳಗಿನ ಮಕ್ಕಳಲ್ಲಿ ಈ ಸಮಸ್ಯೆ ಅಧಿಕವಾಗಿ ಕಂಡುಬರುತ್ತಿದೆ. ಈ ರೀತಿಯ ಸೋಂಕುಗಳು ಜ್ವರ, ನಂತರ ಕೈ, ಕಾಲು ಹಾಗೂ ಬಾಯಿಯಲ್ಲಿ ದದ್ದುಗಳ ಮೂಲಕ ಕಾಣಿಸಿಕೊಳ್ಳುತ್ತಿದೆ. ಬೇಸಿಗೆಯಲ್ಲಿ ವರದಿಯಾಗುತ್ತಿದ್ದ ಈ ರೀತಿಯ ಪ್ರಕರಣಗಳು ನವೆಂಬರ್ ನಲ್ಲಿ ವರದಿಯಾಗುತ್ತಿದೆ. ವರ್ಷದಲ್ಲಿ ಒಂದು ಅಥವಾ ಎರಡು ಬಾರಿ ವರದಿಯಾಗುತ್ತಿದ್ದ ಕೈ, ಕಾಲು, ಬಾಯಿಯ ದದ್ದು ಸಮಸ್ಯೆಗಳು ಇದೀಗ ಹೆಚ್ಚಾಗಿ ಕಂಡುಬರುತ್ತಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಮಾತನಾಡಿದ ವೈದ್ಯರು, ಕಳೆದ ಒಂದು ತಿಂಗಳಿನಿಂದ ಮಕ್ಕಳಲ್ಲಿ ವೈರಲ್ ಸೋಂಕುಗಳು ಉಲ್ಬಣವಾಗುತ್ತಿರುವುದನ್ನು ನೋಡುತ್ತಿದ್ದೇವೆ. ವಿಶೇಷವಾಗಿ ಶೀತ, ಕೆಮ್ಮು ಮತ್ತು ಜ್ವರದ ಸಮಸ್ಯೆಯುಳ್ಳ ಮಕ್ಕಳು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ. ಅಡೆನೊವೈರಸ್ ಸೋಂಕುಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಸಹ ನೋಡುತ್ತಿದ್ದೇವೆ. ಇದು ಸಾಮಾನ್ಯವಾಗಿ ಉಸಿರಾಟದ ಮೇಲೆ ಪ್ರಭಾವ ಬೀರುತ್ತದೆ. ಅಲ್ಲದೆ ಜ್ವರ, ಶೀತ, ಹೆಚ್1ಎನ್1 ಹಾಗೂ ಸೋಂಕಿನ ಲಕ್ಷಣಗಳನ್ನು ಹೊಂದಿರುತ್ತದೆ ಎಂದು ಹೇಳುತ್ತಾರೆ ವೈದ್ಯರು.

ಇದನ್ನೂ ಓದಿ: ದೇಶದಲ್ಲಿ ಪ್ರಸ್ತುತ 144 ಕೋಟಿ ಜನಸಂಖ್ಯೆ ಇದ್ದರೂ ಭಾರತ ಏಕೆ ಇನ್ನೂ ಹೆಚ್ಚು ಮಕ್ಕಳು ಬೇಕೆಂದು ಬಯಸುತ್ತಿದೆ?

ಪೋಷಕರಿಗೆ ಸಲಹೆ:

ಒಂದು ವೇಳೆ ನಿಮ್ಮ ಮಕ್ಕಳು ಅನಾರೋಗ್ಯದಿಂದ ಬಳಲುತ್ತಿದ್ದರೆ ಶಾಲೆಗೆ ಕಳುಹಿಸದಿರುವುದು ಉತ್ತಮ. ಏಕೆಂದರೆ ಅದು ಇತರ ಮಕ್ಕಳಿಗೂ ಹರಡುವ ಸಾಧ್ಯತೆಯಿರುತ್ತದೆ. ಮಕ್ಕಳಲ್ಲಿ ಅನಾರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಪೋಷಕರು ಮನೆಮದ್ದುಗಳಿಗೆ ಮೊರೆ ಹೋಗುವುದನ್ನು ನಿಲ್ಲಿಸಿ, ಅದರ ಬದಲಿಗೆ ಹತ್ತಿರದ ಮಕ್ಕಳ ತಜ್ಞರನ್ನು ಭೇಟಿ ಮಾಡುವುದು ಒಳಿತು. ವೈದ್ಯರ ಸಹಾಯದಿಂದ ಮಗುವಿನ ಆರೋಗ್ಯ ಚೇತರಿಕೆ ಕಾಣಲಿದೆ ಎಂದು ವಾಸವಿ ಆಸ್ಪತ್ರೆ ಮಕ್ಕಳ ತಜ್ಞರಾದ ಡಾ. ಅಶೋಕ್ ಎಂ.ವಿ ಸಲಹೆ ನೀಡಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ