AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ooty: ‘ಡೇರ್’​ಗಾಗಿ 40 ಐರನ್ ಟ್ಯಾಬ್ಲೆಟ್ ನುಂಗಿದ ವಿದ್ಯಾರ್ಥಿನಿ ಸಾವು!

ಘಟನೆಯ ಕುರಿತು ಪೊಲೀಸರು (Police) ತನಿಖೆ ನಡೆಸಿದಾಗ ಮೃತ 8 ನೇ ತರಗತಿಯ ವಿದ್ಯಾರ್ಥಿನಿ ಸುಮಾರು 45 ಮಾತ್ರೆಗಳನ್ನು ಸೇವಿಸಿದ್ದಾರೆ, ಇತರರು 10-20 ಮಾತ್ರೆಗಳನ್ನು ನುಂಗಿದ್ದಾರೆ ಎಂದು ತಿಳಿಸಿದರು.

Ooty: 'ಡೇರ್'​ಗಾಗಿ 40 ಐರನ್ ಟ್ಯಾಬ್ಲೆಟ್ ನುಂಗಿದ ವಿದ್ಯಾರ್ಥಿನಿ ಸಾವು!
Ooty Student
ನಯನಾ ಎಸ್​ಪಿ
|

Updated on: Mar 10, 2023 | 4:30 PM

Share

ಉದಗಮಂಗಳ: ಊಟಿ (Ooty) ಶಾಲೆಯ ವಿದ್ಯಾರ್ಥಿನಿಯಾದ 13 ವರ್ಷದ ಬಾಲಕಿ ಸೋಮವಾರ ಅತಿಯಾದ ಕಬ್ಬಿಣ (Iron)ಮತ್ತು ಫೋಲಿಕ್ ಆಸಿಡ್ (Folic Acid) ಮಾತ್ರೆಗಳನ್ನು ಸೇವಿಸಿದ ಕಾರಣ ಗುರುವಾರ (ಮಾರ್ಚ್ 9) ಸಾವನ್ನಪ್ಪಿದ್ದಾಳೆ. ಆಕೆಯನ್ನು ಚೆನ್ನೈನ ಸರ್ಕಾರಿ ಸ್ಟಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಸಪ್ಲಿಮೆಂಟ್‌ನ ಅತಿಯಾದ ಸೇವನೆಯಿಂದ ಉಂಟಾದ ಲಿವರ್ ವೈಫಲ್ಯದಿಂದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಘಟನೆಯ ಕುರಿತು ಪೊಲೀಸರು (Police) ತನಿಖೆ ನಡೆಸಿದಾಗ ಮೃತ 8 ನೇ ತರಗತಿಯ ವಿದ್ಯಾರ್ಥಿನಿ ಸುಮಾರು 45 ಮಾತ್ರೆಗಳನ್ನು ಸೇವಿಸಿದ್ದಾರೆ, ಇತರರು 10-20 ಮಾತ್ರೆಗಳನ್ನು ನುಂಗಿದ್ದಾರೆ ಎಂದು ತಿಳಿಸಿದರು.

ಪೌಷ್ಠಿಕಾಂಶ ಯೋಜನೆಯ ಅಂಗವಾಗಿ ಸರ್ಕಾರಿ ಆರೋಗ್ಯ ಇಲಾಖೆ ವಿದ್ಯಾರ್ಥಿಗಳು ಪ್ರತಿದಿನ ಒಂದು ಮಾತ್ರೆ ಸೇವಿಸಬೇಕೆಂದು, ಎರಡು ತಿಂಗಳ ಕಾಲ 50 ಮಾತ್ರೆಗಳ ಬ್ಯಾಚ್ ನೀಡಲಾಗಿತ್ತು. ನೀಡಿದ ಕಬ್ಬಿಣಾಂಶ ಮತ್ತು ಪೌಷ್ಟಿಕಾಂಶದ ಮಾತ್ರೆಗಳನ್ನು ಯಾರು ಹೆಚ್ಚು ತಿನ್ನಬಹುದು ಎಂದು ಮಾರ್ಚ್ 6 ರಂದು 8 ನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರು ‘ಡೇರ್’ ಆಟ ಆಡಿದರು. ಹಲವಾರು ಮಾತ್ರೆಗಳನ್ನು ಸೇವಿಸಿದ ನಂತರ ವಿದ್ಯಾರ್ಥಿಗಳು ತರಗತಿಯಲ್ಲಿ ಅಸ್ವಸ್ಥಗೊಂಡರು. ಈ ವಿದ್ಯಾರ್ಥಿಗಳನ್ನು ಕೊಯಮತ್ತೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ಜೈನಬಾ ಫಾತಿಮಾ (13) ಎಂಬ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಇನ್ನುಳಿದ ಮೂವರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಲಿವರ್ ತೀವ್ರವಾಗಿ ಹಾನಿಗೊಳಗಾದ ಒಬ್ಬ ವಿದ್ಯಾರ್ಥಿನಿ ಐಸಿಯು ಘಟಕದಲ್ಲಿದ್ದಾರೆ.

ಇಂಡಿಯನ್ ಎಕ್ಸ್’ಪ್ರೆಸ್ ವರದಿಯ ಪ್ರಕಾರ ಆಕೆಯನ್ನು ಚೆನ್ನೈಗೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಸೇಲಂ ಬಳಿ ಬಂದಾಗ ಆಕೆಯ ಸ್ಥಿತಿಗಂಭೀರವಾಗಿತ್ತು. ಆಕೆಯನ್ನು ಸೇಲಂ ಜಿಎಚ್‌ ಆಸ್ಪತ್ರೆಯಲ್ಲಿ ಆಗಮನದ ವೇಳೆ ಸಾವನ್ನಪ್ಪಿದ್ದಾಳೆ ಎಂದು ಘೋಷಿಸಲಾಯಿತು ಎಂದು CMCH ಡೀನ್ ಡಾ ಎ.ನಿರ್ಮಲಾ ಹೇಳಿದ್ದಾರೆ.

“ಇಬ್ಬರು ಹುಡುಗಿಯರ ಸ್ಥಿತಿ ಸ್ಥಿರವಾಗಿದೆ, ಆದರೆ ಇನ್ನೂ ಒಬ್ಬ ಹುಡುಗಿಗೆ ಲಿವರ್ ಹಾನಿಯಾಗಿದೆ” ಎಂದು ವೈದ್ಯರು ಹೇಳಿದರು. ಆರೋಗ್ಯ ಸೇವೆಗಳ ಉಪ ನಿರ್ದೇಶಕ ಪಿ ಬಾಲುಸಾಮಿ ಮಾತನಾಡಿ, ಸಂತ್ರಸ್ತೆ ಸುಮಾರು 45 ಮಾತ್ರೆಗಳನ್ನು ಸೇವಿಸಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿ: ಮೋಸ ಮಾಡಿ ಹಣ ಲೂಟಿ, ಪತಿ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಪತ್ನಿ, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದ ಗ್ರಾಹಕ ನ್ಯಾಯಾಲಯ

ಮುನ್ಸಿಪಲ್ ಶಾಲೆಯ ಮುಖ್ಯೋಪಾಧ್ಯಾಯ ಮೊಹಮ್ಮದ್ ಅಮೀನ್ ಮತ್ತು ಮಾತ್ರೆ ವಿತರಣೆಯ ಮೇಲ್ವಿಚಾರಕ ಕಲೈವಾಣಿ ಮತ್ತು ಶಾಲೆಯ ಶಿಕ್ಷಕಿಯನ್ನು ಜಿಲ್ಲಾ ಶಿಕ್ಷಣಾಧಿಕಾರಿ ಅಮಾನತುಗೊಳಿಸಿದ್ದಾರೆ.

ಘಟನೆ ನಡೆದ ದಿನ ಶಿಕ್ಷಕಿ ಕಲೈವಾಣಿ ಶಾಲೆಗೆ ಬಾರದೇ ಇದ್ದ ಕಾರಣ ಅವರ ಮೇಜಿನ ಮೇಲಿದ್ದ ಮಾತ್ರೆಗಳನ್ನು ತೆಗೆದುಕೊಂಡು ವಿದ್ಯಾರ್ಥಿಗಳು ತಿಂದಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.

ಶಾಲೆಯಲ್ಲಿ ಒಟ್ಟು 249 ವಿದ್ಯಾರ್ಥಿಗಳಿದ್ದಾರೆ.

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ