AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guava Benefits: ಈ ಸಮಸ್ಯೆಗಳಿಂದ ಬಳಲುತ್ತಿರುವವರು ಪೇರಲೆ ಹಣ್ಣು ಸೇವಿಸಲೇಬೇಕು

Guava Benefits: ಪೇರಲೆ( Guava )ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿದ್ದು, ತೂಕ ಇಳಿಕೆ ಸೇರಿದಂತೆ ಹಲವು ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಚಳಿ ಹಾಗೂ ಬೇಸಿಗೆಯ ಕಾಲದಲ್ಲಿ ಸಾಮಾನ್ಯವಾಗಿ ಪೇರಲೆ ಹಣ್ಣುಗಳು ಮತ್ತು ತರಕಾರಿಗಳು ಹೇರಳವಾಗಿ ದೊರೆಯುತ್ತವೆ.

Guava Benefits: ಈ ಸಮಸ್ಯೆಗಳಿಂದ ಬಳಲುತ್ತಿರುವವರು ಪೇರಲೆ ಹಣ್ಣು ಸೇವಿಸಲೇಬೇಕು
ಪೇರಲೆ ಹಣ್ಣು
Follow us
TV9 Web
| Updated By: ನಯನಾ ರಾಜೀವ್

Updated on: May 14, 2022 | 1:33 PM

ಪೇರಲೆ( Guava )ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿದ್ದು, ತೂಕ ಇಳಿಕೆ ಸೇರಿದಂತೆ ಹಲವು ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಚಳಿ ಹಾಗೂ ಬೇಸಿಗೆಯ ಕಾಲದಲ್ಲಿ ಸಾಮಾನ್ಯವಾಗಿ ಪೇರಲೆ ಹಣ್ಣುಗಳು ಮತ್ತು ತರಕಾರಿಗಳು ಹೇರಳವಾಗಿ ದೊರೆಯುತ್ತವೆ. ಆದರೆ ಚಳಿಗಾಲದಲ್ಲಿ ಬಿಸಿ ಆಹಾರದ ಮೊರೆ ಹೋಗುವವರೆ ಹೆಚ್ಚು. ಪೇರಲೆ ಹಣ್ಣಿನಲ್ಲಿ ಫೋಲೇಟ್ ಎಂಬ ಅಂಶವಿದ್ದು, ಇದುಅಧಿಕ ರಕ್ತದೊತ್ತಡವನ್ನು ಕೂಡ ನಿಯಂತ್ರಿಸುತ್ತದೆ. ಹಾಗೆಯೇ ಈ ಹಣ್ಣು ಸೋಡಿಯಂನ ನಕರಾತ್ಮಕ ಪರಿಣಾಮಗಳನ್ನು ಕಡಿಮೆ ಮಾಡಿ ತೂಕ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ನಿಮ್ಮ ಡಯಟ್​ನಲ್ಲಿ ಸೀಬೆಹಣ್ಣನ್ನು ಸೇರಿಸುವುದು ಉತ್ತಮ.

ಪೇರಳೆಯಲ್ಲಿ ಕ್ಯಾಲರಿಯು ತುಂಬಾ ಕಡಿಮೆ ಪ್ರಮಾಣದಲ್ಲಿದೆ ಮತ್ತು ನೂರು ಗ್ರಾಂ ಪೇರಳೆಯಲ್ಲಿ 68 ಕ್ಯಾಲರಿ ಮಾತ್ರ ಇದೆ.

ಹೊಟ್ಟೆ ದೀರ್ಘಕಾಲ ತುಂಬಿರುವಂತೆ ಮಾಡುತ್ತದೆ ಇದರಲ್ಲಿ ಇರುವಂತಹ ಆಹಾರದ ನಾರಿನಾಂಶವು ಹೊಟ್ಟೆಯು ದೀರ್ಘಕಾಲ ತುಂಬಿರುವಂತೆ ಮಾಡುವುದು ಹಾಗೂ ಪದೇ ಪದೇ ತಿನ್ನುವುದನ್ನು ಕಡಿಮೆ ಮಾಡುವುದು. ಬೊಜ್ಜು ಉಂಟು ಮಾಡಲು ಪ್ರಮುಖ ಕಾರಣವಾಗಿರುವ ಅತಿಯಾಗಿ ತಿನ್ನುವುದನ್ನು ಇದು ತಡೆಯುವುದು.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲಿದೆ ಆಹಾರದಲ್ಲಿನ ನಾರಿನಾಂಶವು ರಕ್ತನಾಳದಲ್ಲಿ ಹೀರಿಕೊಳ್ಳುವಂತಹ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿ ಇಡುವುದು ಹಾಗೂ ಮಧುಮೇಹವನ್ನು ನಿರ್ವಹಿಸಲು ಸಹಕಾರಿ. ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವ ಇದು ಮಧುಮೇಹವನ್ನು ನಿಯಂತ್ರಿಸುವುದು. ಇದು ರಕ್ತದಲ್ಲಿ ಸಕ್ಕರೆ ಅಂಶವನ್ನು ತುಂಬಾ ನಿಧಾನವಾಗಿ ಬಿಡುಗಡೆ ಮಾಡುವುದು. ಇದರಿಂದ ಬೇಗನೆ ಸಕ್ಕರೆ ಮಟ್ಟವು ಏರುವುದು ತಪ್ಪುವುದು. ನೀವು ಮಧುಮೇಹಕ್ಕೆ ಔಷಧಿ ಸೇವನೆ ಮಾಡುತ್ತಲಿದ್ದರೆ, ಆಗ ನೀವು ಇದನ್ನು ಸೇವನೆ ಮಾಡುವ ಮೊದಲು ವೈದ್ಯರ ಸಲಹೆ ಪಡೆಯಿರಿ.

ಕಣ್ಣಿನ ಆರೋಗ್ಯ ವಯಸ್ಸಾಗುವ ವೇಳೆ ಕಾಡುವ ಅಕ್ಷಿಪಟಲದ ಅವನತಿ, ಕ್ಯಾಟರ್ಯಾಕ್ಟ್, ಗ್ಲುಕೋಮಾವನ್ನು ತಡೆಯುವುದು. ಕಣ್ಣಿನ ಆರೋಗ್ಯಕ್ಕೆ ಮುಖ್ಯವಾಗಿ ವಿಟಮಿನ್ ಎ ಅಗತ್ಯವಾಗಿ ಬೇಕು. ಇದು ಕಣ್ಣುಗಳು ಒಣಗುವುದನ್ನು ತಡೆಯುವುದು ಮತ್ತು ಇರುಳುಗಣ್ಣಿನ ಅಪಾಯವನ್ನು ದೂರವಿಡುವುದು.

​ಕ್ಯಾನ್ಸರ್​ನಿಂದ ರಕ್ಷಣೆ ವಿಟಮಿನ್ ಎ, ವಿಟಮಿನ್ ಸಿ ಮತ್ತು ಇತರ ಕೆಲವೊಂದು ಪೈಥೋನ್ಯೂಟ್ರಿಯೆಂಟ್ಸ್, ಪಾಲಿಫೆನಾಲ್ ಮತ್ತು ಫ್ಲಾವನಾಯ್ಡ್ ಅಂಶಗಳು ಫ್ರೀ ರ್ಯಾಡಿಕಲ್ ನಿಂದಾಗಿ ಅಂಗಾಂಶಗಳಿಗೆ ಆಗುವ ಹಾನಿ ತಪ್ಪಿಸುವುದು.

ಅಂಗಾಂಶಗಳನ್ನು ಫ್ರೀ ರ್ಯಾಡಿಕಲ್ ನಿಂದ ರಕ್ಷಿಸುವ ಪೇರಳೆ ಹಣ್ಣು ವಿವಿಧ ರೀತಿಯ ಕ್ಯಾನ್ಸರ್ ನಿಂದ ರಕ್ಷಣೆ ನೀಡುವುದು. ಮುಖ್ಯವಾಗಿ ಕರುಳು, ಗುದ, ಹೊಟ್ಟೆ ಇತ್ಯಾದಿ ಕ್ಯಾನ್ಸರ್ ಬರದಂತೆ ತಡೆಯುವುದು. ಪೇರಳೆ ಹಣ್ಣಿನಲ್ಲಿ ಇರುವ ಲೈಕೋಪೆನೆ ಎನ್ನುವ ಅಂಶವು ಕ್ಯಾನ್ಸರ್ ಕಾರಕ ಅಂಗಾಂಶಗಳು ಬೆಳವಣಿಗೆ ಆಗದಂತೆ ತಡೆಯುವುದು.

ಊತ, ಗಂಟುಗಳಲ್ಲಿ ನೋವು ನಿವಾರಿಸಲಿದೆ ಒಸಡಿನಲ್ಲಿ ರಕ್ತಸ್ರಾವ, ಊತ, ಗಂಟುಗಳಲ್ಲಿ ನೋವು, ನಿಶ್ಯಕ್ತಿ, ಬಳಲಿಕೆ, ಕೆಂಪು ಕಲೆಗಳು, ಊದಿಕೊಂಡ ಗಾಯ ಇತ್ಯಾದಿಗಳು ಸ್ಕರ್ವಿಯ ಲಕ್ಷಣಗಳು, ಪೇರಳೆಯಲ್ಲಿರುವ ವಿಟಮಿನ್ ಸಿ ಇವುಗಳಿಂದ ರಕ್ಷಣೆ ನೀಡುವುದು. ​ ಮಿತವಾಗಿ ಪೇರಲೆ ಸೇವನೆ ಮಾಡಿ ಮಿತ ಪ್ರಮಾಣದಲ್ಲಿ ಪೇರಲೆ ಸೇವನೆ ಮಾಡಿ. ಅತಿಯಾಗಿ ಸೇವನೆ ಮಾಡಿದರೆ ಅದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ತೀರ ಕೆಳಮಟ್ಟಕ್ಕೆ ಇಳಿಯಬಹುದು. ಅತಿಯಾಗಿ ತಿಂದರೆ ಅದರಿಂದ ಅನಿಯಮಿತ ಎದೆಬಡಿತ, ವೇಗವಾದ ಹೃದಬಡಿತ, ನಿಶ್ಯಕ್ತಿ, ಪೇಲವ ಚರ್ಮ, ಆತಂಕ, ಬೆವರು, ಹಸಿವು ಉಂಟಾಗಬಹುದು. ಗ್ಯಾಸ್ಟ್ರಿಕ್ ಸಮಸ್ಯೆಯೂ ಉದ್ಭವವಾಗಲಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್