AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health News: ಚಿಕ್ಕ ವಯಸ್ಸಿನಲ್ಲೇ ಕಾಡುವ ಸಂಧಿವಾತ ಸಮಸ್ಯೆಯನ್ನು ನಿವಾರಿಸುವುದು ಹೇಗೆ?

ಸಂಧಿವಾತಕ್ಕೆ ಮುಖ್ಯ ಕಾರಣ ಅನಾರೋಗ್ಯಕರ ಆಹಾರ. ಉದಾಹರಣೆಗೆ ಮಾಂಸ, ಮದ್ಯ ಮತ್ತು ಫ್ರಕ್ಟೋಸ್ ಭರಿತ ಪಾನೀಯಗಳನ್ನು ಸೇವಿಸುವುದು. ಇದಲ್ಲದೆ, ನಮ್ಮ ದೇಹದಲ್ಲಿನ ಚಯಾಪಚಯ ಅಸ್ವಸ್ಥತೆಗಳು ಮತ್ತು ಸ್ಥೂಲಕಾಯತೆಯಿಂದ ಸಂಧಿವಾತ ಉಂಟಾಗುತ್ತದೆ.

Health News: ಚಿಕ್ಕ ವಯಸ್ಸಿನಲ್ಲೇ ಕಾಡುವ ಸಂಧಿವಾತ ಸಮಸ್ಯೆಯನ್ನು ನಿವಾರಿಸುವುದು ಹೇಗೆ?
ಅಕ್ಷತಾ ವರ್ಕಾಡಿ
|

Updated on:Aug 04, 2024 | 7:22 PM

Share

ಹಿಂದೆ, ವಯಸ್ಸಾದವರಲ್ಲಿ ಸಂಧಿವಾತವು ಹೆಚ್ಚಾಗಿ ಕಂಡುಬರುತ್ತಿತ್ತು. ಆದರೆ ಈಗ ಯುವಜನತೆ ಕೂಡ ಸಂಧಿವಾತ ಸಮಸ್ಯೆಗೆ ಸಿಲುಕುತ್ತಿದ್ದಾರೆ. ಈ ಸಮಸ್ಯೆಗೆ ಸಮಯಕ್ಕೆ ಚಿಕಿತ್ಸೆ ನೀಡದಿದ್ದರೆ, ಅದು ಉಲ್ಬಣಗೊಳ್ಳುತ್ತದೆ. ಸಮಸ್ಯೆ ನಿವಾರನೆಯಲ್ಲಿ ಜೀವನಶೈಲಿ ಮತ್ತು ಆಹಾರಕ್ರಮವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಂಧಿವಾತಕ್ಕೆ ಮುಖ್ಯ ಕಾರಣ ಅನಾರೋಗ್ಯಕರ ಆಹಾರ. ಉದಾಹರಣೆಗೆ ದೊಡ್ಡ ಪ್ರಮಾಣದಲ್ಲಿ ಮಾಂಸ, ಮದ್ಯ ಮತ್ತು ಫ್ರಕ್ಟೋಸ್ ಭರಿತ ಪಾನೀಯಗಳನ್ನು ಸೇವಿಸುವುದು. ಇದಲ್ಲದೆ, ನಮ್ಮ ದೇಹದಲ್ಲಿನ ಚಯಾಪಚಯ ಅಸ್ವಸ್ಥತೆಗಳು ಮತ್ತು ಸ್ಥೂಲಕಾಯತೆಯಿಂದ ಸಂಧಿವಾತ ಉಂಟಾಗುತ್ತದೆ.

ತಜ್ಞರ ಪ್ರಕಾರ, ದೇಹದಲ್ಲಿ ಆಮ್ಲದ ಪ್ರಮಾಣ ಹೆಚ್ಚಾದಾಗ ಸಂಧಿವಾತವು ನೋವನ್ನು ಉಂಟುಮಾಡುತ್ತದೆ. ಆದ್ದರಿಂದ ದೇಹದ ಪಿಹೆಚ್ ಮಟ್ಟವನ್ನು ಸಮತೋಲನಗೊಳಿಸುವುದು ಬಹಳ ಮುಖ್ಯ.

ಒಮೇಗಾ 3:

ಮೀನು ಮತ್ತು ಮೀನಿನ ಎಣ್ಣೆಯಲ್ಲಿ ಕಂಡುಬರುವ ಒಮೆಗಾ -3 ಕೊಬ್ಬಿನಾಮ್ಲಗಳು ಸಂಧಿವಾತ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಹಣ್ಣು ಮತ್ತು ತರಕಾರಿ, ಧಾನ್ಯಗಳು, ಕಡಿಮೆ-ಕೊಬ್ಬಿನ ಡೈರಿ ಉತ್ಪನ್ನಗಳು, ಮೀನು ಮತ್ತು ಟರ್ಕಿ ಮತ್ತು ಹಂದಿಮಾಂಸದಂತಹ ನೇರ ಮಾಂಸಗಳಲ್ಲಿ ಸಮೃದ್ಧವಾಗಿರುವ ಆಹಾರವು ಸಂಧಿವಾತ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಶುಂಠಿ:

ಸಂಧಿವಾತ ಸಮಸ್ಯೆಗಳಿಗೂ ಶುಂಠಿ ಅತ್ಯುತ್ತಮ ಪರಿಹಾರವಾಗಿದೆ. ಶುಂಠಿಯು ಉರಿಯೂತ ನಿವಾರಕ ಗುಣಗಳಿಂದ ಸಮೃದ್ಧವಾಗಿದೆ. ಕೀಲು ನೋವಿಗೆ ಶುಂಠಿ ಟೀ ತೆಗೆದುಕೊಳ್ಳುವುದರ ಜೊತೆಗೆ ಶುಂಠಿಯನ್ನು ರುಬ್ಬಿ ಊತ-ನೋವು ಇರುವ ಜಾಗಕ್ಕೆ ಹಚ್ಚಿದರೆ ಉತ್ತಮ ಉಪಶಮನ ದೊರೆಯುತ್ತದೆ. ಶುಂಠಿ ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಈ ಹಣ್ಣು ಸೇವನೆ ಮಾಡಿ ಎಲ್ಲಾ ಕಾಯಿಲೆಗೂ ಗುಡ್ ಬೈ ಹೇಳಿ

ವ್ಯಾಯಾಮ:

ಸಂಧಿವಾತ ಸಮಸ್ಯೆಯಿಂದ ಬಳಲುತ್ತಿರುವವರು ವ್ಯಾಯಾಮವನ್ನು ರೂಢಿಸಿಕೊಳ್ಳಬೇಕು. ಲಘು ಜಿಗಿತ, ನಡಿಗೆ, ನಿಧಾನವಾಗಿ ಓಡುವುದು ಸ್ನಾಯುಗಳನ್ನು ಬಲಪಡಿಸುತ್ತದೆ. ಈ ರೀತಿಯ ವ್ಯಾಯಾಮವನ್ನು ಮಾಡುವುದರಿಂದ ನೀವು ಶಕ್ತಿಯನ್ನು ಪಡೆಯುವ ಮೂಲಕ ಈ ಸಮಸ್ಯೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:22 pm, Sun, 4 August 24

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು