AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯಕರ ಆಹಾರ ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ನಿಧಾನಗೊಳಿಸಬಹುದು: ಡಾ ಮೈಕೆಲ್ ಮೊಸ್ಲೆ

ನೀವು ಆರೋಗ್ಯಕರ ಆಹಾರ ಕ್ರಮಗಳನ್ನು ರೂಢಿಸಿಕೊಳ್ಳುವುದರ ಮೂಲಕ ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ನಿಧಾನಗೊಳಿಸಬಹುದು ಎಂದು ಯುಕೆ ಮೂಲದ ಲೇಖಕ ಡಾ ಮೈಕೆಲ್ ಮೊಸ್ಲೆ ಸಲಹೆ ನೀಡುತ್ತಾರೆ.

ಆರೋಗ್ಯಕರ ಆಹಾರ ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ನಿಧಾನಗೊಳಿಸಬಹುದು: ಡಾ ಮೈಕೆಲ್ ಮೊಸ್ಲೆ
fermented foods
ಅಕ್ಷತಾ ವರ್ಕಾಡಿ
|

Updated on: Jul 23, 2023 | 3:00 PM

Share

ವಯಸ್ಸಾಗುವಿಕೆ ಪ್ರಕ್ರಿಯೆಯು ಜೀವನದ ಅನಿವಾರ್ಯ ಭಾಗವಾಗಿದ್ದರೂ ಯಾರೂ ಇಷ್ಟಪಡುವುದಿಲ್ಲ. ಕೂದಲು ಬೆಳ್ಳಗಾಗುವುದು, ಮುಖದಲ್ಲಿ ಸುಕ್ಕು ಹಾಗೂ ದುರ್ಬಲ ಮೂಳೆಗಳು ಸಾಮಾನ್ಯ ಲಕ್ಷಣವಾಗಿದೆ. ಆದರೆ ನೀವು ಆರೋಗ್ಯಕರ ಆಹಾರ ಕ್ರಮಗಳನ್ನು ರೂಢಿಸಿಕೊಳ್ಳುವುದರ ಮೂಲಕ ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ನಿಧಾನಗೊಳಿಸಬಹುದು ಎಂದು ಯುಕೆ ಮೂಲದ ಲೇಖಕ ಡಾ ಮೈಕೆಲ್ ಮೊಸ್ಲೆ ಸಲಹೆ ನೀಡುತ್ತಾರೆ.

ಆರೋಗ್ಯಕರ ವಯಸ್ಸನ್ನು ಉತ್ತೇಜಿಸುವ ಆಹಾರಗಳ ಕುರಿತು ಡಾ ಮೊಸ್ಲಿ ನೀಡಿರುವ ಉಪಯುಕ್ತ ಮಾಹಿತಿ ಇಲ್ಲಿದೆ. ವಯಸ್ಸಾದಂತೆ ಕರುಳಿನ ಸೂಕ್ಷ್ಮಜೀವಿಗಳ ಸಂಖ್ಯೆಯು ಕ್ಷೀಣಿಸಲು ಪ್ರಾರಂಭಿಸುತ್ತದೆ, ಇದರಿಂದಾಗಿ ಉರಿಯೂತ ಮತ್ತು ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಕಾರಣವಾಗುತ್ತದೆ. ಆದ್ದರಿಂದ ಹುದುಗಿಸಿದ ಆಹಾರಗಳನ್ನು ಹೆಚ್ಚು ತಿನ್ನಬೇಕು ಎಂದು ತಜ್ಞರು ವಿವರಿಸುತ್ತಾರೆ.

ಇದನ್ನೂ ಓದಿ: ಅಸ್ಥಿಪಂಜರದ ಆಕಾರವು ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಜ್ಞರು ವಿವರಿಸುತ್ತಾರೆ

ವಯಸ್ಸಾಗುವುದನ್ನು ವಿಳಂಬಗೊಳಿಸಲು ಹುದುಗಿಸಿದ ಆಹಾರಗಳು ಹೇಗೆ ಕೆಲಸ ಮಾಡುತ್ತವೆ?

ಹುದುಗಿಸಿದ ಆಹಾರವನ್ನು ಸೇವಿಸುವುದರಿಂದ ಕರುಳಿನ ಸೂಕ್ಷ್ಮಾಣುಜೀವಿಗಳನ್ನು ಪುನರುಜ್ಜೀವನಗೊಳಿಸಬಹುದು. ಪ್ರೋಬಯಾಟಿಕ್‌ಗಳೊಂದಿಗೆ ಸಮೃದ್ಧವಾಗಿರುವ ಈ ಆಹಾರಗಳು ಆರೋಗ್ಯಕರ ವಯಸ್ಸನ್ನು ಉತ್ತೇಜಿಸಲು ಮತ್ತು ಉರಿಯೂತವನ್ನು ತಗ್ಗಿಸಲು ಹೆಸರುವಾಸಿಯಾಗಿದೆ. ಈ ಆಹಾರಗಳು ಒಟ್ಟಾರೆ ಕರುಳಿನ ಸೂಕ್ಷ್ಮಾಣುಜೀವಿಗಳನ್ನು ಸುಧಾರಿಸುವ ಆರೋಗ್ಯಕರ ಬ್ಯಾಕ್ಟೀರಿಯಾವನ್ನು ನೇರವಾಗಿ ಉತ್ಪಾದಿಸುತ್ತವೆ ಎಂದು ಡಾ ಮೊಸ್ಲಿ ಹೇಳುತ್ತಾರೆ. ಕರುಳಿನ ಸೂಕ್ಷ್ಮಜೀವಿಯನ್ನು ಹೆಚ್ಚಿಸಲು, ನೋವು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಕರುಳಿನ ಸ್ನೇಹಿ ಆಹಾರಗಳನ್ನು ದೀರ್ಘಕಾಲದವರೆಗೆ ಸೇವಿಸಲು ಶಿಫಾರಸು ಮಾಡುತ್ತಾರೆ. ಇದು ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳನ್ನು ಸೋಲಿಸಲು ಸಹಾಯ ಮಾಡುತ್ತದೆ ಎಂಬುದು ತಜ್ಞರ ಸಲಹೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!