AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ooty: ‘ಡೇರ್’​ಗಾಗಿ 40 ಐರನ್ ಟ್ಯಾಬ್ಲೆಟ್ ನುಂಗಿದ ವಿದ್ಯಾರ್ಥಿನಿ ಸಾವು!

ಘಟನೆಯ ಕುರಿತು ಪೊಲೀಸರು (Police) ತನಿಖೆ ನಡೆಸಿದಾಗ ಮೃತ 8 ನೇ ತರಗತಿಯ ವಿದ್ಯಾರ್ಥಿನಿ ಸುಮಾರು 45 ಮಾತ್ರೆಗಳನ್ನು ಸೇವಿಸಿದ್ದಾರೆ, ಇತರರು 10-20 ಮಾತ್ರೆಗಳನ್ನು ನುಂಗಿದ್ದಾರೆ ಎಂದು ತಿಳಿಸಿದರು.

Ooty: 'ಡೇರ್'​ಗಾಗಿ 40 ಐರನ್ ಟ್ಯಾಬ್ಲೆಟ್ ನುಂಗಿದ ವಿದ್ಯಾರ್ಥಿನಿ ಸಾವು!
Ooty Student
Follow us
ನಯನಾ ಎಸ್​ಪಿ
|

Updated on: Mar 10, 2023 | 4:30 PM

ಉದಗಮಂಗಳ: ಊಟಿ (Ooty) ಶಾಲೆಯ ವಿದ್ಯಾರ್ಥಿನಿಯಾದ 13 ವರ್ಷದ ಬಾಲಕಿ ಸೋಮವಾರ ಅತಿಯಾದ ಕಬ್ಬಿಣ (Iron)ಮತ್ತು ಫೋಲಿಕ್ ಆಸಿಡ್ (Folic Acid) ಮಾತ್ರೆಗಳನ್ನು ಸೇವಿಸಿದ ಕಾರಣ ಗುರುವಾರ (ಮಾರ್ಚ್ 9) ಸಾವನ್ನಪ್ಪಿದ್ದಾಳೆ. ಆಕೆಯನ್ನು ಚೆನ್ನೈನ ಸರ್ಕಾರಿ ಸ್ಟಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಸಪ್ಲಿಮೆಂಟ್‌ನ ಅತಿಯಾದ ಸೇವನೆಯಿಂದ ಉಂಟಾದ ಲಿವರ್ ವೈಫಲ್ಯದಿಂದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಘಟನೆಯ ಕುರಿತು ಪೊಲೀಸರು (Police) ತನಿಖೆ ನಡೆಸಿದಾಗ ಮೃತ 8 ನೇ ತರಗತಿಯ ವಿದ್ಯಾರ್ಥಿನಿ ಸುಮಾರು 45 ಮಾತ್ರೆಗಳನ್ನು ಸೇವಿಸಿದ್ದಾರೆ, ಇತರರು 10-20 ಮಾತ್ರೆಗಳನ್ನು ನುಂಗಿದ್ದಾರೆ ಎಂದು ತಿಳಿಸಿದರು.

ಪೌಷ್ಠಿಕಾಂಶ ಯೋಜನೆಯ ಅಂಗವಾಗಿ ಸರ್ಕಾರಿ ಆರೋಗ್ಯ ಇಲಾಖೆ ವಿದ್ಯಾರ್ಥಿಗಳು ಪ್ರತಿದಿನ ಒಂದು ಮಾತ್ರೆ ಸೇವಿಸಬೇಕೆಂದು, ಎರಡು ತಿಂಗಳ ಕಾಲ 50 ಮಾತ್ರೆಗಳ ಬ್ಯಾಚ್ ನೀಡಲಾಗಿತ್ತು. ನೀಡಿದ ಕಬ್ಬಿಣಾಂಶ ಮತ್ತು ಪೌಷ್ಟಿಕಾಂಶದ ಮಾತ್ರೆಗಳನ್ನು ಯಾರು ಹೆಚ್ಚು ತಿನ್ನಬಹುದು ಎಂದು ಮಾರ್ಚ್ 6 ರಂದು 8 ನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರು ‘ಡೇರ್’ ಆಟ ಆಡಿದರು. ಹಲವಾರು ಮಾತ್ರೆಗಳನ್ನು ಸೇವಿಸಿದ ನಂತರ ವಿದ್ಯಾರ್ಥಿಗಳು ತರಗತಿಯಲ್ಲಿ ಅಸ್ವಸ್ಥಗೊಂಡರು. ಈ ವಿದ್ಯಾರ್ಥಿಗಳನ್ನು ಕೊಯಮತ್ತೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ಜೈನಬಾ ಫಾತಿಮಾ (13) ಎಂಬ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಇನ್ನುಳಿದ ಮೂವರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಲಿವರ್ ತೀವ್ರವಾಗಿ ಹಾನಿಗೊಳಗಾದ ಒಬ್ಬ ವಿದ್ಯಾರ್ಥಿನಿ ಐಸಿಯು ಘಟಕದಲ್ಲಿದ್ದಾರೆ.

ಇಂಡಿಯನ್ ಎಕ್ಸ್’ಪ್ರೆಸ್ ವರದಿಯ ಪ್ರಕಾರ ಆಕೆಯನ್ನು ಚೆನ್ನೈಗೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಸೇಲಂ ಬಳಿ ಬಂದಾಗ ಆಕೆಯ ಸ್ಥಿತಿಗಂಭೀರವಾಗಿತ್ತು. ಆಕೆಯನ್ನು ಸೇಲಂ ಜಿಎಚ್‌ ಆಸ್ಪತ್ರೆಯಲ್ಲಿ ಆಗಮನದ ವೇಳೆ ಸಾವನ್ನಪ್ಪಿದ್ದಾಳೆ ಎಂದು ಘೋಷಿಸಲಾಯಿತು ಎಂದು CMCH ಡೀನ್ ಡಾ ಎ.ನಿರ್ಮಲಾ ಹೇಳಿದ್ದಾರೆ.

“ಇಬ್ಬರು ಹುಡುಗಿಯರ ಸ್ಥಿತಿ ಸ್ಥಿರವಾಗಿದೆ, ಆದರೆ ಇನ್ನೂ ಒಬ್ಬ ಹುಡುಗಿಗೆ ಲಿವರ್ ಹಾನಿಯಾಗಿದೆ” ಎಂದು ವೈದ್ಯರು ಹೇಳಿದರು. ಆರೋಗ್ಯ ಸೇವೆಗಳ ಉಪ ನಿರ್ದೇಶಕ ಪಿ ಬಾಲುಸಾಮಿ ಮಾತನಾಡಿ, ಸಂತ್ರಸ್ತೆ ಸುಮಾರು 45 ಮಾತ್ರೆಗಳನ್ನು ಸೇವಿಸಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿ: ಮೋಸ ಮಾಡಿ ಹಣ ಲೂಟಿ, ಪತಿ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಪತ್ನಿ, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದ ಗ್ರಾಹಕ ನ್ಯಾಯಾಲಯ

ಮುನ್ಸಿಪಲ್ ಶಾಲೆಯ ಮುಖ್ಯೋಪಾಧ್ಯಾಯ ಮೊಹಮ್ಮದ್ ಅಮೀನ್ ಮತ್ತು ಮಾತ್ರೆ ವಿತರಣೆಯ ಮೇಲ್ವಿಚಾರಕ ಕಲೈವಾಣಿ ಮತ್ತು ಶಾಲೆಯ ಶಿಕ್ಷಕಿಯನ್ನು ಜಿಲ್ಲಾ ಶಿಕ್ಷಣಾಧಿಕಾರಿ ಅಮಾನತುಗೊಳಿಸಿದ್ದಾರೆ.

ಘಟನೆ ನಡೆದ ದಿನ ಶಿಕ್ಷಕಿ ಕಲೈವಾಣಿ ಶಾಲೆಗೆ ಬಾರದೇ ಇದ್ದ ಕಾರಣ ಅವರ ಮೇಜಿನ ಮೇಲಿದ್ದ ಮಾತ್ರೆಗಳನ್ನು ತೆಗೆದುಕೊಂಡು ವಿದ್ಯಾರ್ಥಿಗಳು ತಿಂದಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.

ಶಾಲೆಯಲ್ಲಿ ಒಟ್ಟು 249 ವಿದ್ಯಾರ್ಥಿಗಳಿದ್ದಾರೆ.

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ