AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯಕರ ಆಹಾರ ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ನಿಧಾನಗೊಳಿಸಬಹುದು: ಡಾ ಮೈಕೆಲ್ ಮೊಸ್ಲೆ

ನೀವು ಆರೋಗ್ಯಕರ ಆಹಾರ ಕ್ರಮಗಳನ್ನು ರೂಢಿಸಿಕೊಳ್ಳುವುದರ ಮೂಲಕ ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ನಿಧಾನಗೊಳಿಸಬಹುದು ಎಂದು ಯುಕೆ ಮೂಲದ ಲೇಖಕ ಡಾ ಮೈಕೆಲ್ ಮೊಸ್ಲೆ ಸಲಹೆ ನೀಡುತ್ತಾರೆ.

ಆರೋಗ್ಯಕರ ಆಹಾರ ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ನಿಧಾನಗೊಳಿಸಬಹುದು: ಡಾ ಮೈಕೆಲ್ ಮೊಸ್ಲೆ
fermented foods
ಅಕ್ಷತಾ ವರ್ಕಾಡಿ
|

Updated on: Jul 23, 2023 | 3:00 PM

Share

ವಯಸ್ಸಾಗುವಿಕೆ ಪ್ರಕ್ರಿಯೆಯು ಜೀವನದ ಅನಿವಾರ್ಯ ಭಾಗವಾಗಿದ್ದರೂ ಯಾರೂ ಇಷ್ಟಪಡುವುದಿಲ್ಲ. ಕೂದಲು ಬೆಳ್ಳಗಾಗುವುದು, ಮುಖದಲ್ಲಿ ಸುಕ್ಕು ಹಾಗೂ ದುರ್ಬಲ ಮೂಳೆಗಳು ಸಾಮಾನ್ಯ ಲಕ್ಷಣವಾಗಿದೆ. ಆದರೆ ನೀವು ಆರೋಗ್ಯಕರ ಆಹಾರ ಕ್ರಮಗಳನ್ನು ರೂಢಿಸಿಕೊಳ್ಳುವುದರ ಮೂಲಕ ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ನಿಧಾನಗೊಳಿಸಬಹುದು ಎಂದು ಯುಕೆ ಮೂಲದ ಲೇಖಕ ಡಾ ಮೈಕೆಲ್ ಮೊಸ್ಲೆ ಸಲಹೆ ನೀಡುತ್ತಾರೆ.

ಆರೋಗ್ಯಕರ ವಯಸ್ಸನ್ನು ಉತ್ತೇಜಿಸುವ ಆಹಾರಗಳ ಕುರಿತು ಡಾ ಮೊಸ್ಲಿ ನೀಡಿರುವ ಉಪಯುಕ್ತ ಮಾಹಿತಿ ಇಲ್ಲಿದೆ. ವಯಸ್ಸಾದಂತೆ ಕರುಳಿನ ಸೂಕ್ಷ್ಮಜೀವಿಗಳ ಸಂಖ್ಯೆಯು ಕ್ಷೀಣಿಸಲು ಪ್ರಾರಂಭಿಸುತ್ತದೆ, ಇದರಿಂದಾಗಿ ಉರಿಯೂತ ಮತ್ತು ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಕಾರಣವಾಗುತ್ತದೆ. ಆದ್ದರಿಂದ ಹುದುಗಿಸಿದ ಆಹಾರಗಳನ್ನು ಹೆಚ್ಚು ತಿನ್ನಬೇಕು ಎಂದು ತಜ್ಞರು ವಿವರಿಸುತ್ತಾರೆ.

ಇದನ್ನೂ ಓದಿ: ಅಸ್ಥಿಪಂಜರದ ಆಕಾರವು ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಜ್ಞರು ವಿವರಿಸುತ್ತಾರೆ

ವಯಸ್ಸಾಗುವುದನ್ನು ವಿಳಂಬಗೊಳಿಸಲು ಹುದುಗಿಸಿದ ಆಹಾರಗಳು ಹೇಗೆ ಕೆಲಸ ಮಾಡುತ್ತವೆ?

ಹುದುಗಿಸಿದ ಆಹಾರವನ್ನು ಸೇವಿಸುವುದರಿಂದ ಕರುಳಿನ ಸೂಕ್ಷ್ಮಾಣುಜೀವಿಗಳನ್ನು ಪುನರುಜ್ಜೀವನಗೊಳಿಸಬಹುದು. ಪ್ರೋಬಯಾಟಿಕ್‌ಗಳೊಂದಿಗೆ ಸಮೃದ್ಧವಾಗಿರುವ ಈ ಆಹಾರಗಳು ಆರೋಗ್ಯಕರ ವಯಸ್ಸನ್ನು ಉತ್ತೇಜಿಸಲು ಮತ್ತು ಉರಿಯೂತವನ್ನು ತಗ್ಗಿಸಲು ಹೆಸರುವಾಸಿಯಾಗಿದೆ. ಈ ಆಹಾರಗಳು ಒಟ್ಟಾರೆ ಕರುಳಿನ ಸೂಕ್ಷ್ಮಾಣುಜೀವಿಗಳನ್ನು ಸುಧಾರಿಸುವ ಆರೋಗ್ಯಕರ ಬ್ಯಾಕ್ಟೀರಿಯಾವನ್ನು ನೇರವಾಗಿ ಉತ್ಪಾದಿಸುತ್ತವೆ ಎಂದು ಡಾ ಮೊಸ್ಲಿ ಹೇಳುತ್ತಾರೆ. ಕರುಳಿನ ಸೂಕ್ಷ್ಮಜೀವಿಯನ್ನು ಹೆಚ್ಚಿಸಲು, ನೋವು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಕರುಳಿನ ಸ್ನೇಹಿ ಆಹಾರಗಳನ್ನು ದೀರ್ಘಕಾಲದವರೆಗೆ ಸೇವಿಸಲು ಶಿಫಾರಸು ಮಾಡುತ್ತಾರೆ. ಇದು ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳನ್ನು ಸೋಲಿಸಲು ಸಹಾಯ ಮಾಡುತ್ತದೆ ಎಂಬುದು ತಜ್ಞರ ಸಲಹೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್