AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಳುತಲೆ ಸಮಸ್ಯೆ ಹೊಂದಿರುವ ಪುರುಷರಲ್ಲಿ ಕೊರೊನಾ ವೈರಾಣು ಹೆಚ್ಚು ಪ್ರಭಾವ ಬೀರಬಲ್ಲದು!

ಕೊವಿಡ್‌ನಿಂದಾಗಿ ಆಸ್ಪತ್ರೆಗೆ ದಾಖಲಾದ ಪುರುಷರಲ್ಲಿ, ಶೇಕಡಾ 79 ರಷ್ಟು ಜನರು ಆಂಡ್ರೊಜೆನೆಟಿಕ್ ಅಲೋಪೆಸಿಯಾವನ್ನು ಹೊಂದಿದ್ದಾರೆ ಎಂದು ಫಲಿತಾಂಶಗಳು ಸೂಚಿಸಿದೆ.

ಬೋಳುತಲೆ ಸಮಸ್ಯೆ ಹೊಂದಿರುವ ಪುರುಷರಲ್ಲಿ ಕೊರೊನಾ ವೈರಾಣು ಹೆಚ್ಚು ಪ್ರಭಾವ ಬೀರಬಲ್ಲದು!
ಬೋಳುತಲೆ ಸಮಸ್ಯೆ
TV9 Web
| Edited By: |

Updated on:Aug 23, 2021 | 12:41 PM

Share

ನ್ಯೂಯಾರ್ಕ್: ಸಾಮಾನ್ಯ ರೀತಿಯ ಹಾರ್ಮೋನ್ ಸೂಕ್ಷ್ಮ ಕೂದಲು ಉದುರುವಿಕೆ ಸಮಸ್ಯೆ ಹೊಂದಿರುವ ಪುರುಷರು ಕೊವಿಡ್​ನಿಂದಾಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಹೆಚ್ಚು ಎಂದು ಸಂಶೋಧಕರು ಕಂಡುಹಿಡಿದಿದ್ದಾರೆ. ಆಂಡ್ರೊಜೆನೆಟಿಕ್ ಅಲೋಪೆಸಿಯಾವು ಶಾಶ್ವತವಾಗಿ ಕೂದಲು ಉದುರುವ ಸ್ಥಿತಿಯಾಗಿದ್ದು, ಬೋಳು ತಲೆ ಉಂಟಾಗುತ್ತದೆ. ಯುಎಸ್ ಮೂಲದ ಜೈವಿಕ ತಂತ್ರಜ್ಞಾನ ಕಂಪನಿ ಅಪ್ಲೈಡ್ ಬಯಾಲಜಿಯ ಸಂಶೋಧಕರ ನೇತೃತ್ವದಲ್ಲಿ ನಡೆಸಿದ ಅಧ್ಯಯನವು ಆಂಡ್ರೊಜೆನ್ ರಿಸೆಪ್ಟರ್ (ಎಆರ್) ಜೀನ್ ಮತ್ತು ಕೊವಿಡ್ -19 ನಡುವಿನ ಸಂಬಂಧವನ್ನು ಕಂಡುಹಿಡಿದಿದ್ದಾರೆ.

ಕೊವಿಡ್‌ನಿಂದಾಗಿ ಆಸ್ಪತ್ರೆಗೆ ದಾಖಲಾದ ಪುರುಷರಲ್ಲಿ, ಶೇಕಡಾ 79 ರಷ್ಟು ಜನರು ಆಂಡ್ರೊಜೆನೆಟಿಕ್ ಅಲೋಪೆಸಿಯಾವನ್ನು ಹೊಂದಿದ್ದಾರೆ ಎಂದು ಫಲಿತಾಂಶಗಳು ಸೂಚಿಸಿದೆ. ಆಂಡ್ರೊಜೆನೆಟಿಕ್ ಅಲೋಪೆಸಿಯಾವನ್ನು ಎಆರ್ ಜೀನ್‌ನಲ್ಲಿನ ವ್ಯತ್ಯಾಸಗಳಿಂದ ನಿಯಂತ್ರಿಸಲಾಗುತ್ತದೆ ಎಂದು ತಂಡವು ಕಂಡುಹಿಡಿದಿದೆ. ಇದು ಆಂಡ್ರೋಜೆನ್‌ಗಳಿಗೆ (ಟೆಸ್ಟೋಸ್ಟೆರಾನ್ ನಂತಹ ಹಾರ್ಮೋನುಗಳು) ದೇಹವು ಎಷ್ಟು ಸೂಕ್ಷ್ಮವಾಗಿರುತ್ತದೆ ಎಂಬುದರ ಮೇಲೆ ಪರಿಣಾಮ ಬೀರುತ್ತದೆ.

ಇದರ ಜೊತೆಯಲ್ಲಿ, ಕೊವಿಡ್-19 ಸೋಂಕಿಗೆ ಪ್ರಮುಖವಾದ ಟಿಎಂಪಿಆರ್​ಸ್ಎಸ್ 2 (TMPRSS 2) ಎಂಬ ಕಿಣ್ವವು ಆಂಡ್ರೊಜೆನ್ ಸೂಕ್ಷ್ಮವಾಗಿರುತ್ತದೆ ಮತ್ತು ಎಆರ್ ಜೀನ್‌ನಲ್ಲಿನ ವ್ಯತ್ಯಾಸಗಳಿಂದ ಪ್ರಭಾವಿತವಾಗಿರುತ್ತದೆ. ಅಧ್ಯಯನಕ್ಕಾಗಿ, ತಂಡವು ಕೋವಿಡ್‌ನೊಂದಿಗೆ ಆಸ್ಪತ್ರೆಗೆ ದಾಖಲಾದ 65 ಪುರುಷರ ಆನುವಂಶಿಕ ವಿಶ್ಲೇಷಣೆಯನ್ನು ನಡೆಸಿತ್ತು.

ಎಆರ್ ಜೀನ್‌ನಲ್ಲಿ ಕೆಲವು ರಚನಾತ್ಮಕ ವ್ಯತ್ಯಾಸಗಳನ್ನು ಹೊಂದಿರುವ ಪುರುಷರು ಇತರರಿಗಿಂತ ತೀವ್ರವಾದ ಕೊವಿಡ್ ಸೋಂಕು ಅಭಿವೃದ್ಧಿಪಡಿಸುವ ಸಾಧ್ಯತೆಯಿದೆ ಎಂದು ಅವರು ಕಂಡುಕೊಂಡಿದ್ದಾರೆ. ಮೇ 6-7 ರಂದು ಆನ್‌ಲೈನ್‌ನಲ್ಲಿ ನಡೆದ ಎರಡು ದಿನಗಳ ಇಎಡಿವಿಯ 2021 ಸ್ಪ್ರಿಂಗ್ ಸಿಂಪೋಸಿಯಂನಲ್ಲಿ ಈ ಸಂಶೋಧನೆಗಳನ್ನು ಪ್ರಸ್ತುತಪಡಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಯಿಂದ ಲಕ್ಷ ಲಕ್ಷ ಲೂಟಿ; ಬಿಲ್ ಫೊಟೊ ವೈರಲ್

ಕೊವಿಡ್ ವಾರ್ಡ್​ನಲ್ಲಿ ಹಾಡು, ನೃತ್ಯ; ಮಾನಸಿಕ ಖಿನ್ನತೆ ಕಡಿಮೆಯಾಗಿ ಸಂತಸದ ವಾತಾವರಣ ನಿರ್ಮಾಣ: ವಿಡಿಯೋ ನೋಡಿ

Published On - 8:54 pm, Sun, 9 May 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!