Weight Loss Tips: ಹಸಿ ಮೆಣಸಿನಕಾಯಿ ತಿಂದರೂ ತೂಕ ಇಳಿಯುತ್ತೆ ಗೊತ್ತಾ!

Green Chilli Benefits: ಪ್ರತಿದಿನ ನಿಮ್ಮ ಆಹಾರದಲ್ಲಿ ಒಂದು ಹಸಿ ಮೆಣಸಿನಕಾಯಿಯನ್ನು ಸೇರಿಸಿದರೆ ಅದು ದೇಹದ ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ. ಹಾಗೇ, ಇದರ ಸೇವನೆಯು ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ದೂರ ಮಾಡುತ್ತದೆ.

Weight Loss Tips: ಹಸಿ ಮೆಣಸಿನಕಾಯಿ ತಿಂದರೂ ತೂಕ ಇಳಿಯುತ್ತೆ ಗೊತ್ತಾ!
ಹಸಿ ಮೆಣಸಿನಕಾಯಿImage Credit source: iStock
Follow us
|

Updated on:Nov 15, 2023 | 11:02 AM

ತೂಕ ಇಳಿಸಿಕೊಳ್ಳಲು ಜನರು ಏನೇನೋ ಕಸರತ್ತು ಮಾಡುತ್ತಾರೆ. ಆದರೆ, ನಾವು ದಿನನಿತ್ಯ ಸೇವಿಸುವ ಆಹಾರದಿಂದಲೇ ಕೆಲವೊಮ್ಮೆ ದೇಹದ ಕೊಬ್ಬು ಕರಗಿಸಬಹುದು. ಅದಕ್ಕೆ ಹಸಿ ಮೆಣಸಿನಕಾಯಿಯೂ ಹೊರತಾಗಿಲ್ಲ. ಹಸಿರು ಮೆಣಸಿನಕಾಯಿ ಆಹಾರದ ರುಚಿ ಮತ್ತು ಖಾರವನ್ನು ಹೆಚ್ಚಿಸುವುದು ಮಾತ್ರವಲ್ಲದೆ ಆರೋಗ್ಯಕ್ಕೂ ಉತ್ತಮ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಹಸಿ ಮೆಣಸಿನಕಾಯಿಯು ಹಲವು ಔಷಧೀಯ ಗುಣಗಳಿಂದ ತುಂಬಿದೆ. ಈ ಹಸಿ ಮೆಣಸಿನಕಾಯಿ ನಿಮ್ಮ ತೂಕ ಇಳಿಸಲು ಕೂಡ ಸಹಾಯ ಮಾಡುತ್ತದೆ.

ಪ್ರತಿದಿನ ನಿಮ್ಮ ಆಹಾರದಲ್ಲಿ ಒಂದು ಹಸಿ ಮೆಣಸಿನಕಾಯಿಯನ್ನು ಸೇರಿಸಿದರೆ ಅದು ದೇಹದ ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ. ಹಾಗೇ, ಇದರ ಸೇವನೆಯು ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ದೂರ ಮಾಡುತ್ತದೆ. ಹಸಿರು ಮೆಣಸಿನಕಾಯಿಯಲ್ಲಿ ವಿಟಮಿನ್ ಎ, ವಿಟಮಿನ್ ಬಿ 6, ವಿಟಮಿನ್ ಸಿ, ಕಬ್ಬಿಣ, ತಾಮ್ರ, ಪೊಟ್ಯಾಸಿಯಮ್, ಪ್ರೋಟೀನ್ ಮತ್ತು ಬೀಟಾ-ಕ್ಯಾರೋಟಿನ್ ನಂತಹ ಅಂಶಗಳಿವೆ. ಇದು ನಿಮ್ಮನ್ನು ಅನೇಕ ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಹಸಿ ಮೆಣಸಿನಕಾಯಿಯನ್ನು ಪ್ರತಿನಿತ್ಯ ತಿನ್ನುವುದರಿಂದ ಏನೆಲ್ಲ ಆರೋಗ್ಯ ಪ್ರಯೋಜನಗಳಿವೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: ನೆಲ್ಲಿಕಾಯಿಯಿಂದ ಮಜ್ಜಿಗೆಯವರೆಗೆ; ಕೊಲೆಸ್ಟ್ರಾಲ್ ಕಡಿಮೆ ಮಾಡುವ 5 ಪಾನೀಯಗಳಿವು

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ನೀವು ಪ್ರತಿದಿನ 1 ಹಸಿರು ಮೆಣಸಿನಕಾಯಿಯನ್ನು ಸೇವಿಸಿದರೆ, ಅದರಲ್ಲಿರುವ ವಿಟಮಿನ್ ಸಿ ಮತ್ತು ವಿಟಮಿನ್ ಎ ನಿಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ವೈರಲ್ ಸೋಂಕಿನಿಂದ ನಿಮ್ಮನ್ನು ರಕ್ಷಿಸುತ್ತದೆ.

ರಕ್ತದೊತ್ತಡವನ್ನು ಹತೋಟಿಯಲ್ಲಿಡುತ್ತದೆ:

ಅಧಿಕ ರಕ್ತದೊತ್ತಡವಿರುವ ರೋಗಿಗಳು ದಿನನಿತ್ಯ 1 ಹಸಿ ಮೆಣಸಿನಕಾಯಿಯನ್ನು ತಮ್ಮ ಆಹಾರದಲ್ಲಿ ಸೇರಿಸಿದರೆ ಅದು ಬಹಳ ಪ್ರಯೋಜನಕಾರಿ. ಏಕೆಂದರೆ ಇದರಲ್ಲಿ ಕಂಡುಬರುವ ಆ್ಯಂಟಿಹೈಪರ್​ಟೆನ್ಸಿವ್ ಗುಣಲಕ್ಷಣಗಳು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಕಣ್ಣುಗಳನ್ನು ಆರೋಗ್ಯವಾಗಿಡುತ್ತದೆ:

ನೀವು ಪ್ರತಿದಿನ 1 ಹಸಿರು ಮೆಣಸಿನಕಾಯಿಯನ್ನು ಸೇವಿಸಿದರೆ, ಅದು ಕಣ್ಣುಗಳ ಆರೋಗ್ಯಕ್ಕೆ ಪ್ರಯೋಜನಕಾರಿ. ಇದರಲ್ಲಿ ಕಂಡುಬರುವ ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ಕಣ್ಣುಗಳನ್ನು ಆರೋಗ್ಯವಾಗಿಡಲು ಮತ್ತು ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಕ್ಯಾರೆಟ್ ತಿನ್ನುವುದರಿಂದಲೂ ತೂಕ ಕಡಿಮೆಯಾಗುತ್ತಂತೆ; ಇದೇನಿದು ಹೊಸ ಸಂಗತಿ!

ತೂಕವನ್ನು ಕಡಿಮೆ ಮಾಡುತ್ತದೆ:

ನೀವು ಪ್ರತಿದಿನ 1 ಹಸಿರು ಮೆಣಸಿನಕಾಯಿಯನ್ನು ಸೇವಿಸಿದರೆ, ಅದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದು ಕಡಿಮೆ ಕ್ಯಾಲೋರಿಗಳನ್ನು ಮತ್ತು ಹೆಚ್ಚಿನ ಫೈಬರ್ ಅನ್ನು ಹೊಂದಿರುತ್ತದೆ. ಇದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಮಧುಮೇಹವನ್ನು ನಿಯಂತ್ರಿಸುತ್ತದೆ:

ನೀವು ಮಧುಮೇಹ ರೋಗಿಗಳಾಗಿದ್ದರೆ ನೀವು ಪ್ರತಿದಿನ ನಿಮ್ಮ ಆಹಾರದಲ್ಲಿ 1 ಹಸಿರು ಮೆಣಸಿನಕಾಯಿಯನ್ನು ಸೇರಿಸಿಕೊಳ್ಳಬೇಕು. ಏಕೆಂದರೆ ಇದರಲ್ಲಿರುವ ಆ್ಯಂಟಿ ಡಯಾಬಿಟಿಕ್ ಗುಣಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

ಕೊಲೆಸ್ಟ್ರಾಲ್ ನಿಯಂತ್ರಿಸುತ್ತದೆ:

ನೀವು ಅಧಿಕ ಕೊಲೆಸ್ಟ್ರಾಲ್ ಹೊಂದಿದ್ದರೆ, ನೀವು ಪ್ರತಿದಿನ 1 ಹಸಿರು ಮೆಣಸಿನಕಾಯಿಯನ್ನು ಸೇವಿಸಿ. ಏಕೆಂದರೆ ಇದರಲ್ಲಿ ಕಂಡುಬರುವ ಫೈಬರ್ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 am, Wed, 15 November 23

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ